ಕ್ರೈಂ

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ

ನರಗುಂದ : ಭೈರನಹಟ್ಟಿ ಗ್ರಾಮದ ಬಳಿ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂದುರುಗುತ್ತಿದ್ದಾಗ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು. ಅವರಿಬ್ಬರ ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ಹಿಂದುರುವಾಗ ಬರುವಾಗ […]

ಕುಕ್ಕೆ ಸುಬ್ರಹ್ಮಣ್ಯ ದೇವಳದಿಂದ ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಡ ಹೆಂಡತಿಯ ದುರ್ಮರಣ,ಮಕ್ಕಳು ಗಂಭೀರ Read More »

ಶಿರಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಟ್ಯಾಂಕರ್

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ.ಕೆಲ ಲಘು ವಾಹನ ಚಾಲಕರು ಘಾಟ್‌ನಲ್ಲಿ ತಿರುವು ಪಡೆದುಕೊಂಡು ಬಿಸಲೆ ಘಾಟ್ ಮೂಲಕ ಸಂಚಾರ ಬೆಳೆಸುವ ಪ್ರಯತ್ನ ನಡೆಸಿದ್ದಾರೆ. ಆದ್ರೆ ಕೆಲವೊಂದು ಕಡೆ ಮುಂದೆ ಹೋಗುವ ಆತುರದಲ್ಲಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಅಲ್ಲೂ ಕೂಡಾ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಯಾಂಟರ್ ಮೇಲತ್ತುವ ಕಾರ್ಯ ನಡೆಯುತ್ತಿರುವ ಪ್ರದೇಶದ ಇಕ್ಕೆಲೆಗಳಲ್ಲೂ ವಾಹನ ದಟ್ಟಣೆ ಇದೆ.

ಶಿರಾಡಿ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಟ್ಯಾಂಕರ್ Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರುಕಲು ಕಬ್ಬಿಣದ ಚೇಯರ್ ನಿಂದ ಬಿದ್ದು ಮಹಿಳೆಗೆ ಗಾಯ

ಸುಳ್ಯ ಕೆ.ಎಸ್.ಆರ್.ಟಿ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಕಬ್ಬಿಣದ ಚೇಯರ್ ಗಳು ನಾದುರಸ್ತಿಯಲ್ಲಿದ್ದು ಮಂಗಳವಾರ ಮಹಿಳೆಯೊಬ್ಬರು ಕುಳಿತುಕೊಳ್ಳುವ ಸಂದರ್ಭದಲ್ಲಿ ಚೇಯರ್ ಮುರಿದು ಮಹಿಳೆ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ವರದಿಯಾಗಿದೆ.ಮಹಿಳೆಯ ಕೈ ಕಾಲುಗಳಿಗೆ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಕಳೆದ ಕೆಲವು‌ ವರ್ಷಗಳಿಂದ ಚೇಯರ್ ಗಳು ಕಟ್ ಆಗಿ ನಿಂತಿವೆ. ಈ ಸಮಸ್ಯೆಯ ಬಗ್ಗೆ ಮಾದ್ಯಮಗಳಲ್ಲಿ ವರದಿ ಪ್ರಕಟವಾಗಿತ್ರು ಆದರೂ ಈ ಸಮಸ್ಯೆ ಪರಿಹಾರವಾಗಿಲ್ಲ. ಕಳಪೆ ಗುಣಮಟ್ಟದ ಕಬ್ಬಿಣದ ಚೇಯರ್ ಅಳವಡಿಸಿರುವುದೇ ಇಂತಹ ಘಟನೆಗಳು ಆಗಾಗ ನಡೆಯಲು ಕಾರಣವಾಗಿದೆ.ಕೆ.ಎಸ್.ಆರ್.ಟಿ.ಸಿಯವರು

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರುಕಲು ಕಬ್ಬಿಣದ ಚೇಯರ್ ನಿಂದ ಬಿದ್ದು ಮಹಿಳೆಗೆ ಗಾಯ Read More »

ಪೊಲೀಸ್ ಕಾನ್ಸ್‌ಟೇಬಲ್‌ ನನ್ನು ಕಡಿದು ಬರ್ಬರ ಕೊಲೆ!

ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.ಈ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್‌ ಕಾನ್ಸ್‌ಟೇಬಲ್.ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು.ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ

ಪೊಲೀಸ್ ಕಾನ್ಸ್‌ಟೇಬಲ್‌ ನನ್ನು ಕಡಿದು ಬರ್ಬರ ಕೊಲೆ! Read More »

ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ

ಬೆಳಗಾವಿಯ ತಹಶೀಲ್ದಾರ ಕಚೇರಿಯ ಕೊಠಡಿಯಲ್ಲಿಯೇ ಎಸ್ ಡಿಎ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವನ್ನವರ ಎಂಬ ಸಿಬ್ಬಂದಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ತಹಶೀಲ್ದಾರರು ಕುಳಿತುಕೊಳ್ಳುವ ಸ್ಥಳದಲ್ಲಿಯ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ಬೆಳಗ್ಗೆ ಕಚೇರಿಗೆ ಸಿಬ್ಬಂದಿ ಬರುತ್ತಿದ್ದಂತೆ ವಿಚಾರ ಗೊತ್ತಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ Read More »

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆ‌ರ್ ದಾಖಲು

ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು, ಹೆಚ್‌ಡಿಕೆ ಬೆದರಿಸುವುದಾಗಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಎ1 ಆರೋಪಿಯಾಗಿ ಹೆಚ್. ಡಿ. ಕುಮಾರಸ್ವಾಮಿ, ಎ2 ನಿಖಿಲ್, ಹಾಗೂ ಎ3 ಆರೋಪಿ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆ‌ರ್ ದಾಖಲು Read More »

ವಿದ್ಯುತ್ ಕಂಬಕ್ಕೆ ಸ್ಕೋರ್ಪಿಯೊ ಡಿಕ್ಕಿ,ತಪ್ಪಿದ ಭಾರೀ ದುರಂತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ವಾಹನ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.ಮಂಗಳೂರಿಗೆ ತೆರಳುತ್ತಿದ್ದ ಸ್ಕೊರ್ಪಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

ವಿದ್ಯುತ್ ಕಂಬಕ್ಕೆ ಸ್ಕೋರ್ಪಿಯೊ ಡಿಕ್ಕಿ,ತಪ್ಪಿದ ಭಾರೀ ದುರಂತ Read More »

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ

ಕಡಬ: ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳದಲ್ಲಿಯೇ ಇದೆ.ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಎಡಮಂಗಲದತ್ತ ಹೋಗುತ್ತಿದ್ದ ವೇಳೆ ನ. 2

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ Read More »

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು

ಕಡಬ ತಾಲೂಕಿನ ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಪುಳಿಕುಕ್ಕು ಸಮೀಪ ನಡೆದಿದೆ.ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಹಲವಾರು ವರ್ಷಗಳಿಂದ ಪಿಗ್ನಿ ಸಂಗ್ರಹಕರಾಗಿ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು Read More »

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ

ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.ಸ್ಥಳೀಯ ನಿವಾಸಿ ರಜತ್ ಎಂಬಾತ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ಮಾಡಿ , ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದ‌. ತಾನು ಮಹಿಳೆಯರಿಗೆ ಮೆಸೇಜ್ ಮಾಡಿಲ್ಲವೆಂದು ಹೇಳಿದರೂ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾಗಿಯೂ ನಯಾಜ್ ಆರೋಪಿಸಿದ್ದಾರೆ.

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ Read More »

error: Content is protected !!
Scroll to Top