ಕ್ರೈಂ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟ‌ರ್ ಮುರಳೀಧರ್ ನಾಯ್ಕ ಸೇರಿದಂತೆ ಪೋಲಿಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್‌ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ಡಿಎನ್‌ಎ ಪರೀಕ್ಷೆ ನಡೆಸಬೇಕಾಗಿದೆ. ಸ್ಥಳೀಯರೇ […]

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು

ಬೆಂಗಳೂರು : ಇಲ್ಲಿನ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಕಾರ್ಮಿಕರ ಸಾವು Read More »

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು

ಹಾವೇರಿ: ಮಗ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಿಂದ ವರದಿಯಾಗಿದೆ.ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ .ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.ಇಬ್ಬರ ಸಾವಿನಿಂದ ನೊಂದ ಕುಟುಂಬದಲ್ಲಿ ದು:ಖ ಮಡುಗಟದಟ್ಟಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು Read More »

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ

ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಂಗಳೂರು ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ನಡುವೆ ನಗರದ ಕೆಂಗೇರಿ ಬಳಿ ಅಣ್ಣ, ತಂಗಿ ನಿನ್ನೆಯಿಂದ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಣ್ಣ ಶ್ರೀನಿವಾಸ್ ಶ್ರೀನಿವಾಸನ ತಂಗಿ ನಾಪತ್ತೆಯಾದ ಮಕ್ಕಳು ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ Read More »

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು

ಸಿಕಂದರಾಬಾದ್ : ಸಿಕಂದರಾಬಾದ್ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸ್ಫೋಟದಿಂದಾಗಿ ಮನೆಯ ಒಂದು ಭಾಗ ಕುಸಿದಿದೆ.ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿ ಸುಮಾರು 19 ಜನರು ವಾಸಿಸುತ್ತಿದ್ದರು.ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು.ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಅವರು

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು Read More »

ನಿವೃತ್ತ ಕ್ರಷಿ ಇಲಾಖೆಯ ಉದ್ಯೋಗಿ ಕೇಶವ ನಾಯಕ್ ಬೆಟ್ಟಂಪಾಡಿ ನಿಧನ

ಸುಳ್ಯ ನಗರದ ಬೆಟ್ಟಂಪಾಡಿ ಕೇಶವ ನಾಯಕ್ ಅಸೌಖ್ಯದಿಂದು ಅ.21 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರಿಗೆ 67 ವರ್ಷ ಪ್ರಾಯವಾಗಿತ್ತು.ಅವರು ಕ್ರಷಿ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದರು.ಮ್ರತರು ಪತ್ನಿ ಉಷಾ,ಮಕ್ಕಳಾದ ಶರ್ಮಿಳ,ರೇಷ್ಮಾ,ರಮ್ಯ, ಕುಟುಂಬಸ್ಥರನ್ನು ಬಂಧುಗಳನ್ನು ಅಗಲಿದ್ದಾರೆ.

ನಿವೃತ್ತ ಕ್ರಷಿ ಇಲಾಖೆಯ ಉದ್ಯೋಗಿ ಕೇಶವ ನಾಯಕ್ ಬೆಟ್ಟಂಪಾಡಿ ನಿಧನ Read More »

ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಬಂಟ್ವಾಳ ಇನ್ನಿಲ್ಲ!

ತೆಂಕುತಿಟ್ಟು ಪ್ರಸಿದ್ದ ಹಾಸ್ಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇಂದು (ಸೋಮವಾರ) ಬೆಳಗ್ಗೆ ನಿಧನ ಹೊಂದಿದ್ದಾರೆ.ಅವರಿಗೆ 67 ವರ್ಷ ಪ್ರಾಯವಾಗಿತ್ತು.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ ಎಂದು ತಿಳಿದು ಬಂದಿದೆ.ಹಿರಿಯ ಯಕ್ಷಗಾನಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಹೋಗಿದ್ದರು. ಅವರನ್ನು‌ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.ಅನೇಕ ಅಭಿಮಾನಿಗಳು,ಯಕ್ಷಗಾನ ಕಲಾವಿದರು ಜಯರಾಮ ಆಚಾರ್ಯರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಬಂಟ್ವಾಳ ಇನ್ನಿಲ್ಲ! Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಅಪಘಾತ

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಡಿಸೈರ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನಕ್ಕೆ ತಿರುಗುವ ವಿಷ್ಣು ಸರ್ಕಲ್ ಬಳಿ ವಿದ್ಯುತ್‌ ಕಂಬಕ್ಕೆ ಹೊಡೆದಿದೆ.ಅಪಘಾತಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ಬಿದ್ದಿದೆ.ಪ್ರಯಾಣಿಕರು ಗಾಯಗೊಂಡು ಪ್ರಾಣಾಪಾಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ‌ ತಿಳಿದು ಬರಬೇಕಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಅಪಘಾತ Read More »

ಬೆಡ್ ಶೀಟ್ ವಿಚಾರಕ್ಕೆ ಅಕ್ಕ ತಂಗಿ ಜಗಳ; ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕ್ಷುಲ್ಲಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರಾವ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶ್ರಾವ್ಯ ತನ್ನ ಅಕ್ಕನ ಜೊತೆ ಬೆಡ್ ಶೀಟ್ ಬಗ್ಗೆ ಜಗಳವಾಡಿದ್ದಳು. ಇದರಿಂದ ಮನನೊಂದು ಶ್ರಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಡ್ ಶೀಟ್ ವಿಚಾರಕ್ಕೆ ಅಕ್ಕ ತಂಗಿ ಜಗಳ; ಯುವತಿ ಆತ್ಮಹತ್ಯೆಗೆ ಶರಣು Read More »

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ ರೂ. 12 ಲಕ್ಷ ಮತ್ತು ಅಂದಾಜು 28 ಪವನ್ ಚಿನ್ನ ಕಳ್ಳತನವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಅಕ್ಕೇಣಿ ಸುಂದರ ಗೌಡರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ಇಂದು ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ನೋಡಿದಾಗ ರೂ. 12

ಮನೆಯ ಬಾಗಿಲ ಬೀಗ ಮುರಿದು ರೂ.12 ಲಕ್ಷ 28 ಪವನ್ ಚಿನ್ನ ಕಳವು Read More »

error: Content is protected !!
Scroll to Top