ಕ್ರೈಂ

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ

ಕಡಬ: ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳದಲ್ಲಿಯೇ ಇದೆ.ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಎಡಮಂಗಲದತ್ತ ಹೋಗುತ್ತಿದ್ದ ವೇಳೆ ನ. 2 […]

ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ Read More »

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು

ಕಡಬ ತಾಲೂಕಿನ ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಪುಳಿಕುಕ್ಕು ಸಮೀಪ ನಡೆದಿದೆ.ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಹಲವಾರು ವರ್ಷಗಳಿಂದ ಪಿಗ್ನಿ ಸಂಗ್ರಹಕರಾಗಿ ಮಾಡುತ್ತಿದ್ದರು. ಬೃಹತ್ ಗಾತ್ರದ ದೂಪದ ಮರ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಕೂಟಿ ಮೇಲೆ ಮರ ಬಿದ್ದು‌ ಸ್ಕೂಟಿ ಸವಾರ ಸಾವು Read More »

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ

ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ತಂಡವೊಂದು ನಯಾಜ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.ಸ್ಥಳೀಯ ನಿವಾಸಿ ರಜತ್ ಎಂಬಾತ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ಮಾಡಿ , ಮಹಿಳೆಯರಿಗೆ ಮೆಸೇಜ್ ಮಾಡುವುದೇಕೆಂದು ತನ್ನನ್ನು ಪ್ರಶ್ನಿಸಿದ‌. ತಾನು ಮಹಿಳೆಯರಿಗೆ ಮೆಸೇಜ್ ಮಾಡಿಲ್ಲವೆಂದು ಹೇಳಿದರೂ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾಗಿಯೂ ನಯಾಜ್ ಆರೋಪಿಸಿದ್ದಾರೆ.

ಮಹಿಳೆಯರಿಗೆ ಮೆಸೆಜ್ ಮಾಡಿದ ಆರೋಪ : ಯುವಕನಿಗೆ ತಂಡದಿಂದ ಹಲ್ಲೆ Read More »

ಅರಂತೋಡು : ಮಹಿಳೆಗೆ ಕಾರು ಡಿಕ್ಕಿ

ಅರಂತೋಡು ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಆಲ್ಲೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅಪಘಾತದ ರಭಸಕ್ಕೆ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಕಾಲು ಮುರಿತವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಕಲ್ಲುಗುಂಡಿ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಅರಂತೋಡು : ಮಹಿಳೆಗೆ ಕಾರು ಡಿಕ್ಕಿ Read More »

ಶಬರಿಮಲೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಭಕ್ತ ಸಾವು

ಕಾಸರಗೋಡಿನಿಂದ ಹೊರಟು ದೇಶ ವ್ಯಾಪಕ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೆಲ್ಲಾ ಕಾಲ್ನಡಿಗೆಯಲ್ಲೇ ಸುತ್ತಿ ದೇಶದ ಜನರ ಗಮನ ಸೆಳೆದ ಕಾಸರಗೋಡು ಕೂಡ್ಲುವಿನ ಇಬ್ಬರಲ್ಲಿ ಓರ್ವ ಕಾಲ್ನಡಿಗೆ ಯಾತ್ರೆಯ ಮಧ್ಯೆ ಮೃತಪಟ್ಟ ಘಟನೆ ವರದಿಯಾಗಿದೆ.ಅಯೋಧ್ಯೆಯಿಂದ ಶ್ರೀ ಶಬರಿಮಲೆ ಗುರಿಯಾಗಿಸಿ ನಡೆಯುವ ಮಧ್ಯೆ ಭೋಪಾಲದಲ್ಲಿ ಹೃದಯಾಘಾತ ಸಂಭವಿಸಿ ಕೂಡ್ಲು ನಿವಾಸಿ ಶಿವಪ್ರಕಾಶ್ (45)ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ‌.ಅಯೋಧ್ಯೆಯಿಂದ ಹೊರಟು ಮಧ್ಯಪ್ರದೇಶದ ಸಿಯೋನಿ ತಲುಪಿದಾಗ ಎದೆ ನೋವು ಕಾಣಿಸಿಕೊಂಡವರನ್ನು ಕೂಡಲೇ ಸಿಯೋನಿ ನಗರದ ಆಸ್ಪತ್ರೆಗೆ ಸ್ಥಳೀಯ ಹಿಂದೂ ದೇವಾಲಯಗಳ ಕಾರ್ಯಕರ್ತರ ಸಹಕಾರದಿಂದ

ಶಬರಿಮಲೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಭಕ್ತ ಸಾವು Read More »

ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ,ಡಿಸೇಲ್ ಗೆ ಮುಗಿ ಬಿದ್ದ ಜನರು

ಡಿಸೇಲ್ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾಗಿ ಡಿಸೇಲ್ ಗೆ ಜನರು ಮುಗಿಬಿದ್ದ ಘಟನೆ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಈ ಟ್ಯಾಂಕರ್ ಅಪಘಾತ ಸಂಭವಿಸಿದೆ.ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಟ್ಯಾಂಕರ್ ನಲ್ಲಿ ಡೀಸಲ್ ಸಾಗಾಟ ನಡೆಯುತ್ತಿತ್ತು.

ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ,ಡಿಸೇಲ್ ಗೆ ಮುಗಿ ಬಿದ್ದ ಜನರು Read More »

ಸುಳ್ಯದ ಪೆಟ್ ಶಾಪ್ ಮಾಲಕನಿಗೆ ರಾಡ್ ನಿಂದ ಹಲ್ಲೆ

ಸುಳ್ಯದ ಪೆಟ್ ಶಾಪ್ ಮಾಲಕ ಹರೀಶ್ ಪೂಜಾರಿ ಎಂಬವರಿಗೆ ವ್ಯಕ್ತಿಯೊಬ್ಬ ರಾಡ್‌ನಿಂದ ತಲೆಗೆ ಹೊಡೆದು ಗಾಯಗೊಳಿಸಿದ ಘಟನೆ ವರದಿಯಾಗಿದೆ.ಸುಳ್ಯ ನಗರ ಪಂಚಾಯತ್ ಎದುರುಗಡೆಯ ನ.ಪಂ. ವಾಣಿಜ್ಯ ಸಂಕೀರ್ಣದಲ್ಲಿ ಅವರು ಪೆಟ್ ಶಾಪ್ ನಡೆಸುತ್ತಿದ್ದಾರೆ.ಹರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯದ ಪೆಟ್ ಶಾಪ್ ಮಾಲಕನಿಗೆ ರಾಡ್ ನಿಂದ ಹಲ್ಲೆ Read More »

ನಿರ್ಮಾಣ ಹಂತದ ಮೊಬೈಲ್ ಟವರ್ ಕಳ್ಳತನ

ಮಂಗಳೂರು: ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್

ನಿರ್ಮಾಣ ಹಂತದ ಮೊಬೈಲ್ ಟವರ್ ಕಳ್ಳತನ Read More »

ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯ

ಪಾದಾಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಬುಧವಾರ ಮುಂಜಾನೆ ನಡೆದಿದೆ. ಬೈಕ್ ಸವಾರ ಪಾದಾಚಾರಿ ಇಬ್ಬರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪಾದಾಚಾರಿ ಪೆರಾಜೆ ಮೂಲದವರು ಎಂದು ಹೇಳಲಾಗುತ್ತಿದೆ.ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪಾದಾಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯ Read More »

ಉಗ್ರರ ಗುಂಡೇಟಿಗೆ ವೀರ ಮರಣವನ್ನಪ್ಪಿದ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’

ಜಮ್ಮು ಕಾಶ್ಮೀರದ ಅನ್ನೂರ್‌ನ ಸುಂದರ್‌ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ವೀರ ಮರಣವನ್ನಪ್ಪಿದೆ ಎಂದು ತಿಳಿದು ಬಂದಿದೆ.ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ತೀವ್ರಗೊಂಡಿದ್ದು ಇದರ ಹಿನ್ನೆಲೆಯಲ್ಲಿ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸೋಮವಾರ ಬೆಳಿಗ್ಗೆ ಮುಂದಾಗಿದೆ ಅದರಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ

ಉಗ್ರರ ಗುಂಡೇಟಿಗೆ ವೀರ ಮರಣವನ್ನಪ್ಪಿದ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ Read More »

error: Content is protected !!
Scroll to Top