ಕ್ರೈಂ

ಹಠಾತ್ ಅನಾರೋಗ್ಯದಿಂದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸಾವು

ವಿಟ್ಲ: ಇದ್ದಕ್ಕಿದಂತೆ ಅನಾರೋಗ್ಯಕ್ಕೆ ಒಳಗಾಗಿ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಸುಮಾರು 38 ವರ್ಷ ಪ್ರಾಯದ ಉಮೇಶ್ ಗೌಡ ಗುರುವಾರ ರಾತ್ರಿ ನಿಧನ ಹೊಂದಿದರು. ವೃತ್ತಿಯಲ್ಲಿ ಅವರು ಕೃಷಿಕರಾಗಿದ್ದರು. ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ಮಪ್ಪಿದರು.

ಹಠಾತ್ ಅನಾರೋಗ್ಯದಿಂದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸಾವು Read More »

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಿಯ ಮೇಲೆ ಹಲ್ಲೆ ನಡೆಸಿದ ಯುವಕನ ಬಂಧನ

ಸುಳ್ಯ : ವಿದ್ಯಾರ್ಥಿನಿ ಬಸ್ಸಲ್ಲಿ ಬರುತ್ರಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿಗಳಲ್ಲಿ ಓರ್ವನಾದ ಸುಶ್ಮಿತ್ ಎಂಬಾತ ಕುಮಟದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೋಲಿಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಿಯ ಮೇಲೆ ಹಲ್ಲೆ ನಡೆಸಿದ ಯುವಕನ ಬಂಧನ Read More »

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ : ವಿದ್ಯಾರ್ಥಿ ನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸುಳ್ದ್ರ : ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ನಿನ್ನೆ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದರು.

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು Read More »

ಪೆರಾಜೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್ಸು

ಅರಂತೋಡು : ಪೆರಾಜೆಯ ಕಲ್ಬರ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್‌ ಆರ್ ಟಿ ಸಿ ಬಸ್ಸು ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.ಮಂಗಳೂರಿನಿಂದ ಮಂಡ್ಯಕ್ಕೆ ಹೋಗುತ್ತಿದ್ದ ಬಸ್ಸು ಕಲ್ಲುಚರ್ಪೆ ಬಳಿ ತಿರುವುನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಉಂಟಾಗಿದೆ ಎನ್ನಲಾಗಿದೆ.ಬಸ್ಸಿನಲ್ಲಿ ಸುಮಾರು 24 ಮಂದಿ ಪ್ರಯಾಣಿಕರು ಇದ್ದು ಅಪಾಯದಿಂದ ಪಾರಾಗಿದ್ದಾರೆ.

ಪೆರಾಜೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್ಸು Read More »

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು,ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬುಲನ್ಸ್ ಸುಳ್ಯ ದ ರಫೀಕ್ KM ಉಚಿತ ಸೇವೆ ನೀಡಿದರು,ಈ ಸೇವೆಯನ್ನು ನೀಡಿದ ತಂಡಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ Read More »

ತೋಟದ ಕೆರೆಗೆ ವೃದ್ಧ ಬಿದ್ದು ಸಾವು

ಆಲೆಟ್ಟಿ : ತೋಟದ ಕೆರೆಗೆ ವೃದ್ಧರೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿರುವ ಘಟನೆ ಮಂಗಳವಾರ ಸಂಜೆ ಆಲೆಟ್ಟಿಯಿಂದ ವರದಿಯಾಗಿದೆ.ಆಲೆಟ್ಟಿಯ ಗ್ರಾಮದ ಶಂಕರ ಪಾಟಾಳಿ ಎಂಬವರು ಮೃತಪಟ್ಟ ವ್ಯಕ್ತಿ.ಅವರಿಗೆ 75 ವರ್ಷ ಪ್ರಾಯವಾಗಿತ್ತು.ಮೃತರು ಮನೆಯಿಂದ ತೋಟದ ಕಡೆಗೆ ಹೋದವರು ಬಾರದೆ ಇದ್ದುದರಿಂದ ಪರಿಸರದಲ್ಲಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಪಕ್ಕದ ಪರಮೇಶ್ವರ ಗೌಡ ಎಂಬವರ ತೋಟದ ಕೆರೆಯಲ್ಲಿ ಮೃತ ದೇಹ ಪತ್ತೆಯಾಯಿತು.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೋಟದ ಕೆರೆಗೆ ವೃದ್ಧ ಬಿದ್ದು ಸಾವು Read More »

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರು : ಮಂಗಳೂರಿನ ಮಾರಿಪಳ್ಳ ಎಂಬಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಸಾಚನ್ನಪ್ಪಿದ ಘಟನೆ ವರದಿಯಾಗಿದೆ .ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪಿದರು ಎಂದು ತಿಳಿದು ಬಂದಿದೆ. ಮೃತರು ತಂದೆ ವಾಸುದೇವ ಗೌಡ ನೆಡ್ವಿಲು, ತಾಯಿ ಶೋಭಾ ನೆಡ್ಚಿಲು ಹಾಗೂ ಸಹೋದರ ಲೋಚನ್ ಮತ್ತು ಬಂಧು ಮಿತ್ರರನ್ನು,ಕುಟುಂಬಸ್ಥರನ್ನು ಅಗಲಿದ್ದಾರೆ.

ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Read More »

ಸ್ಕೂಟಿ- ಕಂಟೇನರ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ

ಸುಳ್ಯ: ಗೂನಡ್ಕದ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ.ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದೆ.

ಸ್ಕೂಟಿ- ಕಂಟೇನರ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ Read More »

ಕಾಣಿಕೆ ಡಬ್ಬಿಯಿಂದ ಹಣ ಕಳವು

ಕಾಣಿಯೂರು : ಇಲ್ಲಿಯ ಶ್ರೀ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯಿಂದ ನಗದು ಕದ್ದೊಯ್ದ ಘಟನೆ ಸೆ 21ರ ರಾತ್ರಿ ನಡೆದಿದೆ. ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಕ್ಷೇತ್ರದ ಹೊರಾಂಗಣದಲ್ಲಿರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ಳಾರೆ ಠಾಣಾಧಿಕಾರಿ ಡಿ.ಎನ್‌. ಈರಯ್ಯ ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಈ ಹಿಂದೆ ಕಾಣಿಯೂರಿನಲ್ಲಿ ಅಡಿಕೆ ಅಂಗಡಿಯಿಂದ ಅಡಿಕೆ ಕಳ್ಳತನವಾಗಿತ್ತು. ತೆಂಗಿನಕಾಯಿ ಮಾರಾಟ ಅಂಗಡಿ ಯಿಂದ ಹಾಡಹಗಲೇ ಹಣ ಕಳ್ಳತನ ಸೇರಿದಂತೆ ಹಲವಾರು ಕಳ್ಳತನ ಪ್ರಕರಣ ನಡೆದರೂ, ಈವರೆಗೂ

ಕಾಣಿಕೆ ಡಬ್ಬಿಯಿಂದ ಹಣ ಕಳವು Read More »

error: Content is protected !!
Scroll to Top