ಕ್ರೈಂ

ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ

ಉಪ್ಪಿನಂಗಡಿ: ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿಂದ ವರದಿಯಾಗಿದೆ.ಇಲ್ಲಿಯ ಖತೀಜಮ್ಮ ಎಂಬವರ ಅಡಿಕೆ ತೋಟಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, […]

ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ Read More »

ಉದ್ಯಮಿಯ ಬರ್ಬರ ಕೊಲೆ,ಪತ್ನಿಯನ್ನು ಗಂಭೀರ ಗಾಯಗೊಳಿಸಿದ ದುಷ್ಕರ್ಮಿಗಳು

ಕಾರವಾರ : ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಅವರ ಪತ್ನಿಯನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.ಅವರ ಪತ್ನಿ ವೈಶಾಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದು. ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದರು ಎಂದು ತಿಳಿದು ಬಂದಿದೆ.ಚಿತಾಕುಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉದ್ಯಮಿಯ ಬರ್ಬರ ಕೊಲೆ,ಪತ್ನಿಯನ್ನು ಗಂಭೀರ ಗಾಯಗೊಳಿಸಿದ ದುಷ್ಕರ್ಮಿಗಳು Read More »

ಯುವಕ ಅಸೌಖ್ಯದಿಂದ ನಿಧನ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್‌ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು.ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಯುವಕ ಅಸೌಖ್ಯದಿಂದ ನಿಧನ Read More »

ಕಾರು ಸ್ಕೂಟರ್ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಸೆ.21 ರಂದು ರಾತ್ರಿ ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯಗೊಂಡರು.ಗಂಭೀರ ಗಾಯಗೊಂಡಿರುವ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್‌ ಪ್ರಭು ಅವರನ್ನು ಪುತ್ತೂರು ಸರ್ಕಾರಿ

ಕಾರು ಸ್ಕೂಟರ್ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು Read More »

ಯುವತಿಯನ್ನ ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಪಾಪಿ!

ಯುವತಿಯೋರ್ವಳನ್ನು ಭೀಕರವಾಗಿ ಕೊಂದು ಮೃತದೇಹ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪೈಪ್‌ಲೈನ್‌ ರಸ್ತೆಯ ಬಳಿಯ ಮನೆಯೊಂದರಲ್ಲಿ ಈ ಕೃತ್ಯ ನಡೆದಿದ್ದು, ಮೃತ ಯುವತಿಯನ್ನು ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. 10 ರಿಂದ 15 ದಿನಗಳ ಹಿಂದೆಯೇ ಈ ಕೊಲೆ ನಡೆದಿದೆ ಎಂದು ಅಂದಾಜಿಸಲಾಗಿದೆ. 30 ಕ್ಕೂ ಹೆಚ್ಚು ಪೀಸ್ ಮಾಡಿ 160 ಲೀಟರ್‌ನ ಫ್ರಿಡ್ಜ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯುವತಿಯನ್ನ ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಪಾಪಿ! Read More »

ಬಾಲಕನ ಮಾರ್ಮಾಂಗವನ್ನು ಎಳೆದು ಗಾಯಗೊಳಿಸಿದ ವಿದ್ಯಾರ್ಥಿಗಳು

ಸಂಪಾಜೆ : ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ವರದಿಯಾಗಿದೆ.ದ.ಕ. ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕಳೆದ ಕೆಲ ಸಮಯಗಳಿಂದ ಕೊಡಗು ಸಂಪಾಜೆಯ ವಸತಿ ನಿಲಯದಲ್ಲಿ ಶಾಲೆಗೆ ಹೋಗುತ್ತಿದ್ದುಸೆ.14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು.ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನಗೆ ಬಂದಿದ್ದನೆನ್ನಲಾಗಿದೆ.ಬಾಲಕ ಮರ್ಮಾಂಗ ಊದಿಕೊಂಡಿದ್ದರಿಂದತಾಯಿಯೊಡನೆ

ಬಾಲಕನ ಮಾರ್ಮಾಂಗವನ್ನು ಎಳೆದು ಗಾಯಗೊಳಿಸಿದ ವಿದ್ಯಾರ್ಥಿಗಳು Read More »

ಹೃದಯಾಘಾತಕ್ಕೆ 11 ವರ್ಷದ ಬಾಲಕ ಸಾವು

ಹಾಸನ : ಹೃದಯಾಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಿಂದ ವರದಿಯಾಗಿದೆ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸಚಿನ್‌ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.

ಹೃದಯಾಘಾತಕ್ಕೆ 11 ವರ್ಷದ ಬಾಲಕ ಸಾವು Read More »

ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ

ಕಿನ್ನಿಗೋಳಿ : ಕೆಲ ವರ್ಷಗಳ ಹಿಂದೆ ಸುಳ್ಯ ನಗರ ನಗರ ಪಂಚಾಯತ್ ನಲ್ಲಿ ಮುಖ್ಯಾಧಿಕಾರಿಯಾಗಿದ್ದ ಪ್ರಸ್ತುತ ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ.ಆರ್. ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ ಎಂದು ತಿಳಿದು ಬಂದಿದೆ.ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕೆಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ Read More »

ಬಾಲಕಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ!

ಭೋಪಾಲ್ : ಭೋಪಾಲ್ ನಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಶಿಕ್ಷಕನೊಬ್ಬಅತ್ಯಾಚಾರವೆಸಗಿದ್ದಾನೆ. ಘಟನೆ ಕುರಿತು ಬಾಲಕಿಯ ತಾಯಿ ಸೋಮವಾರ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಸಂತ್ರಸ್ತೆಯ ತಾಯಿ ಶಿಕ್ಷಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗಿದ್ದು, ಶಿಕ್ಷಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಈ ಮಾಹಿತಿಯನ್ನು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ! Read More »

ಪರಿವಾರಕಾನದಲ್ಲಿ ಕಾರುಗಳ ನಡುವೆ ಅಪಘಾತ

ಸುಳ್ಯ : ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ರಾಷ್ಡ್ರೀಯ ಹೆದ್ದಾರಿಯ ಪರಿವಾರ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಸುಳ್ಯ ಕಡೆಗೆ ಬರುತ್ತಿದ್ದ ಆಲ್ಲೋ ಕಾರೊಂದು ಪರಿವಾರಕಾನದ ಬಳಿ ಎಡಭಾಗಕ್ಕೆ ತಿರುಗಿಸಲು ಯತ್ನಿಸಿದ್ದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಕಾರು ಹಿಂಭಾಗದಿಂದ ಡಿಕ್ಕಿ ಹೊಡೆಯಿತು.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿ ಗುಂಡಿಗೆ ಬಿತ್ತು.ಪರಿಣಾಮವಾಗಿಕಾರಿನ ಮುಂಭಾಗ ಜಖಂಗೊಂಡಿದೆ ಈ ಕಾರು ಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞ ಚಲಾಯಿಸುತ್ತಿದ್ದ ವಾಹನವಾಗಿದ್ದು ಅವರು

ಪರಿವಾರಕಾನದಲ್ಲಿ ಕಾರುಗಳ ನಡುವೆ ಅಪಘಾತ Read More »

error: Content is protected !!
Scroll to Top