ಕ್ರೈಂ

ಲೆಬೆನಾನಿನ ಬೈರುತುಲ್ ಉಪನಗರಗಳು,ಸಿರಿಯಾದ ಕೆಲಭಾಗಗಳಲ್ಲಿ ಪೇಜರ್ ಗಳ ಸ್ಪೋಟ : ಹತ್ತು ಮಂದಿ ಸಾವು

ಬೈರುತ್ : ಲೆಬನಾನಿನ ಬೈರುತ್‌ ನ ಉಪನಗರಗಳು, ಸಿರಿಯಾದ ಕೆಲವು ಭಾಗಗಳಲ್ಲಿ ಮಂಗಳವಾರ ಏಕಕಾಲಕ್ಕೆ ಪೇಜರ್‌ಗಳು ಸ್ಫೋಟಗೊಂಡು (Pager Blast) ಸುಮಾರು ಹತ್ತು ಹಿಬ್ಬುಲ್ಲಾ ಬಂಡುಕೋರ ಸಂಘಟನೆ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇದು ಇಸ್ರೇಲ್ ವಿಶ್ವದಲ್ಲೇ ಏಕಕಾಲಕ್ಕೆ ನಡೆಸಿದ ಅತ್ಯಾಧುನಿಕ ಭೀಕರ ದಾಳಿಇರಾನ್‌ನ ರಾಯಭಾರಿ ಸೇರಿದಂತೆ ಸುಮಾರು 4000 ಜನರು ಗಾಯಗೊಂಡಿದ್ದಾರೆ ಮತ್ತು 300ಕ್ಕೂ ಅಧಿಕ ಮಂದಿ ಕಣ್ಣು ಕಳೆದುಕೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲೆಬೆನಾನಿನ ಬೈರುತುಲ್ ಉಪನಗರಗಳು,ಸಿರಿಯಾದ ಕೆಲಭಾಗಗಳಲ್ಲಿ ಪೇಜರ್ ಗಳ ಸ್ಪೋಟ : ಹತ್ತು ಮಂದಿ ಸಾವು Read More »

ಲಿವರ್ ದಾನ ಮಾಡಿದ ಮಹಿಳೆ ದಿಡೀರ್ ಸಾವು

ಮಂಗಳೂರು : ತನ್ನ ಸಂಬಂಧಿಕರೊಬ್ಬರಿಗೆ (Already)ಲಿವರ್ ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಅವರು ಮೃತಪಟ್ಟ ಘಟನೆ ವರದಿಯಾಗಿದೆ.ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.ಬಳಿಕ ದಿಡೀರ್

ಲಿವರ್ ದಾನ ಮಾಡಿದ ಮಹಿಳೆ ದಿಡೀರ್ ಸಾವು Read More »

ಜಟ್ಟಿಪಳ್ಳ ರಸ್ತೆಯಲ್ಲಿ ಸ್ಕೂಟಿಗಳ ನಡುವೆ ಅಪಘಾತ

ಸುಳ್ಯ ಜಟ್ಟಿಪಳ್ಳ ರಸ್ತೆ ದೀಕ್ಷಾ ಬಟ್ಟೆ ಅಂಗಡಿ ಮುಂಭಾಗ ಎರಡು ಸ್ಕೂಟಿ ವಾಹನ ಪರಸ್ಪರ ಡಿಕ್ಕಿ ಯಾಗಿ ಸವಾರರಿಗೆ ಸಣ್ಣ ಪುಟ್ಟ ಗಾಯ ವಾದ ಘಟನೆ ಇದೀಗ ಸಂಭವಿಸಿದೆ.ಜಟ್ಟಿಪಳ್ಳ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮತ್ತು ಸುಳ್ಯ ದಿಂದ ಜಟ್ಟಿಪಳ್ಳ ಕಡೆಗೆ ಹೋಗುತ್ತಿದ್ದ ಸ್ಕೂಟಿ ಮುಖಾ ಮುಖಿ ಡಿಕ್ಕಿ ಸಂಭವಿಸಿದೆ.ಘಟನೆ ಯಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಜಟ್ಟಿಪಳ್ಳ ರಸ್ತೆಯಲ್ಲಿ ಸ್ಕೂಟಿಗಳ ನಡುವೆ ಅಪಘಾತ Read More »

ಸ್ಕೂಟರ್ ಅಪಘಾತದಲ್ಲಿ ಯುವ ಹಿಂದು ಮುಖಂಡ ಸಾವು

ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.ಕೆಯ್ಯರು ಗ್ರಾಮದ ಎರಕ್ಕಳ ಬೆಳ್ಯಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು.ಸೆ. 10ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆಗಾಗಿ ಮಂಗಳೂರು

ಸ್ಕೂಟರ್ ಅಪಘಾತದಲ್ಲಿ ಯುವ ಹಿಂದು ಮುಖಂಡ ಸಾವು Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಉಪನ್ಯಾಸಕ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು Read More »

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು

ರಾಯಚೂರಿನ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ ಲೋ ಬಿಪಿ ಉಂಟಾಗಿ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ.

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು Read More »

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು ಮನೆ ಸಮೀಪದ ಮರವೊಂದಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದರು. ವಾಪಸ್‌ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತು. ಪೋಲೀಸರು ಸ್ಥಳಕ್ಕೆ ಬಂದುಮಹಜರು ನಡೆಸಿದರು.

ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ Read More »

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ

ಅಣ್ಣ ಸ್ಥಿತಿ ಚಿಂತಾಜನಕ ಸುಳ್ಯ : ತಮ್ಮನೋರ್ವ ಅಣ್ಣನ ಮೇಲೆ ಗಾರೆ ಕೆಲಸ ಮಾಡುವ ಸಾಧನದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ ವರದಿಯಾಗಿದೆ. ಎಂ.ಚೆಂಬು ಗ್ರಾಮದ ನಾಯರ್ ಗದ್ದೆ ದುರ್ಗಾಪ್ರಸಾದ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ತಮ್ಮ ನಾಯರ್ ಗದ್ದೆ ಪದ್ಮನಾಭ ಎಂಬುವವರಿಂದ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.ಗಂಭೀರ ಸ್ಥಿತಿಯಲ್ಲಿರುವ ದುರ್ಗಾ ಪ್ರಸಾದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮನಿಂದ ಅಣ್ಣನಿಗೆ ಗಾರೆ ಕೆಲಸ ಮಾಡುವ ಸಾಧನದಿಂದ ಹಲ್ಲೆ Read More »

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಕೈವಾಡ ಆರೋಪ

ಪುತ್ತೂರು ನಗರದ ಕಲ್ಲೇಗ ಟೈಗರ್ಸ್ ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಓರ್ವ ಕಾಂಗ್ರೆಸ್ ಪಕ್ಷದ ಮುಖಂಡ ಎಂದು ತಿಳಿದು ಬಂದಿದೆ.ನಾಲ್ವರು ಆರೋಪಿಗಳಾಗಿರುವ ಮನೀಷ್, ಚೇತನ್, ಮಂಜುನಾಥ್ ಮತ್ತು ಕೇಶವ ಪೊಲೀಸ್ ವಶದಲ್ಲಿದ್ದು ಈ ಪೈಕಿ ಕೇಶವ ಪುತ್ತೂರು ನಗರ ಕಾಂಗ್ರೆಸ್ ನ ಎಸ್ ಸಿ ಘಟಕದ ಅಧ್ಯಕ್ಷ ಎನ್ನಲಾಗಿದೆ.ಎರಡು ತಲವಾರಿನಲ್ಲಿ ಅಕ್ಷಯ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದು, ಪೋಸ್ಟ್ ಮಾರ್ಟಂ ವೇಳೆ 58 ರಷ್ಟು ಗಾಯಗಳು ಪತ್ತೆಯಾಗಿವೆ. ಮೊದಲು ಮೃತ

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಕೈವಾಡ ಆರೋಪ Read More »

ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ದಾರುಣ ಹತ್ಯೆ -ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು ನಗರದ ಕಲ್ಲೆಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಕಳೆದ ತಡ ರಾತ್ರಿ ಬರ್ಬರವಾಗಿ ಕಡಿದು ಹತ್ಯೆ ಮಾಡಲಾಗದ ಘಟನೆ ವರದಿಯಾಗಿದೆ. ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಬಸ್ ಚಾಲಕರಾಗಿದ್ದ ಬನ್ನೂರು ನಿವಾಸಿ

ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ದಾರುಣ ಹತ್ಯೆ -ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ Read More »

error: Content is protected !!
Scroll to Top