ಕ್ರೈಂ

ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಲಾರಿ ಡಿಕ್ಕಿ

ಸಂಪಾಜೆಯ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿ ಲಾರಿಯೊಂದು ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ನ.7ರಂದು ಬೆಳಗ್ಗಿನ ಜಾವ ಸಂಭವಿಸಿದೆ.ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಢಿಕ್ಕಿಯಾಗಿದ್ದು, ಗೇಟು ಹಾಗೂ ಲಾರಿಯ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಲಾರಿಯ ಬ್ರೇಕ್ ವೈಫಲ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಲಾರಿ ಡಿಕ್ಕಿ Read More »

ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ

ಸುಳ್ಯ : ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡುವುದಾಗಿ ಹೇಳಿ ಅಮರಪಡ್ನೂರಿನ ನಿವಾಸಿಯೋರ್ವರಿಗೆ ವಂಚಿಸಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆ ಬಿ ಎಂಬವರ ದೂರಿನಂತೆ ಇವರಿಗೆ ಜು.15, 2023 ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು Vistara Airlines , Singapore Branch, Devanahalli Bangalore ಎಂಬ ಸಂಸ್ಥೆಯಿಂದ ಕರೆಮಾಡುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿರುತ್ತಾರೆ.

ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ Read More »

ಅರಂತೋಡು : ಗಾಳಿಮಳೆ ಅಪಾರ ಹಾನಿ

ಸುಳ್ಯ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಭಾರೀ ಗಾಳಿ ಮಳೆ ಸುರಿದ ಹಿನ್ನಲೆಯಲ್ಲಿ ಅಪಾರವಾಗಿ ಹಾನಿ ಉಂಟಾದ ಘಟನೆ ವರದಿಯಾಗಿದೆ. ಗಾಳಿ ಮಳೆಗೆ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಬಳಿಯಿದ್ದ ತೆಂಗಿನಮರವೊಂದು ಶಾಲಾ ಕಟ್ಟಡದ ಮೇಲೆ ಬಿದ್ದ ಪರಿಣಾಮವಾಗಿ ಶಾಲಾ ಕಟ್ಟಡ ಹಾಗೂ ಹಂಚುಗಳಿಗೆ ಹಾನಿಯಾಗಿದೆ.ಅಲ್ಲದೆ ವಿದ್ಯುತ್ ಲೈನಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.ಇದಲ್ಲದೆ ಇತರೆಡೆ ಹಾನಿ ಉಂಟಾದ ಬಗ್ಗೆ ವರದಿಯಾಗುತ್ತಿದೆ.

ಅರಂತೋಡು : ಗಾಳಿಮಳೆ ಅಪಾರ ಹಾನಿ Read More »

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಯುವಕನನ್ನು ಪುತ್ತೂರು ತಾಲೂಕಿನ ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.ದೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಸುಳ್ಯ: ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ‌. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ. ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಅವರು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು.ಮನೆಯಲ್ಲೆ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ

ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌

ಸುಳ್ಯ : ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ.ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ದೂರುದಾರರ ಬಾವ ಡಾ.ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು ಡಾ.ಐಶ್ವರ್ಯ, ಸಂಬಂದಿ ಹೇಮನಾಥ

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ:ಪ್ರಕರಣ ದಾಖಲು‌ Read More »

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್ ರಹೀಮಾನ್ ಎಂಬವರು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ಕೆ.ಜಿ.ಎನ್ ಜನರಲ್ ಸ್ಟೋರ್ ಹೊಂದಿದ್ದು, ವ್ಯಾಪಾರ ಮಾಡಿಕೊಂಡಿದ್ದಾಗ, ಪರಿಚಯ ಇರುವ ಆರೋಪಿ ಜಕಾರಿಯ ಎಂಬುವರು ಏಕಾಏಕಿಯಾಗಿ ಅಂಗಡಿ ಒಳಗಡೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದು, ಈ ವೇಳೆ ಇತರ ಆರೊಪಿಗಳಾದ ಹಮೀದ್, ರಫಿಕ್,

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ Read More »

ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ . ಸವಾರನ ತಲೆ ಮತ್ತು ಭಜಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು Read More »

ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಸೀಲ್ದಾರ್ ಆದೇಶಿಸಿದ್ದಾರೆ.ಕಡಬ ತಾಲೂಕಿನಲ್ಲಿ ಕಳೆದ ಮೂರು ದಿವಸಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಹೊಳೆ ತೊರೆಗಳು ತುಂಬಿ ಹರಿಯುತ್ರಿವೆ

ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ Read More »

ದೇವರಹಳ್ಳಿ- ಏನೆಕಲ್ಲು ಸಂಚಾರ ಬಂದ್

ಭಾರೀ ಮಳೆ ಮುಂದುವರಿದಿದ್ದು ಸುಬ್ರಹ್ಮಣ್ಯ ಸಮೀಪದ ಕಲ್ಲಾಜೆ ಹೊಳೆಯ ನೆರೆ ನೀರು ಹೊಳೆ ಬದಿಯ ತೋಟಗಳಿಗೆ ನುಗ್ಗಿದ್ದು, ಮನೆಗಳಿಗೂ ನುಗ್ಗುವ ಭೀತಿ ಉಂಟಾಗಿದೆ. ದೇವರಹಳ್ಳಿ- ಏನೆಕಲ್ಲು ಸಂಚಾರವು ಬಂದ್ ಆಗಿದೆ.ಕಲ್ಲಾಜೆ ಹೊಳೆಯಲ್ಲಿ ಹೂಳು ತುಂಬಿರುವುದರಿಂದ ನೀರಿನ ಸರಾಗ ಹರಿವಿಗೆ ತಡೆಯಾಗಿ ನೀರು ನುಗ್ಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಲೋಕೇಶ್, ಮಹೇಶ್ , ಯಶೋಧರ ಮಾಣಿಬೈಲು, ರಾಘವ ಮಾಣಿಬೈಲು ಮೊದಲಾದವರ ಕೃಷಿ ತೋಟ ಜಲಾವೃತಗೊಂಡಿದೆ. ಯಶೋಧರ ಹಾಗೂ ಚಂದ್ರಕಲಾ ಎಂಬರ ಮನೆಗೆ ನೀರು ಆವರಿಸುವ ಬೀತಿ ಎದುರಾಗಿದೆ. ಕಳೆದ

ದೇವರಹಳ್ಳಿ- ಏನೆಕಲ್ಲು ಸಂಚಾರ ಬಂದ್ Read More »

error: Content is protected !!
Scroll to Top