ಕ್ರೈಂ

ಚಲಿಸುತ್ತಿದ್ದ ರೈಲಿನಿಂದ ಇಬ್ಬರು ಮಕ್ಕಳೊಂದಿಗೆ ತಾಯಿ ಹಾರಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿನಿಂದ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಟ್ಟಾಯಂನ ಎಟ್ಟುಮನೂರಿನಲ್ಲಿ ರೈಲು ಹಳಿಯ ಬಳಿ ನಡೆದಿದೆ. ಶೈನಿ ಕುರಿಯಾಕೋಸ್ (42) ಮತ್ತು ಅವರ ಪುತ್ರಿಯರಾದ ಇವಾನಾ ಮರಿಯಾ ನೋಬಿ (10) ಮತ್ತು ಅಲೀನಾ ಎಲಿಸಬಾತ್ ನೋಬಿ (11) ಮೃತರು. ಶುಕ್ರವಾರ ಬೆಳಿಗ್ಗೆ 5.15 ರ ಸುಮಾರಿಗೆ ಮೂವರು ಕೊಟ್ಟಾಯಂ ನಿಲಂಬೂರು ಎಕ್ಸಪ್ರೇಸ್ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೌಟುಂಬಿಕ ಸಮಸ್ಯೆಯಿಂದಾಗಿ ತನ್ನ ಪತಿಯಿಂದ ಬೇರ್ಪಟ್ಟು ತನ್ನ ತಂದೆಯ ಜೊತೆ ಪರೋಲಿಕಲ್ ಎಂಬಲ್ಲಿ ಮಹಿಳೆ […]

ಚಲಿಸುತ್ತಿದ್ದ ರೈಲಿನಿಂದ ಇಬ್ಬರು ಮಕ್ಕಳೊಂದಿಗೆ ತಾಯಿ ಹಾರಿ ಆತ್ಮಹತ್ಯೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಅವರು ಅಪಾಯಿಂದ ಪಾರಾದ ಘಟನೆ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ವಿಜೇಂದ್ರ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಿಕ್ಕಮಗಳೂರಿನಿಂದ ಶಿಖಾರಿಪುರಕ್ಕೆ ತೆರಳುವ ಸಮಯದಲ್ಲಿ ಅಪಘಾತ ಸಂಭವಿಸಿದೆ.ಕಾರಿನ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವ‌ರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಖೆ ಆರಂಭಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರರ ಕಾರು ಭೀಕರ ಅಪಘಾತ Read More »

ಸ್ಕೂಟರ್ ಗೆ ಕಾಡು ಹಂದಿ‌ ಗುದ್ದಿ ಸ್ಕೂಟರ್ ಸವಾರ ಆಸ್ಪತ್ರೆಗೆ ದಾಖಲು

ಸುಳ್ಯ ತಾಲೂಕಿನ ಗ್ರಾಮದ ಮೇನಾಲದಲ್ಲಿ ಸ್ಕೂಟಿ ಚಲಾಯಿಸಿಕೊಂಡು ತೆರಳುತ್ತಿದ್ದ ಯುವಕನಿಗೆ ಕಾಡು ಹಂದಿ ಅಡ್ಡಬಂದು ಸ್ಕೂಟಿ ಪಲ್ಟಿಯಾಗಿ ಯುವಕ ಗಾಯಗೊಂಡ ಘಟನೆ ಗುರುವಾರ ವರದಿಯಾಗಿದೆ.ಮೇನಾಲದಲ್ಲಿ ಫಾಸ್ಟ್ ಫುಡ್ ನಡೆಸುತ್ತಿರುವ ಭಾಸ್ಕರರವರು ಫೆ.27ರಂದು ರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ರಬ್ಬರ್ ಕೂಪ್ ಒಳಗಿನಿಂದ ದೊಡ್ಡ ಗಾತ್ರದ ಹಂದಿಯೊಂದು ರಸ್ತೆಗೆ ಬಂತೆಂದೂ ಅದೇ ಸಮಯಕ್ಕೆ ಸ್ಕೂಟಿಯೂ ಬಂದು ಹಂದಿ ಗುದ್ದಿತೆನ್ನಲಾಗಿದೆ.ಪರಿಣಾಮ ಭಾಸ್ಕರರಿಗೆ ಕೈ ಗೆ ಗಾಯವಾಗಿದೆ. ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದಿದ್ದಾರೆ.

ಸ್ಕೂಟರ್ ಗೆ ಕಾಡು ಹಂದಿ‌ ಗುದ್ದಿ ಸ್ಕೂಟರ್ ಸವಾರ ಆಸ್ಪತ್ರೆಗೆ ದಾಖಲು Read More »

ಅರಂಬೂರು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟ್ ( 50) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ಎನ್ನಲಾಗಿದೆ.

ಅರಂಬೂರು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಅಪಚಿತ ವ್ಯಕ್ತಿಯ ಶವ ಪತ್ತೆ

ಅಡಿಕೆ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಪುತ್ತೂರಿನ ಪಾಂಗಳಾಯ ಎಂಬಲ್ಲಿಂದ ಫೆ.26ರಂದು ವರದಿಯಾಗಿದೆ.ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು ಅಡಿಕೆಯ ಮರವೊಂದು ಅರ್ಧದಲ್ಲೆ ತುಂಡಾಗಿ ಶವದ ಸಮೀಪ ಪತ್ತೆಯಾಗಿದೆ. ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಸತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.!

ಅಪಚಿತ ವ್ಯಕ್ತಿಯ ಶವ ಪತ್ತೆ Read More »

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ಮಂಗಳವಾರ ವರದಿಯಾಗಿದೆ.ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಮೃತ ಯುವಕ.ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿದೆ. ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ Read More »

ಬೈಕ್ ಸ್ಕೂಟಿ ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಗಂಭೀರ

ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ಐತೂರು ಗ್ರಾ. ಪ. ಸದಸ್ಯರೊಬ್ಬರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮನಮೋಹನ್ ಗೋಲ್ಯಾಡಿ ಗಂಭೀರ ಗಾಯಗೊಂಡ ವ್ಯಕ್ತಿ.ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದುಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕ್ ಸ್ಕೂಟಿ ಅಪಘಾತದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಗಂಭೀರ Read More »

ಪೀಚೆ ಮನೆ ಪವನ್ ಕುಮಾರ್ ನಿಧನ

ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.25ರಂದು ಮೃತಪಟ್ಟಿದ್ದು , ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ

ಪೀಚೆ ಮನೆ ಪವನ್ ಕುಮಾರ್ ನಿಧನ Read More »

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಆರೋಪಿಗಳ ದೋಷ ಮುಕ್ತಿ

ಸುಳ್ಯ : ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಇವರನ್ನು ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದು, ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು ಮನೆಯ ಒಳಗಡೆ ಪ್ರವೇಶಿಸಿರುವುದನ್ನು ನೋಡಿ ಆಕೆಯ ಮೇಲೆ ಕೂಡಾ ಹಲ್ಲೆಯನ್ನು ಮಾಡಿ ಆರೋಪಿಗಳು ಪರಾರಿಯಾಗಿರುತ್ತಾರೆ.ಮತ್ತು ಆರೋಪಿಗಳು

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಆರೋಪಿಗಳ ದೋಷ ಮುಕ್ತಿ Read More »

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ

ಬೆಳ್ತಂಗಡಿ ತಾಲೂಕಿನ ಇಲ್ಲಿಯ ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ. ಈ ಬಗ್ಗೆ ಈಗಾಗಲೇ ವ್ಯವಸ್ಥಾಪನಾ ಸಮಿತಿ ಗಮನಕ್ಕೆ ಬಂದರೂ ಯಾವುದೇ ಕ್ರಮಕೈಗೊಳ್ಳದಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸುತಿರುವ ಭಕ್ತರು ವ್ಯವಸ್ಥಾಪನಾ ಸಮಿತಿ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ರಾಜೀನಾಮೆ ನೀಡಬೇಕು. ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಎರಡು ದಿನಗಳ ಹಿಂದೆ ಯಾರೋ ಅಶ್ವತ್ಥ ಕಟ್ಟೆಯ

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ Read More »

error: Content is protected !!
Scroll to Top