ಕ್ರೈಂ

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು

ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಕರ್ನಾಟಕ ಪೊಲೀಸ್ ಸಿಬ್ಬಂದಿ ಹರೀಶ್‌ ಎಂದು ಗುರುತಿಸಲಾಗಿದೆ.ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.ಅವರು ತಮ್ಮ ಊರಿನಿಂದ ಮಂಗಳೂರಿಗೆ ಬುಲೆಟ್ […]

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು Read More »

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ!

ನಾಗಪಟ್ಟಣ ವೆಂಟೆಡ್ ಡ್ಯಾಮ್ ಕೆಳಬದಿಯ ಪಯಸ್ವಿನಿ ನದಿಯಲ್ಲಿ ಮೀನುಗಳು ಸಾವಿಗೀಡಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ.ಡ್ಯಾಮ್ ನಿಂದ ಬಿಟ್ಟ ನೀರಿನ ಹರಿವಿನೊಂದಿಗೆ ಬಂದ ಮೀನುಗಳ ಮಾರಣ ಹೋಮವಾಗುತ್ತಿದೆಯೆಂದು ಸ್ಥಳೀಯರು ತಿಳಿಸಿದ್ದಾರೆ.ಮೀನುಗಳು ಸಾವನ್ನಪ್ಪಲು ನಿಖರ ಕಾರಣ ತಿಳಿದು ಬಂದಿಲ್ಲ.

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ! Read More »

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕನಕಮಜಲು ಸಮೀಪ ಫೆ.8ರಂದು ರಾತ್ರಿ ಇಬ್ಬರು ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು

ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಚೇತನ್ ಕೆಮ್ಮಿಂಜೆ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು Read More »

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ

ಕಡಬ ತಾಲೂಕಿನ ಕೋಡಿಂಬಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ಭಾರೀ ಗಾತ್ರದ ಮರದ ರೆಂಬೆ ಮರಿದು ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ ಸವಾರ ಗಾಯ ಗೊಂಡ ಘಟನೆ ಫೆ.4 ರಂದು ಸಂಜೆ ನಡೆದಿದೆ.ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೋಲೀಸರು ಆಗಮಿಸಿದ್ದಾರೆ. ಗಾಯ ಗೊಂಡ ಬೈಕ್ ಸವಾರ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ತೆರಳಿದ್ದಾರೆ.ಕೆಲವು ಸಮಯಗಳ ಹಿಂದೆಯಷ್ಟೇ ಇದೇ ರಸ್ತೆಯಲ್ಲಿ ಸ್ವಲ್ಪ ಮುಂದೆ ಮರವೊಂದು ಉರುಳಿ ಬಿದ್ದು ಬೈಕ್ ಸವಾರ ಒಬ್ಬರು ಮೃತ ಪಟ್ಟಿದ್ದರು.

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ Read More »

ಅರಂತೋಡು : ಯುವಕ ಅಸೌಖ್ಯದಿಂದ ಸಾವು

ಸುಳ್ಯ ತಾಲೂಕಿ ಅರಂತೋಡು ಗ್ರಾಮದ ಕಲ್ಲಗದ್ದೆ ದಿ.ಸಂಕಪ್ಪ ಗೌಡ ರವರ ಪುತ್ರ ಮಿಥುನ್ ಕೆ.ಎಸ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಜ.31ರಂದು ನಿಧನರಾದರು. ಅವರಿಗೆ 27 ವರ್ಷ ಪ್ರಾಯವಾಗಿತ್ತು.ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಳಗ್ಗೆ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಂದು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ತಾಯಿ ವಾರಿಜಾ, ಸಹೋದರಿ ಭವ್ಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತ ಯುವಕ ಸುಳ್ಯದ ಆಯಶಿಲ್ಪ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ ಉದ್ಯೋಗಿಯಾಗಿದ್ದರು.

ಅರಂತೋಡು : ಯುವಕ ಅಸೌಖ್ಯದಿಂದ ಸಾವು Read More »

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ

ಮೈಕ್ರೋ ಪೈನಾನ್ಸ್ ಅವರ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ರಾಜ್ಯ ಮಟ್ಟದಲ್ಲಿ ಇದು ಭಾರೀ ಸುದ್ದಿಯಾಗುತ್ರಿದೆ.ಮೈಕ್ರೋ ಫೈನಾನ್ಸ್‌ನವರ ಕಿರುಕುಳತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿಕ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಎರಡು ದಿನಗ ಹಿಂದೆ ತುಂಗಭದ್ರಾ ನದಿಗೆ ಹಾರಿದ್ದರು. ಮೃತದೇಹ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್‌ ಮನೆ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ Read More »

ಲಂಚ ಸ್ವೀಕರಿಸುತ್ತಿದ್ದಾಗ ಸುಳ್ಯ ಉಬರಡ್ಕ ಮೂಲದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಲೋಕಾಯುಕ್ತ ಬಲೆಗೆ !

ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಲಿ ಬಿದ್ದಿರುವ ಘಟನೆ ನಡೆದಿದೆ.ಮಂಗಳೂರು ಉತ್ತರ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್‌ ಲೋಕಾಯುಕ್ತ ಬಲೆಗೆ ಬಿದ್ದವರು.ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ

ಲಂಚ ಸ್ವೀಕರಿಸುತ್ತಿದ್ದಾಗ ಸುಳ್ಯ ಉಬರಡ್ಕ ಮೂಲದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಲೋಕಾಯುಕ್ತ ಬಲೆಗೆ ! Read More »

ಮಂಡೆಕೋಲು : ಕಾಡಾನೆ ಸಾವು

ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಂಡೆಕೋಲು ಕನ್ಯಾನ ಕಾಡಿನಲ್ಲಿ ಆನೆಯೊಂದು ಸಾವನ್ನಪಿದ ಘಟನೆ ವರದಿಯಾಗಿದೆ.ಸಂಜೆ ಕಾಡಿಗೆ ಕಟ್ಟಿಗೆಗೆ ಹೋದವರಿಗೆ ಸತ್ತ ಆನೆ ಕಂಡು ಬಂದಿದ್ದು, ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಲಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆಯವರು ಹಾಗೂ ಜನರು ಸೇರಿದ್ದಾರೆಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಮಂಜುನಾಥ್ ತೆರಳಿ ಪರಿಶೀಲಿಸಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಮಂಡೆಕೋಲು : ಕಾಡಾನೆ ಸಾವು Read More »

ರಿಕ್ಷಾ ಚಾಲಕನ ಕೊಲೆಗೈದು ಬೆತ್ತಲೆ ಮಾಡಿ ಎಸೆದ ಒರ್ವ ಆರೋಪಿಯ ಬಂಧನ

ಆಟೋ ಚಾಲಕನನ್ನು ಮೂವರು ಸ್ನೇಹಿತರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿ ಬಳಿಕ ಶವವನ್ನು ಶಿರಾಡಿ ಘಾಟ್ ನಲ್ಲಿ ಬೆತ್ತಲೆ ಮಾಡಿ ಶವ ಎಸೆದು ಸಾಕ್ಷ್ಯನಾಶ ಮಾಡಲು ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಮೂವರು ಹಂತಕರು ಕೊಲೆಗೆ ಬಳಸಿದ ಬಟ್ಟೆಗಳನ್ನು ಎಸೆದು ಸ್ನಾನ ಮಾಡಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಒರ್ವ ಆರೋಪಿಯನ್ನು ಹಾಸನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಹಾಸನ ಜಿಲ್ಲೆಯ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ಆಟೋಚಾಲಕ ಶಿವಕುಮಾರ್ (36) ಎಂಬಾತನು ಸ್ನೇಹಿತರಾದ

ರಿಕ್ಷಾ ಚಾಲಕನ ಕೊಲೆಗೈದು ಬೆತ್ತಲೆ ಮಾಡಿ ಎಸೆದ ಒರ್ವ ಆರೋಪಿಯ ಬಂಧನ Read More »

error: Content is protected !!
Scroll to Top