ಕ್ರೈಂ

ಚೆಂಬು: ಉಂಬಳೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಹೊತ್ತಿ ಉರಿದ ಮನೆ

ಚೆಂಬು ಗ್ರಾಮದ ಉಂಬಳೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಗುರುವಾರ ವರದಿಯಾಗಿದೆ.ಉಂಬಳೆಯ ಮಾನ್ಯದ ಎಂ‌.ಟಿ. ಭಾಸ್ಕರ ಅವರ ಮನೆಯಲ್ಲಿ ನ.21ರಂದು ಮಧ್ಯಾಹ್ನ ಮನೆಯವರು ಇಲ್ಲದ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಮನೆಗೆ ಬೆಂಕಿ ತಗುಲಿ ಹೊತ್ತಿ ಉರಿಯಿತು. ಪರಿಣಾಮವಾಗಿಮನೆಯೊಳಗಿದ್ದ ಮನೆಯ ದಾಖಲೆಪತ್ರಗಳು, ಬಟ್ಟೆಗಳು, ನಗದು ಹಣ, ಚಿನ್ನಾಭರಣ, ಗೋಣಿಯಲ್ಲಿ ತುಂಬಿಸಿಟ್ಟಿದ್ದ ಅಡಿಕೆ ಸ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ‌.

ಚೆಂಬು: ಉಂಬಳೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಹೊತ್ತಿ ಉರಿದ ಮನೆ Read More »

ಮದುವೆ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮ ಹತ್ಯೆ

ಮದುವೆ ನಿಶ್ವಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಿಂದ ವರದಿಯಾಗಿದೆ.ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.ಮೃತ ಯುವತಿ ಕೀರ್ತನಾವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರುಆದರೆ ಯುವತಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ

ಮದುವೆ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮ ಹತ್ಯೆ Read More »

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಚಿರತೆಯೊಂದು ಕಾಡಿನಿಂದ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ . ಅರಣ್ಯ ಇಲಾಖೆಗೆ ಸ್ಥಳೀಯರು ತಿಳಿಸಿದ್ದಾರೆ.ಅರಣ್ಯ ಇಲಾಖೆಯವರು ಬೇಟಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು Read More »

ಸುಳ್ಯ ಗಾಂಧಿನಗರದಲ್ಲಿ ಬೈಕಲ್ಲಿ ಬಂದು ತಲವಾರು ತೋರಿಸಿ ಗಲಾಟೆ

ಗಾಂಧಿನಗರ ವೈನ್ ಶಾಪ್ ಒಂದರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರು ತೋರಿಸಿ ಕೆಲವು ಹೊತ್ತು ಆತಂಕ ಸೃಷ್ಟಿಸಿ ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.ದ್ವಿ ಚಕ್ರ ವಾಹನದಲ್ಲಿ ಬಂದ ಇಬ್ಬರು ಚೀಲದಿಂದ ಉದ್ದದ ತಲವಾರು ಮಾದರಿಯ ಕತ್ತಿಯನ್ನು ಹೊರಗೆ ತೆಗೆದು ಮತ್ತೆ ಚೀಲದಲ್ಲಿ ಇರಿಸುವ ದೃಶ್ಯ ಕಂಡು ಬಂತು.ಅಲ್ಲಿ ನಿಂತಿರುವ ಓರ್ವರಲ್ಲಿ ಜಗಳ ಮಾಡಿಕೊಂಡು ಅವರಿಗೆ ಥಳಿಸುವ ದೃಶ್ಯ ವಿಡಿಯೋ ವೈರಲ್ ಆಗಿದೆ.ಜನರು ಜಮಾಯಿಸುತ್ತಿದ್ದಂತೆ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.

ಸುಳ್ಯ ಗಾಂಧಿನಗರದಲ್ಲಿ ಬೈಕಲ್ಲಿ ಬಂದು ತಲವಾರು ತೋರಿಸಿ ಗಲಾಟೆ Read More »

ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ಏಳು ಮಂದಿ ಗಂಭೀರ

ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ನಡೆದಿದೆ.ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್

ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದು ಏಳು ಮಂದಿ ಗಂಭೀರ Read More »

ಗಾಂಧಿನಗರದಲ್ಲಿ ಕುಸಿದು ಬಿದ್ದ ಯುವತಿ ಆಸ್ಪತ್ರೆಗೆ ದಾಖಲು

ಸುಳ್ಯ ಗಾಂಧಿನಗರದ ಪಿಕಪ್ ಪಾರ್ಕಿಂಗ್ ಎದುರಿನ ರಸ್ತೆಯ ಬದಿಯಲ್ಲಿ ಹಠಾತ್ ಕುಸಿದು ಬಿದ್ದ ಯುವತಿಯೊಬ್ಬಳನ್ನು ಪಿಕಪ್ ಚಾಲಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ನ.20ರಂದು ವರದಿಯಾಗಿದೆ.ಈ ಯುವತಿ ಕಾಣಿಯೂರುನವಳಾಗಿದ್ದು ವೈದ್ಯರು ವಿಚಾರಿಸಿದ್ದಾಗ ವಿಷ ಸೇವಿಸಿದ್ದೇನೆ ಎಂದು ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಗಾಂಧಿನಗರದಲ್ಲಿ ಕುಸಿದು ಬಿದ್ದ ಯುವತಿ ಆಸ್ಪತ್ರೆಗೆ ದಾಖಲು Read More »

ಕಾಡು ಹಂದಿ ತಿವಿದು ಮಹಿಳೆ ಗಂಭೀರ

ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಮಂಗಳವಾರ ಮುಂಜಾನೆ ಬೆಳಿಗ್ಗೆ ನಡೆದಿದೆ.ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ ಮಧ್ಯೆಯಿದ್ದ ಕಾಡುಹಂದಿಯೊಂದು ಬಂದು ಮಹಿಳೆಗೆ ತಿವಿಯಿತು.ಇದರಿಂದ ಮಹಿಳೆಯ ಕಾಲಿಗೆ ಗಾಯವಾಗಿದ್ದು,ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು ತಿಳಿದುಬಂದಿದೆ.

ಕಾಡು ಹಂದಿ ತಿವಿದು ಮಹಿಳೆ ಗಂಭೀರ Read More »

ಮನೆಯಿಂದ ನಗ ನಗದು ಕಳವು

ಮನೆಯಿಂದ ಕಳ್ಳರು ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ.ಕೆಲ ದಿನಗಳ ಹಿಂದೆ ಅಳಕೆಮಜಲಿನಲ್ಲಿ 2 ಮನೆಗಳಿಂದ ಇದೇ ಮಾದರಿಯಲ್ಲಿ ಕಳ್ಳತನ ನಡೆದಿತ್ತು.ಮನೆಯ ಯಜಮಾನ ಗಣೇಶ್ ರೈ ಕೆಲಸಕ್ಕೆ ಹೋಗಿದ್ದು, ಮನೆಯ ಯಜಮಾನಿ ವಿಟ್ಲ ಸಂತೆಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 12 ಗಂಟೆಯಿಂದ ಒಂದೂವರೆ ಗಂಟೆಯ ಒಳಗೆ ಈ ಕೃತ್ಯ ನಡೆದಿದೆ ಎಂದು ಅಂದಾಜಿಸಲಾಗಿದೆ.ಮನೆಯ ಹಿಂದಿನ ಬಾಗಿಲನ್ನು ಮುರಿದು ಕಳ್ಳರು ಒಳ ನುಗ್ಗಿದ್ದಾರೆ.ಸ್ಥಳಕ್ಕೆ ವಿಟ್ಲ

ಮನೆಯಿಂದ ನಗ ನಗದು ಕಳವು Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣುಬಿಗಿದುಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.ಇಲ್ಲಿಯ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು.ಮ್ರತರು ಒರ್ವ ಪುತ್ರ,ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ

ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ನಕ್ಸಲರ ಚಲನವಲನದ‌ ಬಗ್ಗೆ ಮಾಹಿತಿ ಮೇರೆಗೆ ಎಎನ್ಎಫ್ ಕೋಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ, ಈ ವೇಳೆ‌ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆತನಿಗೆ ಶರಣಾಗತಿಗೆ ಸೂಚನೆ ನೀಡಲಾಗಿತ್ತು.ಆದರೆ ನಕ್ಸಲರ ತಂಡದಿಂದ ಎಎನ್ಎಫ್ ಸಿಬಂದಿಗಳ ಮೇಲೆ ದಾಳಿಗೆ ತಯಾರಿ ನಡೆಸಿದರು. ಈ ವೇಳೆ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ ಎಂದುರಾಜ್ಯ ಆಂತರಿಕ

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಎನ್ ಕೌಂಟರ್ ಏಕೆ?ಅನಿವಾರ್ಯವಾಯಿತು,ಡಿಐಜಿ ರೂಪ ಮೌದ್ಗಿಲ್ ಹೇಳಿದ್ದೇನು ? ಇಲ್ಲಿದೆ ಮಾಹಿತಿ Read More »

error: Content is protected !!
Scroll to Top