ಕ್ರೈಂ

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ

ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಗಜುಲರೇಗದಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ, ಸ್ವಂತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 59 ವರ್ಷದ ಆರೋಪಿ ಬೊಂಡಪಲ್ಲಿ ಸತ್ಯರಾವ್ ಅವರಿಗೆ ಪೋಕ್ಸ್ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಬಾಲಕಿಯ ಪುನರ್ವಸತಿಗಾಗಿ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಆಗಸ್ಟ್ 18, 2025ರಂದು ಬೆಳಕಿಗೆ ಬಂದ ಈ ಪ್ರಕರಣದಲ್ಲಿ, ಮನೆಯಲ್ಲಿ ತಾತ-ಮೊಮ್ಮಗಳು ಮಾತ್ರ ಇದ್ದಾಗ ಈ ಘಟನೆ […]

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಾತನಿಗೆ 20 ವರ್ಷ ಜೈಲು ಶಿಕ್ಷೆ Read More »

ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾರ್ಕೋಡಿನಲ್ಲಿರುವ ಕಟ್ಟಡವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ವರದಿಯಾಗಿದೆ.ಶವವನ್ನು‌ ಶೇಖಪಟ್ಟಿ ನಿವಾಸಿ ದಿ. ಕೃಷ್ಣ ಬೆಳ್ಳಪ್ಪಾಡ ರವರ ಪುತ್ರ ರಾಜೇಶ್ ಶೇಖಪಟ್ಟಿಯವರದು ಎಂದು ಗುರುತಿಸಲಾಗಿದೆ.ಕೆಲ ವರ್ಷದ ಹಿಂದೆ ಮಂಗಳ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಾರ್ ಬಂದ್ ಆದ ನಂತರ ಅದೇ ಕಟ್ಟಡದಲ್ಲಿ ವಾಸವಾಗಿದ್ದು ಕಳೆದ ತಡ ರಾತ್ರಿ ರೂಮಿನಲ್ಲಿ ಬಟ್ಟೆಯನ್ನು ಕುತ್ತಿಗೆಗೆ ಬಿಗಿದು ಪಕ್ಕಾಸಿಗೆ ಹಾಕಿಕೊಂಡು ಆತ್ಮ ಹತ್ಯೆ

ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಹಾಸ್ಟೆಲ್‌ನಲ್ಲಿ ಗುಂಡಿನ ದಾಳಿ 11 ಸಾವು, 14 ಗಾಯ

ದಕ್ಷಿಣ ಆಫ್ರಿಕಾದ ಪ್ರಿಟೋರಿಯಾದ ಅಟ್ಟೆರಿವಿಲ್ಲೆಯ ಸೌಲ್‌ವಿಲ್ಲೆ ಹಾಸ್ಟೆಲ್‌ನಲ್ಲಿ ಇಂದು ಭೀಕರ ಗುಂಡಿನ ದಾಳಿ ನಡೆದಿದ್ದು, ಮೂವರು ಮಕ್ಕಳು ಸೇರಿ 11 ಜನರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಪೊಲೀಸ್‌ ಸೇವೆ (SAPS) ಪ್ರಕಾರ, ಅಕ್ರಮ ಶೆಬೀನ್ ಒಳಗೆ ನಡೆದ ಈ ದುರಂತದಲ್ಲಿ 3, 12 ಮತ್ತು 16 ವರ್ಷದ ಮೂವರು ಮಕ್ಕಳೂ ಸೇರಿ ಹಲವರು ಬಲಿಯಾಗಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಜೀವನ್‌ರಕ್ಷಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ದೇಶದಲ್ಲಿ ಆತಂಕ ಮೂಡಿಸಿದೆ.

ಹಾಸ್ಟೆಲ್‌ನಲ್ಲಿ ಗುಂಡಿನ ದಾಳಿ 11 ಸಾವು, 14 ಗಾಯ Read More »

ಇಲಿ ಪಾಷಾಣ ಸೇವಿಸಿದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಇಲಿ ಪಾಷಾಣ ಸೇವಿಸಿದ ವಿದ್ಯಾರ್ಥಿನಿ ಸಾವು Read More »

ಕಲ್ಲುಗುಂಡಿ : ಆತ್ಮಹತ್ಯೆಗೆ ಯತ್ನಿಸಿ ನೇಣು ಹಾಕಿಕೊಂಡು ಜಿಗಿದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಅರಂತೋಡು : ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವ್ಯಕ್ತಿಯ ತಲೆಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಿಂದ ಡಿ.5ರಂದು ವರದಿಯಾಗಿದೆ.ಐವರ್ನಾಡು ಗ್ರಾಮದ ಮಾಧವ ಎಂಬ ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿ ಬಿ ದ್ದು ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ವ್ಯಕ್ತಿಯೋರ್ವರು ಕಲ್ಲುಗುಂಡಿ ಅವರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಜಿಗಿದ ಸಂದರ್ಭ ಕೇಬಲ್ ಕಟ್ಟಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯ ಮಾಡಿಕೊಂಡು

ಕಲ್ಲುಗುಂಡಿ : ಆತ್ಮಹತ್ಯೆಗೆ ಯತ್ನಿಸಿ ನೇಣು ಹಾಕಿಕೊಂಡು ಜಿಗಿದ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ, ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಎಂಬುವರೇ ಕೊಲೆಯಾದ ಯುವಕ. ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ದೀಪಕ್ ಮೇಲೆ ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಅಟ್ಯಾಕ್ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಜಾಂಡೀಸ್ ಗೆ ಸುಳ್ಯದ ಯುವಕ ರಕ್ಷಿತ್ ಸಾವು

ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಡಿ.3ರಂದು ವರದಿಯಾಗಿದೆ.ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು..

ಜಾಂಡೀಸ್ ಗೆ ಸುಳ್ಯದ ಯುವಕ ರಕ್ಷಿತ್ ಸಾವು Read More »

ಗ್ರಾಮ ಪಂಚಾಯತ್ ಹಣ ದುರುಪಯೋಗ ಸಿಬ್ಬಂದಿ ಅಮಾನತು

ಪಂಜ ಗ್ರಾಮ ಪಂಚಾಯತ್ ನಲ್ಲಿ ತೆರಿಗೆ ವಸೂಲಾತಿಯ ಹಣ ಬ್ಯಾಂಕ್ ಗೆ ಪಾವತಿಸದೇ ದುರುಪಯೋಗ ಮಾಡಿರುವ ಆರೋಪದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರನ್ನು ಗ್ರಾ.ಪಂ. ಆಡಳಿತ ಅಮಾನತು ಗೊಳಿಸಿರುವುದಾಗಿ ತಿಳಿದುಬಂದಿದೆ.ಡಿ.2ರಂದು ಪಂಚಾಯತ್ ಆಡಳಿತ ಮಂಡಳಿ ಹಣ ದುರುಪಯೋಗ ಮಾಡಿದ ಆರೋಪಕ್ಕೆ ಒಳಗಾದ ಬಾಬುರನ್ನು ಅಮಾನತು ಮಾಡಿರುವುದಾಗಿಯೂ, ಹಾಗೂ ಹಣ ದುರುಪಯೋಗದ ಕುರಿತು ಪೋಲೀಸ್ ದೂರುನೀಡಿರುವುದಾಗಿಯೂ ತಿಳಿದುಬಂದಿದೆ

ಗ್ರಾಮ ಪಂಚಾಯತ್ ಹಣ ದುರುಪಯೋಗ ಸಿಬ್ಬಂದಿ ಅಮಾನತು Read More »

ಕಾರು ಡಿಕ್ಕಿಯಾಗಿ ಬಾಲಕ ಸಾವು

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಡಿ.3ರಂದು ಮನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಮುಹಮ್ಮದ್ ಹಝೀರಿನ್ ಎಂಬ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಅಂಗಡಿಗೆ ತಿಂಡಿ ತರಲು ಹೋಗಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು ಡಿಕ್ಕಿಯಾಗಿ ಬಾಲಕ ಸಾವು Read More »

error: Content is protected !!
Scroll to Top