ಜನದನಿ

ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ, ಒಂದು ವಾರದ ಒಳಗೆ ಹತ್ತು ಬಸ್ಸು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ KSRTC ಬಸ್ಸುಗಳ ಕೊರತೆ ಎದುರಾಗಿದ್ದು ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನ.14ರಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರನ್ನು ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ವಿನಂತಿಸಿದರು. ಕೆಳದಿನಗಳ ಹಿಂದೆ ಸಚಿವರಿಗೆ ಕರೆಯ ಮೂಲಕ ಸಮಸ್ಯೆಗಳನ್ನು ತಿಳಿಸಿದ್ದರು. ಸಚಿವರು ಒಂದು ವಾರದ ಒಳಗೆ 10ಬಸ್ಸುಗಳನ್ನು ಒದಗಿಸುವಂತೆ KSRTC DCಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವಿವಿದ ದೇವಾಲಯದ […]

ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ, ಒಂದು ವಾರದ ಒಳಗೆ ಹತ್ತು ಬಸ್ಸು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರ ಸೂಚನೆ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಿಶೋರ್ ಶಿರಾಡಿ ಮನವಿ

ನ.15ನೇ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುವ ಪ್ರತಿಭಟನೆ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಈ ಕಾರ್ಯಕ್ರಮದಲ್ಲಿ ರೈತರ ಪರವಾಗಿ ಭಾಗವಹಿಸಬೇಕಾಗಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಮಾದ್ಯಮ ಹೇಳಿಕೆಯ ಮೂಲಕ‌ ವಿನಂತಿಸಿಕೊಂಡಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಿಶೋರ್ ಶಿರಾಡಿ ಮನವಿ Read More »

ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ : ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಶಾಸಕರಿಗೆ ಮನವಿ

ಅರಂತೋಡು, ನ.12 : ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ ತಪ್ಪಿದಲ್ಲಿ ಮುಂದಿನ ಚುನಾವಣೆಯ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಅರಂತೋಡು ಗ್ರಾಮದ ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಸುಳ್ಯ ವಿಧಾನ ಸಭಾ ಕ್ಷೇತ್ರರ ಶಾಸಕಿ ಭಾಗೀರಥಿ ಮುರಳ್ಯರಿ ಮನವಿ ಸಲ್ಲಿಸಿದೆ.ಮೈಸೂರು, ಕೊಡಗು ಜಿಲ್ಲಾ ಯಾತ್ರಿಕರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸುವರೇ ಅತೀ ಹತ್ತಿರದ ರಸ್ತೆ ಅರಂತೋಡು-ಎಲಿಮಲೆ ಜಿಲ್ಲಾ ಮುಖ್ಯ ರಸ್ತೆ ಆಗಿದೆ ಎಂಬುದು ತಮಗೆ

ಅರಂತೋಡು-ಎಲಿಮಲೆ ಲೋಕೋಪಯೋಗಿ ರಸ್ತೆಯ ಆಯ್ದ ಭಾಗವನ್ನು ತಕ್ಷಣ ಅಭಿವೃದ್ಧಿ ಪಡಿಸಿ : ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಶಾಸಕರಿಗೆ ಮನವಿ Read More »

ಆನೆಗುಂಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು!

ಕನಕಮಜಲು ಗ್ರಾಮದ ಆನೆಗುಂಡಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿ ನ.12ರಂದು ಕಾಡಾನೆಗಳು ಸಂಚರಿಸಿವೆ.ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿ ತಿರುವಿನಲ್ಲಿ ಎರಡು ಕಾಡಾನೆಗಳು ರಸ್ತೆ ಬದಿ ಸಂಚರಿ ಬಳಿಕ ರಸ್ತೆ ಪಕ್ಕದ ಕಾಡಿನೊಳಗೆ ಹೋಗಿರುವುದಾಗಿ ತಿಳಿದುಬಂದಿದೆಕನಕಮಜಲು ಗ್ರಾಮದ ಕುದ್ಕುಳಿ, ಕುತ್ಯಾಳ, ಕಣಜಾಲು, ಮುಗೇರು ಪರಿಸರದಲ್ಲಿ ಕೃಷಿಕರ ಕೃಷಿ ತೋಟಗಳಿಗೆ ನುಗ್ಗಿ ಪ್ರತಿ ವರ್ಷ ಹಾನಿ ನಡೆಸುತ್ತಿದ್ದ ಕಾಡಾನೆಗಳು ಇದೀಗ ಆನೆಗುಂಡಿ ಪರಿಸರದ ಕಾಡಿನಲ್ಲಿ ಬೀಡು ಬಿಟ್ಟಿರುವುದಾಗಿ ತಿಳಿದುಬಂದಿದೆ.ಇದರಿಂದ ಪರಿಸರದ ರೈತರು ಆತಂಕಗೊಂಡಿದ್ದಾರೆ.

ಆನೆಗುಂಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು! Read More »

ಮಾಜಿ ಸಚಿವ ಅಂಗಾರರು ಬೇಡಿಕೆ ಇಟ್ಟಿದ ರಸ್ತೆಗಳ ಅಭಿವೃದ್ಧಿ ಗೆ ಅನುದಾನ ಮಂಜೂರು

ಎಸ್‌.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ ಈಗಿನ ಸರಕಾರ ಅನುದಾನ ಬಿಡುಗಡೆಗೊಳಿಸಿ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ.ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕಲ್ಲೋಣಿ- ಕುಳ್ಳಂಪಾಡಿ ರಸ್ತೆ ಅಭಿವೃದ್ಧಿಗೆ ರೂ.

ಮಾಜಿ ಸಚಿವ ಅಂಗಾರರು ಬೇಡಿಕೆ ಇಟ್ಟಿದ ರಸ್ತೆಗಳ ಅಭಿವೃದ್ಧಿ ಗೆ ಅನುದಾನ ಮಂಜೂರು Read More »

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ

ಸುಳ್ಯದ ಕೆ.ಎಸ್‌.ಆರ್.ಟಿ.ಸಿ ಬಸ್ಸು ನಿಲ್ದಾಣ ಅವ್ಯವಸ್ಥೆಯ ಬಗ್ಗೆ ಮಾರ್ದನಿ ನ್ಯೂಸ್ ನಲ್ಲಿ ವರದಿ ಪ್ರಕಟವಾದ ಹಿನ್ನಲೆಯಲ್ಲಿ ಬುಧವಾರ ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಬಸ್ಸು ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ಸಮಸ್ಯೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಲ್ಲಿ ನಾನೇ ಬಸ್ಸು ನಿಲ್ದಾಣದಲ್ಲಿ ಕಳಿತುಕೊಂಡು ಪ್ರತಿಭಟನೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿ ಅಧಿಕಾರಿಗಳನ್ನು‌ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.ಮಂಗಳವಾರ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮುರಿದ ಚೇಯರ್ ನಿಂದ ಬಿದ್ದು ಗಾಯಗೊಂಡಿದ್ದರು. ಈ ವರದಿ ಮಾರ್ದನಿ

ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಅವ್ಯವಸ್ಥೆ,ಮಾರ್ದನಿಯಲ್ಲಿ ವರದಿ ಪ್ರಕಟ ಹಿನ್ನಲೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಶಾಸಕಿ ಭಾಗೀರಥಿ ಮುರಳ್ಯ,ಒಂದು ವಾರದಲ್ಲಿ ಸಮಸ್ಯೆ ಪರಿಹಾರವಾಗದಿದಲ್ಲಿ ಪ್ರತಿಭಟನೆ Read More »

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ, ಸಮಸ್ಯೆ ಪರಿಹರಿಸಲು ಶಾಸಕರ ಸೂಚನೆ

ಮಂಗಳೂರು:ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಸುಳ್ಯದ 110 ಕೆವಿ ನೂತನ ಲೈನ್‌ ಕಾಮಗಾರಿ ಸುಳ್ಯಕ್ಕೆ ಕಾವು- ಜಾಲ್ಕೂರು ಮಧ್ಯೆ ವಿದ್ಯುತ್ ಲೈನ್ ಕಾಮಗಾರಿನಡೆಯುತ್ತಿದ್ದು ಅದಷ್ಟು ಬೇಗ ಕಾಮಗಾರಿ ಮುಗಿಸಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕರು ಸಲಹೆ ನೀಡಿದರು. ಸುಳ್ಯಕ್ಕೆ ತುರ್ತು ಸಂದರ್ಭದಲ್ಲಿ ವಿದ್ಯುತ್ ಪೂರೈಸಲು ಬೆಳ್ಳಾರೆ- ಪೈಚಾರು ಮೂಲಕ ಹೊಸ ಕೇಬಲ್ ಲೈನ್‌ನ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಮತ್ತು

ಸುಳ್ಯದಲ್ಲಿ ಹೆಚ್ಚಿದ ವಿದ್ಯುತ್ ಸಮಸ್ಯೆ, ಸಮಸ್ಯೆ ಪರಿಹರಿಸಲು ಶಾಸಕರ ಸೂಚನೆ Read More »

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು

ಹೈದರಾಬಾದ್: ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು

ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದುಗಳಾಗಿರಬೇಕು Read More »

ಕೈ ಕೊಟ್ಟ ವಿದ್ಯುತ್, ಬೆಳಕಿನ ಹಬ್ಬ ದೀಪಾವಳಿ ಕತ್ತಲಲ್ಲಿ ಆಚರಣೆ,ಮೆಸ್ಕಾಂ ಗೆ ಜನರಿಂದ ಹಿಡಿಶಾಪ

ಬೆಳಕಿನ ಹಬ್ಬ ದೀಪಾವಳಿಯನ್ನು‌ ಮೊದಲ ದಿನ ಸುಳ್ಯ ತಾಲೂಕಿನಲ್ಲಿ ಕತ್ತಲಲ್ಲಿ ಆಚರಿಸುವ ಭಾಗ್ಯವನ್ನು ಮೆಸ್ಕಾಂ ಕರುಣಿಸಿದೆ.ಬುಧವಾರ ರಾತ್ರಿ ಹೋಗಿರುವ ವಿದ್ಯುತ್ ಗುರುವಾರ ಬೆಳಿಗ್ಗೆ 7 ಗಂಟೆಗೆ ಮತ್ತೆ ಪಾಪಸ್ ಬಂದಿದೆ.ಇದರಿಂದ ದೀಪಾವಳಿಗೆ ತಯಾರಿ ನಡೆಸುತ್ತಿದ್ದವರು ವಿದ್ಯುತ್ ಇಲ್ಲದೆ ಪರದಾಡಬೇಕಾದ ಪರಿಸ್ಥಿತಿ ಎದುರಾಯಿತು.ಗುರುವಾರ ಸಂಜೆ 6 ಗಂಟೆಗೆ ಕೈ ಕೊಟ್ಟಿರುವ ವಿದ್ಯುತ್ ರಾತ್ರಿ 10 ಗಂಟೆಯ ತನಕ ಬಂದಿಲ್ಲ.ಬೇರೆ ತಾಲೂಕುಗಳಲ್ಲಿ ಬೆಳಕಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದರೆ ಸುಳ್ಯ ತಾಲೂಕಿನಲ್ಲಿ ಬರೇ ಕತ್ತಲ್ಲಿ ಜನರು ದೀಪಾವಳಿ ಆಚರಿಸಿಕೊಂಡಿದ್ದು ಮೆಸ್ಕಾಂಗೆ ಹಿಡಿಶಾಪ

ಕೈ ಕೊಟ್ಟ ವಿದ್ಯುತ್, ಬೆಳಕಿನ ಹಬ್ಬ ದೀಪಾವಳಿ ಕತ್ತಲಲ್ಲಿ ಆಚರಣೆ,ಮೆಸ್ಕಾಂ ಗೆ ಜನರಿಂದ ಹಿಡಿಶಾಪ Read More »

ನಾಳೆ ಪವರ್ ಕಟ್,ವಾರದಲ್ಲಿ ಎರಡು ದಿನ ಪವರ್ ಕಟ್ ಗೆ ವಿದ್ಯುತ್ ಬಳಕೆದಾರರ ಆಕ್ರೋಶ

ಸುಳ್ಯ:33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಅ.29 ರಂದು ನಡೆಸುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33/11 ಕೆ.ವಿ ಕಾವು ಹಾಗೂಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದೀಗ ಕಳೆದ ಕೆಲವು ವಾರಗಳಲ್ಲಿ ವಾರದಲ್ಲಿ ಎರಡು ದಿನ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಇದರಿಂದ ಈ ಭಾಗದ ವಿದ್ಯುತ್ ಬಳಕೆದಾರರು ಆಕ್ರೋಶ

ನಾಳೆ ಪವರ್ ಕಟ್,ವಾರದಲ್ಲಿ ಎರಡು ದಿನ ಪವರ್ ಕಟ್ ಗೆ ವಿದ್ಯುತ್ ಬಳಕೆದಾರರ ಆಕ್ರೋಶ Read More »

error: Content is protected !!
Scroll to Top