ಪ್ರಚಲಿತ

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ

ರಾಜ್ಯ ಬಿಜೆಪಿಯಲ್ಲಿ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪಕ್ಷದಲ್ಲಿ ಗುಂಪುಗಳು ಸೃಷ್ಟಿ ಆಗಿರುವುದನ್ನು ಸರಿಪಡಿಸಬೇಕು. ಅಧ್ಯಕ್ಷರ ನೇಮಕ ಮಾಡುವುದಕ್ಕಿಂತಲೂ ನಮ್ಮ ಮನಸ್ಸುಗಳನ್ನು ಸರಿ ಮಾಡುವ ಕೆಲಸವನ್ನು ಹಿರಿಯರು ಮಾಡಲೇ ಬೇಕು ಎಂದು ಅವರು ಹೇಳಿದರು.ವಿಶ್ವವಿದ್ಯಾ ನಿಲಯ ಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು […]

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ Read More »

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ ಎಂದು ಸಂಸದ ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ.

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ Read More »

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು.ಅಧ್ಯಕ್ಷರಾಗಿ ಕೇಶವ ಉಳುವಾರು ಕೊಳಲುಮೂಲೆ ಆಯ್ಕೆಗೊಂಡಿದ್ದಾರೆ.ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕುಲ್ಟಾರು, ಮಾಲತಿ ಭೋಜಪ್ಪ ಹಾಸ್ಸಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಕೇಶವಮೂರ್ತಿ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿರುತ್ತಾರೆ.ಕೇಶವ ಕೊಳಲುಮೂಲೆಯವರನ್ನು ವಸಂತ ಪೆಲ್ತಡ್ಕ

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ

ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಿತು.ಪೈನಲ್ ಪ್ರಥಮ ಹಂತದಲ್ಲಿರೋಚಕತೆ ಕಂಡ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಬ್ಯಾಂಕ್ ಆಫ್ ಬರೋಡ ರೂ.70,000 ಹಾಗೂ ಟ್ರೋಫಿ ಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ.ಕಾಲೇಜು ಉಜಿರೆ ರೂ.50,000 ಹಾಗೂ ಟ್ರೋಫಿ ಯನ್ನು

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ Read More »

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದ ಪಸ್ಟ್ ಕ್ವಾಟರ್ ಪೈನಲ್ ನಲ್ಲಿ ಎಸ್.ಡಿ.ಎಂ ಉಜಿರೆ ತಂಡ ಕೆ.ಎಫ್.ಡಿ.ಸಿ ತಂಡವನ್ನು35_17 ಅಂತರದಿಂದ ಸೋಲಿಸಿ ಸೆಮಿಪೈನಲ್ ಗೆ ಪ್ರವೇಶ ಪಡೆದಿದೆ.

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ Read More »

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದಲ್ಲಿಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡ ಎರಡನೇ ಗೆಲುವು ದಾಖಲಿಸಿದೆ.ಎನ್‌ಎಂಸಿ ಸುಳ್ಯ ತಂಡವು ಕರೆಂಕಿ ಬಂಟ್ವಾಳ ತಂಡವನ್ನು 31-19ಅಂಕಗಳ ಅಂತರದಲ್ಲಿ ಸೋಲಿಸಿ ಎರಡನೇ ಜಯ ಪಡೆದು ಕ್ವಾರ್ಟರ್ ಫೈನಲ್‌ ಪ್ರವೇಶಿಸಿತು.ಹೆಚ್ಚಾಗಿ ಪ್ರೋ ಕಬಡ್ಡಿ ಆಟಗಾರರಿರುವ

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು Read More »

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ

ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತ‌ರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ಅರಂಭಗೊಂಡಿದೆ.ಪ್ರಥಮ ಪಂದ್ಯಾಟ ಆಳ್ವಾಸ್ ಮೂಡಬಿದಿರೆ ಹಾಗೂ ಎನ್.ಎಂ.ಸಿ ಸುಳ್ಯ ನಡುವೆ ನಡೆದು ಎನ್.ಎಂ‌.ಸಿ ಸುಳ್ಯ ವಿಜಯಿಯಾಗಿದೆ.

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು.ರಾಜ್ಯ ಹಾಗೂ ಕೇರಳ ,ತಮಿಳು ನಾಡಿನ ಬಲಿಷ್ಟ 12 ತಂಡಗಳು ಭಾಗವಹಿಸಿದ್ದು ತೀವ್ರ ಹಣಾ ಹಣಿ ನೀಡಲು, ಪ್ರೇಕ್ಷಕರಿಗೆ ರಸದೌತಣ ನೀಡಲು ಅಂಕಣ ಸಜ್ಜಾಗಿದೆ .ಸುತ್ತಲು ಸುಂದರ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು ಪ್ರೇಕ್ಷಕರಿಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ Read More »

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ

ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದುಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಹಕಾರ ರತ್ನ ದಿ. ವಾರಣಾಶಿ ಸುಬ್ರಾಯ ಭಟ್‌ರವರ ಪ್ರಯತ್ನ ಹಾಗೂ ಸಹಕಾರ ರತ್ನ ಎಂ.ಎನ್. ರಾಜೇಂದ್ರಕುಮಾರ್ ಇವರ ಪ್ರೋತ್ಸಾಹದೊಂದಿಗೆ ಪ್ರಾರಂಭಗೊಂಡ ಮಾಸ್ ಸಂಸ್ಥೆ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಡಿಕೆ ಕೃಷಿಕರ ಹಿತ ಸಂರಕ್ಷಿಸುವ ಸಲುವಾಗಿ

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ Read More »

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ?

ಸರಕಾರಿ ಶಾಲೆಗಳ ಇಷ್ಟ ಪಡುವವರಿಗೆ ಆತಂಕವೊಂದು ಎದುರಾಗಿದೆ‌.ರಾಜ್ಯ ಸರಕಾರ ದಾಖಲಾತಿ ಕಡಿಮೆ ಇರುವ ಪ್ರಾಥಮಿಕ ಶಾಲೆಗಳ ವಿಲೀನಕ್ಕೆ ಹೆಜ್ಜೆಯಿಟ್ಟಿದೆ. ಇದರಿಂದ ರಾಜ್ಯದ ಆರು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿಗೆ ಕುತ್ತು ಎದುರಾಗಿದೆ.ಮೊದಲ ಹಂತವಾಗಿ 8 ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡಿ ಮಾದರಿ ಶಾಲೆ ನಡೆಸುವ ಕಾರ್ಯಯೋಜನೆ ನಡೆಯುತ್ತಿದೆ. ಇದರಲ್ಲಿ ಶಿಕ್ಷಣ ಸಚಿವರ ಹುಟ್ಟೂರು ಶಿವಮೊಗ್ಗ ಜಿಲ್ಲೆ ಕೂಡ ಸೇರಿದೆ. ಕಾರವಾರ, ಶಿರಸಿ ಶೈಕ್ಷಣಿಕ ಜಿಲ್ಲೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಕೆಲ ಜಿಲ್ಲೆಗಳಲ್ಲಿ ಮಾದರಿ

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ? Read More »

error: Content is protected !!
Scroll to Top