ಪ್ರಚಲಿತ

ನಾಳೆ(ಮಾ.27)ಸಂಪಾಜೆ, ಅರಂತೋಡು, ಸುಳ್ಯದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ ದಿನಾಂಕ 27-03-2026 ನೇ ಶುಕ್ರವಾರ ದ ಕ ಸಂಪಾಜೆ, ಕೊಡಗು ಸಂಪಾಜೆ ಅರಂತೋಡು ಸುಳ್ಯದಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ವಿನಂತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ. ದ. ಕ ಸಂಪಾಜೆಸ್ಥಳ :ಪ್ರಾಥಮಿಕ […]

ನಾಳೆ(ಮಾ.27)ಸಂಪಾಜೆ, ಅರಂತೋಡು, ಸುಳ್ಯದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು.

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ Read More »

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾಹಿತಿ ವೈ.ಎಸ್ . ಹರಗಿ ಯವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಇವರ 2024 ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯಲ್ಲಿ 25 ಸಾವಿರ ನಗದು ಬಹುಮಾನ, ಫಲಕ , ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವೈ.ಎಸ್ ಹರಗಿ ಅವರು

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ (ಮಾ 26)ರಂದು ಉಬರಡ್ಕ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಉಬರಡ್ಕಸ್ಥಳ :ಶ್ರೀ ಶಾಸ್ತಾವು ನರಸಿಂಹ ದೇವಸ್ಥಾನ -ಸಂಜೆ 5:30ಕ್ಕೆತೊಡಿಕಾನ1)ಊರುಪಂಜಸ್ಥಳ: ಊರುಪಂಜ ರತ್ನಾಕರ ರವರ ಮನೆಸಮಯ

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ರಾಜ್ಯದ ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ Read More »

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ

ಅರಂತೋಡು,ಮಾ 24 : ತೆಕ್ಕಿಲ್ ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗೂನಡ್ಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಯ ಸರ್ವತೋಮುಖ ಬೆಳವಣಿಗೆ ಮತ್ತು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸಮಾಲೋಚನಾ ಸಭೆ ನಡೆಯಿತು‌.ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೋಷಕರು ನಿವೃತ್ತ ಅಧ್ಯಾಪಕರ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಗ್ರಾಮೀಣ ಪ್ರದೇಶದ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಾ ಮೂಲ ಸೌಕರ್ಯ ಅಭಿವೃದ್ಧಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಬೆಳೆಸಬೇಕೆಂದು

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ Read More »

ನಾಳೆ(ಮಾ.25) ಆಲೆಟ್ಟಿ ತೊಡಿಕಾನದಲ್ಲಿ ತೊಡಿಕಾನ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಮಾ.25ರಂದು ಆಲೆಟ್ಟಿ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಆಲೆಟ್ಟಿಸ್ಥಳ :ಶ್ರೀ ಸದಾಶಿವ ದೇವಸ್ಥಾನ -ಪೂ 11:00 ಕ್ಕೆತೊಡಿಕಾನ1)ಗುಂಡಿಗದ್ದೆ -ಕಲ್ಲಂಬಳ್ಳಸ್ಥಳ: ಶ್ರೀ ರವಿ ಭಟ್ ರವರ ಮನೆಸಮಯ :ಸಂಜೆ 6:00ಕ್ಕೆ2) ಮುಪ್ಪಸೇರು -ಪಂಜಿಕೋಡಿ -ನಾಗನಮೂಲೆಸ್ಥಳ : ಶ್ರೀ

ನಾಳೆ(ಮಾ.25) ಆಲೆಟ್ಟಿ ತೊಡಿಕಾನದಲ್ಲಿ ತೊಡಿಕಾನ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಕೇನ್ಯ : ಕೆ.ಪಿ.ಎಲ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಫ್ರೆಂಡ್ಸ್ ಕ್ಲಬ್ ಕೇನ್ಯ ಇದರ ಆಶ್ರಯದಲ್ಲಿ 6 ತಂಡಗಳ 12 ಜನರ ಲೀಗ್ ಮಾದರಿಯ ಕ್ರಿಕೆಟ್‌ ಪಂದ್ಯಾಟ ಕೆ.ಪಿ.ಎಲ್ ಟ್ರೋಫಿ 2026 ಮಾ. 22 ರಂದು ಕೇನ್ಯ ವಿಷ್ಣು ನಗರದ ಮೈದಾನದಲ್ಲಿ ನಡೆಯಿತು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರನಾಥ ಶೆಟ್ಟಿ ಕೇನ್ಯ ಉದ್ಘಾಟಿಸಿದರು.ಪಂಜ ಶ್ರೀ ಪರಿವಾರ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕ್ಲಬ್ ನ ಹಿರಿಯ

ಕೇನ್ಯ : ಕೆ.ಪಿ.ಎಲ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ Read More »

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು

ಸುಳ್ಯ ತಾಲೂಕಿನ ನಿಂತಿಕಲ್ಲು‌ ಬಳಿ ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿಯಾಗಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಬೈಕ್ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ಈ‌ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಮೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು Read More »

ಅಜ್ಜಾವರ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಜಾಗೃತಿ ಮತ್ತು ಸಾಬೂನು ತಯಾರಿಕಾ ಕಾರ್ಯಗಾರ

ಅಜ್ಜಾವರ : ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅಜ್ಜಾವರ ಹಾಗೂ ಶ್ರೀ ರಕ್ಷಾ ಸಂಜೀವಿನಿ ಒಕ್ಕೂಟ (ರಿ.)ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾ.24ರಂದು ಅಜ್ಜಾವರದಲ್ಲಿ “ಮಹಿಳಾ ಜಾಗೃತಿ ಮತ್ತು ಸಾಬೂನು ತಯಾರಿಕಾ ಕಾರ್ಯಗಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು NRLM ತಾಲೂಕು ವ್ಯವಸ್ಥಾಪಕರಾದ ಶ್ರೀಮತಿ ಶ್ವೇತಾ ಅವರು ನೆರವೇರಿಸಿದರು ,ಹಾಗೆಯೇ ಮಹಿಳಾ ಹಕ್ಕುಗಳ ಕುರಿತು ಮಾಹಿತಿಯನ್ನು

ಅಜ್ಜಾವರ : ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಜಾಗೃತಿ ಮತ್ತು ಸಾಬೂನು ತಯಾರಿಕಾ ಕಾರ್ಯಗಾರ Read More »

error: Content is protected !!
Scroll to Top