ಪ್ರಚಲಿತ

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ :-ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.ಕತೆ, ಕವನ, […]

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ

ಸುಳ್ಯದ ಕವಿ, ಸಾಹಿತಿ, ಗಾಯಕ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9 ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ. ಕಳ್ಳ ಮಾರ್ಗದಿಂದ BPL ಕಾರ್ಡ್ ಪಡೆದುಕೊಂಡಿದ್ದರೆ ರದ್ದಾಗುತ್ತದೆ. ಈ ನಡುವೆ ಆಹಾರ ಸಚಿವ ವಿ.ಮುನಿಯಪ್ಪ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ಕೋಲಾರದಲ್ಲಿ ಶುಕ್ರವಾರ ಮಾತನಾಡಿದ ಅವರು, BPL ಕಾರ್ಡ್ ರದ್ದಾದರೂ ಕೂಡ ಆ ಸದಸ್ಯರನ್ನ APL ಕಾರ್ಡ್‌ಗೆ ವರ್ಗಾಯಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೆ ಅನ್ನಭಾಗ್ಯ ಹಣ ಕೂಡ ವರ್ಗಾವಣೆಯಾಗುತ್ತದೆ ಸರ್ವರ್ ಸಮಸ್ಯೆಯಿಂದ ಹಣ ವರ್ಗಾವಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ Read More »

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅ.9 ರಿಂದ ಅ.17ರ ತನಕ ಶ್ರೀ ಚೆನ್ನಕೇಶವದ ದೇವಸ್ಥಾನದಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯುತಿದೆ. ಅ.11ರಂದು ದಿನಪೂರ್ತಿ ಭಜನೋತ್ಸವ ನಡೆಯಿತು ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಡೆಯಿತು.

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ

ಸುಳ್ಯದ ಪ್ರಖ್ಯಾತ ವಸ್ತ್ರ ಮಳಿಗೆ ಕುಂ..ಕುಂ.. ಫ್ಯಾಶನ್ ನವರ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸುಳ್ಯ ರಥಬೀದಿಯಲ್ಲಿನ ನಂದಿನಿ ಟವರ್ಸ್‌ ನಲ್ಲಿ ಶುಕ್ರವಾರ ಶುಭಾರಂಭಗೊಂಡಿತು.ನಂದಿನಿ ಟವರ್ಸ್ ಮಾಲಕ, ಹಿರಿಯರಾದ ಗುಡ್ಡಪ್ಪ ರೈ ಮೇನಾಲರು ನೂತನ ವಸ್ತ್ರ ಮಳಿಗೆಯಲ್ಲಿ ರಿಬ್ಬನ್ ಕತ್ತರಿಸಿ ವಸ್ತ್ರ ಮಳಿಗೆಯನ್ನು ಉದ್ಘಾಟಿಸಿದರು.ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಯವರು ದೀಪ ಪ್ರಜ್ವಲನೆಗೊಳಿಸಿದರು.ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕುಂ..ಕುಂ.. ಫ್ಯಾಶನ್ ಸಂಸ್ಥೆ ಕಾರ್ಯಾಚರಿಸುತ್ತಿರುವ ಕಟ್ಟಡದ ಮಾಲಕರಾದ ಪ್ರೇಮಲತಾ,

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅ.11 ರಂದು ಆಯುಧ ಪೂಜಾ ಕಾರ್ಯಕ್ರಮವನ್ನು ಆರ್ಚಕರಾದ ನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಸಿಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ., ಪ್ರಧಾನ ಕಾರ್ಯದರ್ಶಿಗಳಾದ ಮಿ. ಅಕ್ಷಯ್ ಕೆ.ಸಿ., ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಕೆ.ವಿ. ಜಿ . ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದ ಡೀನ್ ನೀಲಾಂಬಿಕೈ ನಟರಾಜನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.,

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ Read More »

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ವಿವಿಧ ಪೂಜಾ ಕಾರ್ಯಕ್ರಮ

ಸುಳ್ಯ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ಆಯುಧಪೂಜೆ ,ಗಣಹೋಮ, ಲಕ್ಮೀಪೂಜೆ, ವಾಹನ ಪೂಜೆ ಅ.10ರಂದು ನಡೆಯಿತು.ಅಭಿರಾಮ್ ಭಟ್ ಸರಳಿಕುಂಜ ಪೂಜೆಗಳನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಿ.ಸುಳ್ಯ ಇದರ ಅಧ್ಯಕ್ಷರಾದ ಲೋಕನಾಥ ಅಮಚೂರು,ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಅಧ್ಯಕ್ಷ ಯತೀಶ್ ರೈ ದುಗ್ಗಲಡ್ಕ ,ಅಲೆಟ್ಟಿ ಗ್ರಾಮ ಪಂಚಾಯತಿ ಸದಸ್ಯ ರತೀಶನ್ಶಿವಪ್ರಸಾದ್ ಆಲೆಟ್ಟಿ, ಬೂಡು ರಾಧಾಕೃಷ್ಣ ‌ರೈ,ಯೋಜನಾಧಿಕಾರಿ ಮಾಧವ ಗೌಡ, ಕಛೇರಿ ಪ್ರಬಂಧಕರು &

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್( ರಿ) ಕಚೇರಿ ಯಲ್ಲಿ ವಿವಿಧ ಪೂಜಾ ಕಾರ್ಯಕ್ರಮ Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ರಚನೆ.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ

ಸುಳ್ಯ ತಾಲೂಕಿನ ಸಮಸ್ತದ ಅಧಿನದಲ್ಲಿರುವ 15 ಜಮಾಅತ್ ಗಳ ಪ್ರತಿನಿಧಿಗಳ ಸಭೆಯು ಸೈಯದ್ ಝೈನುಲ್ ಆಬಿದೀನ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಅ.9 ರಂದು ಸುಳ್ಯದ ಸುಪ್ರಿಮ್ ಹಾಲ್ ನಲ್ಲಿ ನಡೆಯಿತು. ಸಭೆಯನ್ನು ಬಹು| ಝೈನುಲ್ ಆಬಿದೀನ್ ತಂಙಳ್ ದುವಾ ಮೂಲಕ ಉದ್ಘಾಟಿಸಿದರು. ಹಿರಿಯರಾದ ಹಾಜಿ ಇಸಾಕ್ ಸಾಹೇಬ್ ಪಾಜಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ ಅರಂತೋಡು,

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ರಚನೆ.ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಗುಂಡಿ Read More »

ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ

ಸುಳ್ಯ : ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಹಿಷಾಸುರನನ್ನು ಮರ್ಧನ ಮಾಡಿದ ಚಾಮುಂಡೇಶ್ವರಿ ದೇವಿಯ ಹಬ್ಬವನ್ನಾಗಿ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಸುಳ್ಯದಲ್ಲಿ ಕಳೆದ

ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ Read More »

ಕನಕಮಜಲು : ಕನಕದಾಸ ಮಕ್ಕಳ ಭಜನಾ ಮಂಡಳಿಯ ವಾರ್ಷಿಕ ಸಂಭ್ರಮ ಕಾರ್ಯಕ್ರಮ

ಕನಕಮಜಲಿನ ಕನಕದಾಸ ಮಕ್ಕಳ ಭಜನಾ ಮಂಡಳಿ ಇದರ ವಾರ್ಷಿಕ ಸಂಭ್ರಮ ಕಾರ್ಯಕ್ರಮ ಅ. 8ರಂದು ಸಂಜೆ ಕನಕಮಜಲು ಪೆರಂಬಾರಿನ ಮದಿಮಾಳು ಪಾದೆ ಶ್ರೀ ದುರ್ಗಾದೇವಿ ಅಮ್ಮನವರ ಕ್ಷೇತ್ರ ನಡೆಯಿತು. ರಾಮಕೃಷ್ಣ ಕಾಟುಕುಕ್ಕೆ ಇವರ ದಿವ್ಯ ಉಪಸ್ಥಿತಿಯಲ್ಲಿ ‘ಸಮೂಹ ಗಾಯನ’ ನಡೆದ ಬಳಿಕ ಗುರುವಂದನಾ ಕಾರ್ಯಕ್ರಮ ನಡೆಯಿತು. ಕನಕದಾಸ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷೆ ಕು. ಆಕಾಂಕ್ಷ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಣ್ಣಗೌಡ ಪೆರುoಬಾರು, ಕಾರ್ಯದರ್ಶಿ ವಾಸುದೇವಪೆರುoಬಾರು, ಉತ್ಸವ ಸಮಿತಿಯ ಅಧ್ಯಕ್ಷ

ಕನಕಮಜಲು : ಕನಕದಾಸ ಮಕ್ಕಳ ಭಜನಾ ಮಂಡಳಿಯ ವಾರ್ಷಿಕ ಸಂಭ್ರಮ ಕಾರ್ಯಕ್ರಮ Read More »

error: Content is protected !!
Scroll to Top