ಪ್ರಚಲಿತ

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8ರಿಂದ ಆರಂಭಗೊಂಡಿದೆ.ಫೆ‌.8ರಂದು ರಾತ್ರಿ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.ಸಾವಿರಾರು ಭಕ್ತರು ಆಗಮಿಸಿ ಕೊರಗಜ್ಜ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಫೆಬ್ರವರಿ 9ರಂದು ರಾತ್ರಿಯಿಂದ ಫೆಬ್ರವರಿ 10 ಸೋಮವಾರದ ತನಕ ಸ್ವಾಮಿ ಸ್ವಾಮಿ ಕೊರಗಜ್ಜ ದೈವದ ಹರಕೆ […]

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ Read More »

ಸುಳ್ಯದಲ್ಲಿ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ, ಮರಾಟಿ ಬಾಂಧವರು ಸಂಘಟಿತರಾಗಬೇಕು- ತಿಮ್ಮಪ್ಪ ನಾಯ್ಕ್

ಮರಾಟಿಗರು ಇನ್ನಷ್ಟು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.ಮರಾಟಿಭಾಷೆಯನ್ನು ಮಾತನಾಡಿ,ಭಾಷೆಯನ್ನು ಬೆಳೆಸಬೇಕು ಎಂದು ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಹೇಳಿದರು.ಅವರು ಇಂದು ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ನಡೆದ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದರು.ಇಂತಹ ಕ್ರೀಡಾಕೂಟಗಳ ಸಂಘಟನೆಯಿಂದ ಮರಾಟಿ ಸಮಾಜದ ಸಂಘಟನೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಮತ್ತು ಮರಾಟಿ ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಾಟಿ ಸಮಾಜದ

ಸುಳ್ಯದಲ್ಲಿ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ, ಮರಾಟಿ ಬಾಂಧವರು ಸಂಘಟಿತರಾಗಬೇಕು- ತಿಮ್ಮಪ್ಪ ನಾಯ್ಕ್ Read More »

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಆಯ್ಕೆ

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀನಾಕ್ಷಿ ಕುದ್ಕುಳಿ ದೊಡ್ಡಕುಮೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಎಲ್ಲಾ ನಿರ್ದೇಶಕ ಸ್ಥಾನಗಳಿಗೆ ತಲಾ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲಾ ನಿರ್ದೇಶಕರ ಆಯ್ಕೆ ಅವಿರೋಧವಾಗಿ ನಡೆಯಿತು. ಜನವರಿ 22ರಂದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೇಶಕರುಗಳಾಗಿ ಸರೋಜ ಕೋಣಗುಂಡಿ, ಸುಶೀಲ ಕೋಣಗುಂಡಿ, ರಾಧಮ್ಮ ಪಡ್ಡು, ಕೆ ಎಮ್ ಶೇಷಮ್ಮ ಕುಂಟುಕಾಡು, ಲೀಲಾವತಿ ಮುಪ್ಪಸೇರು, ಎಂ ಟಿ

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಆಯ್ಕೆ Read More »

ದೆಹಲಿ ಚುನಾವಣೆ ಬಿಜೆಪಿ ಮುನ್ನಡೆ,ಬಿಜೆಪಿಯಿಂದ ವಿಜಯೋತ್ಸವ ಆಚರಣೆ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು.ಸ್ಥಳೀಯ ಬಿಜೆಪಿ ನಾಯಕರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷದ ಅಭಿಮಾ‌‌ನಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೆಹಲಿ ಚುನಾವಣೆ ಬಿಜೆಪಿ ಮುನ್ನಡೆ,ಬಿಜೆಪಿಯಿಂದ ವಿಜಯೋತ್ಸವ ಆಚರಣೆ Read More »

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ. ಈ ಸಮಿತಿಯು ಮುಂದಿನ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಸಂಪಾಜೆ ಪೇರಡ್ಕ ಗೂನಡ್ಕ ಉರೂಸ್ ಸಮರೋಪ, ನಮ್ಮ ಕಾಯಕದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿ – ಸಯ್ಯದ್ ಝೈನುಲ್ ಆಬಿದಿನ್ ತಂಘಳ್ ದುಗ್ಗಲಡ್ಕ

ನಾವು ಮಾಡುವ ಕೆಲಸ ಅಥವಾ ಸೇವೆಯಲ್ಲಿ ವಂಚನೆ ಮೋಸ ಇರಬಾರದು. ಪ್ರಾಮಾಣಿಕವಾಗಿರಬೇಕು, ಯಜಮಾನನಿಗೆ ಯಾವತ್ತು ಮೋಸ ಮಾಡಬಾರದು ಅವರಿಗೆ ತೃಪ್ತಿಯಾಗುವಂತಾ ಸೇವೆ ಮತ್ತು ಕಾಯಕವಾಗಿರಬೇಕೆಂದು ಬಹು| ಸಯ್ಯದ್ ಝೈನುಲ್ ಆಬಿದೀನ್ ತಂಘಳ್ ದುಗ್ಗಲಡ್ಕ ಹೇಳಿದರು. ಅವರು ಫೆ.2 ರಂದು ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ಧ ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ ಗೂನಡ್ಕ ಇದರ ಉರೂಸ್ ಸಮಾರೋಪ ಸಮಾರಂಭದಲ್ಲಿ ದುವಾಶೀರ್ವಾಚನ ಮಾಡಿ ಮಾತನಾಡಿದರು. ಅಧ್ಯಕ್ಷತೆಯನ್ನು ಮುಹಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಿದರು. ಸ್ಥಳೀಯ ಖತೀಬರಾದ

ಸಂಪಾಜೆ ಪೇರಡ್ಕ ಗೂನಡ್ಕ ಉರೂಸ್ ಸಮರೋಪ, ನಮ್ಮ ಕಾಯಕದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿ – ಸಯ್ಯದ್ ಝೈನುಲ್ ಆಬಿದಿನ್ ತಂಘಳ್ ದುಗ್ಗಲಡ್ಕ Read More »

ಅರಂಬೂರು : ಮಾ.15 ,16, 17 ಮತ್ತು 18 ರಂದು ವೈಭವದ  ಶ್ರೀ ವಯನಾಟ್ ಕಲವನ್ ದೈವಂಕಟ್ಟು ಮಹೋತ್ಸವ

ಅರಂತೋಡು, ಫೆ. 4 : ಮಾ.15 ,16, 17 ಮತ್ತು 18 ರಂದು   ಆಲೆಟ್ಟಿ ಗ್ರಾಮದ ಅರಂಬೂರು   ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಭಾರೀ ವೈಭವದಿಂದ ನಡೆಯಲಿದೆ ಎಂದು ಮಹೋತ್ಸವದ ಅಧ್ಯಕ್ಷರಾದ ಪಿ.ಬಿ ಸುಧಾರ ರೈ  ಹಾಗೂ ಇತರ ಪದಾಧಿಕಾರಿಗಳು ತಿಳಿಸಿದ್ದಾರೆ. ದೈವಸ್ತಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು  ಮಾತನಾಡಿದರು. ತೀಯಾ ಸಮಾಜದ ಆಡಳಿತಕ್ಕೆ ಒಳಪಡುವ ತಾಲೂಕಿನ ಏಕೈಕ ವಯನಾಟ್ ಕುಲವನ್ ದೈವಸ್ಥಾನವಾಗಿರುವ   ಅರಂಬೂರಿನಲ್ಲಿ ಗ್ರಾಮಸ್ಥರ ಒಗ್ಗೂಡುವಿಕೆಯಲ್ಲಿ, ಎಲ್ಲರ ಸಹಕಾರದಲ್ಲಿ

ಅರಂಬೂರು : ಮಾ.15 ,16, 17 ಮತ್ತು 18 ರಂದು ವೈಭವದ  ಶ್ರೀ ವಯನಾಟ್ ಕಲವನ್ ದೈವಂಕಟ್ಟು ಮಹೋತ್ಸವ Read More »

ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಹಲವು ವರ್ಷಳಿಗೊಮ್ಮೆ ನಡೆಯುವ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ 15,16,17 ಮತ್ತು 18 ರಂದು ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಫೆ.4 ರಂದು ದೈವಸ್ಥಾನದಲ್ಲಿ ನೆರವೇರಿತು.ದೈವಸ್ಥಾನದ ಕುಟುಂಬದ ಯಜಮಾನ ಹಿರಿಯರಾದ ಕುಂಞಕಣ್ಣ ಅವರು ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಅಧ್ಯಕ್ಷ ಸುಧಾರ ರೈ,ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕಾರ್ಯಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಾರಾಯಣ ಕೇಕಡ್ಕ ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಡು, ಕುಂಞರಾಮನ್ ಶ್ರೀ

ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ Read More »

ಸರ್ವ ಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ -ಸದಾನಂದ ಮಾವಜಿ

ಪ್ರಸ್ತುತ ಕಾಲಘಟ್ಟದಲ್ಲಿ ಸರ್ವಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ ಎಂದು ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂಧ ಮಾಜಿ ಹೇಳಿದರು. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸರ್ವಧರ್ಮ ಸಮ್ಮೇಳನಗಳು ನಶಿಸಿ ಹೋಗಿದೆ ಇಂದು ಇದರ ಅಗತ್ಯ ಇದೆ. ಪೇರಡ್ಕದ ಸೌಹಾರ್ಧತೆಯು ತೆಕ್ಕಿಲ್ ಕುಟುಂಬದ ಹಿರಿಯರಿಂದ ಬಳುವಳಿಯಾಗಿ ಬಂದಿದೆ ಅವರ ಕುಟುಂಬದ ಕುಡಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ. ಪೇರಡ್ಕದ ದರ್ಗಾ ಶರಿಫ್ ಕಾರ್ಣಿಕ ಇರುವ ಕ್ಷೇತ್ರ ಅದರ ಅನುಭವ ನನಗೂ ಆಗಿದೆ

ಸರ್ವ ಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ -ಸದಾನಂದ ಮಾವಜಿ Read More »

ದೇವರ ಮೇಲಿನ ಭಕ್ತಿಯಿಂದ ಜೀವನ ಪಾವನವಾಗುತ್ತದೆ: ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ

ದೇವರ ಮೇಲಿನ‌ ಭಕ್ತಿಯಿಂದ ಬದುಕು ಪಾವನವಾಗುತ್ತದೆ, ಜೀವನ ಸುಂದರ ವಾಗುತ್ತದೆ. ಮಡಿವಾಳ ಸಮಾಜ ಆತ್ಮೀಯತೆಯಿಂದ ಬಂಧುತ್ವ ಹೊಂದಿದ ಏಕಮಾತ್ರ ಸಮಾಜ ಎಂದು ಮೂಡಬಿದ್ರೆ ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಹೇಳಿದರು.ಉಬರಡ್ಕ ಮಿತ್ತೂರು ಶ್ರೀ ವೀರಭದ್ರ ದೇವರ ಭಂಡಾರದ ಮನೆ ಚಾರಿಟೇಬಲ್ ಟ್ರಸ್ಟ್ ಹುಳಿಯಡ್ಕ ಇದರ ವತಿಯಿಂದ ಶ್ರೀ ನಾಗಸಾನಿಧ್ಯ ಮತ್ತು ಶ್ರೀ ವೀರಭದ್ರ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವೀರಭದ್ರ ದೇವರ ಭಂಡಾರ ಮನೆ ಗೃಹ ಪ್ರವೇಶ ಮತ್ತು ವಾರ್ಷಿಕ ಪೂಜೆಯ ಅಂಗವಾಗಿ

ದೇವರ ಮೇಲಿನ ಭಕ್ತಿಯಿಂದ ಜೀವನ ಪಾವನವಾಗುತ್ತದೆ: ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ Read More »

error: Content is protected !!
Scroll to Top