ಪ್ರಚಲಿತ

ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್

ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ.ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್ ಹೊಡೆದ ವೇಳೆ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ಕೊಂಚ ತಬ್ಬಿಬಾದರೂ ಸಾವರಿಸಿಕೊಂಡರು. […]

ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್ Read More »

ನಾಪತ್ತೆಯಾಗಿದ್ದ ಶಾಲಾ ಬಾಲಕ ಪತ್ತೆ! ಎಲ್ಲಿ ಪತ್ತೆಯಾದ ಇಲ್ಲಿದೆ ಮಾಹಿತಿ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ನಾಪತ್ತೆಯಾಗಿದ್ದ ಅನ್ವಿತ್ ಪತ್ತೆಯಾಗಿರುವ ವರದಿಯಾಗಿದೆ.ಅಜ್ಜಾವರದ ಭಜನಾ ಮಂದಿರದಲ್ಲಿ ಗುರುವಾರ ಮುಂಜಾನೆ ಈತನು ಪತ್ತೆಯಾಗಿದ್ದಾನೆ. ಅಡ್ಪಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಈತನು ಕಲಿಯುತ್ತಿದ್ದು ಬುಧವಾರ ಮಧ್ಯಾಹ್ನ ನಂತರ ಕಾಣೆಯಾಗಿದ್ದಾನೆ ಎಂದು ಪೊಲೀಸ್ ದೂರು ನೀಡಲಾಗಿತ್ತು.ಅನ್ವಿತ್ ಮೂಲತ ಪುತ್ತೂರು ತಾಲೂಕಿನ‌ ಈಶ್ವರಮಂಗಳ ನಿವಾಸಿಯಾಗಿದ್ದು ತನ್ನ ಅಜ್ಜಿ ಮನೆಯಾದ ಶಾಂತಿಮೂಲೆಯಿಂದ ಶಾಲೆಗೆ ಹೋಗುತ್ತಿದ್ದಾನೆ. ಬಾಲಕ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ನಾಪತ್ತೆಯಾಗಿದ್ದ ಶಾಲಾ ಬಾಲಕ ಪತ್ತೆ! ಎಲ್ಲಿ ಪತ್ತೆಯಾದ ಇಲ್ಲಿದೆ ಮಾಹಿತಿ Read More »

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿಯಾಗಿ ವಿದ್ಯಾರ್ಥಿನಿ ಆಯ್ಕೆ

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ ಗೆ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಇಲ್ಲಿ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ. ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.ಕಡಬ ತಾಲೂಕಿನ ಆರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ಅವರ ಪುತ್ರಿಯಾದ ಸ್ವಾತಿ ರೈ ಅವರಿಗೆ ಈ ಅವಕಾಶ

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿಯಾಗಿ ವಿದ್ಯಾರ್ಥಿನಿ ಆಯ್ಕೆ Read More »

ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆ ಡಯಟ್ ಮಂಗಳೂರು ಇಲ್ಲಿ ಜ.20ರಂದು ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ನಡೆದ ಶ್ರೀಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರದ ಅನುಮೋದಿತ ಕ್ರೀಯಾ ಯೋಜನೆಯ ಪಠ್ಯಪುಸ್ತಕ ಆಧಾರಿತ ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳು ಹೈಸ್ಕೂಲ್ ವಿಭಾಗದ ಇಂಗ್ಲೀಷ್ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ನಾಟಕ

ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಫೆ.16ಕ್ಕೆ ಸುಳ್ಯದಲ್ಲಿ ಅರೆಭಾಷೆ ಕಾಮಿಡಿ(ಹಾಸ್ಯ) ಆಡಿಷನ್,ಅರೆಭಾಷೆ ಪ್ರಿಯರಿಗೊಂದು ವಿನೂತನ ಕೊಡುಗೆ

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದ ವಿಶೇಷ ಚಾಪನ್ನು ಮೂಡಿಸಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್‌ನ ಎಂ.ಬಿ. ಸದಾಶಿವ ಸಹಯೋಗದಲ್ಲಿ “ಅರೆಭಾಷೆ ಕಾಮಿಡಿ”(ಹಾಸ್ಯ) ಎಬಿಸಿ ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆಬ್ರವರಿ 16, 2025ರ ಅದಿತ್ಯವಾರ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, V4 ನ್ಯೂಸ್‌ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದ‌ರ್

ಫೆ.16ಕ್ಕೆ ಸುಳ್ಯದಲ್ಲಿ ಅರೆಭಾಷೆ ಕಾಮಿಡಿ(ಹಾಸ್ಯ) ಆಡಿಷನ್,ಅರೆಭಾಷೆ ಪ್ರಿಯರಿಗೊಂದು ವಿನೂತನ ಕೊಡುಗೆ Read More »

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಪೆರಾಜೆ ಅಲ್ ಅಮೀನ್ ಚಾರಿಚೇಬಲ್ ಟ್ರಸ್ಟ್ ನ ಅಧ್ಯಕ್ಷ ಉನೈಸ್ ಪೆರಾಜೆ,ಅಶ್ರಫ್ ಕುಂಬ್ರ, ಮಜೀದ್ ಭಾಗಮಂಡಲ,

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ Read More »

ಟಿ.ಎಂ ಶಹೀದ್ ತೆಕ್ಕಿಲ್ ರವರ 54 ನೇ ಹುಟ್ಟುಹಬ್ಬದ ಪ್ರಯುಕ್ತ ಅರಂತೋಡು ಅಂಗನವಾಡಿ ಕೇಂದ್ರಕ್ಕೆ ಅಭಿಮಾನಿಗಳಿಂದ ಸಿಹಿತಿಂಡಿ ವಿತರಣೆ

ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕಳೆದ ಮೂರುವರೆ ದಶಕಗಳಿಂದ ಕ್ರೀಯಾಶೀಲರಾಗಿರುವ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರ 54 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅರಂತೋಡು ಅಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ, ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಂ ಅಬ್ದುಲ್ ಮಜೀದ್, ಮಾಜಿ ಅಧ್ಯಕ್ಷ ಎ.ಹನೀಫ್

ಟಿ.ಎಂ ಶಹೀದ್ ತೆಕ್ಕಿಲ್ ರವರ 54 ನೇ ಹುಟ್ಟುಹಬ್ಬದ ಪ್ರಯುಕ್ತ ಅರಂತೋಡು ಅಂಗನವಾಡಿ ಕೇಂದ್ರಕ್ಕೆ ಅಭಿಮಾನಿಗಳಿಂದ ಸಿಹಿತಿಂಡಿ ವಿತರಣೆ Read More »

ಮುಸ್ಲಿಂ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರ

ಉತ್ತರಪ್ರದೇಶದ ಬಸ್ತಿಯ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ.ತನ್ನ ಹಿಂದು ಪ್ರಿಯತಮೆಯನ್ನು ಮದುವೆಯಾಗಲು ವರನಾದ ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಿಸಿಕೊಂಡು, 10 ವರ್ಷಗಳ ಪ್ರಿಯತಮೆ ಅನು ಸೋನಿಯನ್ನು ಹಿಂದೂ ಸಂಪ್ರದಾಯಗಳಂತೆ ವಿವಾಹವಾಗಿದ್ದಾನೆ. ಇದಕ್ಕೂ 3 ದಿನಗಳ ಮುನ್ನ ಮಹಿಳೆಯು ಸದ್ದಾಂ ಮತ್ತು ಆತನ ಕುಟುಂಬದ ವಿರುದ್ಧ ಮದುವೆ ನೆಪದಲ್ಲಿ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ, ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಳು. ಆದಾಗ್ಯೂ ಈ ಜೋಡಿಯು ಪರಸ್ಪರ ಒಪ್ಪಿಗೆಯೊಂದಿಗೆ ಭಾನುವಾರ ವಿವಾಹವಾಗಿದ್ದು, ಮಹಿಳೆ ಕೇಸ್ ಹಿಂಪಡೆದಿದ್ದಾಳೆ

ಮುಸ್ಲಿಂ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರ Read More »

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ : ರಮಾನಾಥ ರೈ

ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ಸಾಧ್ಯವಾಗದ ಸಂದರ್ಭದಲ್ಲಿ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ ಬೆಳ್ಳಿಹಬ್ಬದ ಸವಿನೆನಪಿಗಾಗಿ 28 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ 3 ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ : ರಮಾನಾಥ ರೈ Read More »

ಜ.24 ಮತ್ತು 25ರಂದು ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ : ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಹೇಳಿಕೆ

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂರು ವರ್ಷ ಪೂರೈಸಿದ್ದು ಖಾಸಗಿ ಶಾಲೆಗೂ ಮೀರಿಸಿದ ಅಭಿವೃದ್ದಿ ಕಾಮಾಗಾರಿಗಳು ನಡೆದಿದ್ದು ಈ ಕಾಮಗಾರಿಗಳ ಉದ್ಘಾಟನೆ ಮತ್ತ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಹಿರಿಯ. ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಜ.24 ಮತ್ತು 25 ರಂದು ನಡೆಯಲಿದೆ ಎಂದು ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎವಿ ತೀರ್ಥರಾಮ ಹೇಳಿದ್ದಾರೆ ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಜ.24 ರಂದು ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 9.30

ಜ.24 ಮತ್ತು 25ರಂದು ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ : ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಹೇಳಿಕೆ Read More »

error: Content is protected !!
Scroll to Top