ಪೆರುವಾಜೆ : ವೈಭವದಿಂದ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ,ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ
ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಬ್ರಹ್ಮರಥೋತ್ಸವವು ಜ.19 ರಂದು ರಾತ್ರಿ ವೈಭವದಿಂದ ನಡೆಯಿತು.ಕ್ಷೇತ್ರದ ತಂತ್ರಿ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆದು ವಸಂತಕಟ್ಟೆ ಪೂಜೆ ನೆರವೇರಿತು.ವ್ಯಾಘ್ರಚಾಮುಂಡಿ ದೈವ(ಪಿಲಿಭೂತ)ದ ಭಂಡಾರ ಆಗಮಿಸಿತ್ತು. ಅಲ್ಲಿಂದ ದೈವದ ಭಂಡಾರ ಸಹಿತವಾಗಿ ದೇವರ ಬಲಿ ದೇವಾಲಯದ ರಥ ಬೀದಿಯ ಬಳಿಯಲ್ಲಿನ ಅಲಂಕೃತ ಬ್ರಹ್ಮರಥದ ಬಳಿ ಆಗಮಿಸಿತ್ತು. ಈ ವೇಳೆ ದೈವ-ದೇವರ […]










