ಪ್ರಚಲಿತ

ಪೆರುವಾಜೆ : ವೈಭವದಿಂದ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ,ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಬ್ರಹ್ಮರಥೋತ್ಸವವು ಜ.19 ರಂದು ರಾತ್ರಿ ವೈಭವದಿಂದ ನಡೆಯಿತು.ಕ್ಷೇತ್ರದ ತಂತ್ರಿ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆದು ವಸಂತಕಟ್ಟೆ ಪೂಜೆ ನೆರವೇರಿತು.ವ್ಯಾಘ್ರಚಾಮುಂಡಿ ದೈವ(ಪಿಲಿಭೂತ)ದ ಭಂಡಾರ ಆಗಮಿಸಿತ್ತು. ಅಲ್ಲಿಂದ ದೈವದ ಭಂಡಾರ ಸಹಿತವಾಗಿ ದೇವರ ಬಲಿ ದೇವಾಲಯದ ರಥ ಬೀದಿಯ ಬಳಿಯಲ್ಲಿನ ಅಲಂಕೃತ ಬ್ರಹ್ಮರಥದ ಬಳಿ ಆಗಮಿಸಿತ್ತು. ಈ ವೇಳೆ ದೈವ-ದೇವರ […]

ಪೆರುವಾಜೆ : ವೈಭವದಿಂದ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ,ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ Read More »

ಪೈಕ: ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ನಡೆಯಿತು.ಜ. 18 ಶನಿವಾರದಂದು ಸಂಜೆ ತಂತ್ರಿಗಳನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಣಿಯಾನ ಸುಬ್ಬಣ್ಣ ಗೌಡ, ಕ್ಷೇತ್ರದ

ಪೈಕ: ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ Read More »

ತೊಡಿಕಾನ : ಚಾಕಟೆಡಿ ನೇಮೋತ್ಸವಕ್ಕೆ ಗೊನೆಮೂಹೂರ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುಜ ದೇವಾಲಯಕ್ಕೆ ಸಂಬಂಧಪಟ್ಟ ಚಾಕಟೆಡಿ ನೇಮೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು.ಚಾಕಟೆಡಿ ನೇಮೋತ್ಸವ ಜ.27 ಮತ್ತು ಪಾಷಾಣಮೂರ್ತಿ ಅಮ್ಮನವರ ಕೋಲ ಜ.28ರಂದು ನಡೆಯಲಿದೆ.

ತೊಡಿಕಾನ : ಚಾಕಟೆಡಿ ನೇಮೋತ್ಸವಕ್ಕೆ ಗೊನೆಮೂಹೂರ್ತ Read More »

ಜ.20ಕ್ಕೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದು ಬೆಳ್ಳಿ ಹಬ್ಬ ಸಂಭ್ರಮದಲ್ಲಿದ್ದು ಸಂಸ್ಥೆಯ ಬೆಳ್ಳಿಹಬ್ಬ ಆಚರಣೆಯ ಸವಿನೆನಪಿಗಾಗಿ ಸಂಸ್ಥೆಯಸಹಸಂಸ್ಥೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಜ. 20 ಸೋಮವಾರಪೂರ್ವಾಹ್ನ ಗಂಟೆ 10.30ಕ್ಕೆ ಎಂ.ಜಿ.ಎಂ. ವಿದ್ಯಾಸಂಸ್ಥೆಗಳ ವಠಾರ, ಉಬರಡ್ಕದ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟ್ರಮಣ ಕ್ರೆಡಿಟ್ ಅಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ್ ತಿಳಿಸಿದ್ದಾರೆ.ಅವರು ಸೊಸೈಟಿ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ನೂತನೂತನ ಕೊಠಡಿಯನ್ನು ಶಾಸಕಿ ಭಾಗೀರಥಿ ಮುರುಳ್ಯ

ಜ.20ಕ್ಕೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ Read More »

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳು ಮುಚ್ಚಲಿವೆಯಾ ?

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಸಮಿತಿ ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು ಭಾರೀ ಕಳವಳಕ್ಕೆ ಕಾರಣವಾಗಿದೆ. 14 ಜನರಿರುವ ಸಮಿತಿ ಇದಾಗಿದೆ. ಪ್ರತಿ ತಾಲೂಕಿನ ಶಾಸಕರು ಸಮಿತಿಯ ಅಧ್ಯಕ್ಷರಾಗಿ ಇರುತ್ತಾರೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು ಸಂಯೋಜಿಸಿ ನಡೆಸಲು ನಿರ್ಧಾರ ಕೈಗೊಂಡಿತ್ತು. ಈ ನಿರ್ಧಾರಕ್ಕೆ ಅಂದು ವಿಪಕ್ಷದಲ್ಲಿದ್ದ ಕಾಂಗ್ರೆಸ್ ಭಾರೀ ವಿರೂಧ ವ್ಯಕ್ತಪಡಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅದೇ ನಿರ್ಧಾರ ತೆಗೆದುಕೊಂಡಿದೆ

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳು ಮುಚ್ಚಲಿವೆಯಾ ? Read More »

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ

ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ಕ್ಷೇತ್ರ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ ಎಂದೇ ಜನಜನಿತ ಈ ಕ್ಷೇತ್ರದಲ್ಲಿ ಜ.19 ರ ದಿವಾ ಘಂಟೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.ಜ. 18 ರ ಸಂಜೆ ತಂತ್ರಿಗಳ ಆಗಮನ ವಾಗಲಿದೆ. ಅಂದು

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ Read More »

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ

ಇತಿಹಾಸ ಪ್ರಸಿದ್ದ ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಟಿ.ಎಂ. ಶಹೀದ್ ಹಾಗೂ MRDA ಅಧ್ಯಕ್ಷ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ.31 ರಂದು ಶುಕ್ರವಾರ ಜುಮ್ಮಾ ನಮಾಜಿನ ಬಳಿಕ ಧ್ವಜಾರೋಹಣ, ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ Read More »

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ

ಇತಿಹಾಸ ಪ್ರಸಿದ್ದ ಸುಳ್ಯ ತಾಲೂಕಿನ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು ಉತ್ಸವದ ಸಂದರ್ಭದಲ್ಲಿ ಶ್ರೀ ಉಳ್ಳಾಕುಲು ದೈವದ ಭಂಡಾರ ಬಂದು ದೇವರನ್ನು ಎದುರುಗೊಂಡಿತು. ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ Read More »

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಕಳೆದ ರಾತ್ರಿಪತ್ನಿಯನ್ನು ಗುಂಡಿಕ್ಕಿ ಕೊಂದ ಗಂಡ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ ಕೃಷಿಕ ರಾಮಚಂದ್ರ ಗೌಡ ( 54 ) ಅವರು ಕುಡಿದು ಬಂದು ಜಗಳವಾಡತ್ತಿದ್ದರು. ಬೆಳೆಗಳಿಗೆ ಕಾಡುಪ್ರಾಣಿಗಳ ಉಪಟಳವಿರುವುದರಿಂದ ಲೈಸೆನ್ಸ್ ಇರುವ ಕೋವಿ ಹೊಂದಿದ್ದರು. ಅವರ ಪತ್ನಿ ವಿನೋದ (43) ಹಾಗೂ ಮೂವರು ಪುತ್ರರು. ಪ್ರಶಾಂತ, ನಿಶಾಂತ ಮತ್ತು ರಂಜಿತ್.ಸುಮಾರು ಮೂರು ತಿಂಗಳ ಹಿಂದೆ ಅವರು ಕುಡಿದು

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ Read More »

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಪ್ರಾರಂಭಗೊಂಡಿದ್ದು ಜ.21 ರವರೆಗೆ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.ರಾತ್ರಿ ಪೇಟೆಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತುಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಲಿದೆ.ಮಧ್ಯಾಹ್ನ ಗಂಟೆ 12.00

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ Read More »

error: Content is protected !!
Scroll to Top