ಪ್ರಚಲಿತ

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ ‘ಯುವ ಶಕ್ತಿ’ ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಬಡವರು, ಶೋಷಿತ […]

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ Read More »

ಕೇಂದ್ರ ಸರಕಾರದ ಬಜೆಟ್ ಆಶಾದಾಯಕ ಬಜೆಟ್ : ಭಾಗೀರಥಿ ಮುರುಳ್ಯ

ಕೇಂದ್ರ ಸರಕಾರದ ಬಜೆಟ್ ಬಡವರು , ಮಧ್ಯಮವರ್ಗದರುಗಳಿಗೆ ಹಾಗೂ ಯುವಜನರ ಭವಿಷ್ಯದ ದೃಷ್ಟಿಯಿಂದ ಆಶಾದಾಯಕ ಬಜೆಟ್ , ವಿಶೇಷವಾಗಿ ಆತ್ಮನಿರ್ಬರಕ್ಕೆ ಒತ್ತು ನೀಡುವ ಮತ್ತು ವಿಕಸಿತ ಭಾರತ ಯೋಜನೆಗೆ ಪೂರಕವಾಗುವಂತಹ ಬಜೆಟ್ ಇದಾಗಿದ್ದು ನವ ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.

ಕೇಂದ್ರ ಸರಕಾರದ ಬಜೆಟ್ ಆಶಾದಾಯಕ ಬಜೆಟ್ : ಭಾಗೀರಥಿ ಮುರುಳ್ಯ Read More »

ಪಂಜ ಸೀಮೆಯ ದೇವಳದಲ್ಲಿ ವರ್ಷವಾಧಿ ಜಾತ್ರೋತ್ಸವ : ಭಜನಾ ಸಂಕೀರ್ತನೆ ಆರಂಭ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವ ಜ. 24 ರಿಂದ ಫೆ. 9ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ. 1ರಂದು ಸಂಜೆ ಭಜನಾ ಸಂಕೀರ್ತನೆಗೆ ದೀಪ ಪ್ರಜ್ವಲನೆ ನಡೆಯಿತು.ದೇವಳದಲ್ಲಿ ಪ್ರಾರ್ಥನೆ ನಡೆದು ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರು ರವರು ದೀಪ ಪ್ರಜ್ವಲನೆ ಗೊಳಿಸಿದರು. ಭಜನಾ ಸಂಕೀರ್ತನೆ ಸಂಚಾಲಕ ಮಹಾಲಿಂಗ ಸಂಪ, ಭಕ್ತಾದಿಗಳು ಉಪಸ್ಥಿತರಿದ್ದರು. ಬಳಿಕ ಶ್ರೀ ಶಾರದಾಂಬಾ

ಪಂಜ ಸೀಮೆಯ ದೇವಳದಲ್ಲಿ ವರ್ಷವಾಧಿ ಜಾತ್ರೋತ್ಸವ : ಭಜನಾ ಸಂಕೀರ್ತನೆ ಆರಂಭ Read More »

ಸುಳ್ಯಕ್ಕೆ ನೂತನ‌ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸಿದ್ದಪ್ಪ ಹರಗಿ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಯಮನೂರಪ್ಪ ಸಿದ್ದಪ್ಪ ಹರಗಿ (ವೈ.ಎಸ್.ಹರಗಿ) ಎಂಬವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ. ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಅವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದಾರೆ.ಅವರು ಫೆ.2ರಂದು ಅವರು ಸುಳ್ಯಕ್ಕೆ ಬಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.ಸುಳ್ಯ ತಾಲೂಕು ಕಳೆದ ಒಂದು ವರ್ಷದಿಂದ ಖಾಯಂ ಶಿಕ್ಷಣಾಧಿಕಾರಿಗಳಲ್ಲದೆ ಸಮಸ್ಯೆ ಎದುರಿಸುತ್ತಿದೆ.

ಸುಳ್ಯಕ್ಕೆ ನೂತನ‌ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸಿದ್ದಪ್ಪ ಹರಗಿ Read More »

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲ

ಸುಳ್ಯದ ಗಾಂಧಿನಗರ ನಾವೂರು ಶ್ರೀ ಕಲ್ಕುಡ ಪರಿವಾರ ದೈವಸ್ಥಾನದಲ್ಲಿಶ್ರೀ ಕಲ್ಕುಡ- ಕಲ್ಲುರ್ಟಿ,ದೈವಗಳ ಕಾಲಾವಧಿ ನೇಮೋತ್ಸವವು ಮುಂಜಾನೆಫೆ.1ರಂದು ಜರುಗಿತು. ದೈವಸ್ಥಾನದ ಆಡಳಿತ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಪಿ. ಕೆ. ಉಮೇಶ್ ಮತ್ತು ಸದಸ್ಯರಾದ ಭಾಸ್ಕರ ಐಡಿಯಲ್, ಸೋಮನಾಥ ಪೂಜಾರಿ, ಕೇಶವ ನಾಯಕ್, ಹರೀಶ್ ಬೂಡುಪನ್ನೆ, ಪ್ರಕಾಶ್ ಹೆಗ್ಡೆ, ಪಿ. ಆರ್. ಚಂದ್ರಶೇಖರ, ಪ್ರಸಾದ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು,ಕೋಶಾಧಿಕಾರಿ ಅವಿನಾಶ್ ಕುರುಂಜಿ ಹಾಗೂ ಸಮಿತಿಯ ಸದಸ್ಯರು, ದೈವದ ಪೂಜಾರಿ ಮೋಹನ ಗೌಡ ಕೆರೆಮೂಲೆ, ತಿಮ್ಮಪ್ಪ ಗೌಡ

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲ Read More »

ಲೇಖಕ, ಅಂಕಣಗಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹ ಕೃತಿ “ಮಾತಿಲ್ಲದ ಮಾತು” ಬಿಡುಗಡೆ

ಲೇಖಕ, ಅಂಕಣಗಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹ ಕೃತಿ “ಮಾತಿಲ್ಲದ ಮಾತು” ಬಿಡುಗಡೆ ಸಮಾರಂಭ ಜ.31ರಂದು ಸುಳ್ಯದ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು.ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ವಾಡಿಯವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.ಖ್ಯಾತ ವ್ಯಂಗ್ಯಚಿತ್ರಗಾರ ದಿನೇಶ್ ಕುಕ್ಕುಜಡ್ಕ ಕೃತಿಯ ಕುರಿತು ಮಾತನಾಡಿದರು.ಕೃತಿಗಾರ ಡಾ. ಸುಂದರ ಕೇನಾಜೆಯವರು ತನ್ನ ಕ್ರತಿಯ ಬಗ್ಗೆ ಮಾಹಿತಿ ನೀಡಿದರು.ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ,ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮನೆ,ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಪ್ ಶುಭಹಾರೈಸಿದರು.

ಲೇಖಕ, ಅಂಕಣಗಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹ ಕೃತಿ “ಮಾತಿಲ್ಲದ ಮಾತು” ಬಿಡುಗಡೆ Read More »

ನಾಳೆಯಿಂದ(ಫೆ.1) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ ಆರಂಭ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.24 ರಿಂದ ಫೆ.9 ರ ತನಕ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ. 1 ರಿಂದ ಫೆ. 5 ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ತಿಳಿಸಿದ್ದಾರೆ.ಫೆ.1 ರಂದು ಪೂರ್ವಾಹ್ನ 8.30 ರಿಂದ ವೇದ

ನಾಳೆಯಿಂದ(ಫೆ.1) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ ಆರಂಭ Read More »

ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರಲ್ಲಿ ಅನ್ವರ್ ಎಂಬ ಬಾಲಕನನ್ನು ಹೈದರಾಬಾದ್‌ಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಮೊಳಗಿ ಮಾರಾಯ ದೇಗುಲಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಎರಡನೇ ಸ್ಪೋಟವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ Read More »

ವೈಭವದಿಂದ ನಡೆದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.30 ರಂದು ವೈಭವದಿಂದ ನಡೆಯಿತು.ಬೆಳಿಗ್ಗೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು.ಬಳಿಕ ವಿಷ್ಣುಪ್ರಿಯಾ ಮಹಿಳಾ ಭಜನಾ ಮಂಡಳಿ ಬೆಳಂದೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ ರಂಗಪೂಜೆ,ಮಹೋತ್ಸವ ಶ್ರೀ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ ನಡೆಯಿತು.ನಂತರ ಗುಳಿಗ,ಪಂಜುರ್ಲಿ,ಶಿರಾಡಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.ಈ

ವೈಭವದಿಂದ ನಡೆದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವ Read More »

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಸುಳ್ಯ ತಾಲೂಕು ಸಂಪಾಜೆ ವಲಯ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ, ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಸಂಪಾಜೆ ವಲಯ ಮತ್ತು ಊರವರ ಸಹಕಾರದೊಂದಿಗೆ ಪರಮಪೂಜ್ಯ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ Read More »

error: Content is protected !!
Scroll to Top