ಪ್ರಚಲಿತ

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಅವರು ಸ್ವಾಸ್ಥ್ಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಹದಿ ಹರೆಯದಲ್ಲಿ ದಾರಿ ತಪ್ಪುವ ದುಶ್ಚಟ ದುರಭ್ಯಾಸ […]

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಭದ್ರತಾ ದಳದ ಶ್ವಾನ, ಜ್ಯೂಲಿಗೆ ನಿವೃತ್ತಿ ಘೋಷಣೆ

ಮಂಗಳೂರು: ಬಜಪೆ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಶ್ವಾನ, ಜ್ಯೂಲಿಗೆ ನಿವೃತ್ತಿ ಘೋಷಿಸಲಾಗಿದೆ.ದೀರ್ಘ‌ ಸೇವೆ ಬಳಿಕ ಶ್ವಾನದಳ ಕೆಲಸದ ಒತ್ತಡದಿಂದ ತಮ್ಮ ಸೂಕ್ಷ್ಮತೆಯನ್ನು ನಿಧಾನವಾಗಿ ಕಳೆದುಕೊಳ್ಳುವು ದರಿಂದ ಹಾಗೂ ಅವುಗಳ ಮೇಲೆ ಅಧಿಕ ಒತ್ತಡ ಹೇರದಿರುವ ಉದ್ದೇಶದಿಂದ ಅವುಗಳನ್ನು ನಿವೃತ್ತಿಗೊಳಿಸಲಾಗುತ್ತದೆ.ಜೂಲಿ 2013ರ ಮಾರ್ಚ್‌ 26ಕ್ಕೆ ಸೇವೆಗೆ ಸೇರಿದ್ದಳು. ಆಕೆಯ ಜಾಗಕ್ಕೆ ರಿಯೋನನ್ನು ತರಲಾಗಿದೆ. ನಿವೃತ್ತಳಾದ ಜೂಲಿಗೆ ಹೂಮಾಲೆ ಹಾಕಿ, ಕೇಕ್‌ ಕತ್ತರಿಸಿ ಪ್ರೀತಿ ತೋರಿದ

ಭದ್ರತಾ ದಳದ ಶ್ವಾನ, ಜ್ಯೂಲಿಗೆ ನಿವೃತ್ತಿ ಘೋಷಣೆ Read More »

ಭಾರತೀಯ ಸೇನೆಯ ಯೋಧ ಶರತ್ ಕುಮಾರ್ ನಾರ್ಕೋಡು 30ಕ್ಕೆ ಸೇವಾ ನಿವೃತ್ತಿ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಶರತ್ ಕುಮಾರ್ ನಾರ್ಕೋಡು ಭಾರತೀಯ ಸೇನೆಯ ಯೋಧನಾಗಿದ್ದು ಸೆ. 30ರಂದು ನಿವೃತ್ತಿಯಾಗುತ್ತಿದ್ದಾರೆ.2007ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾದ ಬಳಿಕ ಮದ್ರಾಸ್‌ ಇಂಜಿನಿಯರಿಂಗ್ ಗ್ರೂಪಿನಲ್ಲಿ ಬೆಂಗಳೂರಿನಲ್ಲಿ ತರಬೇತಿ ಪಡೆದ ಬಳಿಕ ಜಮ್ಮು ಕಾಶ್ಮೀರ, ಕಲ್ಕತ್ತಾ ಸಿಕ್ಕಿಂ, ಶ್ರೀ ನಗರ, ಅರುಣಾಚಲ ಪ್ರದೇಶ, ದೆಹಲಿ, ಉತ್ತರಪ್ರದೇಶ, ಪಂಜಾಬ್ ನಲ್ಲಿ ಸೇವೆ ಸಲ್ಲಿಸಿದ ಬಳಿಕ ಇದೀಗ ಕಳೆದ ಮೂರು ತಿಂಗಳಿನಿಂದ ಅಸ್ಸಾಂನಲ್ಲಿ ಸೇವೆಯಲ್ಲಿದ್ದಾರೆ.

ಭಾರತೀಯ ಸೇನೆಯ ಯೋಧ ಶರತ್ ಕುಮಾರ್ ನಾರ್ಕೋಡು 30ಕ್ಕೆ ಸೇವಾ ನಿವೃತ್ತಿ Read More »

ಎಂ.ಬಿ.ಫೌಂಡೇಶನ್ ವತಿಯಿಂದ ನೀಡುವ ಪ್ರಥಮ ವರ್ಷದ ‘ದೇವಕಿ ಬಾಲಕೃಷ್ಣ ಎಕ್ಸಲೆನ್ಸ್‌ ಅವಾರ್ಡ್’ ಪ್ರಕಟ

ಸುಳ್ಯ : ಸುಳ್ಯದ ಎಂ.ಬಿ.ಫೌಂಡೇಶನ್ ಸುಳ್ಯ ಇದರ ವತಿಯಿಂದ ನೀಡುವ ಪ್ರಥಮ ವರ್ಷದ ‘ದೇವಕಿ ಬಾಲಕೃಷ್ಣ ಎಕ್ಸಲೆನ್ಸ್‌ ಅವಾರ್ಡ್’ಗೆ ಇಬ್ಬರು ಶಿಕ್ಷಿಕಿಯರು ಆಯ್ಕೆಯಾಗಿದ್ದಾರೆ.ಸುಳ್ಯ ಕೋಲ್ಟಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಲಜಾಕ್ಷಿ ಕುಕ್ಕುಜೆ ಹಾಗೂ ಸೈಂಟ್ ಬ್ರಿಜಿಡ್ಸ್ ಶಾಲೆಯ ಶಿಕ್ಷಕಿ ವಲ್ಸ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಎಂ.ಬಿ.ಫೌಂಡೇಶನ್‌ ಅಧ್ಯಕ್ಷ ಎಂ.ಬಿ.ಸದಾಶಿವ ತಿಳಿಸಿದ್ದಾರೆ.ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಮ್ಮ ತಂದೆ ಎಂ.ಬಾಲಕೃಷ್ಣ ಗೌಡ ಹಾಗೂ ತಾಯಿ ದೇವಕಿ ಅವರ

ಎಂ.ಬಿ.ಫೌಂಡೇಶನ್ ವತಿಯಿಂದ ನೀಡುವ ಪ್ರಥಮ ವರ್ಷದ ‘ದೇವಕಿ ಬಾಲಕೃಷ್ಣ ಎಕ್ಸಲೆನ್ಸ್‌ ಅವಾರ್ಡ್’ ಪ್ರಕಟ Read More »

ಸುಳ್ಯಕ್ಕೆ ನೂತನ ತಹಶೀಲ್ದಾರ್ ಅರವಿಂದ್ ಕೆ .ಎಂ

ಸುಳ್ಯ : ಸುಳ್ಯ ತಾಲೂಕು ನೂತನ ತಹಶೀಲ್ದಾರ್ ಆಗಿ ಕೆ ಎ ಎಸ್ ಅಧಿಕಾರಿ ಅರವಿಂದ್ ಕೆ ಎಂ ಆಗಮಿಸಿದ್ದಾರೆ . ಇವರು ಸುಳ್ಯ ತಹಶೀಲ್ದಾ‌ರ್ ಆಗಿ ಪ್ರಭಾರ ಕರ್ತವ್ಯ ನಿರ್ವಹಿಸಲಿದ್ದು, ಈ ಹಿಂದೆ ಮಂಗಳೂರು ಎ ಸಿ ಕಛೇರಿಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು ಮೂಲತಃ ಚಿತ್ರದುರ್ಗದವರಾಗಿದ್ದಾರೆ.

ಸುಳ್ಯಕ್ಕೆ ನೂತನ ತಹಶೀಲ್ದಾರ್ ಅರವಿಂದ್ ಕೆ .ಎಂ Read More »

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ-ರೆಂಜಿಲಾಡಿಯ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಅ.20ರಂದು ನಡೆಯಲಿರುವ ಕೆಸರುಗದ್ದೆಯಲ್ಲಿ ಕಂಬಳ ಸ್ನೇಹಕೂಟದ ಕಂಬಳ ಕರೆ ನಿರ್ಮಾಣಕ್ಕೆ ಮುಹೂರ್ತ ಕಾರ್ಯಕ್ರಮ ಗುರುವಾರ ರೆಂಜಿಲಾಡಿ ಗ್ರಾಮದ ದಿ.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಿತು.ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಪರಿಚಾರಕ ವಿಜಯಕುಮಾರ್ ಕೇಪುಂಜ ಅವರು ಕಂಬಳದ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಾಗದ ಮಾಲಿಕರಾದ ಚಂದ್ರಾವತಿ ಸಾಕೋಟೆಜಾಲು, ಸ್ಥಳೀಯರಾದ ಪುರುಷೋತ್ತಮ ಗೌಡ ಸಂಕೇಶ, ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷ

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ Read More »

ಅರಂತೋಡಿನಲ್ಲಿ ಎನ್.ಎಸ್. ಎಸ್ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ.ಸ್ವಾಗತಿಸಿ,

ಅರಂತೋಡಿನಲ್ಲಿ ಎನ್.ಎಸ್. ಎಸ್ ದಿನಾಚರಣೆ Read More »

ವಿಶ್ವ ಶಾಂತಿ ದಿನಾಚರಣೆ ಕಾರ್ಯಕ್ರಮ

ಸುಳ್ಯ : ವಿಶ್ವ ಶಾಂತಿ ದಿನಾಚರಣೆಯನ್ನು ಲಯನ್ಸ್ ಕ್ಲಬ್ ಸುಳ್ಯ ಇದರ ವತಿಯಿಂದ ಕೆಪಿಸ್ ಗಾಂಧೀನಗರದಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ಯಾಗಿ ಲಯನ್ ರಂಗನಾಥ ಭಾಗವಹಿಸಿದ್ದರು. ವಿಶ್ವ ಶಾಂತಿ ಯ ಮಹತ್ವ ದ ಕುರಿತು ವಿದ್ಯಾರ್ಥಿ ಗಳಿಗೆ ಸೂಕ್ತ ಮಾಹಿತಿ ಯನ್ನು ನೀಡಿದರು.ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಳಾದ ಲಯನ್ ರಾಮಚಂದ್ರ ಪಲ್ಲತಡ್ಕ, ಆನಂದ ಪೂಜಾರಿ, ರಮೇಶ್ ಶೆಟ್ಟಿ, ಪ್ರಭಾರ ಉಪ ಪ್ರಾಂಶುಪಾಲರಾದ ಜ್ಯೋತಿ ಲಕ್ಷ್ಮೀ, ಹಿರಿಯ ಶಿಕ್ಷಕರಾದ

ವಿಶ್ವ ಶಾಂತಿ ದಿನಾಚರಣೆ ಕಾರ್ಯಕ್ರಮ Read More »

ಅಕ್ಟೋಬ‌ರ್ 3ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪ ಟ್ಟಿಯಂತೆಅಕ್ಟೋಬ‌ರ್3 ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಕಳೆದ ಏಪ್ರಿಲ್‌ನಲ್ಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಅ.1ರವರೆಗೆ ತರಗ ತಿಗಳು ನಡೆಯಲಿವೆ. ಅ.2ರಂದು ಗಾಂಧಿಜಯಂತಿ ಇರ ಲಿದ್ದು, ಅ. 3 ರಿಂದ 20 ರವರೆಗೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಇರಲಿದೆ. ಅ. 21 ರಿಂದ ಮತ್ತೆ ತರಗತಿಗಳು ಪುನಾರಂಭವಾಗಲಿವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬ‌ರ್ 3ರಿಂದ 20ರವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ Read More »

ಪ್ರೀತಿಯಿಂದ ಈ ಜಗತ್ತನ್ನೇ ಗೆಲ್ಲಬಹುದೆಂಬ ಸಂದೇಶ ನೀಡಿದ ಪ್ರವಾದಿಗಳ ಸಂದೇಶ ಶ್ರೇಷ್ಠ

ಸುಳ್ಯ : ಪ್ರೀತಿಯಿಂದ ಈ ಜಗತ್ತನ್ನೇ ಗೆಲ್ಲಬಹುದು ಸಂದೇಶ ನೀಡಿದ ಪ್ರವಾದಿಗಳನ್ನು ಮಹಾನುಭಾವರನ್ನು ಸ್ಮರಣೆ ಮಾಡಬೇಕಾದುದುಅಗತ್ಯ ಎಂದು ಅಂತರರಾಷ್ಟ್ರೀಯ ವಾಗ್ನಿ ಕೇರಳ ರಾಜ್ಯದ ಕುರುವಾರಕುಂಡ್‌ ಸಮನ್ವಯ ಗಿರಿ ಅಧೀನ ಮಠದ ಸ್ವಾಮಿ ಶ್ರೀಮದ್ ಆತ್ಮಾದಾಸ್ ಯಾಮಿ ಹೇಳಿದರು.ಅವರು ಸುಳ್ಯ ತಾಲೂಕು ಮೀಲಾದ್ ಸಮಿತಿ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ) ಅವರ ಜನ್ಮದಿನಾಚರಣೆಯ ಅಂಗವಾಗಿ ಸೆ. 20 ರಂದು ಸುಳ್ಯದಲ್ಲಿ ನಡೆದ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಬಳಿಕ ಗಾಂಧಿನಗರದಲ್ಲಿ ನಡೆದ ಸಾರ್ವಜನಿಕ

ಪ್ರೀತಿಯಿಂದ ಈ ಜಗತ್ತನ್ನೇ ಗೆಲ್ಲಬಹುದೆಂಬ ಸಂದೇಶ ನೀಡಿದ ಪ್ರವಾದಿಗಳ ಸಂದೇಶ ಶ್ರೇಷ್ಠ Read More »

error: Content is protected !!
Scroll to Top