ಪ್ರಚಲಿತ

ಅರಂತೋಡು ಅನ್ವಾರುಲ್ ಹುಧಾ ಅಸೋಸಿಯೇಶನ್ 50 ನೇ ವರ್ಷಾಚರಣೆ ಸಂಭ್ರಮಕ್ಕೆ ಚಾಲನೆ

1976 ರಲ್ಲಿ ಸ್ಥಾಪನೆಗೊಂಡ ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ನ 50 ನೇ ವಾರ್ಷಿಕ ಸುವರ್ಣ ಸಂಭ್ರಮದ ವರ್ಷಾಚರಣೆ ಕಾರ್ಯಕ್ರಮಕ್ಕೆ ಸಮಸ್ತ ಜಂಇತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೊಯ ತಂಙಳ್ ರವರು ಜೂ. 9 ರಂದು ಅರಂತೋಡಿನಲ್ಲಿ ನಡೆದ ಸಮಾರಂಭದಲ್ಲಿ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಖತೀಬರಾದ ಆಸಿಫ್ ಅಝ್ಹರಿ, ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ,

ಅರಂತೋಡು ಅನ್ವಾರುಲ್ ಹುಧಾ ಅಸೋಸಿಯೇಶನ್ 50 ನೇ ವರ್ಷಾಚರಣೆ ಸಂಭ್ರಮಕ್ಕೆ ಚಾಲನೆ Read More »

ಪ್ರಧಾನ ಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ

ಸುಳ್ಯ : ಭಾರತದ ಪ್ರಧಾನಮಂತ್ರಿಯಾಗಿ ಸತತ 4399 ದಿನಗಳ ಕಾಲ ನಿರಂತರವಾಗಿ ಜನಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಸೇವಕ ನರೇಂದ್ರ ಮೋದಿ ಅವರ ಹೆಸರಿನಲ್ಲಿ BJP ಸುಳ್ಯ ಮಂಡಲದ ವತಿಯಿಂದ ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ,ಹಾಗೂ ಮಹಾಮಂಗಳಾರತಿಯನ್ನು ಶ್ರದ್ಧಾ-ಭಕ್ತಿಯಿಂದ ಸಲ್ಲಿಸಲಾಯಿತು.​ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು ದಾಟಿ, ಅತ್ಯಂತ ದೀರ್ಘಾವಧಿಗೆ ಸತತವಾಗಿ ದೇಶ ಮುನ್ನಡೆಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿ ಅವರ ಈ ಐತಿಹಾಸಿಕ ಸಾಧನೆಯನ್ನು ಸಂಭ್ರಮಿಸಲು

ಪ್ರಧಾನ ಸೇವಕ ನರೇಂದ್ರ ಮೋದಿ ಅವರ 4399 ದಿನಗಳ ನಿರಂತರ ಜನಸೇವೆಯ ಪ್ರಯುಕ್ತ ವಿಶೇಷ ಪೂಜೆ Read More »

ಸುಳ್ಯ : ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ ಜೂ.9ರಂದು ನಡೆಯಿತು.ದೈವಸ್ಥಾನದಲ್ಲಿ ಪ್ರಾರ್ಥಿಸಿ ಚಪ್ಪರ ಕೆಲಸಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿಆಡಳಿತ ಧರ್ಮದರ್ಶಿಗಳಾದ ಪಿ.ಕೆ.ಉಮೇಶ್ ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಜಿ.ಜಿ.ನಾಯಕ್, ಸಮಿತಿ ಸದಸ್ಯರಾದ ಚಂದ್ರಶೇಖರ ಪಿ.ಆ‌ರ್, ಸತ್ಯಪ್ರಸಾದ್ ಕೆ, ಕೋಶಾಧಿಕಾರಿ ಅವಿನಾಶ್ ಕುರುಂಜಿ, ಗೋಪಾಲಕೃಷ್ಣ ಕೆ.ಎಸ್, ಗುರುದತ್ ನಾಯಕ್, ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು ಇತರರು ಉಪಸ್ಥಿತರಿದ್ದರು.

ಸುಳ್ಯ : ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ Read More »

ಸುಳ್ಯ : ಟಿಬಿ ನಿರ್ಮೂಲನೆ ಮುಟ್ಟಿನ ನೈರ್ಮಲ್ಯ ದಿನ ಗರ್ಭಕೋಶದ ಕ್ಯಾನ್ಸರ್ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಮಾಹಿತಿ ಕಾರ್ಯಗಾರ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಂಚಾಯತ್ ಸುಳ್ಯ ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಜೂ.8ರಂದುಟಿಬಿ ನಿರ್ಮೂಲನೆ ಮುಟ್ಟಿನ ನೈರ್ಮಲ್ಯ ದಿನ ಗರ್ಭಕೋಶದ ಕ್ಯಾನ್ಸರ್ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಮಾಹಿತಿ ಕಾರ್ಯಗಾರ ತಾಲೂಕು ಪಂಚಾಯತ್ ಸಭಾಂಗಣ ಸುಳ್ಯದಲ್ಲಿನಡೆಯಿತು.ತಾಲೂಕು ಪಂಚಾಯತ್ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ ಅಧ್ಯಕ್ಷತೆಯನ್ನು ವಹಿಸಿದ್ದರು‌ಪಯಸ್ವಿನಿ ಸಂಜೀವಿನಿ

ಸುಳ್ಯ : ಟಿಬಿ ನಿರ್ಮೂಲನೆ ಮುಟ್ಟಿನ ನೈರ್ಮಲ್ಯ ದಿನ ಗರ್ಭಕೋಶದ ಕ್ಯಾನ್ಸರ್ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಕುರಿತು ಮಾಹಿತಿ ಕಾರ್ಯಗಾರ Read More »

ಅರಂತೋಡು : ನೂತನ ಮದರಸಕ್ಕೆ ಶಿಲಾನ್ಯಾಸ ಮತ್ತು ಮಸೀದಿಯ ಮೇಲಂತಸ್ತು ಕಟ್ಟಡಕ್ಕೆ ಜಿಪ್ರಿ ತಂಙಳ್ ರಿಂದ ಶಂಕುಸ್ಥಾಪನೆ

ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಮೇಲಂತಸ್ತು ನಿರ್ಮಾಣ ಕಾಮಗಾರಿಗೆ ಮತ್ತು ನುಸ್ರತುಲ್ ಇಸ್ಲಾಂ ಮದರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜೂ.9 ರಂದು ಸಮಸ್ತ ಕೇರಳ ಜಂಇತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಪ್ರಿ ಮುತ್ತುಕೊಯ ತಂಙಳ್ ನೆರವೇರಿಸಿದರು. ಅವರು ಮಾತನಾಡಿ ಕಟ್ಟಡಕ್ಕೆ ವಸ್ತು ರೂಪದಲ್ಲಿ, ಹಣದ ರೂಪದಲ್ಲಿ ಸಹಾಯ, ಸಹಕಾರ ನೀಡಿದ ದಾನಿಗಳನ್ನು, ವಕ್ಪ್ ಇಲಾಖೆಯನ್ನು  ಮತ್ತು ಅನುದಾನ ತರಿಸಿದ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಅಭಿನಂಧಿಸಿ ವಿಶೇಷ ದುವಾ ಮಾಡಿದರು.

ಅರಂತೋಡು : ನೂತನ ಮದರಸಕ್ಕೆ ಶಿಲಾನ್ಯಾಸ ಮತ್ತು ಮಸೀದಿಯ ಮೇಲಂತಸ್ತು ಕಟ್ಟಡಕ್ಕೆ ಜಿಪ್ರಿ ತಂಙಳ್ ರಿಂದ ಶಂಕುಸ್ಥಾಪನೆ Read More »

ಮಹಿಳೆಯರಿಗೆ ಹಲಸು,ಮಾವು,ಗೇರು ಉತ್ಪನ್ನಗಳಿಂದ ತಯಾರಿಸಿದ ಅಡುಗೆ ಸ್ಪರ್ಧೆ

ಜೂ. 12ರಿಂದ 14ರ ವರೆಗೆ ಸುಳ್ಯದ ದುರ್ಗಾಪರಮೇಶ್ವರಿ ಕಲಾಮಂದಿರಲ್ಲಿ ನಡೆಯಲಿರುವ ಮಾವು ಮತ್ತು ಹಲಸು ಮೇಳದಲ್ಲಿ ಜೂ.14 ಆದಿತ್ಯವಾರ ಅಪರಾಹ್ನ 3 ರಿಂದ 4ರ ವರೆಗೆ ಮಹಿಳೆಯರಿಗಾಗಿ ಹಲಸು, ಮಾವು, ಗೇರು ಉತ್ಪನ್ನಗಳಿಂದ ತಯಾರಿಸಿದ ಅಡುಗೆ ಸ್ಪರ್ಧೆ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ ಮಹಿಳೆಯರು ಜೂ. 11ರ ಸಂಜೆಯೊಳಗೆ ತಮ್ಮ ಹೆಸರನ್ನು ಸುಳ್ಯ ರೈತ ಉತ್ಪಾದಕ ಕಂಪೆನಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಹರೀಶ್ ಕೊಡಿಯಾಲರವರಲ್ಲಿ ( ಮೊ : 9740507219) ನೀಡಬೇಕಾಗಿ ಸಂಘಟಕರು ತಿಳಿಸಿದ್ದಾರೆ.

ಮಹಿಳೆಯರಿಗೆ ಹಲಸು,ಮಾವು,ಗೇರು ಉತ್ಪನ್ನಗಳಿಂದ ತಯಾರಿಸಿದ ಅಡುಗೆ ಸ್ಪರ್ಧೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

ಸ್ವರ್ಣಂ ಜ್ಯುವೆಲ್ಸ್ ಸುಳ್ಯ ವತಿಯಿಂದ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಜೂ.8 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣಂ ಜ್ಯುವೆಲ್ಸ್ ಪಾಲುದಾರ ಪ್ರವೀಣ್ ಬಿ. ಗೌಡ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ಸದಾನಂದ ಮಾವಜಿ,ಉಪ ವಲಯ ಅರಣ್ಯಾಧಿಕಾರಿ ರಂಜಿತಾ ಪಿ., ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ Read More »

ಮುಂದಿನ ಆರು ದಿನ‌ ರಾಜ್ಯದಲ್ಲಿ ಭಾರೀ ಮಳೆ !

ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ,

ಮುಂದಿನ ಆರು ದಿನ‌ ರಾಜ್ಯದಲ್ಲಿ ಭಾರೀ ಮಳೆ ! Read More »

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ

ಅರಂತೋಡು : ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ವೈದ್ಯಾಧಿಕಾರಿಯಾಗಿ ಡಾ. ಮೊಹಮ್ಮದ್ ಫೈಝಲ್ ಅವರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದಾರೆ.ಮೂಲತಃ ಉಳ್ಳಾಲ ಕೋಟೆಪುರದವರಾದ ಡಾ.ಫೈಝಲ್ ಅವರು ಏನಪೋಯ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಎಂಬಿಬಿಎಸ್ (MBBS) ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.

ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ Read More »

error: Content is protected !!
Scroll to Top