ಪ್ರಚಲಿತ

ಅರೆಭಾಷೆ ರಾಜ ಭಾಷೆಯಾಗಿ ಮೆರೆಯುತ್ತಿದ್ದು ,ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ : ಸುಶ್ಮಿತಾ ಆದಿತ್ಯ ಚಿದ್ಗಲು

ಐನೂರು ವರ್ಷಗಳ ಇತಿಹಾಸದ ಹಿನ್ನೆಲೆ ನಮ್ಮ ಅರೆಭಾಷೆಗಿದೆ. ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮೈಗೂಡಿಸಿಕೊಂಡಿರುವ ಈ ಭಾಷೆ ದಕ್ಷಿಣ ಕನ್ನಡ ಕೆಲವು ಭಾಗ ಮತ್ತು ಕೊಡಗಿನ ಕೆಲವು ಪ್ರದೇಶಗಳಲ್ಲಿ ರಾಜ ಭಾಷೆಯಾಗಿ ಮೆರೆಯುತ್ತಿದೆ. ಇದನ್ನು ಉಳಿಸಿ ಬೆಳೆಸುವ ಮೂಲಕ ಅರೆಭಾಷೆ ಜನಾಂಗವನ್ನು ಬೆಳೆಸಿದಂತೆ ಎಂದೂ ಬೆಳ್ತಂಗಡಿ ಪ್ರಸನ್ನ ಕಾಲೇಜು ಉಪನ್ಯಾಸಕಿ ಸುಶ್ಮಿತಾ ಆದಿತ್ಯ ಚಿದ್ಗಲು ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ಮಡಪ್ಪಾಡಿ ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಘಟಕಗಳ ಆಶ್ರಯದಲ್ಲಿ ಮಾರ್ಚ್ 08 […]

ಅರೆಭಾಷೆ ರಾಜ ಭಾಷೆಯಾಗಿ ಮೆರೆಯುತ್ತಿದ್ದು ,ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ : ಸುಶ್ಮಿತಾ ಆದಿತ್ಯ ಚಿದ್ಗಲು Read More »

ತನ್ನ ಹುಟ್ಟೂರಿನಲ್ಲಿ ಸಂಘಟಕ ದಿನೇಶ್ ಮಡಪ್ಪಾಡಿಯವರಿಗೆ ಸನ್ಮಾನ

ಮಾರ್ಚ್ 8 ರಂದು ಕರ್ನಾಟಕ ಸರ್ಕಾರ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ. ಗ್ರಾಮ ಗೌಡ ಸಮಿತಿ ಮತ್ತು ಗ್ರಾಮ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವರ ಆಶ್ರಯದಲ್ಲಿ ಮಡಪ್ಪಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೊಳ್ಳಾಡಿ ತಮ್ಮಯ್ಯ ಗೌಡ ರಂಗಮಂದಿರದಲ್ಲಿ ನಡೆದ “ಅರೆಬಾಸೆ ಗ್ರಾಮೋತ್ಸವ – 2026” ರ ಅದ್ದೂರಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಂಘಟಕ, ಮಾರ್ಗದರ್ಶಕ ನ್ಯಾಯವಾದಿ ದಿನೇಶ್ ಮಡಪ್ಪಾಡಿಯವರನ್ನು ಸನ್ಮಾನಿಸಲಾಯಿತು.ಸಕ್ರಿಯ ಸಾಮಾಜಿಕ ಕಾರ್ಯಕರ್ತನಾಗಿ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಯಾವುದೇ ಫಲಾಪೇಕ್ಷೆ ಇಲ್ಲದೆ

ತನ್ನ ಹುಟ್ಟೂರಿನಲ್ಲಿ ಸಂಘಟಕ ದಿನೇಶ್ ಮಡಪ್ಪಾಡಿಯವರಿಗೆ ಸನ್ಮಾನ Read More »

ರೈತ ಉತ್ಪಾದಕ ಸಂಘಟನೆಗಳ ಪ್ರತಿನಿಧಿಗಳಿಗೆ ತರಬೇತಿ

ಕರ್ನಾಟಕ ಮತ್ತು ಕೇರಳ ರಾಜ್ಯಗಳ ವಿವಿಧ ರೈತ ಉತ್ಪಾದಕ ಸಂಘಟನೆಗಳ ಪ್ರತಿನಿಧಿಗಳಿಗೆ ನೀಡುವ ತರಬೇತಿಯ ಅಂಗವಾಗಿ ತಂಡವು ಸುಳ್ಯದ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಜೇನು ಸಂಸ್ಕರಣಾ ಘಟಕಕ್ಕೆ ಮಾ. 12 ರಂದು ಭೇಟಿ ನೀಡಿದರು.ನಬಾರ್ಡ್‌ನ ತರಬೇತಿ ಸಂಸ್ಥೆಯಾದ ಬಿಐಆರ್‌ಡಿ ವತಿಯಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ‘ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹಸಿರು ಹಣಕಾಸು’ಕುರಿತ ಮೂರು ದಿನಗಳ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ವಿವಿಧ ರೈತ ಉತ್ಪಾದಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದು,ಈ ತರಬೇತಿ ಕಾರ್ಯಕ್ರಮವು ಕೃಷಿ ಕ್ಷೇತ್ರದಲ್ಲಿ

ರೈತ ಉತ್ಪಾದಕ ಸಂಘಟನೆಗಳ ಪ್ರತಿನಿಧಿಗಳಿಗೆ ತರಬೇತಿ Read More »

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ ಯಾಕೆ ಪ್ರಾಮುಖ್ಯತೆ ಕೊಡಬೇಕು? !!!

ರಾಜ್ಯದಲ್ಲಿ 2026ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ.ಈ ಪರೀಕ್ಷೆಗೆ ಯಾಕೆ ಪ್ರಾಮುಖ್ಯತೆ ನೀಡಬೇಕು ಅನ್ನುವ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಮೂಡುತ್ತದೆ.ಈ. ಪ್ರಶ್ನೆಗೆ ವಿದ್ಯಾರ್ಥಿಗಳು ಗಮನಿಸ ಬೇಕಾದ  ಅಂಶಗಳು ಅಂದರೆ- ಸಾಮಾನ್ಯವಾಗಿ ಹತ್ತು ವರ್ಷಗಳ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಉನ್ನತ ಶಿಕ್ಷಣಕ್ಕೆ ಹಾಗೂ ಭವಿಷ್ಯದಲ್ಲಿ ಉತ್ತಮ ಉದ್ಯೋಗವನ್ನು ಪಡೆಯಲು ಅಗತ್ಯವಾದ ಪ್ರಮುಖ ಹಂತವೇ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ. ಆದ್ದರಿಂದ ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣವಾಗಿದೆ.ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಶಾಲಾ ಶಿಕ್ಷಣದ ಅಂತಿಮ

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ ಯಾಕೆ ಪ್ರಾಮುಖ್ಯತೆ ಕೊಡಬೇಕು? !!! Read More »

ಗ್ಯಾಸ್‌ ಸಿಲಿಂಡ‌ರ್ ಡೆಲಿವರಿ ವಿಳಂಬವಾಗ್ತಿದೆಯೇ? ತಕ್ಷಣ ಇಲ್ಲಿ ದೂರು ನೀಡಿ

ಕೇಂದ್ರ ಸರ್ಕಾರದ ಹೊಸ ನಿಯಮಗಳ ಪ್ರಕಾರ, ಎಲ್‌ಪಿಜಿ ಸಿಲಿಂಡ‌ರ್ ಬುಕ್ ಮಾಡಿದ 48 ರಿಂದ 60 ಗಂಟೆಗಳ ಒಳಗೆ (ಸುಮಾರು ಎರಡೂವರೆ ದಿನ) ಗ್ರಾಹಕರಿಗೆ ತಲುಪಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಡೆಲಿವರಿ ವಿಳಂಬವಾದರೆ ಗ್ರಾಹಕರು ಆಯಾ ಕಂಪನಿಗಳ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತೈಲ ಕಂಪನಿಗಳು (Indane): 1800-2333-555 $ 7718955555. (Bharat Gas): 1800-22-4344 9 7715012345. 2(HP Gas): 1800-2333-555 5 9493602222.

ಗ್ಯಾಸ್‌ ಸಿಲಿಂಡ‌ರ್ ಡೆಲಿವರಿ ವಿಳಂಬವಾಗ್ತಿದೆಯೇ? ತಕ್ಷಣ ಇಲ್ಲಿ ದೂರು ನೀಡಿ Read More »

ಸುಳ್ಯ : ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷರಾದ ಸರಸ್ವತಿಯವರಿಗೆ ವರ್ಗಾವಣೆ

ಸುಳ್ಯ ಪೊಲೀಸ್‌ ಠಾಣೆಯ ತನಿಖಾ ವಿಭಾಗದ ಉಪ ನಿರೀಕ್ಷಕರಾದ ಸರಸ್ವತಿ ಬಿ.ಟಿ. ಅವರಿಗೆ ವರ್ಗಾವಣೆಯಾಗಿದೆ. ಬೆಂಗಳೂರಿನ ಅರಣ್ಯ ಸಂಚಾರಿ ಘಟಕಕ್ಕೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಪ್ರೊಬೇಷನರಿ ಅವಧಿ ಸೇರಿದಂತೆ ಸುಮಾರು ನಾಲ್ಕು ವರ್ಷಗಳ ಕಾಲ ಅವರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಅವರು ಸೇವೆ ಸಲ್ಲಿಸಿದ್ದರು.

ಸುಳ್ಯ : ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷರಾದ ಸರಸ್ವತಿಯವರಿಗೆ ವರ್ಗಾವಣೆ Read More »

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವ ಮುನ್ನ ಎಚ್ಚರ ಅಗತ್ಯ!

ಭಾರತೀಯ ಸಂಪ್ರದಾಯದಂತೆ ಮಕ್ಕಳ ಅಂದ ಹೆಚ್ಚಿಸಲು ಮತ್ತು ದೃಷ್ಟಿ ತಗಲಬಾರದೆಂದು ಕಣ್ಣಿಗೆ ಕಾಡಿಗೆ ಹಚ್ಚುವುದು ಸಾಮಾನ್ಯ. ಆದರೆ, ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಕಾಡಿಗೆಗಳಲ್ಲಿ ಸೀಸ, ಕಾರ್ಬನ್ ಮತ್ತು ವಿಷಕಾರಿ ರಾಸಾಯನಿಕಗಳಿದ್ದು, ಇದು ಮಕ್ಕಳ ಆರೋಗ್ಯಕ್ಕೆ ಮಾರಕವಾಗಬಹುದು ಎಂದು ವೈದ್ಯಕೀಯ ವಿಜ್ಞಾನ ತಿಳಿಸಿದೆ. ಈ ಕಾಡಿಗೆಯ ಕಣಗಳು ಕಣ್ಣೀರಿನ ನಾಳಗಳನ್ನು ಮುಚ್ಚಿ, ಕಣ್ಣು ಸೋಂಕು, ಊತ, ರೆಪ್ಪೆಗಳ ಮೇಲೆ ಗುಳ್ಳೆಗಳು ಮತ್ತು ದೀರ್ಘಕಾಲದಲ್ಲಿ ದೃಷ್ಟಿ ದೋಷಕ್ಕೆ ಕಾರಣವಾಗಬಹುದು. ಆದ್ದರಿಂದ, ಕಾಡಿಗೆ ಬಳಸುವ ಮುನ್ನ ಎಚ್‌ಚರಿಕೆ ವಹಿಸುವುದು ಅತ್ಯಗತ್ಯ.

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವ ಮುನ್ನ ಎಚ್ಚರ ಅಗತ್ಯ! Read More »

ಮಾ.13 ಅರಂತೋಡಿನಲ್ಲಿ ತೆಕ್ಕಿಲ್ ಸೌಹಾರ್ಧ ಇಪ್ತಾರ್ ಕೂಟ

ಅರಂತೋಡು: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ 21 ನೇ ವರ್ಷದ ಬೃಹತ್ ಸೌಹಾರ್ದ ಇಫ್ತಾರ್ ಕೂಟವು ಟಿ.ಎಂ ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ಮಾರ್ಚ್ 13 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಗಮದಲ್ಲಿ ಗೂನಡ್ಕ-ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿ ಖತೀಬರಾದ ನಯೀಮ್ ಫೈಝಿ ಅಲ್ ಮಹಬರಿ, ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಚೈತನ್ಯ ಸೇವಾಶ್ರಮ ಅಜ್ಜಾವರ, ಗುತ್ತಿಗಾರು ಚರ್ಚ್ ನ ಧರ್ಮ ಗುರುಗಳಾದ ರೆ| ಪ| ಆದರ್ಶ್ ಜೋಸೆಫ್ ಇವರು

ಮಾ.13 ಅರಂತೋಡಿನಲ್ಲಿ ತೆಕ್ಕಿಲ್ ಸೌಹಾರ್ಧ ಇಪ್ತಾರ್ ಕೂಟ Read More »

ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ !

ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಳವಾಗಲಿದೆ IMD ಎಚ್ಚರಿಕೆ ನೀಡಿದೆ.ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿಮಾಡಿದ್ದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈ ಸರಳ ಕ್ರಮ ಪಾಲಿಸಿ:ಬಿಸಿಲಿನ ವೇಳೆ ಮನೆಯಲ್ಲೇ ಇರಬೇಕು.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲು ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ.ಧಾರಾಳವಾಗಿ ನೀರು ಕುಡಿಯಿರಿ. ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ಹೊರಗೆ ಹೋಗುವಾಗ ನೀರಿನ ಬಾಟಲಿ ಜೊತೆಗಿರಲಿ.ಸಾಧ್ಯವಾದಷ್ಟು ಕಾಟನ್ ಬಟ್ಟೆ ಧರಿಸಿ: ಹಗುರವಾದ, ಸಡಿಲವಾದ

ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ ! Read More »

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ

ಹೆಣ್ಣು ಮಗಳು ಶಿಕ್ಷಣ ಪಡೆದರೆ ಕುಟುಂಬ ಮಾತ್ರವಲ್ಲ, ಸಮಾಜವೂ ಪ್ರಗತಿ ಸಾಧಿಸುತ್ತದೆ. ಶಿಕ್ಷಣವು ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಭವಿಷ್ಯವನ್ನು ನೀಡುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರೂ ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥರು ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಮಹಿಳಾ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯನಗರ ಕಾರ್ಯಕ್ಷೇತ್ರದ ಬಾಂಧವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ Read More »

error: Content is protected !!
Scroll to Top