ಪ್ರಚಲಿತ

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ದೀಪಾವಳಿ ಅಮವಾಸ್ಯೆ ಪ್ರಯುಕ್ತ ದೇವರ ಬಲಿ ಹೊರಡುವ ಕಾರ್ಯಕ್ರಮ ಅ.31ರಂದು ನಡೆಯಲಿದೆ. ದೀಪಾವಳಿ ಅಮವಾಸ್ಯೆ ಪ್ರಯುಕ್ತ ರಾತ್ರಿ ಶ್ರೀ ದೇವರ ಬಲಿ ಹೊರಡಲಿದೆ ಎಂದು ದೇವಸ್ಥಾನದ ಕಚೇರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ Read More »

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ

ಸುಳ್ಯ: ವಿಧಾನ ಪರಿಷತ್‌ ಉಪಚುನಾವಣೆಯ ನೀತಿಸಂಹಿತೆಯಿಂದ ಕೆಲವು ಸಮಯದಿಂದ ಸಾರ್ವಜನಿಕ ಭೇಟಿಗೆ ಲಭ್ಯರಿಲ್ಲದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ.28ರಿಂದ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುತ್ತಾರೆ. ಶಾಸಕರು ಪ್ರತಿ ಸೋಮವಾರ ಸುಳ್ಯ ತಾಲೂಕು ಪಂಚಾಯತ್ ಕಛೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ bತಾಲ್ಲೂಕು ಕಛೇರಿಯಲ್ಲಿ 10.30ರಿಂದ 2.30ರ ತನಕ ಲಭ್ಯರಿದ್ದಾರೆ ಎಂದು ಶಾಸಕರ ಕಛೇರಿಯ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ Read More »

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಮೊದಲ ಕಾರ್ಯಕ್ರಮ ಅ.27 ರಂದು ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆಯಿತು.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ದೀಪ ಬೆಳಗಿಸಿ, ಹಿಂಗಾರ ಅರಳಿಸಿ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ Read More »

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ.

2024- 25ರ ದಕ್ಷಿಣ ವಲಯ ಮಟ್ಟದ ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಚೆನ್ನೈ ಯಲ್ಲಿ ನಡೆಯಲಿದ್ದು ಅರಂತೋಡಿನ ಪ್ರಪುಲ್ ಯು. ಎಸ್. ಆಯ್ಕೆಯಾಗಿದ್ದಾರೆ.ಈತ ಕುಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ಅರಂತೋಡಿನ ಉಳುವಾರು ದಿ. ಯು.ಡಿ. ಶೇಖರ್ ಹಾಗೂ ಉಪ್ಪಿನಂಗಡಿ ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ದಂಪತಿಯ ಪುತ್ರ. ಪುತ್ತೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ವಿವೇಕಾನಂದ ಕಾಲೇಜನ್ನು ಪ್ರತಿನಿಧಿಸಲಿದ್ದಾರೆ.

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ. Read More »

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು . ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ – 2024 ನಡೆಯಲಿದ್ದು, ಅ.27ರಂದು ಮೊದಲ ಗಡಿನಾಡ ಉತ್ಸವ ಬಂದಡ್ಕದಲ್ಲಿ ನಡೆಯಲಿದೆ. ಇದರ ಆಮಂತ್ರಣ ಬಿಡುಗಡೆ ಸಮಾರಂಭ ಅ.18ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡರು

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಮೊದಲ ಗಡಿನಾಡ ಉತ್ಸವ ಅ.27ರಂದು ಬಂದಡ್ಕದಲ್ಲಿ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರ ಬಂದಡ್ಕ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಲಿದೆ. ಮುಂಜಾನೆಯಿಂದ ಸಂಜೆವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು.

ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ Read More »

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ

ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ತಯಾರಿ ನಡೆಯುತ್ತಿದೆ.ಎಲ್ಲೆಲ್ಲೂ ಸಂಭ್ರಮ ಮನೆಮಾಡಿದೆ. ಹಿಂದುಗಳ ಅತಿದೊಡ್ಡ ಹಬ್ಬಕ್ಕೆ ಎಲ್ಲ ರೀತಿಯ ತಯಾರಿಗಳು ನಡೆಯುತ್ತಿವೆ. ದೇಶದೆಲ್ಲಡೆ ಬೆಳಕಿನ ಹಬ್ಬವನ್ನು ಬಹು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಗಳಿಗೆ ದೀಪಾವಳಿ ಹಬ್ಬದ ರಜೆಯನ್ನು ನೀಡಲಾಗಿದೆ. ನವೆಂಬ‌ರ್ ೧ ಶುಕ್ರವಾರ, ನವೆಂಬರ್ ೨ ಶನಿವಾರ, ಸೇರಿದಂತೆ ಒಟ್ಟು ಎರಡು ದಿನಗಳ ರಜೆಯನ್ನು ನೀಡಲಾಗಿದೆ. ನ.೩ ಭಾನುವಾರ ಆದ್ದರಿಂದ ೩ ದಿನಗಳ ರಜೆ ಲಭ್ಯವಾಗಲಿದೆ.

ದೀಪಾವಳಿ ರಜೆ ಯಾವಾಗ ? ಇಲ್ಲಿದೆ ಮಾಹಿತಿ Read More »

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು

ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.ಕಿಶೋರ್ ಕುಮಾರ್ ರಿಗೆ 3654 ಮತಗಳು, ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1957 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್ (ಪಕ್ಷೇತರ)-9 ಮತ, ಅಸಿಂಧು-87 ಮತ ಎಂದು ತಿಳಿದುಬಂದಿದೆ. ಬಿ.ಜೆ.ಪಿ.ಯ ಕಿಶೋರ್ ಕುಮಾರ್ 1697 ಮತಗಳ ಲೀಡ್ ಪಡೆದು ವಿಜಯಶಾಲಿಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ : ಬಿಜೆಪಿಯ ಕಿಶೋರ್ ಕುಮಾರ್ ಗೆ ಗೆಲುವು Read More »

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಮುಂದಿನ ನವೆಂಬರ್ 13ರಂದು ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನ ಘೋಷಿಸಿದೆ. ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿಪಿ ಯೋಗೇಶ್ವರ್ ಅವರಿಗೆ ಕಾಂಗ್ರೆಸ್‌ ಚನ್ನಪಟ್ಟಣದಿಂದ ಸ್ಪರ್ಧಿಸಲು ಟಿಕೆಟ್ ನೀಡಿದೆ. ಸಂಡೂರು ವಿಧಾನಸಭಾ ಉಪಚುನಾವಣೆಗೆ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿಲ್ಲ.ಈ ಕಾರಣದಿಂದ ಈ ಕ್ಷೇತ್ರಕ್ಕೆ ಇನ್ನಷ್ಟೆ ಅಭ್ಯರ್ಥಿಗಳನ್ನು ಘೋಷಿಸಬೇಕಾಗಿದೆ.

ಉಪಚುನಾವಣೆ: ಚನ್ನಪಟ್ಟಣ, ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ Read More »

Master Emotional Intelligence: Elevate Your Leadership and Teamwork Skills

Building on the foundation of effective communication, emotional intelligence (EI) takes your career growth to the next level. While communication helps you connect and convey your ideas clearly, emotional intelligence allows you to understand, manage, and respond effectively to emotions—yours and others’. Mastering EI helps you become a stronger leader and an invaluable team player

Master Emotional Intelligence: Elevate Your Leadership and Teamwork Skills Read More »

error: Content is protected !!
Scroll to Top