ಪ್ರಚಲಿತ

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಕಾಂತಮಂಗಲದ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ Read More »

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕನಕಮಜಲು ಗ್ರಾಮದ ಅಗೊಳ್ತೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸೇತುವೆಗೆ ಇಂದು ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ,ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ,ಹಿರಿಯರಾದ ವಸಂತ್ ಗಬ್ಬಲಡ್ಕ ಹಾಗೂ ಕಾರ್ಯಕರ್ತರು.ಸೇತುವೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದಾನಿಗಳ ನಾಮಫಲಕವನ್ನು ಅನಾವರಣಗೊಳಿಸಿದರುಆಡಳಿತ ಕಛೇರಿಯನ್ನು ಶಾಸಕ ಪೊನ್ನಣ್ಣ, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು.ಬಳಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿಪುಣ್ಯಕ್ಷೇತ್ರದ ಕಟ್ಟಡದ ನಿರ್ಮಾಣದ ಮೂಲಕ ದೇವರ ಮೇಲಿನ ಭಕ್ತಿ

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ Read More »

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು ಏಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪನಿ ತಿಳಿಸಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು.ಅವರು ಇಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ. ರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆ‌ರ್.ಸಿ.ಕಂಪೆನಿಯ ಪ್ಲಾಂಟ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಬಿಜೆಪಿಯಲ್ಲಿ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆದುಕೊಂಡಿರುವುದು ಸೂಕ್ತ ಕ್ರಮವಲ್ಲ : ವೆಂಕಟ್ ವಳಂಬೆ

ಸುಳ್ಯ ತಾಲೂಕಿನ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭ ಪಕ್ಷದ ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಆದರೆ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆ ಅನುಸರಿಸಿದ್ದಾರೆ. ಇದು ಸೂಕ್ತವಾದ ಕ್ರಮವಲ್ಲ ” ಎಂದು ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಎಣ್ಮೂರಿನಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರ ಸಭೆ ನಡೆದಾಗ ಕಾರ್ಯಕರ್ತರ ಅಭಿಪ್ರಾಯದಂತೆ ಹೊಸಬರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಅನೂಪ್ ಬಿಳಿಮಲೆಯವರನ್ನು

ಬಿಜೆಪಿಯಲ್ಲಿ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆದುಕೊಂಡಿರುವುದು ಸೂಕ್ತ ಕ್ರಮವಲ್ಲ : ವೆಂಕಟ್ ವಳಂಬೆ Read More »

ಪೆರಾಜೆ : ಶಾಲೆಗೆ ಬೆಂಚ್ ಡೆಸ್ಕ್ ಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ ವಿವಿಧಡೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಅದರಲ್ಲಿ ಒಂದಾದ ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಕರ ಕೊರತೆ ಇರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಗೌರವ ಶಿಕ್ಷಕರ ಒದಗಿಸುವ ಮೂಲಕ ಮತ್ತು ಶಾಲಾ ಕಟ್ಟಡ ರಚನೆ, ಆಟದ ಮೈದಾನ, , ಶುದ್ಧ ಕುಡಿಯುವ ನೀರಿನ ಪೂರೈಕೆ, ಶಾಲಾ ಕಟ್ಟಡ ದುರಸ್ತಿ ಕ್ರೀಡಾ ಹಾಗೂ ಬೋಧನ ಸಾಮಗ್ರಿ ಪೂರೈಕೆ ಮತ್ತು ಡೆಸ್ಕ್ ಬೆಂಚುಗಳ ಒದಗಣೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರಂತೆ

ಪೆರಾಜೆ : ಶಾಲೆಗೆ ಬೆಂಚ್ ಡೆಸ್ಕ್ ಗಳ ವಿತರಣೆ Read More »

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಆಯ್ಕೆ

ಸುಳ್ಯ ತಾಲೂಕಿನ ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಹಾಗೂ ಉಪಾಧ್ಯಕ್ಷರಾಗಿ ನಾಗೇಶ್‌ ಆಳ್ವ ಆಯ್ಕೆಯಾಗಿದ್ದಾರೆ.ಜ.29ರಂದು ಅಧ್ಯಕ್ಷತೆಗೆ ಆಯ್ಕೆ ಸಂದರ್ಭದಲ್ಲಿ ಪಕ್ಷದೊಳಗೆ ಮಾತುಕತೆ ನಡೆದಾಗ ಅನೂಪ್‌ ಬಿಳಿಮಲೆ ಹಾಗೂ ಉಪಾಧ್ಯಕ್ಷತೆಗೆ ರಾಜೇಂದ್ರ ಪ್ರಸಾದ್ ರನ್ನು ನಿರ್ದೇಶಕರು ಸೂಚನೆ ಮಾಡಿದ್ದರಿಂದ ಪಕ್ಷದ ಪ್ರಮುಖರು ಕೂಡಾ ಅನೂಪ್ ರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷತೆಗೆ ರಾಜೇಂದ್ರರು ನಾಮಪತ್ರ ಸಲ್ಲಿಸಲು ಸೂಚನೆ ನೀಡಿದರೆನ್ನಲಾಗಿದೆ.ಈ ಸಂದರ್ಭ ವಸಂತ ನಡುಬೈಲುರವರು ತನಗೆ ಅಧ್ಯಕ್ಷತೆ ನೀಡಬೇಕೆಂದು

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಆಯ್ಕೆ Read More »

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ಬೆಳಿಗ್ಗೆ ನವಗ್ರಹ ಹೋಮ, ಚಂಡಿಕಾ ಹೋಮ ನಡೆದು ಪೂರ್ಣಾಹುತಿ ನಂತರ ಮಹಾಮಂಗಳಾರತಿ,ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಗಂಟೆ 5.00ರಿಂದ ರಂಗ ಪೂಜೆ, ಪ್ರಸನ್ನ ಪೂಜೆ, ಪ್ರಾರ್ಥನೆ,ಪ್ರಸಾದ ವಿತರಣೆ ನಡೆಯಲಿದೆ.ಹೆಚ್ಚಿನ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವಿಯ ಗಂಧ ಪ್ರಸಾದವನ್ನು ಸ್ವೀಕರಿಸಬೇಕೆಂದುಕ್ಷೇತ್ರದ ಧರ್ಮದರ್ಶಿಗಳಾದ ಡಾ.ಕೆ.ವಿ ರೇಣುಕಾಪ್ರಸಾದ್ ವಿನಂತಿಸಿಕೊಂಡಿದ್ದಾರೆ.

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ Read More »

ಅರಂತೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡುಕೋಣಗಳ ಸಂಚಾರ,ವಾಹನ ಸವಾರರೇ ಎಚ್ಚರ !

ಸುಳ್ಯ ತಾಲೂಕಿನ ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ವೈಎಂಕೆ ಜಾಡಾವು ಬಳಿ ಕಾಡು ಕೋಣಗಳು ಆಗಾಗ ರಸ್ತೆ ದಾಟುತ್ತಿದ್ದು ವಾಹನ ಸವಾರರಿಗೆ ಅಪಾಯ ಎದುರಾಗಿದೆ.ವಾಹನ ಸವಾರರಲ್ಲಿ ದ್ವಿಚಕ್ರ ವಾಹನ ಸವಾರರು ಈ ಭಾಗದಲ್ಲಿ ವಾಹನ ಚಲಾಯಿಸುತ್ತಿರುವ ಸಂದರ್ಭದಲ್ಲಿ ಇನ್ನೂ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.ತಪ್ಪಿದಲ್ಲಿ ಕಾಡುಕೋಣಗಳು ವಾಹನಗಳಿಗೆ ಡಿಕ್ಕಿ ಹೊಡೆದರೆ ಅಪಾಯ ಎದುರಾಗಬಹುದು.

ಅರಂತೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡುಕೋಣಗಳ ಸಂಚಾರ,ವಾಹನ ಸವಾರರೇ ಎಚ್ಚರ ! Read More »

error: Content is protected !!
Scroll to Top