ಪ್ರಚಲಿತ

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ

ಹೆಣ್ಣು ಮಗಳು ಶಿಕ್ಷಣ ಪಡೆದರೆ ಕುಟುಂಬ ಮಾತ್ರವಲ್ಲ, ಸಮಾಜವೂ ಪ್ರಗತಿ ಸಾಧಿಸುತ್ತದೆ. ಶಿಕ್ಷಣವು ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಭವಿಷ್ಯವನ್ನು ನೀಡುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರೂ ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥರು ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಮಹಿಳಾ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯನಗರ ಕಾರ್ಯಕ್ಷೇತ್ರದ ಬಾಂಧವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ […]

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ Read More »

ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ

ಆನೆ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವನ್ಯ ಜೀವಿ ಮಾನ ಸಂಘರ್ಷ ತಡೆಗಟ್ಟಲು ಸರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅವರು ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು.2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು.ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು

ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ Read More »

ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಗುಂಪು ಆಟ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ 24 ವಿದ್ಯಾರ್ಥಿಗಳು ಭಾಗವಹಿಸಿ, 4 ಮಂದಿ ವಿದ್ಯಾರ್ಥಿಗಳು ಪ್ರಥಮ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಅಭಿನಂದನಾ ಸಮಾರಂಭ: ಸೋಮವಾರ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಆಶ್ರಯದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ

ಜಂಪ್ ರೋಪ್ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟಮಟ್ಟಕ್ಕೆ-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ಚಿನ್ನರ ಕಲರವ ಸಮ್ಮರ್ ಕ್ಯಾಂಪ್,ಇಂದೇ ಹೆಸರು ನೊಂದಾಯಿಸಿಕೊಳ್ಳಿ

🎨 ಚಿಣ್ಣರ ಕಲರವ – Summer Camp 🎨ಮಕ್ಕಳ ಸೃಜನಶೀಲತೆ, ಆಟ, ಕಲೆ ಮತ್ತು ಕಲಿಕೆಯ ಸಂತಸದ ಕ್ಷಣಗಳಿಗೆ ನಮ್ಮ ಚಿಣ್ಣರ ಕಲರವ Summer Campಗೆ ನಿಮ್ಮ ಮಕ್ಕಳನ್ನು ಸೇರಿಸಿ.ಕಥೆ ಹೇಳಿಕೆ, ಕ್ರೀಡೆ, ಕಲೆ, ಹಾಡು-ನೃತ್ಯ, ಸೃಜನಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಅರಳಿಸುವ ವಿಶೇಷ ಶಿಬಿರ.🌟 School Admission Open – 2026–27 🌟ಮಕ್ಕಳ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲು Anjali Montessori Schoolನಲ್ಲಿ ಪ್ರವೇಶಗಳು ಆರಂಭವಾಗಿವೆ.Montessori ವಿಧಾನದಲ್ಲಿ ಕಲಿಕೆ, ಅನುಭವಾತ್ಮಕ ಶಿಕ್ಷಣ ಮತ್ತು ಮಕ್ಕಳ

ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ಚಿನ್ನರ ಕಲರವ ಸಮ್ಮರ್ ಕ್ಯಾಂಪ್,ಇಂದೇ ಹೆಸರು ನೊಂದಾಯಿಸಿಕೊಳ್ಳಿ Read More »

ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧಾರ

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ (KGMOA) ಕೇಂದ್ರ ಸಮಿತಿಯು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧರಿಸಿದೆ.ಇಂದು ಸರ್ಕಾರದ ಪರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್. ಸಿ.ಮಹದೇವಪ್ಪ ನೇತೃತ್ವ ಕೆ.ಜಿ.ಎಂ.ಒ.ಎ ಮುಖಂಡರ ಜೊತೆ ಸಭೆ ನಡೆಯಿತು.ಸುದೀರ್ಘ ಚರ್ಚೆಯ ನಂತರ,ಪ್ರಮುಖ 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿಸಿದೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಹಿಂಪಡೆಯಲಾಗಿದೆ.ಒಪ್ಪಿಕೊಂಡಿರುವ 13 ಬೇಡಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಜಾರಿಗೊಳಿಸುವುದಾಗಿ ಸರ್ಕಾರ ಭರವಸೆ ನೀಡಿದೆ.ತಾಂತ್ರಿಕ

ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲು ನಿರ್ಧಾರ Read More »

ಮಾ.14 : ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆ ಕೋಲ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 14-03-2026 ರ ಮೀನಾ ಸಂಕ್ರಮಣದಂದು ಸ್ವಾಮಿ ಕೊರಗಜ್ಜ ದೈವದ ಹರಕೆಯ ನೇಮೋತ್ಸವ ಹಾಗೂ ದಿನಾಂಕ 15-03-2026 ರ ಬೆಳಿಗ್ಗೆ ಗಂಟೆ 6:00 ಕ್ಕೆ ಅಗೇಲು ಸೇವೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಮಾ.14 : ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆ ಕೋಲ Read More »

ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ OPD ಬಂದ್‌ ಸಾಧ್ಯತೆ?

ಕರ್ನಾಟಕದಾದ್ಯಂತ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಿಂದ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಮೊದಲ ಹಂತವಾಗಿ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ವೇತನ ಪರಿಷ್ಕರಣೆ, ಭತ್ಯೆಗಳ ಹೆಚ್ಚಳ, ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಭರ್ತಿ, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಮತ್ತು ವೈದ್ಯರ ಸುರಕ್ಷತೆಗೆ ಕಠಿಣ ಕಾನೂನು ಜಾರಿಗೊಳಿಸುವುದು ಪ್ರಮುಖ ಬೇಡಿಕೆಗಳಾಗಿವೆ.ಪ್ರತಿಭಟನೆಯ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ

ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ OPD ಬಂದ್‌ ಸಾಧ್ಯತೆ? Read More »

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ಇಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅಡ್ಯಡ್ಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಬೇಡಿಕೆ ಅಹವಾಲುಗಳ ಬಗ್ಗೆ ಚರ್ಚಿಸಿ ಮಾತನಾಡಿ ಸುಳ್ಯದ ಜನತೆ ಪ್ರೀತಿ ನೀಡಿದ್ದಾರೆ. ತಮ್ಮ ಅಭಿಮಾನ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ತಮ್ಮ ಸಮಸ್ಯೆ ಅಹವಾಲುಗಳಿಗೆ ಬ್ಲಾಕ್ ಅಧ್ಯಕ್ಷರು ಮತ್ತು ಪಕ್ಷದ ನಾಯಕರೊಂದಿಗೆ ಸ್ಪಂದಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಕೆಪಿಸಿಸಿ ಸದಸ್ಯ, ಉದ್ಯಮಿ ಹೆಚ್ ಎಂ ನಂದಕುಮಾರ್ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ Read More »

ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ

ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದ ನೂತನ ಶಿಲಾಮಯ ಗುಡಿಯ ನಿರ್ಮಾಣದ ಪೂರ್ವ ಭಾವಿಯಾಗಿ ಶ್ರೀ ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಮಾ. 9 ರಂದು ಜರುಗಿತು.ದೇಲಂಪಾಡಿ ಬ್ರಹ್ಮಶ್ರೀ ವೇದಮೂರ್ತಿ ಗಣೇಶ್ ತಂತ್ರಿ ಯವರ ಮಾರ್ಗದರ್ಶನದಲ್ಲಿ ಪೂರ್ವಾಹ್ನ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆದು 10.47 ರ ಮುಹೂರ್ತದಲ್ಲಿ ಪ್ರಾರ್ಥನೆ ನೆರವೇರಿಸಿ ಮೂಲಸ್ಥಾನದ ಗುಡಿಯಿಂದ ಶ್ರೀ ಕಲ್ಕುಡ ಮತ್ತು ಸಹಪರಿವಾರ ದೈವಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಅಭಿಷೇಕವಾಗಿ ಮಹಾಪೂಜೆಯಾಗಿ ಪ್ರಸಾದವಿತರಣೆಯಾಯಿತು. ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ

ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ Read More »

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು : ಮಾಣಿಲಶ್ರೀ

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.ಸೋಣಂಗೇರಿ ಶ್ರೀ ಕೃಷ್ಣ ಭಜನಾ ಜೀರ್ಣೊದ್ದಾರಗೊಳ್ಳುತ್ತಿದ್ದು ಇದರ ವೀಕ್ಷಣೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾ.9 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.ಜಾತಿ ಭೇದ ಭಾವ ಮೇಲು ಕೀಳು ಎಂಬುದು ಹಿಂದು ಧರ್ಮಕ್ಕೆ ಇರುವ ಹಿನ್ನಡೆ.ಹಾಗೆಯೇ ಜಾತಿ ಬೇದ ಭಾವ, ಮೇಳು-ಕೀಳು, ಮದ-ಮತ್ಸರವನ್ನು ಬಿಟ್ಟು ಇನ್ನೊಬ್ಬರ ಏಳಿಗೆ ಮತ್ತು ಸಂತೋಷದಲ್ಲಿ

ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು : ಮಾಣಿಲಶ್ರೀ Read More »

error: Content is protected !!
Scroll to Top