ಪ್ರಚಲಿತ

ಸುಳ್ಯ ದಸರಾ ಶೋಭಾಯಾತ್ರೆಗೆ ಅದ್ದೂರಿ ಚಾಲನೆ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಜರುಗುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ 2024 ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು.ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ […]

ಸುಳ್ಯ ದಸರಾ ಶೋಭಾಯಾತ್ರೆಗೆ ಅದ್ದೂರಿ ಚಾಲನೆ Read More »

ವಯನಾಡು ಉಪಚುನಾವಣೆ- ಪ್ರಿಯಾಂಕಾ ಗಾಂಧಿ ಸ್ಪರ್ಧೆ

ವಯನಾಡ್ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಎಐಸಿಸಿ ಘೋಷಿಸಿದೆ.ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಚುನಾವಣೆ ಕಣಕ್ಕಿಳಿಯಲಿದ್ದಾರೆಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ರಾಜೀನಾಮೆಯೊಂದಿಗೆ ವಯನಾಡ್ ಸಂಸದೀಯ ಸ್ಥಾನಕ್ಕೆ ಉಪಚುನಾವಣೆ ಅನಿವಾರ್ಯವಾಯಿತು. ಎರಡು ಸ್ಥಾನ ಗೆದ್ದ ನಂತರ ರಾಹುಲ್ ರಾಜೀನಾಮೆ ನೀಡಿದ್ದು ಗೊತ್ತೇ ಇದೆ. ಇದೀಗ ಆ ಸ್ಥಾನದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದಾರೆ.

ವಯನಾಡು ಉಪಚುನಾವಣೆ- ಪ್ರಿಯಾಂಕಾ ಗಾಂಧಿ ಸ್ಪರ್ಧೆ Read More »

ಶ್ರೀ ಮಹಾಗಣಪತಿ ಹವನ ಸಹಿತ ಚಂಡಿಕಾ ಮಹಾಯಾಗ ಮತ್ತು ಅಷ್ಟವಧಾನ ಸೇವೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಕಾರ್ಯಕ್ರಮದ ಏಳನೇ ದಿನವಾದ ಅ.15ರಂದು ರಾತ್ರಿ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗ ಮತ್ತು ಅಷ್ಟಾವಧಾನ ಸೇವೆ ಮತ್ತು ಮಾತೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಶ್ರದ್ದಾ ಭಕ್ತಿಯಿಂದ ನಡೆಯಿತು.ರಾತ್ರಿ ಶ್ರೀದೇವಿಗೆ

ಶ್ರೀ ಮಹಾಗಣಪತಿ ಹವನ ಸಹಿತ ಚಂಡಿಕಾ ಮಹಾಯಾಗ ಮತ್ತು ಅಷ್ಟವಧಾನ ಸೇವೆ Read More »

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಕ್ತಿಪ್ರಧಾನ ನಾಟಕ ಮಣಿಕಂಠ ಮಹಿಮೆ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಆರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಅ.14ರಂದು ರಾತ್ರಿ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಮಣಿಕಂಠ ಮಹಿಮೆ ಮಹಿಳೆ ತುಳು ನಾಟಕ ಪ್ರದರ್ಶನಗೊಂಡು ಭಕ್ತರ ಮನರಂಜಿಸಿತು.ರಾತ್ರಿ ಶ್ರೀದೇವಿಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಕ್ತಿಪ್ರಧಾನ ನಾಟಕ ಮಣಿಕಂಠ ಮಹಿಮೆ Read More »

ಭಾರೀ ಮಳೆ: ಕೆಲವು ರಾಜ್ಯಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಭಾರತದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ನಾಲ್ಕು ದಿನ ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅನೇಕ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹ ಮಹತ್ವದ ಸೂಚನೆ ನೀಡಿದ್ದಾರೆ. ಜನರು ಮನೆಯಲ್ಲಿಯೇ ಇರಿ ಎಂದು ಐಎಮ್‌ಡಿ ಎಚ್ಚರಿಸಿದೆ

ಭಾರೀ ಮಳೆ: ಕೆಲವು ರಾಜ್ಯಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಮಡಿಕೇರಿ :-ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.ಕತೆ, ಕವನ,

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ

ಸುಳ್ಯದ ಕವಿ, ಸಾಹಿತಿ, ಗಾಯಕ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9 ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ. ಕಳ್ಳ ಮಾರ್ಗದಿಂದ BPL ಕಾರ್ಡ್ ಪಡೆದುಕೊಂಡಿದ್ದರೆ ರದ್ದಾಗುತ್ತದೆ. ಈ ನಡುವೆ ಆಹಾರ ಸಚಿವ ವಿ.ಮುನಿಯಪ್ಪ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ಕೋಲಾರದಲ್ಲಿ ಶುಕ್ರವಾರ ಮಾತನಾಡಿದ ಅವರು, BPL ಕಾರ್ಡ್ ರದ್ದಾದರೂ ಕೂಡ ಆ ಸದಸ್ಯರನ್ನ APL ಕಾರ್ಡ್‌ಗೆ ವರ್ಗಾಯಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೆ ಅನ್ನಭಾಗ್ಯ ಹಣ ಕೂಡ ವರ್ಗಾವಣೆಯಾಗುತ್ತದೆ ಸರ್ವರ್ ಸಮಸ್ಯೆಯಿಂದ ಹಣ ವರ್ಗಾವಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ಬಿ.ಪಿ.ಎಲ್ ಕಾರ್ಡ್ ರದ್ದಾದವರಿಗೆ ಎ.ಪಿ.ಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ Read More »

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ:ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅ.9 ರಿಂದ ಅ.17ರ ತನಕ ಶ್ರೀ ಚೆನ್ನಕೇಶವದ ದೇವಸ್ಥಾನದಮುಂಭಾಗದ ಶಾರದಾಂಬಾ ಕಲಾ ವೇದಿಕೆಯಲ್ಲಿ ಅದ್ದೂರಿಯಾಗಿ ನಡೆಯುತಿದೆ. ಅ.11ರಂದು ದಿನಪೂರ್ತಿ ಭಜನೋತ್ಸವ ನಡೆಯಿತು ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಡೆಯಿತು.

ಸುಳ್ಯ ದಸರಾ ಉತ್ಸವದಲ್ಲಿ ಮನರಂಜಿಸಿದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ Read More »

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ

ಸುಳ್ಯದ ಪ್ರಖ್ಯಾತ ವಸ್ತ್ರ ಮಳಿಗೆ ಕುಂ..ಕುಂ.. ಫ್ಯಾಶನ್ ನವರ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸುಳ್ಯ ರಥಬೀದಿಯಲ್ಲಿನ ನಂದಿನಿ ಟವರ್ಸ್‌ ನಲ್ಲಿ ಶುಕ್ರವಾರ ಶುಭಾರಂಭಗೊಂಡಿತು.ನಂದಿನಿ ಟವರ್ಸ್ ಮಾಲಕ, ಹಿರಿಯರಾದ ಗುಡ್ಡಪ್ಪ ರೈ ಮೇನಾಲರು ನೂತನ ವಸ್ತ್ರ ಮಳಿಗೆಯಲ್ಲಿ ರಿಬ್ಬನ್ ಕತ್ತರಿಸಿ ವಸ್ತ್ರ ಮಳಿಗೆಯನ್ನು ಉದ್ಘಾಟಿಸಿದರು.ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಯವರು ದೀಪ ಪ್ರಜ್ವಲನೆಗೊಳಿಸಿದರು.ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಕುಂ..ಕುಂ.. ಫ್ಯಾಶನ್ ಸಂಸ್ಥೆ ಕಾರ್ಯಾಚರಿಸುತ್ತಿರುವ ಕಟ್ಟಡದ ಮಾಲಕರಾದ ಪ್ರೇಮಲತಾ,

ಸುಳ್ಯದಲ್ಲಿ ಕುಂ.ಕುಂ.ಪ್ಯಾಶನ್ ಸಹ ಸಂಸ್ಥೆ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಲೋಕಾರ್ಪಣೆ Read More »

error: Content is protected !!
Scroll to Top