ಪ್ರಚಲಿತ

ಕಲಾವಿದ ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ ಪ್ರದಾನ

ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಪೆರ್ಲoಪಾಡಿಯಲ್ಲಿ ಶ್ರೀಗಣೇಶೋತ್ಸವದ ಆಚರಣೆಯಲ್ಲಿ ಜರುಗಿದ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ, ಜ್ಯೋತಿಷಿ, ಕಲಾವಿದರಾದ ಶ್ರೀ ಎಚ್. ಭೀಮರಾವ್ ವಾಷ್ಠರ್ ಇವರ ವಿವಿಧ ಸಾಧನೆಗಳನ್ನು ಪರಿಗಣಿಸಿ 2024 ನೇ ಸಾಲಿನ ಕಲಾ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಸಂಗೀತ ರಸಮಂಜರಿಯಲ್ಲಿ ಭೀಮರಾವ್ ವಾಷ್ಠರ್ ಸುಳ್ಯ ಅವರು ಅನೇಕ ಗೀತೆಗಳನ್ನು ಹಾಡಿ ಮನರಂಜಿಸಿದ್ದಾರೆ. ವೇದಿಕೆಯಲ್ಲಿ ಆರ್ ಪಿ ಕಲಾ ಸೇವಾ […]

ಕಲಾವಿದ ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ ಪ್ರದಾನ Read More »

ಸಂಸ್ಕೃತಿಯುತ,ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ: ಡಾ. ಅನುರಾಧ ಕುರುಂಜಿ

ಜಾಲ್ಸೂರು : ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ

ಸಂಸ್ಕೃತಿಯುತ,ಸಂಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ: ಡಾ. ಅನುರಾಧ ಕುರುಂಜಿ Read More »

ಪೂರ್ಣಿಮಾ ಪೆರ್ಲಂಪಾಡಿಗೆ ಸನ್ಮಾನ

ಬೆಳ್ಳಾರೆ ಜೇಸಿಸ್ ನ ಜೊತೆ ಕಾರ್ಯದರ್ಶಿಕೊಳ್ತಿಗೆ ವಲಯದ ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಪೆರ್ಲoಪಾಡಿ ಇವರಿಗೆ ಸೆ.17ರಂದು ಕೊಳ್ತಿಗೆ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ 65ನೇ ವರ್ಷದ ವಾರ್ಷಿಕ ಮಹಾ ಸಭೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಗೌರವಿಸಲಾಯಿತು. ಪೂರ್ಣಿಮಾರು ಸಾಹಿತ್ಯ ಕ್ಷೇತ್ರ ದಲ್ಲಿ ಮಾಡಿದ ಸಾಧನೆಗಾಗಿ ಅನೇಕ ಪ್ರಶಸ್ತಿ ಗಳನ್ನು ಪಡೆದಿರುತ್ತಾರೆ.

ಪೂರ್ಣಿಮಾ ಪೆರ್ಲಂಪಾಡಿಗೆ ಸನ್ಮಾನ Read More »

ಸೆ. 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ

ಸುಳ್ಯ : ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ ೨೦ ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಹಾಗೂ ಪ್ರವಾದಿ ಸಂದೇಶ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಮಿಲಾದ್ ಸಮಿತಿ ತಿಳಿಸಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಿಲಾದ್ ಸಮಿತಿಯ ಅಧ್ಯಕ್ಷ ಶರೀಫ್ ಕಂಠಿ ಸೆ.20ನೇ ಶುಕ್ರವಾರ ಸಂಜೆ ೪.೦0 ಗಂಟೆಗೆ ಮೊಗರ್ಪಣೆ ಮಸೀದಿ ವಠಾರದಿಂದ ಕಾಲ್ನಡಿಗೆ ಜಾಥಾ ಪ್ರಾರಂಭಗೊಂಡು ಗಾಂಧಿನಗರ ಪೆಟ್ರೋಲ್ ಪಂಪ್ ಮುಭಾಗದಲ್ಲಿ ಜಾಥಾ ಸಮಾಪ್ತಿಗೊಳ್ಳಲಿದೆ.

ಸೆ. 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ Read More »

ಪೆರಾಜೆ : ಹಿರಿಯ ವಿದ್ಯಾರ್ಥಿ ಸಂಘ ರಚನೆ

ಪೆರಾಜೆ :ಕನ್ನಡ ಪೆರಾಜೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ ಸೆ.15 ರಂದು ಸಂಘದ ಅಧ್ಯಕ್ಷರಾದ ಉನೈಸ್ ಪೆರಾಜೆ ಇವರ ನೇತೃತ್ವದಲ್ಲಿ ನಡೆಯಿತು.ವೇದಿಕೆಯಲ್ಲಿ ಮಾಜಿ ಪಂಚಾಯತ್ ಸದಸ್ಯರಾದ ಅಬೂಬಕ‌ರ್.ಪಿ.ಎನ್, ಮಹಮ್ಮದ್ ಪೆರಾಜೆ ಉಪಸ್ಥಿತರಿದ್ದರು.ಸಭೆಯಲ್ಲಿ ಮುಂದಿನ ದಿನಗಳಲ್ಲಿ ನಡೆಸಲು ತೀರ್ಮಾನಿಸಿದ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಬಳಿಕ ಹಿರಿಯ ವಿದ್ಯಾರ್ಥಿ ಸಮಿತಿ ರಚಿಸಲಾಯಿತು.ಸಂಘದ ಅಧ್ಯಕ್ಷರಾಗಿ ಉನೈಸ್ ಪೆರಾಜೆ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ರವಿಚಂದ್ರ.ಕೆ.ಜೆ, ಕೋಶಾಧಿಕಾರಿಯಾಗಿ ಅಶೋಕ್ ಪೀಚೆಮನೆ, ಗೌರವಾಧ್ಯಕ್ಷರಾಗಿ ಅಬೂಬಕರ್.ಪಿ.ಎನ್, ಉಪಾಧ್ಯಕ್ಷರುಗಳಾಗಿ ಕಿರಣ್ ಬಿಳಿಯಾರು, ನಾಸಿರ್.ಎನ್.ಎ, ಶಾಹಿನ್.ಪಿ.ಎಂ, ಜೊತೆ

ಪೆರಾಜೆ : ಹಿರಿಯ ವಿದ್ಯಾರ್ಥಿ ಸಂಘ ರಚನೆ Read More »

ರೇಣುಕಾಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್‌ಗೆ ವಕೀಲರಿಂದಲೇ ಎಚ್ಚರಿಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರೋ ನಟ ದರ್ಶನ್‌ಗೆ ಈಗ ವಕೀಲರೇ ಎಚ್ಚರಿಕೆ ಸಂದೇಶ ಕಳುಹಿಸಿದ ಘಟನೆ ವರದಿಯಾಗಿದೆ. ಜೈಲು ಸೇರಿದ ದಿನದಿಂದ ನಿತ್ಯವೂ ಕಿರಿಕ್ ಮಾಡಿಕೊಳ್ಳುತ್ತಿರುವ ನಟನಿಗೆ ಜೈಲಲ್ಲಿ ಕಿರಿಕ್ ಮಾಡಿಕೊಳ್ಳಬೇಡಿ ಎಂಬ ಸ್ಪಷ್ಟ ಎಚ್ಚರಿಕೆಯುಳ್ಳ ಪತ್ರವನ್ನು ಪತ್ನಿ ವಿಜಯಲಕ್ಷ್ಮಿ ಮೂಲಕ ಕಳುಹಿಸಿದ್ದಾರೆ. ಸಮಸ್ಯೆ ಮಾಡಿಕೊಂಡರೆ ಮುಂದೆ ಜಾಮೀನಿಗೆ ತೊಂದರೆಯಾಗಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನಾದರೂ ಸನ್ನಡತೆಯಿಂದ ಇರಿ ಎಂದು ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಆರೋಪಿ ನಟ ದರ್ಶನ್‌ಗೆ ವಕೀಲರಿಂದಲೇ ಎಚ್ಚರಿಕೆ! Read More »

ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಅರಂತೋಡು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಜನಜಾಗೃತಿ ವೇದಿಕೆ ಇದರ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು ದೀಪಾ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ

ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಉದ್ಘಾಟನಾ ಸಮಾರಂಭ

ಸುಳ್ಯ: ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು. ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.ವೇದಿಕೆಯಲ್ಲಿ ಲಯನ್ಸ್ ಪ್ರಾಂತ್ಯದ ರಾಯಭಾರಿ

ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಉದ್ಘಾಟನಾ ಸಮಾರಂಭ Read More »

ಅಡ್ಕಾರು : ವನವಾಸಿ ವಿದ್ಯಾರ್ಥಿ ನಿಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ

ಸುಳ್ಯ : ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜನೆಗೊಂಡ ಪ್ರಧಾನಿ ನರೇಂದ್ರ ಮೋದಿಯವರ 74ನೇ ವರ್ಷದ ಜನ್ಮ ದಿನಾಚರಣೆ ಅಡ್ಕಾರಿನ ವನವಾಸಿ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ದೇಶವನ್ನು ಮುನ್ನಡೆಸುತ್ತಿರುವ ಅತ್ಯಂತ ಪ್ರಭಾವಶಾಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯನ್ನು ವನವಾಸಿ ಕಲ್ಯಾಣ ಆಶ್ರಮದ ಮಕ್ಕಳ ಜತೆ ನಡೆಸುತ್ತಿರುವ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನಿಯ , ಇವರುಗಳ

ಅಡ್ಕಾರು : ವನವಾಸಿ ವಿದ್ಯಾರ್ಥಿ ನಿಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ Read More »

ದುಂಡುಮೇಜಿನ ಸಭೆಗೆ ತ್ರಿವೇಣಿ ಆಯ್ಕೆ

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ. 18ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ದುಂಡುಮೇಜಿನ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಯಾಗಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆಗೊಂಡಿದ್ದಾರೆ.ತಾಲೂಕಿನಿಂದ ಮಕ್ಕಳ ಪ್ರತಿನಿಧಿಯಾಗಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು.ಹಸ್ತ ಬೆಳ್ಳಿಪ್ಪಾಡಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನೆಕ್ಕಿಲಾಡಿ 34ರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸತೀಸ್ ಭಾಗವಹಿಸಲಿದ್ದಾರೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ

ದುಂಡುಮೇಜಿನ ಸಭೆಗೆ ತ್ರಿವೇಣಿ ಆಯ್ಕೆ Read More »

error: Content is protected !!
Scroll to Top