ಪ್ರಚಲಿತ

ಸಂಪಾಜೆ : ಅಕ್ರಮ ಬೀಟಿ ಮರ ಸಾಗಾಟ ಪತ್ತೆ

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ (ನೋಂದಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಜ.15ರಂದು ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ.ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ಆರೋಪಿಗಳನ್ನು ಅರಣ್ಯ ಇಲಾಖೆ ‌ಬಂಧಿಸಿದೆ. ಆರೋಪಿಗಳಾದ ವಾಹನ ಚಾಲಕ ಬಿ.ಎಂ ಸಜನ್ ನಾಪೋಕ್ಲು ಇವರನ್ನು ಬಂಧಿಸಿ […]

ಸಂಪಾಜೆ : ಅಕ್ರಮ ಬೀಟಿ ಮರ ಸಾಗಾಟ ಪತ್ತೆ Read More »

ಸೋಮಪ್ಪ‌ ಗೌಡ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಕುಂಟುಕಾಡು ಮನೆಯ ಸೋಮಪ್ಪ ಗೌಡ ಜ.16ರಂದು ಬೆಳಿಗ್ಗೆ ನಿಧನರಾದರು.ಅವರಿಗೆ 94 ವರ್ಷ ಪ್ರಾಯವಾಗಿತ್ತು.ಮೃತರು ಪುತ್ರ ಸತ್ಯನಾರಾಯಣ, ಜಗದೀಶ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸೋಮಪ್ಪ‌ ಗೌಡ ನಿಧನ Read More »

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ವಿಶೇಷ ಮುತುವರ್ಜಿಯಡಿ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್‌ ಸರ್ಕಾರದಿಂದ ಸ್ಮಾರ್ಟ್‌ ಬೋರ್ಡ್‌ಗಳ ಕೊಡುಗೆ

ಮಂಗಳೂರು: ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್‌ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ ‘ಮಾಶಾವ್’ (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಜಿಲ್ಲೆಯ ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಂಸದರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಅದರಂತೆ ಅನಂತಾಡಿಯ ದ.ಕ.ಜಿ.ಪಂ. ಶಾಲೆಯಲ್ಲಿ ಇಂದು ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಇಸ್ರೇಲ್

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ವಿಶೇಷ ಮುತುವರ್ಜಿಯಡಿ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್‌ ಸರ್ಕಾರದಿಂದ ಸ್ಮಾರ್ಟ್‌ ಬೋರ್ಡ್‌ಗಳ ಕೊಡುಗೆ Read More »

ಜ.18ರಿಂದ ಫೆ.2ರ ತನಕ 14 ಮಂಡಲಗಳಲ್ಲಿ ಬೃಹತ್ ಹಿಂದೂ ಸಂಗಮ ಮತ್ತು‌ ಶೋಭಾಯಾತ್ರೆ

ಸುಳ್ಯ: ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷಗಳ ಯಾತ್ರೆಯಲ್ಲಿ ಮುನ್ನಡೆಯುತ್ತಿರುವುದರಿಂದನಮ್ಮಲ್ಲಿ ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಏಕತೆ, ಧಾರ್ಮಿಕ ಮತ್ತು ರಾಷ್ಟ್ರೀಯ ಭಾವನೆಯನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಸುಳ್ಯ ತಾಲೂಕಿನ 14 ಮಂಡಲಗಳಲ್ಲಿ ಜ.18ರಿಂದ ಫೆ.2ರ ತನಕ ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ ನಡೆಯಲಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ತಾಲೂಕು ಅಧ್ಯಕ್ಷ ಎಂ.ಬಿ.ಸದಾಶಿವ ಹಾಗೂ ಕಾರ್ಯದರ್ಶಿ ಸುದರ್ಶನ್ ಸೂರ್ತಿಲ ಹೇಳಿದರು.ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹಿಂದೂ ಸಂಗಮ ಆಯೋಜನಾ

ಜ.18ರಿಂದ ಫೆ.2ರ ತನಕ 14 ಮಂಡಲಗಳಲ್ಲಿ ಬೃಹತ್ ಹಿಂದೂ ಸಂಗಮ ಮತ್ತು‌ ಶೋಭಾಯಾತ್ರೆ Read More »

ಆಂಬ್ಯುಲೆನ್ಸ್ ನಲ್ಲಿ‌ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ ಮಹಿಳೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮಹಿಳೆ ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಇಂದು (ಜ. 15) ಮುಂಜಾನೆ ಪಂಜದಿಂದ ವರದಿಯಾಗಿದೆ.ಕುತ್ಕುಂಜ ಗ್ರಾಮದ ಯೋಗೇಶ್ ಎಂಬವರ ಪತ್ನಿ ಯಶಕಲ ಅವರಿಗೆ ಇಂದು ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಪಂಜದ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್‌ನ ಜೀವರಕ್ಷಕ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.​ಆದರೆ, ಮುಂಜಾನೆ ಸುಮಾರು 5.10 ರ ವೇಳೆಗೆ ಆಂಬ್ಯುಲೆನ್ಸ್ ಪಂಜ ಪೇಟೆ ಸಮೀಪ ತಲುಪುತ್ತಿದ್ದಂತೆಯೇ

ಆಂಬ್ಯುಲೆನ್ಸ್ ನಲ್ಲಿ‌ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ ಮಹಿಳೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಸಂಕ್ರಾಂತಿ ಅಂಗವಾಗಿ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ‌ ಯಶಸ್ವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಜ. ೦೭ ರಿಂದ ಜ. ೧೩ರವರೆಗೆ ಮಕರ ಸಂಕ್ರಾಂತಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ಡಾ|| ಡಿ ವೀರೆಂದ್ರ ಹೆಗ್ಗಡೆಯವರ ಆಶಯದಂತೆ ನಮ್ಮ ಊರು ನಮ್ಮ ಶ್ರದ್ದಾ ಕೇಂದ್ರ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಅನೇಕ ದೇವಸ್ಥಾನ, ದೈವಸ್ಥಾನ,ಸರಕಾರಿ ಶಾಲಾ ಆವರಣ,ಭಜನಾ ಮಂದಿರಗಳ ಆವರಣ ಹಾಗೂ ಇತರೆ ಸ್ಥಳಗಳಲ್ಲಿ ಒಟ್ಟು ೭೬ ಸ್ವಚ್ಛತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಯಿತು.ತಾಲೂಕಿನಾದ್ಯಂತ ಒಟ್ಟು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಸಂಕ್ರಾಂತಿ ಅಂಗವಾಗಿ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ‌ ಯಶಸ್ವಿ Read More »

ತೊಡಿಕಾನ : ದೇವಳಕ್ಕೆ ಸರಮಾಲೆ ದೀಪ ಕೊಡುಗೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ತೊಡಿಕಾನ ಗ್ರಾಮದ ಬಾಲೆಂಬಿ ಹಾಸ್ಪಾರೆ ಮನೆತನದ ಬೋಜಪ್ಪ ಗೌಡ ಮಾಲತಿ ದಂಪತಿ ಪುತ್ರಿ ಚರಿಷ್ಮಾ ಅವರು ರೂ.60 ಸಾವಿರ ಮೂಲ್ಯದ ಸರಮಾಲೆ ದೀಪಗಳನ್ನು ಕೊಡುಗೆಯಾಗಿ ನೀಡಿದ್ದಾರೆ.ಒಟ್ಟು 16 ಸೆಟ್ ಸರಮಾಲೆ ದೀಪಗಳನ್ನು ಕೊಡುಗೆಯಾಗಿ ನೀಡಿದ್ದಾರೆ‌.ಚರಿಷ್ಮಾ ಖಾಸಗಿ ಕಂಪೆನಿ ಉದ್ಯೋಗಿಯಾಗಿದ್ದಾರೆ.

ತೊಡಿಕಾನ : ದೇವಳಕ್ಕೆ ಸರಮಾಲೆ ದೀಪ ಕೊಡುಗೆ Read More »

ಅರಂತೋಡು :ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶಸೇವೆ,ಕುಣಿತ ಭಜನೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿಯಲ್ಲಿ ಜ 14ರಂದು ಮಕರ ಸಂಕ್ರಮಣದಂದು ಕಲಶ ಸೇವೆ ನಡೆಯಿತು.ನಂತರ ಪ್ರಸಾದ ವಿತರಣೆ ನಡೆಯಿತು. ಉಳ್ಳಾಕುಲು ಮಕ್ಕಳ ಕುಣಿತ ಭಜನೆ ತಂಡ, ಅಮೈಮಡಿಯಾರು ಉಬರಡ್ಕ ಮಿತ್ತೂರು ಮತ್ತು ಶ್ರೀ ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈಮಡಿಯಾರು ಉಬರಡ್ಕ ಮಿತ್ತೂರು ಇವರಿಂದ ಕುಣಿತ ಭಜನೆ ಕ್ಷೇತ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.

ಅರಂತೋಡು :ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶಸೇವೆ,ಕುಣಿತ ಭಜನೆ Read More »

ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಾರ್ಯಕ್ರಮ

ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ಜ.14ರಂದು ಆಚರಿಸಲಾಯಿತುಮ ಈ ಸಂದರ್ಭದಲ್ಲಿ ಮಕ್ಕಳು ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ವೈಭವವನ್ನು ಹೆಚ್ಚಿಸಿದರು. ಸಂಕ್ರಾಂತಿಯ ಮಹತ್ವವನ್ನು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಮೇಡಂ ಮಕ್ಕಳಿಗೆ ಸರಳವಾಗಿ ವಿವರಿಸಿದರು.ಕಾರ್ಯಕ್ರಮದ ಅಂಗವಾಗಿ ಎಳ್ಳು-ಬೆಲ್ಲ ಹಂಚಿ ಎಳ್ಳು ಬೆಲ್ಲ ತಿಂದು ಒಳ್ಳೆಯದನ್ನೇ ಮಾತನಾಡಿ ಎಂದು ಹಾರೈಸಿದರು. ಕಾರ್ಯಕ್ರಮದ ಕೊನೆಗೆ ಸಂಕ್ರಾಂತಿ ಹಾಡಿಗೆ– ಮಕ್ಕಳು ಉತ್ಸಾಹದಿಂದ ಕುಣಿದು ಸಂತೋಷಪಟ್ಟರು. ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರದಿಂದ ಕಾರ್ಯಕ್ರಮ

ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಾರ್ಯಕ್ರಮ Read More »

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

ಶಬರಿಮಲೆಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಮಕರ ಜ್ಯೋತಿಯ ಅದ್ಭುತ ದರ್ಶನವಾಯಿತು. ಸಂಜೆ ಸುಮಾರು 6.30ರಿಂದ 6.45ರ ಸುಮಾರಿಗೆ ಪೊನ್ನಂಬಲಮೇಡುವಿನಲ್ಲಿ ಗೋಚರಿಸಿದ ಜ್ಯೋತಿಯನ್ನು ಕಂಡು ಲಕ್ಷಾಂತರ ಅಯ್ಯಪ್ಪ ಭಕ್ತರು ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಘೋಷಣೆಯೊಂದಿಗೆ ಭಕ್ತಿ ಪರವಶರಾದರು. ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಗಿರಿಯಲ್ಲಿ ದೈವಿಕ ಕಳೆ ತುಂಬಿದ್ದು, ಭಕ್ತಗಣವು ಈ ಪವಿತ್ರ ಕ್ಷಣವನ್ನು ಕಣ್ಣುಂಬಿಕೊಂಡು ಪುನೀತರಾದರು.

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದ ಅಯ್ಯಪ್ಪ ಭಕ್ತರು Read More »

error: Content is protected !!
Scroll to Top