ಪ್ರಚಲಿತ

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಶ್ರೀವಿಷ್ಣು ಮೂರ್ತಿ ದೈವಸ್ಥಾನ ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ವಿಷ್ಣುಪುರ, ಕರಿಮಜಲು ಪುನ್ಚತ್ತಾರು ಶ್ರೀ ಮಹಾ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಇದೇ ಬರುವ ತಾರೀಕು 01-03-2026ನೇ ಆದಿತ್ಯವಾರ ಗಂಟೆ 10 ಕ್ಕೆ ನಡೆಯಲಿದೆ ಆದುದರಿಂದ ಭಕ್ತಾಬಿಮಾನಿಗಳಾದ ತಾವೆಲ್ಲರೂ ಬಂದು ಶ್ರೀ ದೇವರ ಪ್ರಸಾದ ಸ್ವೀಕರಿಸ,ಬೇಕೆಂದು ದೈವಸ್ಥಾನದ ಆಡತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ Read More »

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ

*ಬಳ್ಪ ಗ್ರಾಮದ ಬುಡೆಂಗಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ* ಆಡಳಿತ ಮಂಡಳಿ ಫೆ. 27 ರಂದು ರಚನೆಗೊಂಡಿದ್ದು, ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ ಬುಡೆಂಗಿ ಮತ್ತು ನವೀನ್ ಪುಲ್ಲಡ್ಕ ಕಾರ್ಯದರ್ಶಿಯಾಗಿ ಮೋಹನ ಗುತ್ತಿಗಾರು ಹಾಗೂ ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಆಯ್ಕೆಯಾದರು. ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ಕುಮಾರ ಬೆಳ್ಚಪ್ಪಾಡ ಕಡಬ, ಸುಂದರ ಬೆಳ್ಚಪಾಡ ಬುಡೆಂಗಿ ಮತ್ತು ಮೋಹನ ಬೆಳ್ಚಪಾಡ ಬುಡೆಂಗಿ ಆಯ್ಕೆಯಾದರೆ, ಆಡಳಿತ ಮಂಡಳಿ ಸದಸ್ಯರಾಗಿ ಚೆನ್ನಕೇಶವ ಭಟ್,

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ Read More »

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ

ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಬಂದಿದ್ದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಧಾರ್ ಜಿಲ್ಲೆಯ ಪಿತಾಂಪುರ್ ಸೆಕ್ಟರ್–1 ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕಿಗೆ ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಶಾಲೆಯ ಶೌಚಾಲಯಕ್ಕೆ ಹೋದಾಗ ಅಲ್ಲಿ ಆಕೆಗೆ ಹೆರಿಗೆಯಾಗಿದೆ.ಮಾಹಿತಿ ದೊರೆತ ತಕ್ಷಣ ಶಾಲಾ ಅಧಿಕಾರಿಗಳು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ತಿಳಿಸಿದರು. ಆಂಬ್ಯುಲೆನ್ಸ್‌ ಕರೆಸಿ ತಾಯಿ

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ Read More »

ಫೆಬ್ರವರಿ 28 ರಿಂದ ಮಾರ್ಚ್ 17 ತನಕ ದ್ವಿತೀಯ ಪಿಯುಸಿ ಪರೀಕ್ಷೆ

ಪರೀಕ್ಷಾ ತಯಾರಿಯ ಕೊನೆಯ ಹಂತದಲ್ಲಿರುವ ವಿದ್ಯಾರ್ಥಿಗಳು ಗಮನಿಸಬೇಕಾದ  ಅಂಶಗಳು✓.ಈಗಾಗಲೇ ಪರೀಕ್ಷೆಗೆ ಅಗತ್ಯವಾದ ಪೂರ್ವ ತಯಾರಿಯನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು.✓ಈ ಹಂತದಲ್ಲಿ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸುವುದನ್ನು ಬಿಟ್ಟು, ಈಗಾಗಲೇ ಓದಿದ ಪಾಠಗಳ ಪುನರಾವರ್ತನೆಗೆ ಹೆಚ್ಚು ಗಮನ ನೀಡಬೇಕು.✓ಸಂಕ್ಷಿಪ್ತ ನೋಟ್ಸ್‌ಗಳನ್ನು ಗಮನಿಸಿ, ಕಲಿತ ವಿಷಯಗಳನ್ನು ಮನನ ಮಾಡಿಕೊಳ್ಳುವುದು ಉತ್ತಮ. ✓ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಳಕೆಯನ್ನು ಸಾಧ್ಯವಾದಷ್ಟು ದೂರವಿಟ್ಟು, ಆರೋಗ್ಯಕರ ಆಹಾರ ಸೇವಿಸಿ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು.✓ಪ್ರತಿದಿನ ಕನಿಷ್ಠ 6 ರಿಂದ 7 ಗಂಟೆಗಳ

ಫೆಬ್ರವರಿ 28 ರಿಂದ ಮಾರ್ಚ್ 17 ತನಕ ದ್ವಿತೀಯ ಪಿಯುಸಿ ಪರೀಕ್ಷೆ Read More »

ಅಫ್ಘಾನಿಸ್ತಾನ ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿ

, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿಯನ್ನು ಆರಂಭಿಸಿರುವುದಾಗಿ ತಿಳಿಸಿದೆ.ಇದರಿಂದ ಅಫ್ಘಾನಿಸ್ತಾನ ಹಾಗೂ ಪಾಕಿಸ್ರಾನ ನಡುವಿನ ಗಡಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿದೆ.ಕಳೆದ ವಾರ ಪಾಕಿಸ್ತಾನ ನಡೆಸಿದ ವಾಯು ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆದಿರುವುದಾಗಿ ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.ತಾಲಿಬಾನ್ ಸರ್ಕಾರದ ವಕ್ತಾರ ಜೂಬಿಹುಲಾಲ್ ಮುಜಾಹಿದ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಪಾಕಿಸ್ತಾನ ಸೇನೆಯ ಪ್ರಚೋದನೆಗಳು ಹಾಗೂ ಗಡಿ ಉಲ್ಲಂಘನೆಗಳಿಗೆ ಪ್ರತಿಯಾಗಿ ದೊಡ್ಡ ಮಟ್ಟದ ಸೈನಿಕ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಗಡಿಯಾದ್ಯಂತ

ಅಫ್ಘಾನಿಸ್ತಾನ ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿ Read More »

ಅಡ್ತಲೆ : ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನಾಟಕ ಹಾಲು ಒಕ್ಕೂಟದ ಸಹಯೋಗದಲ್ಲಿ ಅಡ್ತಲೆಯಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಕುರಿತು ಮಾಹಿತಿ ಕಾರ್ಯಾಗಾರವು ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಮನಮೋಹನ ಮೇಲಡ್ತಲೆ ಇವರ ಮನೆಯಲ್ಲಿ ನಡೆಯಿತು.ಅರಂತೋಡು ಹಾಲು ಉತ್ಪಾದಕರ ಸಂಘದ ನೇತೃತ್ವದಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರವನ್ನು ಅಡ್ತಲೆಯಲ್ಲಿ ಮಾರ್ಚ್ 1 ರಿಂದ ಆರಂಭಿಸಲಾಗುವುದೆಂದು ಅಧ್ಯಕ್ಷರು ತಿಳಿಸಿದರು.ಕರ್ನಾಟಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ.ಸತೀಶ್

ಅಡ್ತಲೆ : ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಾಗಾರ Read More »

ಫೆ.28ರ ತನಕ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ

ಕೇರಳದ ಗಡಿಯಲ್ಲಿ ತಲುಪಿರುವ ಸೈಕ್ಲೋನಿಕ್ ಸುಳಿಯು ನಗರದೆ ಮಂದಿಗೂ ಎಚ್ಚರಿಕೆಯ ಗಂಟೆಯಾಗಿದೆ. ಫೆಬ್ರವರಿ 28ರವರೆಗೆ ಕರಾವಳಿಯ ಆಕಾಶದಲ್ಲಿ ಮೋಡಗಳು ಕಣ್ಣಮುಚ್ಚಾಲೆ ಆಡಲಿವೆ. ಮಂಗಳೂರು, ಉಳ್ಳಾಲ, ಬಂಟ್ವಾಳ ಸೇರಿದಂತೆ ದ.ಕ ಜಿಲ್ಲೆಯ ಸುತ್ತಮುತ್ತಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ಅಂಚಿನಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಲೋಮೀಟರ್ ಮುಟ್ಟಬಹುದು. ಸಮುದ್ರ ರಾಜ ಅಂದುಕೊಂಡಷ್ಟು ಶಾಂತವಾಗಿಲ್ಲ. ಮಂಗಳೂರಿನ ಸುತ್ತಮುತ್ತ ಮಿಂಚಿನ ಅಬ್ಬರ ಜೋರಾಗಿರಲಿದೆ. ಮಳೆಗಿಂತಲೂ ಅಪಾಯಕಾರಿಯಾಗಿ ಸಿಡಿಲಿನ ಹೊಡೆತ ಜೋರಾಗುವ ಸಾಧ್ಯತೆಯಿದೆ. ಸಮುದ್ರದಂಚಿನಲ್ಲಿ ಗಾಳಿಯ

ಫೆ.28ರ ತನಕ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ Read More »

ಭಾರತಕ್ಕೆ ಜಿಂಬಾಬೈ ವಿರುದ್ಧ ಭಾರೀ ಅಂತರದ ಗೆಲುವು

ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಟಾಸ್‌ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಜಿಂಬಾಬೈ ವಿರುದ್ಧ ಭಾರತ ತಂಡ ಬ್ಯಾಟಿಂಗ್‌ನಲ್ಲಿ 257 ರನ್‌ಗಳ ಬೃಹತ್ ಮೊತ್ತ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಜಿಂಬಾಬೈ ತಂಡ 20 ಓವರ್‌ಗೆ 184 ರನ್ ಗಳಿಸಿ ಸೋಲು ಕಂಡಿದೆ. ಭಾರತದ ಪರ ಅಭಿಷೇಕ್ ಶರ್ಮಾ (55), ಹಾರ್ದಿಕ್ ಪಾಂಡ್ಯ (50), ತಿಲಕ್ ವರ್ಮಾ (44) ಮತ್ತು ಇಶಾನ್ ಕಿಶನ್ (38) ರನ್‌ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಭಾರತಕ್ಕೆ ಜಿಂಬಾಬೈ ವಿರುದ್ಧ ಭಾರೀ ಅಂತರದ ಗೆಲುವು Read More »

ಸುಳ್ಯ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ಸುಳ್ಯ ಯೋಜನ ಕಚೇರಿ ಸಭಾಂಗಣದಲ್ಲಿತಾಲೂಕು ಅಧ್ಯಕ್ಷರಾದ ಶ್ರೀ ಲೋಕನಾಥ್ ಅಮೆಚೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ಸುಳ್ಯ ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ವಾರ್ಷಿಕ

ಸುಳ್ಯ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ Read More »

ಸಂಪಾಜೆ : ಗಾಳಿ ಮಳೆಗೆ ಮನೆ ಧ್ವಂಸ,ಸ್ಥಳಕ್ಕೆ ಭೇಟಿ ನೀಡದ ಮೇಲಾಧಿಕಾರಿಗಳು

ಫೆ.25ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಪೆಲ್ತಡ್ಕ ವಿಧವೆ ಮಹಿಳೆ ಚಂದ್ರಾವತಿ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ್ ಹೊರತು ಪಡಿಸಿ, ಮೇಲಾಧಿಕಾರಿಗಳು ಭೇಟಿ ಕೊಡದಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಮನೆ ಸಂಪೂರ್ಣ ಹಾನಿಯಾಗಿದ್ದು ಅವರಿಗೆ ಬದಲಿ ವ್ಯವಸ್ಥೆ ಅಗಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅವರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಕೈ ಜೋಡಿಸಬೇಕು. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ತಕ್ಷಣ ಭೇಟಿ ನೀಡಿ ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ

ಸಂಪಾಜೆ : ಗಾಳಿ ಮಳೆಗೆ ಮನೆ ಧ್ವಂಸ,ಸ್ಥಳಕ್ಕೆ ಭೇಟಿ ನೀಡದ ಮೇಲಾಧಿಕಾರಿಗಳು Read More »

error: Content is protected !!
Scroll to Top