ಪ್ರಚಲಿತ

ಅರಂತೋಡು : ಘನತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕೆ ಧನ ಸಹಾಯ

ಗ್ರಾಮ ಪಂಚಾಯತ್ ಅರoತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕಾಗಿ ಅನ್ವಾರುಲ್ ಉದಾ ಯಂಗ್ ಮ್ಯಾನ್ಸ್ ಎಸ್ಸೋಸಿಯೇಷನ್ ವತಿಯಿಂದ ರೂಪಾಯಿ 5000 ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಮಾಜಿ ಉಪಾಧ್ಯಕ್ಷರಾದ ಹರಿಣಿ ದೇವರಾಜೆ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಅನ್ವರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್ ಅಧ್ಯಕ್ಷರಾದ ಅಬ್ದುಲ್ ಮಜೀದ್ ಪ್ರಧಾನ ಕಾರ್ಯದರ್ಶಿ ಪಸಿಲು ಎ ಉಪಸ್ಥಿತರಿದ್ದರು.

ಅರಂತೋಡು : ಘನತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕೆ ಧನ ಸಹಾಯ Read More »

ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಳೆದ ಡಿ.16ರಿಂದ ಆರಂಭಗೊಂಡ ಧನು ಧನುಪೂಜೆ ನಾಳೆ ಮಕರ ಸಂಕ್ರಣದಂದು (ಜ.14)ರಂದು ಸಂಪನ್ನಗೊಳ್ಳಿದ್ದು ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.ಪ್ರತಿವರ್ಷ ಧನುಪೂಜೆಯ ಕೊನೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ‌.ಧನುಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಭಜನಾ ಸತ್ಸಂಗ ನಡೆಯುತ್ತಿದೆ.ಜ.13ರಂದು ಮುಂಜಾನೆ ನಡೆದ ಧನುಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಮಕರ ಸಂಕ್ರಮಣ ಪ್ರಯುಕ್ತ ನಾಳೆಆಯಿರಕೊಡ ಅಭಿಷೇಕ

ತೊಡಿಕಾನ : ನಾಳೆ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಸಂಪನ್ನ Read More »

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಬಳಲುತ್ತಿರೋ 3 ಹೆಣ್ಣು ಮಕ್ಕಳ ತಂದೆಗೆ ಬೇಕಿದೆ ಸಹಾಯ ಹಸ್ತ

ಸುಳ್ಯ ತಾ.ನಿಡ್ಯಮಲೆಯ ಯತೀಶ ಎನ್.ಎಂ.ರವರಿಗೆ (45 ವರ್ಷ) ಇತ್ತೀಚೆಗೆ ಅಚಾನಕ್ ಮೆದುಳಿನಲ್ಲಿ ರಕ್ತದ ಗಟ್ಟಿಕೆ (Brain Blood Clot) ಉಂಟಾಗಿ, ಪ್ರಜ್ಞಾಹೀನತೆ ಬಂದಿದೆ. ಇದರ ಪರಿಣಾಮವಾಗಿ ಅವರ ದೇಹದ ಬಲ ಭಾಗ ಸಂಪೂರ್ಣವಾಗಿ ಚಲಿಸಲಾರದ ಸ್ಥಿತಿ ಉಂಟಾಗಿದೆ. ಪ್ರಸ್ತುತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಕ್ಷಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.ಇವರು ಹಿಂದೆ ರಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಆದರೆ ಇದೀಗ ಆರೋಗ್ಯ ಸಮಸ್ಯೆಯಿಂದಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗದೆ, ಮನೆ

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಬಳಲುತ್ತಿರೋ 3 ಹೆಣ್ಣು ಮಕ್ಕಳ ತಂದೆಗೆ ಬೇಕಿದೆ ಸಹಾಯ ಹಸ್ತ Read More »

ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

ಮಾನಹಾನಿ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಖಾಸಗಿ ದೂರು ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಯತ್ನಾಳ್‌ ಗೈರು ಹಾಜರಾಗಿದ್ದರಿಂದ ಈ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಜ.20ಕ್ಕೆ ಮುಂದೂಡಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ

ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್ Read More »

ಅರಂತೋಡು : ಜ.14ಕ್ಕೆ ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶ ಸೇವೆ ಮತ್ತು ಕುಣಿತ ಭಜನೆ

ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನ ಕೊಡಂಕೇರಿಯಲ್ಲಿ ದಿನಾಂಕ 14-01-2026 ರ ಮಕರ ಸಂಕ್ರಮಣದಂದು ಕಲಶ ಸೇವೆ ಇರುವುದು. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ *ಅನ್ನಸಂತಪ್ರಣೆ ರಾತ್ರಿ ಗಂಟೆ 7:30ಕ್ಕೆ* ನಡೆಯಲಿದೆ.ಈ‌ ದಿವಸ ಅಗೇಲು ಸೇವೆ ಇರುವುದಿಲ್ಲ.ಹಾಗೂ ಶ್ರೀ ಮಿತ್ತೂರು ಉಳ್ಳಾಕುಲು ಮಕ್ಕಳ ಕುಣಿತ ಭಜನೆ ತಂಡ, ಅಮೈಮಡಿಯಾರು ಉಬರಡ್ಕ ಮಿತ್ತೂರು ಮತ್ತುಶ್ರೀ ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈಮಡಿಯಾರು ಉಬರಡ್ಕ ಮಿತ್ತೂರು ಇವರಿಂದ ಕುಣಿತ ಭಜನೆ ಸಂಜೆ ಗಂಟೆ 6:15 ರಿಂದ 7:30 ರ

ಅರಂತೋಡು : ಜ.14ಕ್ಕೆ ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶ ಸೇವೆ ಮತ್ತು ಕುಣಿತ ಭಜನೆ Read More »

ಕುತ್ಕೂಂಜ : ಮ್ಯಾಟ್ ಕಬಡ್ಡಿ ಪಂದ್ಯಾಟದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ

ಶಿವಾಜಿ ಯುವಕ ಮಂಡಲ (ರಿ.) ಕೂತ್ಕುಂಜ, ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.)ಇವರ ಸಹಭಾಗಿತ್ವದಲ್ಲಿ ಪ್ರೋ ಮಾದರಿಯ ಸುಳ್ಯ ವಿಧಾನಸಭಾ ಕ್ಷೇತ್ರದ 8 ತಂಡಗಳ ಸೂರ್ಯ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಜ.10 ರಂದು ಕೂತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ನಡೆಯಿತು.ಸಂಜೆ ಸಭಾ ಮತ್ತು ಸನ್ಮಾನ ಸಮಾರಂಭ ನಡೆಯಿತು.ಶಾಸಕಿ ಕು.ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಮೂವತ್ತೈದು ವರ್ಷಗಳಿಂದ ಶಿವಾಜಿ ಯುವಕ ಮಂಡಲ ಅನೇಕ ಸಾಮಾಜಿಕ ಸೇವೆಗಳೊಂದಿಗೆ ಗುರುತಿಸಿ ಕೊಂಡಿದೆ.ಮುಂದೆ ಯುವಕ

ಕುತ್ಕೂಂಜ : ಮ್ಯಾಟ್ ಕಬಡ್ಡಿ ಪಂದ್ಯಾಟದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11ರಂದು ವರದಿಯಾಗಿದೆ.ಕರುಣಾಕರ ಕಟ್ಟತ್ತಾರು ( 32)ಎಂಬವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸುತ್ತಿರುವುದಾಗಿ ತಿಳಿದು ಬಂದಿದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಇಂದು ಪೇರಡ್ಕ ಗೂನಡ್ಕ ಮಖಾಂ ಉರೂಸ್ ಸಮಾಪ್ತಿ

ಸುಳ್ಯ ತಾಲೂಕಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಪೇರಡ್ಕ ಗೂನಡ್ಕ ದರ್ಗಾ ಶರೀಫಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಈ ವರ್ಷದ ಸಮಾರೋಪ ಸಮಾರಂಭ ಇಂದು ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ ಎಂ ಶಹೀದ್ ತೆಕ್ಕಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಳೆದೆರಡು ದಿನಗಳಲ್ಲಿ ಕೇರಳ ಕರ್ನಾಟಕದ ಸುಪ್ರಸಿದ್ಧ ವಾಗ್ಮಿಗಳ ಧಾರ್ಮಿಕ ಉಪನ್ಯಾಸ ನಡೆದಿದ್ದು, ಸಮಾರೋಪ ದಿನವಾದ ಇಂದು ಸಯ್ಯಿದ್ ದುಗಲಡ್ಕ ತಂಙಳ್ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ಅಹ್ಮದ್ ನ‌ಈಂ ಮ‌ಅಬರಿ ಫೈಝಿ ಧಾರ್ಮಿಕ ಉಪನ್ಯಾಸ ಮತ್ತು

ಇಂದು ಪೇರಡ್ಕ ಗೂನಡ್ಕ ಮಖಾಂ ಉರೂಸ್ ಸಮಾಪ್ತಿ Read More »

ವೈಭವದಿಂದ ನಡೆದ ಸುಳ್ಶ ಶ್ರೀ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಬ್ರಹ್ಮ ರಥೋತ್ಸವ ಜ.10ರಂದು ವೈಭವದಿಂದ ನಡೆಯಿತು.ದೇವಳದಲ್ಲಿ ಶ್ರೀ ದೇವರ ಉತ್ಸವ ಬಲಿ ಪಲ್ಲಕ್ಕಿ ಸೇವೆಯ ಬಳಿಕ ದೇವರನ್ನು ಬ್ರಹ್ಮ ರಥದಲ್ಲಿ ಕುಳ್ಳಿರಿಸಿದ ಬಳಿಕ ದೇವರಿಗೆ ದೇವಳದ ತಂತ್ರಿಯವರು ಪೂಜಾ ವಿಧಿ ವಿಧಾನ ನಡೆಸಿದರು.ಬಳಿಕ ರಥದಲ್ಲಿ ಆರೂಢರಾದ ಶ್ರೀ ಚೆನ್ಮಕೇಶವ ದೇವರ ಪಾದಕ್ಕೆ ಗೋವಿಂದ ಕೂಗುತ್ತಾ ಭಕ್ತರು ಬ್ರಹ್ಮರಥ ಎಳೆದರು.ಸಾವಿರಾರು ಭಕ್ತರು ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾಗಿದರು.

ವೈಭವದಿಂದ ನಡೆದ ಸುಳ್ಶ ಶ್ರೀ ಚೆನ್ನಕೇಶವ ದೇವರ ರಥೋತ್ಸವ Read More »

ಪುತ್ತೂರು : ಕೃಷಿ ಮೇಳದಲ್ಲಿ ರೇಷ್ಮೆ ಇಲಾಖೆಯ ಮಳಿಗೆ ಉದ್ಘಾಟನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೈಸೂರು ವಿಭಾಗದ ರಾಜ್ಯ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಇವರ ವತಿಯಿಂದ ನಡೆಯುತ್ತಿರುವ ಕೃಷಿ ಮೇಳದ ಕರ್ನಾಟಕ ರಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ರೇಷ್ಮೆ ಇಲಾಖೆಯ ಮಳಿಗೆಯನ್ನು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ ಇವರು ಉದ್ಘಾಟಿಸಿದರು.

ಪುತ್ತೂರು : ಕೃಷಿ ಮೇಳದಲ್ಲಿ ರೇಷ್ಮೆ ಇಲಾಖೆಯ ಮಳಿಗೆ ಉದ್ಘಾಟನೆ Read More »

error: Content is protected !!
Scroll to Top