ಪ್ರಚಲಿತ

ಮೊಗೇರ ಸಮಾಜ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ: ಬ್ರಿಜೇಶ್ ಚೌಟ

ಸುಳ್ಯ, ಮಾ.1: ನಮ್ಮ ತುಳುನಾಡು ವಿಭಿನ್ನ ಸಂಸ್ಕೃತಿ ,ಆಚರಣೆಯನ್ನು ಹೊಂದಿದೆ. ಮೊಗೇರ ಸಮಾಜ ಇಲ್ಲಿ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ‌ ಎಂದು ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ಕರ್ನಾಟಕ ರಾಜ್ಯ ಮೊಗೇರ ಸಂಘದ ವತಿಯಿಂದ ಸಂಘಟನೆಗೆ 50 ವರ್ಷ ತುಂಬಿದ ಹಿನ್ಬಲೆಯಲ್ಲಿ ಕೊಡಿಯಾಲಬೈಲ್ ಸಮುದಾಯ ಭವನದಲ್ಲಿ ನಡೆದ ಮೊಗೇರ ದುಡಿ ಆಯನ 2026 ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮೊಗೇರ ಸಮಾಜ ಸಾಮಾಜಿಕವಾವಿ ಆರ್ಥಿಕವಾಗಿ ಹಿಂದುಳಿದರೂ ಈಗ ಅವರು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ‌.ನಮ್ಮ […]

ಮೊಗೇರ ಸಮಾಜ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದೆ: ಬ್ರಿಜೇಶ್ ಚೌಟ Read More »

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ‌.ಮೂವರು ಪ್ರಶಸ್ತಿಗೆ ಆಯ್ಕೆಗೊಂಡಿಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋ‌ರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ೫೦ ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ೨೦೨೫ ನೇ ಸಾಲಿನ ಗೌರವ ಪ್ರಶಸ್ತಿಯ ಆಯ್ಕೆ ಪಟ್ಟಿ ಪ್ರಕಟ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ

ಜೇಸಿಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇಸಿ. ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು.ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಿದ್ದು,ಈ ಸಂದರ್ಭದಲ್ಲಿ ಘಟಕದಸಾಮಾನ್ಯ ಸಭೆಯನ್ನು ಜೆಸಿ ಲತಾಶ್ರೀ ಸುಪ್ರೀತ್ ಮೊಂಟಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ವೇದಿಕೆಯಲ್ಲಿ ನಿಕಟಪೂರ್ವಾಧ್ಯಕ್ಷರಾದ ಜೆ.ಎಫ್. ಎಮ್ ಸುರೇಶ್

ಜೇಸಿಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ Read More »

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಕಾಣಿಯೂರು ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನ 57ನೇ ವರ್ಷದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4ರಂದು ನಡೆಯಲಿದ್ದು, ಇದರ ಪೂರ್ವಬಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಮಾ.1ರಂದು ಬೆಳೆಗ್ಗೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊತ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಮಂಡಳಿ ಕಾರ್ಯದರ್ಶಿ ಮೋನಪ್ಪ ಬಂಡಾಜೆ,

ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ Read More »

ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನ

ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೆ ಗೌಡರು ಮಾ.1 ರ ಸಂಜೆ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರುಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಇತರರಯ ಉಪಸ್ಥಿತರಿದ್ದರು.ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಗೊಳ್ಳಲಿದ್ದಾರೆ. ಹಾಗೂ ನಾಳೆ ಆಶ್ಲೇಷ ಪೂಜೆಯಲ್ಲಿ ಭಾಗವಹಿಸಲಿರುವರು.

ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನ Read More »

ಕುಕ್ಕುಜಡ್ಕ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರಿಗೆ ಹುಟ್ಟೂರ ಅಭಿನಂದನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಧಾಕೃಷ್ಣ ಬೊಳ್ಳೂರುರವರಿಗೆ ಅಮರ ಪಡ್ನೂರು ಗ್ರಾಮದ ಅಭಿಮಾನಿಗಳಿಂದ ಹುಟ್ಟೂರ ಅಭಿನಂದನೆ ಕಾರ್ಯಕ್ರಮ ಇಂದು ಕುಕ್ಕುಜಡ್ಕ ಅಮರ ಸಭಾಭವನದಲ್ಲಿ ಇಂದು ನಡೆಯಿತು.ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದ ಅಧ್ಯಕ್ಷ ಶ್ರೀನಾಥ್ ನೆಲ್ಲಿಕುಂಜರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕುಕ್ಕುಜಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ ಉದ್ಘಾಟಿಸಿ ಮಾತನಾಡಿ ಅಮರ ಪಡ್ನೂರು ಮುಡ್ನೂರು ಗ್ರಾಮದ ಪ್ರತಿಯೊಬ್ಬರೂ ಸಹ ರಾಧಾಕೃಷ್ಣ ಬೊಳ್ಳೂರುರವರಿಂದ ಸಹಾಯ ಹಸ್ತ ಪಡೆದವರು. ಯಾವುದೇ ಪಕ್ಷ ಬೇಧವಿಲ್ಲದೆ

ಕುಕ್ಕುಜಡ್ಕ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರಿಗೆ ಹುಟ್ಟೂರ ಅಭಿನಂದನೆ Read More »

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರಕ್ಕೆ ಐದು ವಿಕೆಟ್ ಗಳ ಜಯ

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಭಾರತ ಗೆದ್ದಿದೆ.ವೆಸ್ಟ್ ಇಂಡೀಸ್ 196 ರನ್‌ಗಳ ಬೃಹತ್ ಗುರಿಯನ್ನು ನೀಡಿದ್ದು, ಆರಂಭಿಕ ಸಂಜು ಸ್ಯಾಟ್ಸನ್ ಮಿಂಚಿದ್ದಾರೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಜವಾಬ್ದಾರಿಯುತ ಆಟವಾಡಿದ ಸಂಜು ಸ್ಯಾಟ್ಸನ್ ವಿಶ್ವಕಪ್‌ನಲ್ಲಿ ಭರ್ಜರಿ ಆಟವಾಡಿದ್ದಾರೆ.

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರಕ್ಕೆ ಐದು ವಿಕೆಟ್ ಗಳ ಜಯ Read More »

ಮಡಪ್ಪಾಡಿ : ಮಾ.8ಕ್ಕೆ ಅರೆಬಾಸೆ ಗ್ರಾಮೋತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಜರುಗಲಿದೆ. ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ‘ಅರೆಬಾಸೆ ಒಳ್ಸೊಮ… ಅರೆಬಾಸೆ ಬೆಳ್ಸೊಮ..’ ಎಂಬ ಆಶಯದೊಂದಿಗೆ ಪೂರ್ವಾಹ್ನ ಗಂಟೆ 9.30ರಿಂದ ಜರುಗಲಿರುವ ಕಾರ್ಯಕ್ರಮವನ್ನು ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ. ಜಯರಾಮ ಉದ್ಘಾಟಿಸಲಿದ್ದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ

ಮಡಪ್ಪಾಡಿ : ಮಾ.8ಕ್ಕೆ ಅರೆಬಾಸೆ ಗ್ರಾಮೋತ್ಸವ Read More »

ಕರ್ನಾಟಕದ ಮುಂದಿನ‌ ಸಿಎಂ ಖರ್ಗೆ ?

ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಾಳಗಕ್ಕೆ ಹೊಸ ತಿರುವು ಸಿಕ್ಕಿದ್ದು, ದಲಿತ ಸಿಎಂ ಕೂಗು ಜೋರಾಗಿದೆ. ಡಿಕೆ ಶಿವಕುಮಾರ್ ಬಣದ ಹೈಕಮಾಂಡ್ ಮೇಲಿನ ಒತ್ತಡಕ್ಕೆ ಪ್ರತಿಯಾಗಿ, ಸಿದ್ದರಾಮಯ್ಯ ಬಣ ಈಗ ‘ದಲಿತ ಸಿಎಂ’ ಅಸ್ತ್ರ ಪ್ರಯೋಗಿಸಿದೆ. ಹಿರಿಯ ನಾಯಕರಾದ ಜಿ. ಪರಮೇಶ್ವರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಅಥವಾ ಅರ್ಹ ದಲಿತ ನಾಯಕರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇತಿಹಾಸದ ಉದಾಹರಣೆಗಳನ್ನು ನೀಡಿ

ಕರ್ನಾಟಕದ ಮುಂದಿನ‌ ಸಿಎಂ ಖರ್ಗೆ ? Read More »

ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ಇಂದು(ಫೆ.1) ಭೇಟಿ ನೀಡಲಿದ್ದಾರೆ. ಸಂಜೆ 5.20ಕ್ಕೆ ಹೆಲಿಕಾಫ್ಟರ್‌ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಇಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು.

ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಭೇಟಿ Read More »

error: Content is protected !!
Scroll to Top