ಪ್ರಚಲಿತ

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಸಾಪ ಸಾಹಿತ್ಯ ಸಂಭ್ರಮದ 5ನೇ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ- 2025 ಇದರ 5ನೇ ಕಾರ್ಯಕ್ರಮದ ಅಂಗವಾಗಿ ಸುಳ್ಯ ಪ್ರೆಸ್ ಕ್ಲಬ್ ನ ಸಹಯೋಗದೊಂದಿಗೆ ವಿಶೇಷ ಉಪನ್ಯಾಸ ಮತ್ತು ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಪ್ರೆಸ್ ಕ್ಲಬ್ ವಠಾರದಲ್ಲಿ ನ.5 ರಂದು ಸಂಜೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡ (ಕಿರಣ) ನೆರವೇರಿಸಿದರು. ಕನ್ನಡ […]

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಸಾಪ ಸಾಹಿತ್ಯ ಸಂಭ್ರಮದ 5ನೇ ಕಾರ್ಯಕ್ರಮ Read More »

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವ ರಥೋತ್ಸವ ಪೂರ್ವಭಾವಿ ಸಭೆ ಬುಧವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ದರ್ಶನ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಮಾತನಾಡಿ, ಬ್ರಹ್ಮರಥೋತ್ಸವ ಎಳೆಯುವ ವೇಳೆ ಯಾವುದೇ ಗೊಂದಲ ಉಂಟಾಗದಂತೆ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ರಥ ಎಳೆಯಲು ಪಾಸ್ ವಿತರಿಸಲು ಮಾನದಂಡ ಮಾಡಿಕೊಂಡು ಅದರ ಪ್ರಕಾರವೇ ಪಾಸ್ ವಿತರಿಸಿ, ಎಷ್ಟು ಮಂದಿಗೆ ಪಾಸ್ ವಿತರಿಸುತ್ತೀರಿ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು, ಅದರಂತೆ

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ Read More »

ವೈಭದ ರಥಯಾತ್ರೆಯೊಂದಿಗೆ ಕುಕ್ಕೆ ಪುರಸ್ಪರ್ಶ ಮಾಡಿದ ಬೆಳ್ಳಿ ರಥ

ಸುಬ್ರಹ್ಮಣ್ಯ : ಸುಳ್ಯದ ಡಾ‌.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೇವಾ ರೂಪದಲ್ಲಿ ಸಮರ್ಪಣೆ ಮಾಡುವ ಬೆಳ್ಳಿರಥ ಯಾತ್ರೆ ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ತಲುಪಿತು.ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ದೇವಸ್ಥಾನದ ವತಿಯಿಂದ ಬೆಳ್ಳಿರಥ ಯಾತ್ರೆಗೆ ಪೂರ್ಣಕುಂಭ ಸ್ವಾಗತಿಸಲಾಯಿತು. ಅರ್ಚಕರು ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ವರೆಗೆ ಮೆರವಣಿಗೆಯಲ್ಲಿ ಸಾಗಲಾಯಿತು. ದೇವಸ್ತಾನದ ಆನೆ ಯಶಸ್ವಿ ಮೆರವಣಿಗೆಯಲ್ಲಿ ಸಾಥ್ ನೀಡಿತು. ರೇಣುಕಾಪ್ರಸಾದ್ ಕೆ.ವಿ, ಡಾ.ಜ್ಯೋತಿ ಆರ್.ಪ್ರಸಾದ್, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ, l ನಿತ್ಯಾನಂದ ಮುಂಡೋಡಿ, ಎನ್‌.ಎ.ರಾಮಚಂದ್ರ

ವೈಭದ ರಥಯಾತ್ರೆಯೊಂದಿಗೆ ಕುಕ್ಕೆ ಪುರಸ್ಪರ್ಶ ಮಾಡಿದ ಬೆಳ್ಳಿ ರಥ Read More »

ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಹಾಗೂ ಮಕ್ಕಳ ತಕ್ಷಣದ ರಕ್ಷಣಾ ಪರಿಹಾರ ನೀಡುವ ಸಲುವಾಗಿ NCC ‘C’ ಪ್ರಮಾಣ ಪತ್ರ ಹೊಂದಿರುವ ‘ಅಕ್ಕ ಪಡೆ’ ತಂಡದ ರಚನೆಗಾಗಿ, ಮಹಿಳಾ ಅಭ್ಯರ್ಥಿಗಳಿಂದ ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಅಕ್ಕ ಪಡೆ ರಚನೆಯು ಸಾಮಾನ್ಯವಾಗಿ ಮಹಿಳೆಯರ ಸುರಕ್ಷತೆಗಾಗಿ ಸ್ಥಳೀಯ ಮಟ್ಟದಲ್ಲಿ ರಚಿಸಲಾದ ವಿಶೇಷ ಮಹಿಳಾ ದಳಗಳಿಗೆ ಬಳಸುವ ಪದವಾಗಿದೆ. ಉದಾಹರಣೆಗೆ, ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ, ಮಹಿಳೆಯರ ಮೇಲೆ ನಡೆಯುವ ಹಿಂಸೆ

ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ Read More »

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ

ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣ ಗೌಡರ ದ್ವಿತೀಯ ಪುತ್ರ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿರಥ ಯಾತ್ರೆ ಸೆ.5ರಂದು ಸುಳ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದೆ.ಶಾಸಕಿ ಭಾಗೀರಥಿ ಮುರುಳ್ಯ ರಥಯಾತ್ರೆಗೆ ಚಾಲನೆ ನೀಡಿದರು.ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಡಾ.ರೇಣುಕಾಪ್ರಸಾದ್‌ ಕೆ.ವಿ, ಡಾ.ಜ್ಯೋತಿ ಆ‌ರ್.ಪ್ರಸಾದ್‌, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ,ಕೆವಿಜಿ ಸಂಸ್ಥೆಗಳ

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ Read More »

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂಪಾಜೆಯ ಪಿ.ಕೆ.ಅಬೂಸಾಲಿಯವರು ರಾಜೀನಾಮೆ ನೀಡಿದ್ದಾರೆ.ರಾಜೀನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರಿಗೆ ಸಲ್ಲಿಸಿದ್ದಾರೆ.ಅವರು, ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾದ್ಯಮದವರಿಗೆ ಅವರು ತಿಳಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ Read More »

ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ

ಅರಂತೋಡು ಜಮಾಅತ್ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ದಿಕ್ರ್ ಸ್ವಲಾತ್ ಸಮಿತಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅರಂತೊಡು ಶಾಖೆ ಇವುಗಳ ಜಂಟೀ ಆಶ್ರಯದಲ್ಲಿ ಪವಿತ್ರ ಉಮ್ರಾ ನಿರ್ವಹಿಸಲು ಪವಿತ್ರ ಮಕ್ಕಾಕ್ಕೆ ತೆರಳಲಿರುವ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ನ.3 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಮುಖ್ಯ ಅತಿಥಿಗಳಾದ

ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ Read More »

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ

ದುಬೈನಲ್ಲಿ ನಡೆದ ಮಿಸೆಸ್ ಮಂಗಳೂರು ದಿವಾ 2025 ಸ್ಪರ್ಧೆಯಲ್ಲಿ ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ ಮಿನು ಜೋಸ್ ಅವರು ಈ ಬಾರಿಯ ಕಿರೀಟ ತನ್ನದಾಗಿಸಿಕೊಂಡಿದ್ದಾರೆ‌.ಪ್ರಿಯಾ ಫ್ಯಾಶನ್ಸ್ ಸಂಸ್ಥೆ ಈ ಸ್ಪರ್ಧೆಯನ್ನು ಗೋಶನ್ ಈವೆಂಟ್ ಮೀಡಿಯಾ ಸಹಯೋಗದೊಂದಿಗೆ ಹಮ್ಮಿಕೊಂಡಿತ್ತು.ಆಕರ್ಷಕ ವೇಷಭೂಷಣ, ಆತ್ಮ ವಿಶ್ವಾಸಭರಿತ ಪ್ರದರ್ಶನ, ಸರಳ ವ್ಯಕ್ತಿತ್ವದಿಂದ ಮಿನು ಜೋಸ್ ಅವರು ದುಬೈ ತೀರ್ಪುಗಾರರ ಮೆಚ್ಚುಗೆ ಗಳಿಸಿದರು.ಈ ಸ್ಪರ್ಧೆಯಲ್ಲಿ ನಯನಾ ಶೆಟ್ಟಿ ಫಸ್ಟ್ ರನ್ನರ್ ಅಪ್ ಹಾಗೂ ಅಶ್ಮಿತಾ ಕೊಟ್ಯಾನ್ ಸೆಕೆಂಡ್ ರನ್ನರ್ ಅಪ್ ಆದರು. ಮಿಸ್ ವಿಭಾಗದಲ್ಲಿ

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ Read More »

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ

ಕನ್ನಡ ತುಂಬಾ ಸುಂದರವಾದ ಭಾಷೆ.ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ ಎಂದು ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ‌ ಶ್ರೇಯಾ ಸುಳ್ಯ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನ.2ರಂದು ನಡೆದ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ Read More »

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ

ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ಇಲ್ಲಿ ಕನ್ನಡ ಗಾನಯಾನ ಕಾವ್ಯ ಮಿಲನಕಾರ್ಯಕ್ರಮ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾದ . ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ಮಕ್ಕಳು ಘೋಷ ವಾಕ್ಯಗಳ ಮೂಲಕ, ಬ್ಯಾಂಡ್ ಸೆಟ್ ನೊಂದಿಗೆ ರಸ್ತೆಯ ಉದ್ದಗಲಕ್ಕೂ ಘೋಷವಾಕ್ಯವನ್ನು ನುಡಿಯುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ರಾಷ್ಟ್ರ

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ Read More »

error: Content is protected !!
Scroll to Top