ಅರಂತೋಡು: ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎನ್ಎಂಪಿಯುಸಿ ಅರಂತೋಡು ಕಾಲೇಜಿನ 17ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ.
ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 17 ನೇ ವಿಶೇಷ ವಾರ್ಷಿಕ ಶಿಬಿರ ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.”ನಶಾ ಮುಕ್ತ ಭಾರತ ಅಭಿಯಾನ” ಘೋಷ ವಾಕ್ಯದಡಿಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಶ್ರೀ ಚಂದ್ರಶೇಖರ್ ಹೊಸೂರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ, ಚೆಂಬು ಸರ್ಕಾರಿ ಪ್ರೌಢಶಾಲೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್, […]










