ಪ್ರಚಲಿತ

ನಾಳೆಯಿಂದ(ಫೆ.1) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ ಆರಂಭ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.24 ರಿಂದ ಫೆ.9 ರ ತನಕ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ. 1 ರಿಂದ ಫೆ. 5 ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ತಿಳಿಸಿದ್ದಾರೆ.ಫೆ.1 ರಂದು ಪೂರ್ವಾಹ್ನ 8.30 ರಿಂದ ವೇದ […]

ನಾಳೆಯಿಂದ(ಫೆ.1) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ ಆರಂಭ Read More »

ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರಲ್ಲಿ ಅನ್ವರ್ ಎಂಬ ಬಾಲಕನನ್ನು ಹೈದರಾಬಾದ್‌ಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಮೊಳಗಿ ಮಾರಾಯ ದೇಗುಲಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಎರಡನೇ ಸ್ಪೋಟವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ Read More »

ವೈಭವದಿಂದ ನಡೆದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.30 ರಂದು ವೈಭವದಿಂದ ನಡೆಯಿತು.ಬೆಳಿಗ್ಗೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು.ಬಳಿಕ ವಿಷ್ಣುಪ್ರಿಯಾ ಮಹಿಳಾ ಭಜನಾ ಮಂಡಳಿ ಬೆಳಂದೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ ರಂಗಪೂಜೆ,ಮಹೋತ್ಸವ ಶ್ರೀ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ ನಡೆಯಿತು.ನಂತರ ಗುಳಿಗ,ಪಂಜುರ್ಲಿ,ಶಿರಾಡಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.ಈ

ವೈಭವದಿಂದ ನಡೆದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ಕಾಲಾವಧಿ ಜಾತ್ರೋತ್ಸವ Read More »

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಸುಳ್ಯ ತಾಲೂಕು ಸಂಪಾಜೆ ವಲಯ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ, ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಸಂಪಾಜೆ ವಲಯ ಮತ್ತು ಊರವರ ಸಹಕಾರದೊಂದಿಗೆ ಪರಮಪೂಜ್ಯ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ Read More »

ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶಾಸಕಿ ಕುಮಾರಿ ಭಾಗೀರಥಿ ಮುರಳ್ಯ ಅವರು. ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ‌ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.ಈ ಮನವಿಗೆ ಹಿಂದಿನಂತೆಯೇ ಸ್ಪಂದಿಸಿದ ಸಚಿವರು, ಶೀಘ್ರವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.ಸಂದರ್ಭದಲ್ಲಿ ಸಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು.

ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ತೊಡಿಕಾನ : ಪಾಷಾಣಮೂರ್ತಿ ದೈವದ ಕೋಲ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಒಳಪಟ್ಟ ಶ್ರೀ ಪಾಷಾನಮೂರ್ತಿ ಅಮ್ಮನವರ ಕಾಲಾವಧಿ ಕೋಲ ಜ.27ರಂದು ದೈವಸ್ಥಾನದಲ್ಲಿ ನಡೆಯಿತು.ಮೊದಲಿಗೆ ಕಲ್ಕುಡ ದೈವದ ಕೋಲ ನಡೆದು ಪಾಷಾಣಮೂರ್ತಿ ದೈವದ ಕೋಲ ನಡೆಯಿತು. ಬಳಿಕ ಪ್ರಸಾದ ವಿತರಣೆ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.ಪೆ.3ರಂದು ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ ನಡೆಯಲಿದೆ.

ತೊಡಿಕಾನ : ಪಾಷಾಣಮೂರ್ತಿ ದೈವದ ಕೋಲ Read More »

ಸುಳ್ಯ : ವೈಭವದಿಂದ ನಡೆದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ದರ್ಶನ ಬಲಿ

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಜ. 28 ರಂದು ಶ್ರೀ ದೇವರ ದರ್ಶನ ಬಲಿ ಹಾಗೂ ಬಟ್ಟಲು ಕಾಣಿಕೆ ಪ್ರಸಾದ ಶ್ರದ್ಧಾ ಭಕ್ತಿಯಿಂದ ಜರುಗಿತು.ಬಳಿಕ ಶ್ರೀ ದೇವರಿಗೆ ಮಹಾಪೂಜೆ ನೆರವೇರಿತು.ಈ ಸಂದರ್ಭದಲ್ಲಿ ಊರ ಪರವೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು. ಬಳಿಕ ಆಗಮಿಸಿದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ಸಮಿತಿ ಪದಾಧಿಕಾರಿಗಳು ಮಾಜಿ ಅಧ್ಯಕ್ಷರು ಸದಸ್ಯರು, ಭಗವದ್ದ ಕ್ತರು

ಸುಳ್ಯ : ವೈಭವದಿಂದ ನಡೆದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ದರ್ಶನ ಬಲಿ Read More »

ಭಾರೀ ಗಾಳಿ: ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಜನವರಿ 27 ರಿಂದ 31 ರವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಗಾಳಿ ಬೀಸುವ ನಿರೀಕ್ಷೆಯಿದ್ದು, ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರಿಗೆ ಮೀನುಗಾರಿಕೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಹೆಚ್ಚಿನ ಜಾಗರೂಕತೆ ವಹಿಸುವುದು ಅಗತ್ಯವಾಗಿದೆ.

ಭಾರೀ ಗಾಳಿ: ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಸುಳ್ಯ : ವೈಭವದಿಂದ ನಡೆದ ಮಹಾವಿಷ್ಣು ದೇವರ ಭೂತ ಬಲಿ ಉತ್ಸವ ಮತ್ತು ಕಟ್ಟೆ ಪೂಜೆ

ಸುಳ್ಯ ಕಾಯರರ್ತೋಡಿ ಮಹಾವಿಷ್ಣು ದೇವರ ಕಾಲಾವಧಿ ಜಾತ್ರೋತ್ಸವ ಜ.26ರಿಂದ ಆರಂಭಗೊಂಡಿದೆ‌.ಜ 27ರಂದು ದೇವಳದಲ್ಲಿ ರಾತ್ರಿ ಭೂತಬಲಿ ಉತ್ಸವ ಮತ್ತು ಕಟ್ಟೆ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮತ್ತು ಸದಸ್ಯರು,ಮಾಜಿ ಅಧ್ಯಕ್ಷ ಪಿ.ಕೆ ಉಮೇಶ ಮತ್ತು ಸದಸ್ಯರು,ಭಕ್ತಾಧಿಗಳು ಉಪಸ್ಥಿತರಿದ್ದರು.ಬೆಳಿಗ್ಗೆ ಗಣಪತಿ ಹವಣ ಹವನ ನಡೆದು ಉಗ್ರಾಣ ತುಂಬಿಸಲಾಯಿತು.ಬೆಳಿಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು.ತಂತ್ರಿಗಳ ಆಗಮನ,ಶುದ್ಧಿ ಕಲಶ,ತಲಾಭಾರ ಸೇವೆ,ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು.

ಸುಳ್ಯ : ವೈಭವದಿಂದ ನಡೆದ ಮಹಾವಿಷ್ಣು ದೇವರ ಭೂತ ಬಲಿ ಉತ್ಸವ ಮತ್ತು ಕಟ್ಟೆ ಪೂಜೆ Read More »

ತೊಡಿಕಾನ ::ಶ್ರದ್ಧಾ ಭಕ್ತಿಯಿಂದ ನಡೆದ ಚಾಕಡೆಡಿ ನೇಮೋತ್ಸವ

ತೊಡಿಕಾನ ಮಲ್ಲಿಕಾರ್ಜುನ ದೇವರ ಪಟ್ಟದ ದೈವ -ಸೀಮೆ ದೈವ ರಾಜನ್ ದೈವ ( ಶಿರಾಡಿ ಭೂತ) ಪರಿವಾರ ದೈವಗಳ ಕೋಲಚಾಕಟೆಡಿ ನೇಮ ಜ.26ರಂದು ನಡೆಯಿತು.ಬೆಳಿಗ್ಗೆ : 5:00 ಗಂಟೆಗೆಮಲೆ ಉಳ್ಳಾಕುಲು ನೇಮ ನಡೆಯಿತು.ಬೆಳಿಗ್ಗೆ 10:00 ಗಂಟೆಯಿಂದ ರಾಜನ್ ದೈವ ( ಶಿರಾಡಿ ಭೂತ) ದ ಕೋಲ ನಡೆದುಬಳಿಕ ಬಟ್ಟಿಭೂತ, ಪುರುಷ ಭೂತ, ಕರಿ ಭೂತ, ಮಲೆ ಮುದ್ದ, ಶೆಟ್ಟಿ ಭೂತ ಮತ್ತು ಅಂಗಾರ ದೈವಗಳ ಕೋಲ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು,ಮಾಜಿ‌ ಅಧ್ಯಕ್ಷರು‌

ತೊಡಿಕಾನ ::ಶ್ರದ್ಧಾ ಭಕ್ತಿಯಿಂದ ನಡೆದ ಚಾಕಡೆಡಿ ನೇಮೋತ್ಸವ Read More »

error: Content is protected !!
Scroll to Top