ಪ್ರಚಲಿತ

ಕಂಟೈನರ್ ಲಾರಿ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ!

ಕಂಟೈನರ್ ಲಾರಿ ಮೂಲಕ ಹಾಸನದಿಂದ ಕೇರಳಕ್ಕೆ ಹಿಂಸಾತ್ಮಕ ವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಕಡಬದ ಕನ್ಪಾರೆ ಎಂಬಲ್ಲಿ ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 19 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.ಅಮಾನವೀಯ ರೀತಿಯಲ್ಲಿ ತುಂಬಿಸಲಾಗಿದ್ದ 19 ಜಾನುವಾರುಗಳು ಪತ್ತೆಯಾಗಿವೆ. ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ಹೊಸೂರು ಮೂಲದ ಅಕ್ರಮ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೊಬ್ಬ ಆರೋಪಿ ಓಡಿ ತಪ್ಪಿಸಿಕೊಂಡಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಡಬ […]

ಕಂಟೈನರ್ ಲಾರಿ ಮೂಲಕ ಅಕ್ರಮವಾಗಿ ಜಾನುವಾರು ಸಾಗಾಟ ಪತ್ತೆ! Read More »

ಏ.5ಕ್ಕೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ಬೃಹತ್ ಕರಸೇವೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿಯಾಗಿ ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ದೇವಸ್ಥಾನದ ಪವಿತ್ರ ತೀರ್ಥ ಮೂಲಗಳಾದ ವಾರಾಣಸಿ ತೀರ್ಥ ಮತ್ತು ಮತ್ಸತೀರ್ಥ ಹಾಗೂ ದೇವಸ್ಥಾನದ ಪರಿಸರದ ಸ್ವಚ್ಛತೆ ಮತ್ತು ಶುದ್ಧಿಕರಣದ ಸಲುವಾಗಿಏ.5ರಂದು ಬೃಹತ್ ಕರಸೇವೆ ನಡೆಯಲಿದೆ.ಈ ಕರಸೇವೆಯಲ್ಲಿ ಸೀಮೆಯ ಹೆಚ್ಚಿನ ಭಕ್ತಾಧಿಗಳು ಭಾಗವಹಿಸಿ ಕರಸೇವೆಯನ್ನು ಯಶಸ್ವಿಗೊಳಿಸಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.

ಏ.5ಕ್ಕೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ಬೃಹತ್ ಕರಸೇವೆ Read More »

ಸುಳ್ಯ ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ರಾಕೇಶ್‌ .ಕೆ ಆಯ್ಕೆ

ಸುಳ್ಯ ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ರಾಕೇಶ್‌ ಕೆ. ಆಯ್ಕೆಗೊಂಡಿದ್ದಾರೆ.ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.ಜೆಡಿಎಸ್‌ ಜಿಲ್ಲಾಧ್ಯಕ್ಷರಾಗಿರುವ ಜಾಕೆ ಮಾಧವ ಗೌಡರು ರಾಕೇಶ್ ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಚಿಸಿದ್ದರು.

ಸುಳ್ಯ ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ರಾಕೇಶ್‌ .ಕೆ ಆಯ್ಕೆ Read More »

ಬಕೇಟ್ ನಲ್ಲಿ ತುಂಬಿಸಿಟ್ಟ ನೀರಲ್ಲಿ ಮುಳುಗಿ ಮಗು ಸಾವು, ತಾಯಿ ಆತ್ಮಹತ್ಯೆ

ಬೆಂಗಳೂರಿನ ಚಂದ್ರಾ ಲೇಔಟ್‌ನಲ್ಲಿ 11 ತಿಂಗಳ ಮಗು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ, ಸಾಫ್ಟ್‌ವೇ‌ರ್ ಉದ್ಯೋಗಿ ತಾಯಿ ಪ್ರತಿಭಾ (29) ನೇಣಿಗೆ ಶರಣಾಗಿದ್ದಾರೆ. ಪತಿ ಕೆಲಸಕ್ಕೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗುವಿನ ಅಕಾಲಿಕ ಮರಣದಿಂದ ನೊಂದ ತಾಯಿ ಈ ತೀವ್ರ ನಿರ್ಧಾರ ಕೈಗೊಂಡಿದ್ದು, ಮನೆಯಲ್ಲಿ ಶೋಕದ ಛಾಯೆ ಆವರಿಸಿದೆ. ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಬಕೇಟ್ ನಲ್ಲಿ ತುಂಬಿಸಿಟ್ಟ ನೀರಲ್ಲಿ ಮುಳುಗಿ ಮಗು ಸಾವು, ತಾಯಿ ಆತ್ಮಹತ್ಯೆ Read More »

ಎಸ್.ಎಸ್.ಎಲ್‌.ಸಿ ಪರೀಕ್ಷೆ ಬರೆಯಲು‌ ಅವಕಾಶ ಕಳೆದುಕೊಂಡ 35,000 ವಿದ್ಯಾರ್ಥಿಗಳು!

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ಣಗೊಂಡಿದ್ದು, ಹಾಜರಾತಿ ನಿಯಮದಿಂದ ಸುಮಾರು 35,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಕಳೆದುಕೊಂಡಿದ್ದಾರೆ.ಪರೀಕ್ಷೆ ಬರೆಯಲು ಅಗತ್ಯವಾಗಿರುವ ಅಂಶಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯು ಒಂದು. ಕರ್ನಾಟಕದಲ್ಲಿ ಕಠಿಣ ಹಾಜರಾತಿ ನಿಯಮದ ಪರಿಣಾಮವಾಗಿ ಸುಮಾರು 35,000 ವಿದ್ಯಾರ್ಥಿಗಳು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಳೆದುಕೊಂಡಿದ್ದಾರೆ. ಪರೀಕ್ಷೆಗೆ ಕನಿಷ್ಠ 75% ಹಾಜರಾತಿ ಕಡ್ಡಾಯವಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದ ಪರಿಣಾಮ 35,000 ವಿದ್ಯಾರ್ಥಿಗಳು ಹೊರಗುಳಿದಿದ್ದಾರೆ. ಈ ಕುರಿತು ಪೋಷಕರುಮತ್ತು ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಎಸ್.ಎಸ್.ಎಲ್‌.ಸಿ ಪರೀಕ್ಷೆ ಬರೆಯಲು‌ ಅವಕಾಶ ಕಳೆದುಕೊಂಡ 35,000 ವಿದ್ಯಾರ್ಥಿಗಳು! Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ “ಚಿಣ್ಣರ ಕಲರವ” 5ನೇ ವರ್ಷದ 8 ದಿನಗಳ ಬೇಸಿಗೆ ಶಿಬಿರ ಉದ್ಘಾಟನೆ

ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿಏ.2ರಂದು “ಚಿಣ್ಣರ ಕಲರವ” 5ನೇ ವರ್ಷದ 8 ದಿನಗಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವುಶಾಲಾ ಆವರಣದಲ್ಲಿ ನಡೆಯಿತು.ಯಕ್ಷಗಾನ ಕಲಾವಿದ ಶ್ರೀ ಯೋಗಿಶ್ ಶರ್ಮ ಅವರು ಚಂಡೇವಾದನದ ಮೂಲಕ ಶಿಬಿರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶಿಬಿರದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯೂಸ್ ನಾಟೌಟ್ ಸುಳ್ಯ ಮುಖ್ಯ ಸಂಪಾದಕರಾದ ಹೇಮಂತ್ ಸಂಪಾಜೆ ಅವರು ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಶಿಬಿರಗಳು ಸಹಾಯಕವಾಗುತ್ತವೆ ಎಂದು ತಿಳಿಸಿದರು.ಶಾಲೆಯ ಅಧ್ಯಕ್ಷರಾದ ಶುಭಕರ್

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ “ಚಿಣ್ಣರ ಕಲರವ” 5ನೇ ವರ್ಷದ 8 ದಿನಗಳ ಬೇಸಿಗೆ ಶಿಬಿರ ಉದ್ಘಾಟನೆ Read More »

ಜಾಗತಿಕ ತಾಪಮಾನ ಏರಿಕೆಯಿಂದ ಗಂಡು ಮಕ್ಕಳ ಜನನ ಕುಸಿತ!

ಜಾಗತಿಕ ತಾಪಮಾನ ಏರಿಕೆ (Global Warming) ಕೇವಲ ಪರಿಸರವನ್ನಷ್ಟೇ ಅಲ್ಲ, ಮನುಷ್ಯನ ಸಂತಾನೋತ್ಪತ್ತಿಯನ್ನೂ ಬುಡಮೇಲು ಮಾಡುತ್ತಿದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ಅತಿಯಾದ ಶಾಖಕ್ಕೆ ಒಡ್ಡಿಕೊಳ್ಳುವುದರಿಂದ ಗಂಡು ಮಕ್ಕಳ ಜನನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಆಘಾತಕಾರಿ ವಿಷಯ ಸಂಶೋಧನೆಯಿಂದ ಹೊರಬಂದಿದೆ.ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಭಾರತ ಸೇರಿದಂತೆ 34 ದೇಶಗಳ ಸುಮಾರು 50 ಲಕ್ಷ ಜನನಗಳ ದತ್ತಾಂಶವನ್ನು ವಿಶ್ಲೇಷಿಸಿ ಈ ವರದಿಯನ್ನು ಸಿದ್ಧಪಡಿಸಿದೆ.ಭಾರತದಲ್ಲಿನ ಸ್ಥಿತಿ ಹೇಗಿದೆ?ಸಂಶೋಧನೆಯ ಪ್ರಕಾರ, ಭಾರತದಲ್ಲಿ ಗರ್ಭಾವಸ್ಥೆಯ ಎರಡನೇ ತ್ರೈಮಾಸಿಕದಲ್ಲಿ (Second Trimester) ತಾಪಮಾನ ಹೆಚ್ಚಾದಷ್ಟೂ ಗಂಡು

ಜಾಗತಿಕ ತಾಪಮಾನ ಏರಿಕೆಯಿಂದ ಗಂಡು ಮಕ್ಕಳ ಜನನ ಕುಸಿತ! Read More »

ತೊಡಿಕಾನ : ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯ ಕ್ಷೇತ್ರದ ಚಿನ್ನಪ್ಪ ಇವರಿಗೆ ಅನಾರೋಗ್ಯ ಕಾರಣದಿಂದ ನಡೆದಾಡಲು ಅಸಾಧ್ಯವಾದ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಜನ ಮಂಗಳ ಕಾರ್ಯಕ್ರಮದಡಿ ವಾಟರ್ ಬೆಡ್ ವಿತರಣೆಯನ್ನು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ ರವರು ವಿತರಿಸಿದರು ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್‌ ಸದಸ್ಯ ರವೀಂದ್ರ ಪಂಜಿ ಕೋಡಿ. ಭಜನಾ ಮಂಡಳಿ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ. ಶ್ರೀ ಮಲ್ಲಿಕಾರ್ಜನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ತಿಮ್ಮಯ್ಯಮೆತ್ತಡ್ಕ.

ತೊಡಿಕಾನ : ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ವಿತರಣೆ Read More »

ಅರಂಬೂರು : ಶಾಲಾ ಶೌಚಾಯ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಇಡ್ಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ವತಿಯಿಂದ ನೀಡಲ್ಪಟ್ಟ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಏ.1 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುಳ್ಳ ಕ್ಷೇತ್ರ ಶಿಕ್ಷಣಾಧಿಕಾರಿ ಯಮುನಪ್ಪ ಸಿದ್ದಪ್ಪ ಹರಗಿ,ಆಲೆಟಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಶ್ರೀಮತಿ ಶೀತಲ್‌, ರೊಟೇರಿಯನ್ ಹೇಮಂತ್ ಕಾಮತ್, ರೋಟೋರಿಯನ್ ಪ್ರಭಾಕರ್ ನಾಯರ್,ಶಾಲಾ ಎಸ್‌ಡಿಎಂಸಿ

ಅರಂಬೂರು : ಶಾಲಾ ಶೌಚಾಯ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ Read More »

ಮಂಗಳೂರು ಮಾಸ್ ಲಿಮಿಟೆಡ್ ನ ನೂತನ ಸಿಇಒ ಆಗಿ ಭರತ್ ಕುಮಾರ್ ಬಳ್ಳಕ ಅಧಿಕಾರ ಸ್ವೀಕಾರ

ಮಂಗಳೂರು: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯಾದ ಮಾಸ್ ಲಿಮಿಟೆಡ್‌ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ಭರತ್ ಕುಮಾರ್ ಬಳ್ಳಕ ಎ. 1ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಇದುವರೆಗೆ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಟಿ. ಮಹಾಬಲೇಶ್ವರ ಭಟ್ ರವರು ಎ. 30 ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಭರತ್ ಕುಮಾರ್ ರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ನೀಡಲಾಗಿದೆ. ಹಣಕಾಸು ಮತ್ತು ಮಾರುಕಟ್ಟೆ ನಿರ್ವಹಣೆ (Finance and Marketing) ವಿಷಯದಲ್ಲಿ ಎಂ.ಬಿ.ಎ ಪದವಿ ಪಡೆದಿರುವ ಇವರು ಈ ಹಿಂದೆ ಅಮೆರಿಕ ಮೂಲದ ಖ್ಯಾತ ಬಹುರಾಷ್ಟ್ರೀಯ

ಮಂಗಳೂರು ಮಾಸ್ ಲಿಮಿಟೆಡ್ ನ ನೂತನ ಸಿಇಒ ಆಗಿ ಭರತ್ ಕುಮಾರ್ ಬಳ್ಳಕ ಅಧಿಕಾರ ಸ್ವೀಕಾರ Read More »

error: Content is protected !!
Scroll to Top