ಪ್ರಚಲಿತ

ಅರಂಬೂರು : ಮಾ.15ರಿಂದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಅರಂಬೂರು : ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದೆ ಎಂದು ಮಹೋತ್ಸವ ಸಮಿತಿಯ ಅಧ್ಯಕ್ಷ ಪಿ.ಬಿ.ಸುಧಾಕರ‌ ರೈ ಹಾಗೂ ಇತರ ಪದಾಧಿಕಾರಿಳು ತಿಳಿಸಿದ್ದಾರೆ.ಅವರು ಅರಂಬೂರು ವಯನಾಟ್ ಕುಲವಂ ದೈವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇದೀಗ ದೈವಸ್ಥಾನದಲ್ಲಿ ಕೆಲವೊಂದು ಅಭಿವೃದ್ಧಿ ಕಾರ್ಯಗಳು ನಡೆದು ದೈವಂಕಟ್ಟು ಮಹೋತ್ಸವಕ್ಕೆ ತಯಾರು ನಡೆಸಲಾಗುತ್ತಿದೆ.ಎಲ್ಲರ‌ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಎಂಬತ್ತು […]

ಅರಂಬೂರು : ಮಾ.15ರಿಂದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ Read More »

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ

ಅರಂತೋಡು ಜಮಾಅತ್ ದುಬೈ ಸಮಿತಿ ವತಿಯಿಂದ ಮಾ. 5 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ಇಪ್ತಾರ್ ಕೂಟ ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಕಾರ್ಯದರ್ಶಿ ಕೆ.ಎಂ ಮೂಸಾನ್ ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ದುಬೈ ಸಮಿತಿ ಗೌರವಾಧ್ಯಕ್ಷ ಹಾಜಿ ಬದುರುದ್ದೀನ್ ಪಠೇಲ್, ಪಠೇಲ್ ಚಾರಿಟೇಬಲ್ ಟ್ರಸ್ಟೀ ಹಾಜಿ ಅಬ್ದುಲ್ ಖಾದರ್ ಪಠೇಲ್, ದುಬೈ ಸಮಿತಿ ನಿರ್ದೇಶಕರಾದ ಕೆ.ಎಂ ಅನ್ವಾರ್, ರಾಫಿ

ಅರಂತೋಡು ಮಸೀದಿಯಲ್ಲಿ ದುಬೈ ಸಮಿತಿ ವತಿಯಿಂದ ಇಪ್ತಾರ್ ಕೂಟ Read More »

ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದಾತನನ್ನು ತಡೆದ ಸಾರ್ವಜನಿಕರು

ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾತನನ್ನು ಸಾರ್ವಜನಿಕರು ರಕ್ಷಿಸಿದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ.ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶಂಕರಯ್ಯ ಆತ್ಮಹತ್ಯೆ ಉದ್ದೇಶಕ್ಕಾಗಿಯೇ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದರು ಎನ್ನಲಾಗಿದೆ. ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಉಪವಾಸವಿದ್ದ ಸಂದರ್ಭ ನಡೆಸಿದ ರಕ್ಷಣಾ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ.ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ

ನದಿಗೆ ಹಾರಿ ಆತ್ಮ ಹತ್ಯೆಗೆ ಯತ್ನಿಸಿದಾತನನ್ನು ತಡೆದ ಸಾರ್ವಜನಿಕರು Read More »

ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ ಸ್ಮರಣಾಂಜಲಿ ಕಾರ್ಯಕ್ರಮ,ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ

ಕಾಸರಗೋಡು ಜಿಲ್ಲೆ ದೇಲಂಪಾಡಿಯ ಬನಾರಿ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಮಾ 2ರಂದು ನಡೆದ ಕೀರ್ತಿಶೇಷ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಜರುಗಿದ ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು’ಇವರು ಕಹಿ’ಹಾಗೂ’ಯಾಕೆ ನಿಧಾನ ಎಂಬ ಎರಡು ಚುಟುಕು ವಾಚಿಸಿದರು.

ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ ಸ್ಮರಣಾಂಜಲಿ ಕಾರ್ಯಕ್ರಮ,ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ Read More »

ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರಿಗೆ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 9 ರಂದು ಬಾಪೂ ಸಭಾಂಗಣ ಗಾಂಧಿ ಭವನ ಬೆಂಗಳೂರಿಲ್ಲಿ ಚೇತನ ಪೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ನಡೆಯುವ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರ ಸಾಹಿತ್ಯ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಚೇತನ ಫೌಂಡೇಶನ್ ಕ್ಲಬ್ ನ ಅಧ್ಯಕ್ಷರು ಚಂದ್ರಶೇಖರ ಮಾಡಲಗೇರಿ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರಿಗೆ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿ Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ.ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್, ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಅಧಿಕಾರ ಹಸ್ತಾಂತರವನ್ನು ಮಾಡಿದರು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ನೇಮಕ Read More »

ಅಡಿಕೆ ಬೆಳೆಯ ಎಲೆಚುಕ್ಕಿ ರೋಗದಿಂದ ರೈತರಿಗೆ ಆರ್ಥಿಕ ನಷ್ಟ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ

ಬೆಂಗಳೂರು: ಅಡಿಯ ಬೆಳೆಯ ಎಲೆಚುಕ್ಕಿ ರೋಗದಿಂದ ಸುಳ್ಯ-ಪುತ್ತೂರು,ಕಡಬ ಭಾಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಔಷದಿಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾರ್ ಪುತ್ತೂರು ವಿಧಾನ ಪರಿಷತ್ ಕಲಾಪದಲ್ಲಿ ಹೇಳಿದರು.ರಾಜ್ಯದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಬಗ್ಗೆ ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರೂ ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ

ಅಡಿಕೆ ಬೆಳೆಯ ಎಲೆಚುಕ್ಕಿ ರೋಗದಿಂದ ರೈತರಿಗೆ ಆರ್ಥಿಕ ನಷ್ಟ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ Read More »

ಹಾಲ್ ಟಿಕೆಟನ್ನು ತಾಯಿಯ ಶವದ ಪಾದದ ಮೇಲೆ ಇಟ್ಟು ನಮಸ್ಕರಿಸಿ ಪಿ.ಯು.ಸಿ ಪರೀಕ್ಷೆ ಬರೆಯಲು ತೆರಳಿದ ವಿದ್ಯಾರ್ಥಿ

ವಿಧಿ ಬಹಳ ಕ್ರೂರವಾದುದು.ಇಲ್ಲೊಂದು ಮನಕಲುಕುವ ಘಟನೆ ನೆಡೆದು ಹೋಗಿದೆ.ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್ ಆಗಿ ಸಾವನ್ನಪ್ಪಿದ್ದರು. ಹೀಗಾಗಿ ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ ಘಟನೆಯೊಂದು ವರದಿಯಾಗಿದೆ.ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ.ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾ‌ರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್ 3ರ ಬೆಳಗ್ಗೆ ಹೃದಯಾಘಾತದಿಂದ

ಹಾಲ್ ಟಿಕೆಟನ್ನು ತಾಯಿಯ ಶವದ ಪಾದದ ಮೇಲೆ ಇಟ್ಟು ನಮಸ್ಕರಿಸಿ ಪಿ.ಯು.ಸಿ ಪರೀಕ್ಷೆ ಬರೆಯಲು ತೆರಳಿದ ವಿದ್ಯಾರ್ಥಿ Read More »

ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಕಾರ್ಯಕ್ರಮ

ಕಾಸರಗೋಡು : ಯಕ್ಷಗಾನದಲ್ಲಿ ಪ್ರಸಂಗದ ಜತೆಗೆ ಪ್ರಸಂಗಕರ್ತರ ಹೆಸರನ್ನೂ ಹೇಳಬೇಕು. ಇದು ಕೃತಿಕಾರರರಿಗೆ ಹಾಗೂ ಅವರ ಪರಿಶ್ರಮಕ್ಕೆ ನೀಡುವ ಗೌರವ’ ಎಂದು ನಿವೃತ್ತ ಮುಖ್ಯ ಶಿಕ್ಷಕ ಡಿ. ರಾಮಣ್ಣ ಮಾಸ್ತರ್ ಹೇಳಿದರು. ಅವರು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಬನಾರಿ ಕೀರಿಕ್ಕಾಡು ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಆಶ್ರಯದಲ್ಲಿ ಬನಾರಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ

ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ ಕಾರ್ಯಕ್ರಮ Read More »

ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯೆಯರಿಂದ ” ಇಂದ್ರಜಿತು “ಯಕ್ಷಗಾನ ತಾಳಮದ್ದಳೆ

ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ದೇವಾಲಯದ ಸಭಾಭವನದಲ್ಲಿ ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯೆಯರಿಂದ ” ಇಂದ್ರಜಿತು “ಯಕ್ಷಗಾನ ತಾಳಮದ್ದಳೆ ಜರಗಿತು. ಯಕ್ಷಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ರಮಾನಂದ ರೈ ದೇಲಂಪಾಡಿ ಅವರ ಸಂಯೋಜನೆಯೊಂದಿಗೆ ನಾರಾಯಣ ದೇಲಂಪಾಡಿ ಅವರ ಅರ್ಥಸಾಹಿತ್ಯ ಕೃತಿಯನ್ನೊಳಗೊಂಡ ಈ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಕುಮಾರಿ ರಚನಾ ಚಿದ್ಗಲ್‌, ಹಾಗೂ ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರ ಮಂಗಲ ಅವರು ಹಾಡಿ ರಂಜಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ

ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯೆಯರಿಂದ ” ಇಂದ್ರಜಿತು “ಯಕ್ಷಗಾನ ತಾಳಮದ್ದಳೆ Read More »

error: Content is protected !!
Scroll to Top