ಪ್ರಚಲಿತ

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ

ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಿತು.ಪೈನಲ್ ಪ್ರಥಮ ಹಂತದಲ್ಲಿರೋಚಕತೆ ಕಂಡ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಬ್ಯಾಂಕ್ ಆಫ್ ಬರೋಡ ರೂ.70,000 ಹಾಗೂ ಟ್ರೋಫಿ ಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ.ಕಾಲೇಜು ಉಜಿರೆ ರೂ.50,000 ಹಾಗೂ ಟ್ರೋಫಿ ಯನ್ನು […]

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ Read More »

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದ ಪಸ್ಟ್ ಕ್ವಾಟರ್ ಪೈನಲ್ ನಲ್ಲಿ ಎಸ್.ಡಿ.ಎಂ ಉಜಿರೆ ತಂಡ ಕೆ.ಎಫ್.ಡಿ.ಸಿ ತಂಡವನ್ನು35_17 ಅಂತರದಿಂದ ಸೋಲಿಸಿ ಸೆಮಿಪೈನಲ್ ಗೆ ಪ್ರವೇಶ ಪಡೆದಿದೆ.

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ Read More »

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದಲ್ಲಿಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡ ಎರಡನೇ ಗೆಲುವು ದಾಖಲಿಸಿದೆ.ಎನ್‌ಎಂಸಿ ಸುಳ್ಯ ತಂಡವು ಕರೆಂಕಿ ಬಂಟ್ವಾಳ ತಂಡವನ್ನು 31-19ಅಂಕಗಳ ಅಂತರದಲ್ಲಿ ಸೋಲಿಸಿ ಎರಡನೇ ಜಯ ಪಡೆದು ಕ್ವಾರ್ಟರ್ ಫೈನಲ್‌ ಪ್ರವೇಶಿಸಿತು.ಹೆಚ್ಚಾಗಿ ಪ್ರೋ ಕಬಡ್ಡಿ ಆಟಗಾರರಿರುವ

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು Read More »

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ

ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತ‌ರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ಅರಂಭಗೊಂಡಿದೆ.ಪ್ರಥಮ ಪಂದ್ಯಾಟ ಆಳ್ವಾಸ್ ಮೂಡಬಿದಿರೆ ಹಾಗೂ ಎನ್.ಎಂ.ಸಿ ಸುಳ್ಯ ನಡುವೆ ನಡೆದು ಎನ್.ಎಂ‌.ಸಿ ಸುಳ್ಯ ವಿಜಯಿಯಾಗಿದೆ.

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು.ರಾಜ್ಯ ಹಾಗೂ ಕೇರಳ ,ತಮಿಳು ನಾಡಿನ ಬಲಿಷ್ಟ 12 ತಂಡಗಳು ಭಾಗವಹಿಸಿದ್ದು ತೀವ್ರ ಹಣಾ ಹಣಿ ನೀಡಲು, ಪ್ರೇಕ್ಷಕರಿಗೆ ರಸದೌತಣ ನೀಡಲು ಅಂಕಣ ಸಜ್ಜಾಗಿದೆ .ಸುತ್ತಲು ಸುಂದರ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು ಪ್ರೇಕ್ಷಕರಿಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ Read More »

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ

ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದುಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಹಕಾರ ರತ್ನ ದಿ. ವಾರಣಾಶಿ ಸುಬ್ರಾಯ ಭಟ್‌ರವರ ಪ್ರಯತ್ನ ಹಾಗೂ ಸಹಕಾರ ರತ್ನ ಎಂ.ಎನ್. ರಾಜೇಂದ್ರಕುಮಾರ್ ಇವರ ಪ್ರೋತ್ಸಾಹದೊಂದಿಗೆ ಪ್ರಾರಂಭಗೊಂಡ ಮಾಸ್ ಸಂಸ್ಥೆ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಡಿಕೆ ಕೃಷಿಕರ ಹಿತ ಸಂರಕ್ಷಿಸುವ ಸಲುವಾಗಿ

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ Read More »

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ?

ಸರಕಾರಿ ಶಾಲೆಗಳ ಇಷ್ಟ ಪಡುವವರಿಗೆ ಆತಂಕವೊಂದು ಎದುರಾಗಿದೆ‌.ರಾಜ್ಯ ಸರಕಾರ ದಾಖಲಾತಿ ಕಡಿಮೆ ಇರುವ ಪ್ರಾಥಮಿಕ ಶಾಲೆಗಳ ವಿಲೀನಕ್ಕೆ ಹೆಜ್ಜೆಯಿಟ್ಟಿದೆ. ಇದರಿಂದ ರಾಜ್ಯದ ಆರು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿಗೆ ಕುತ್ತು ಎದುರಾಗಿದೆ.ಮೊದಲ ಹಂತವಾಗಿ 8 ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡಿ ಮಾದರಿ ಶಾಲೆ ನಡೆಸುವ ಕಾರ್ಯಯೋಜನೆ ನಡೆಯುತ್ತಿದೆ. ಇದರಲ್ಲಿ ಶಿಕ್ಷಣ ಸಚಿವರ ಹುಟ್ಟೂರು ಶಿವಮೊಗ್ಗ ಜಿಲ್ಲೆ ಕೂಡ ಸೇರಿದೆ. ಕಾರವಾರ, ಶಿರಸಿ ಶೈಕ್ಷಣಿಕ ಜಿಲ್ಲೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಕೆಲ ಜಿಲ್ಲೆಗಳಲ್ಲಿ ಮಾದರಿ

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ? Read More »

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ Read More »

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ .ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಫೆ.19 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದು ಸಹಕರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ Read More »

ಅರಂತೋಡು : ಉಮ್ರಾ ಯಾತ್ರಾರ್ಥಿ ಸೈಫುದ್ಧೀನ್ ಪಠೇಲ್ ಗೆ ಬೀಳ್ಕೊಡುಗೆ

ದುಬೈಯಲ್ಲಿ ಉಧ್ಯಮಿಯಾಗಿರುವ ಅರಂತೋಡಿನ ಸೈಫುದ್ಧೀನ್ ಪಠೇಲ್ ತನ್ನ ಧರ್ಮ ಪತ್ನಿಯೊಂದಿಗೆ ಪವಿತ್ರಾ ಉಮ್ರಾ ಯಾತ್ರೆಗೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ವತಿಯಿಂದ ಫೆ.19 ಬೀಳ್ಕೊಡಲಾಯಿತು.ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದ್ದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಎ.ಹೆಚ್.ವೈ.ಎ ಅಧ್ಯಕ್ಷ ಅಬ್ದುಲ್ ಮಜೀದ್ ಯಾತ್ರಾರ್ಥಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ಕೆ.ಎಂ ಮೂಸಾನ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ನಿವೃತ್ತ

ಅರಂತೋಡು : ಉಮ್ರಾ ಯಾತ್ರಾರ್ಥಿ ಸೈಫುದ್ಧೀನ್ ಪಠೇಲ್ ಗೆ ಬೀಳ್ಕೊಡುಗೆ Read More »

error: Content is protected !!
Scroll to Top