ಪ್ರಚಲಿತ

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಆದೇಶ

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಫೆ.19ರಂದು ಆದೇಶಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಪಿ.ಕೆ ಅಭಿಲಾಷ್ ಅವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಉಸ್ತುವಾರಿಯಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್‌ ಚುನಾಯಿತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ವಿವಿಧ ಚುಣಾವಣೆ ಸಂದರ್ಭಗಳಲ್ಲಿ ಬಿಳಿನೆಲೆ ಗ್ರಾಮದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಪಿ.ಕೆ ಅಭಿಲಾಷ್ ಅವರು ಸಾಮಾಜಿಕ, […]

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಆದೇಶ Read More »

ಫೆ.22 ಮತ್ತು ಫೆ.23 ರಂದು ಐವರ್ನಾಡಿನಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತ‌ರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಲಿದೆ.ಕಬಡ್ಡಿ ಪಂದ್ಯಾಟವನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಉದ್ಘಾಟಿಸಲಿದ್ದಾರೆ ಎಂದು ಫೆ.19

ಫೆ.22 ಮತ್ತು ಫೆ.23 ರಂದು ಐವರ್ನಾಡಿನಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ Read More »

ಅರಂತೋಡಿನಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ ಕುಡಿಯುವ ನೀರಿಗೆ ಪರದಾಟ!

ಅರಂತೋಡು ಭಾಗದಲ್ಲಿಯು ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದು ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ ದಿನ ನಿತ್ಯ ಟ್ರಿಪ್ ಆಗುತ್ತಿರುವುದರಿಂದ ಗ್ರಾಮ ಪಂಚಾಯತ್ ನ ಸಾರ್ವಜನಿಕ ಕುಡಿಯುವ ನೀರಿಗೆ ಜನ ಪರದಾಡುತ್ತಿದ್ದಾರೆ, ಅಲ್ಲದೆ ಕೃಷಿಕರಿಗೆ, ಬೆಳಗ್ಗಿನ ಹೊತ್ತು ಅಡಚಣೆಯಾಗುತ್ತಿರುವುದರಿಂದ ನೌಕರಿಗೆ ತೆರಳುತ್ತಿರುವವರಿಗೆ ತುಂಬಾ ತೊಂದರೆಯಾಗಿದೆ. ದಿನ ಪತ್ರಿಕೆಯಲ್ಲಿ ಈ ಬಾರಿ ಲೋಡ ಶೆಡ್ ಇಲ್ಲ ಎಂದು ತಿಳಿಸಿದರು ಈ ಭಾಗದಲ್ಲಿ ದಿನಾಲು ಲೋಡ್ ಶೆಡ್ಡಿಂಗ್ ಇರುತ್ತದೆ. ಆದುದರಿಂದ ಮೆಸ್ಕಾಂ ಇಲಾಖೆ ಈ ಭಾಗಕ್ಕೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳ

ಅರಂತೋಡಿನಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ ಕುಡಿಯುವ ನೀರಿಗೆ ಪರದಾಟ! Read More »

ಗುತ್ತಿಗಾರಿನಲ್ಲಿ ಕೈ ಕೊಟ್ಟ ವಿದ್ಯುತ್,ಕುಡಿಯುವ ನೀರಿಗೂ ಸಮಸ್ಯೆ

ಗುತ್ತಿಗಾರು ಭಾಗಕ್ಕೆ ಕಳೆದ ಮೂರು ದಿನಗಳಿಂದ ತ್ರೀ ಫೇಸ್ ವಿದ್ಯುತ್ ಸರಬರಾಜು ಇಲ್ಲದೆ ಗ್ರಾಮ ಪಂಚಾಯತ್, ಸಾರ್ವಜನಿಕರು ಕೃಷಿಕರು ಕಂಗಾಲಾಗಿದ್ದಾರೆ.ಫೆಸ್‌ ಇಲ್ಲದಿರುವುದರಿಂದ ಗ್ರಾ.ಪಂ ಗೆ ಕುಡಿಯುವ ನೀರಿನ ಸರಬರಾಜು ಸಂಕಷ್ಟ ಉಂಟಾಗಿದೆ. ಕೃಷಿಕರಿಗೆ ಕೃಷಿಗೆ, ಗೃಹಪಯೋಗಕ್ಕೂ ನೀರಿನ ಕೊರತೆ ಉಂಟಾಗಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯದಿಂದ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುತ್ತಿದ್ದರೂ ಲೋ ವೋಲ್ವೇಜ್ ಮತ್ತಿತರರ ಸಮಸ್ಯೆಗಳಿವೆ. ಬೆಳ್ಳಾರೆಯಲ್ಲಿ ಮೂರು ಕಡೆ ೩೩ ಕೆ.ವಿ ಭೂಗತ ಕೇಬಲ್ ನಲ್ಲಿ ಫಾಲ್ಟ್ ಕಂಡು ಬಂದ ಕಾರಣ ವಿದ್ಯುತ್ ಸರಬರಾಜು ವ್ಯತ್ಯಯ

ಗುತ್ತಿಗಾರಿನಲ್ಲಿ ಕೈ ಕೊಟ್ಟ ವಿದ್ಯುತ್,ಕುಡಿಯುವ ನೀರಿಗೂ ಸಮಸ್ಯೆ Read More »

ರಾಜ್ಯದಲ್ಲಿ ದಿನದ 7 ಗಂಟೆ ಕೃಷಿಗೆ ವಿದ್ಯುತ್ ಪೂರೈಕೆ : ಸಚಿವ ಕೆ.ಜೆ ಜಾರ್ಜ್

ರಾಜ್ಯ ಸರ್ಕಾರವು ರೈತರ ಕೃಷಿ ಕೆಲಸಗಳಿಗೆ ದಿನದ 7 ಗಂಟೆ ವಿದ್ಯುತ್ ಪೂರೈಸಲು ಆದೇಶ ನೀಡಿದೆ.ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ಧವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ

ರಾಜ್ಯದಲ್ಲಿ ದಿನದ 7 ಗಂಟೆ ಕೃಷಿಗೆ ವಿದ್ಯುತ್ ಪೂರೈಕೆ : ಸಚಿವ ಕೆ.ಜೆ ಜಾರ್ಜ್ Read More »

ಉಪ್ಪಿನಂಗಡಿ, ತೊಡಿಕಾನ ಮತ್ತು ಪುತ್ತೂರು ದೇವಾಲಯಗಳ ಅಭಿವೃದ್ಧಿಗೆ ಒಟ್ಟು 150 ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಕೆ

ಪ್ರಸಾದಮ್ ಮತ್ತು ಸ್ವದೇಶಿ ದರ್ಶನ್ ಯೋಜನೆಯಡಿ ದೇವಾಲಯಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಉಪ್ಪಿನಂಗಡಿ, ತೊಡಿಕಾನ ಮತ್ತು ಪುತ್ತೂರು ದೇವಾಲಯಗಳ ಅಭಿವೃದ್ಧಿಗೆ ಒಟ್ಟು 150 ಕೋಟಿ ರೂಪಾಯಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದ್ದು, ಇದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯನ್ನು ಅಮೂಲಾಗ್ರ ಅಭಿವೃದ್ಧಿಗೆ ಒಳಪಡಿಸಲು ಸಾಧ್ಯವಾಗುವುದೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಫೆ.17ರಂದು ಸಂಕಲ್ಪಿತ ಅಭಿವೃದ್ಧಿ ಕಾರ್ಯಗಳ ನೀಲ ಸಕಾಶೆಯನ್ನು ಪರಿಶೀಲಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಉಪ್ಪಿನಂಗಡಿ, ತೊಡಿಕಾನ ಮತ್ತು ಪುತ್ತೂರು ದೇವಾಲಯಗಳ ಅಭಿವೃದ್ಧಿಗೆ ಒಟ್ಟು 150 ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಕೆ Read More »

ಅರಂತೋಡು ಗ್ರಾಮ ಸಭೆ,ಗ್ರಾಮ ಸಭೆಗೆ ಗೈರು ಹಾಜರಾದ ಇಲಾಖಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ಬರೆಯಲು ನಿರ್ಣಾಯ

ಆರಂತೋಡು ಗ್ರಾಮ ಪಂಚಾಯಿತ್ ನ ದ್ವಿತೀಯ ಹಂತದ 2024-25ನೇ ಸಾಲಿನ ಗ್ರಾಮ ಸಭೆಯು ಆರಂತೋಡು ಗ್ರಾಮ ಪಂಚಾಯತ್ ನ “ಅಮೃತ ಸಭಾಂಗಣ”ದಲ್ಲಿ ಫೆ. 17 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ನಡೆಯುತು.ಸಭೆಯ ನೋಡಲ್ ಅಧಿಕಾರಿಗಳಾಗಿ ಹಿಂದುಳಿದ ವರ್ಗಗಳಕಲ್ಯಾಣ ಅಧಿಕಾರಿ ಗೀತಾ ಭಾಗವಹಿಸಿದ್ದರು. ಗ್ರಾಮಸಭೆಯಲ್ಲಿ ಮುಖ್ಯ ವಾಗಿ ತೊಡಿಕಾನ ಗ್ರಾಮಕ್ಕೆ ಸಂಬಂಧಪಟ್ಟಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ,ಪೋಲಿಸ್ ಇಲಾಖೆ ಯ ಅಧಿಕಾರಿಗಳು ಗೈರು ಹಾಜರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂಸಂಬಂಧಪಟ್ಟ

ಅರಂತೋಡು ಗ್ರಾಮ ಸಭೆ,ಗ್ರಾಮ ಸಭೆಗೆ ಗೈರು ಹಾಜರಾದ ಇಲಾಖಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ಬರೆಯಲು ನಿರ್ಣಾಯ Read More »

ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ

ಸುಳ್ಯ : ಸುಳ್ಯ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು ಬೈಪಾಸ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಿ ಎಂದು ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕರ ಸಹಿತ ರಾಜಕೀಯ ಮುಖಂಡರು ಮನವಿ ಮಾಡಿದರು.ಕ್ಷೇತ್ರದಲ್ಲಿ ವಿವಿಧೆಡೆ ಸೇತುವೆಗಳು, ರಸ್ತೆ ನಿರ್ಮಾಣ ಕಾಮಗಾರಿ ಅರ್ಧದಲ್ಲಿ ನಿಂತಿವೆ. ವಿವಿಧೆಡೆ ರಸ್ತೆ, ಸೇತುವೆಯ ಬೇಡಿಕೆಯಿದ್ದು ಇಲಾಖೆಯಿಂದ ಅನುದಾನ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು. ಎಂಜೀನಿಯರ್ ಅವರನ್ನು ಕರೆಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳುವಂತೆ

ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ Read More »

ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಬೆಳೆಯಲು ಅರೆಭಾಷೆ ಕಾಮಿಡಿ ವಿನೂತನ ಕಾರ್ಯಕ್ರಮ : ಸದಾನಂದ ಮಾವಂಜಿ

ಅರೆಭಾಷೆ ಅಕಾಡೆಮಿಯು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಅರೆಭಾಷೆ ಕಾಮಿಡಿ ಕೂಡ ಇದರಲ್ಲಿ ಒಂದು. ಅರೆಭಾಷೆ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿಸಲು ಉತ್ತಮ ಅವಕಾಶ ಎಂದು ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ ಹೇಳಿದರು.V4 ನ್ಯೂಸ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್‌ನ ಸಹಯೋಗದಲ್ಲಿ ‘ಅರೆಭಾಷೆಕಾಮಿಡಿ’ ರಿಯಾಲಿಟಿ ಶೋ ಗೆ ತಂಡಗಳ ಆಯ್ಕೆಗಾಗಿ ಆಡಿಷನ್ ನನ್ನು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅವರು

ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಬೆಳೆಯಲು ಅರೆಭಾಷೆ ಕಾಮಿಡಿ ವಿನೂತನ ಕಾರ್ಯಕ್ರಮ : ಸದಾನಂದ ಮಾವಂಜಿ Read More »

ಅರಂತೋಡು ಎಲಿಮಲೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಗೆ ಅಭಿವೃದ್ಧಿ ಗೆ ಅನುದಾನ ಒದಗಿಸಿ ಕೊಡುವೆ : ಸಚಿವ ಜಾರಕಿಹೊಳಿ ಭರವಸೆ

ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ. ಎಂ. ಶಾಹಿದ್ ಆರಂತೋಡು, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಉಪಸ್ಥಿತರಿದ್ದರು.

ಅರಂತೋಡು ಎಲಿಮಲೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಗೆ ಅಭಿವೃದ್ಧಿ ಗೆ ಅನುದಾನ ಒದಗಿಸಿ ಕೊಡುವೆ : ಸಚಿವ ಜಾರಕಿಹೊಳಿ ಭರವಸೆ Read More »

error: Content is protected !!
Scroll to Top