ಕಲ್ಚೆರ್ಪೆ : ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 8 ನೇ ವರ್ಷದ ಶ್ರೀ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ನೇಮೋತ್ಸವ
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 8 ನೇ ವರ್ಷದ ಶ್ರೀ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ನೇಮೋತ್ಸವವು ಡಿ.12 ರಂದು ಶ್ರದ್ದಾ ಭಕ್ತಿಯಿಂದ ಜರುಗಿತು.ಬ್ರಹ್ಮಶ್ರೀ ವೇದಮೂರ್ತಿ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ಮಾರ್ಗದರ್ಶನದಲ್ಲಿ ಪುರೋಹಿತರಾದ ಅಭಿರಾಮ್ ಭಟ್ ಅರಂಬೂರು ರವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.ಬೆಳಗ್ಗೆ ಸ್ಥಳ ಶುದ್ಧಿ, ಗಣ ಹೋಮ, ತಂಬಿಲ ಸೇವೆಯಾಗಿ ಮಧ್ಯಾಹ್ನ ಮಹಾಪೂಜೆ ನಡೆದು […]










