ಪ್ರಚಲಿತ

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ

ಇತಿಹಾಸ ಪ್ರಸಿದ್ದ ಸುಳ್ಯ ತಾಲೂಕಿನ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು ಉತ್ಸವದ ಸಂದರ್ಭದಲ್ಲಿ ಶ್ರೀ ಉಳ್ಳಾಕುಲು ದೈವದ ಭಂಡಾರ ಬಂದು ದೇವರನ್ನು ಎದುರುಗೊಂಡಿತು. ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ […]

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ Read More »

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಕಳೆದ ರಾತ್ರಿಪತ್ನಿಯನ್ನು ಗುಂಡಿಕ್ಕಿ ಕೊಂದ ಗಂಡ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ ಕೃಷಿಕ ರಾಮಚಂದ್ರ ಗೌಡ ( 54 ) ಅವರು ಕುಡಿದು ಬಂದು ಜಗಳವಾಡತ್ತಿದ್ದರು. ಬೆಳೆಗಳಿಗೆ ಕಾಡುಪ್ರಾಣಿಗಳ ಉಪಟಳವಿರುವುದರಿಂದ ಲೈಸೆನ್ಸ್ ಇರುವ ಕೋವಿ ಹೊಂದಿದ್ದರು. ಅವರ ಪತ್ನಿ ವಿನೋದ (43) ಹಾಗೂ ಮೂವರು ಪುತ್ರರು. ಪ್ರಶಾಂತ, ನಿಶಾಂತ ಮತ್ತು ರಂಜಿತ್.ಸುಮಾರು ಮೂರು ತಿಂಗಳ ಹಿಂದೆ ಅವರು ಕುಡಿದು

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ Read More »

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಪ್ರಾರಂಭಗೊಂಡಿದ್ದು ಜ.21 ರವರೆಗೆ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.ರಾತ್ರಿ ಪೇಟೆಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತುಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಲಿದೆ.ಮಧ್ಯಾಹ್ನ ಗಂಟೆ 12.00

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ Read More »

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ,ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಟ್ಟು 24 ಮಂದಿ ಕಣದಲ್ಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಪಡೆದು ಮತ್ತೆ ಅಧಿಕಾರ ತಮ್ಮದಾಗಿಸಿಕೊಂಡಿದ್ದಾರೆ.ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಧರ್ಮಪಾಲ ಕೊಯಿಂಗಾಜೆ ಯವರು ಗೆಲುವು ಸಾಧಿಸಿದ್ದಾರೆ.ಬಿಜೆಪಿ ಬೆಂಬಲಿತ 12 ಮಂದಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 12 ಮಂದಿ ಕಣದಲ್ಲಿದ್ದು ನೇರ ಸ್ಪರ್ಧೆ ಏರ್ಪಟ್ಟಿತ್ತು.

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ,ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು Read More »

ಪೆರುವಾಜೆ : ಜಾತ್ರೋತ್ಸವ ಆರಂಭ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ರಾತ್ರಿ ಧ್ವಜಾರೋಹಣಗೊಳ್ಳುವ ಮೂಲಕ ಜಾತ್ರೋತ್ಸವ ಪ್ರಾರಂಭವಾಗಿದೆ.ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಉಪಸ್ಥಿತಿಯಲ್ಲಿ ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣ ನಡೆಯಿತು. ನಂತರ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತು ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ

ಪೆರುವಾಜೆ : ಜಾತ್ರೋತ್ಸವ ಆರಂಭ Read More »

ವೌಲ್ಯಯುತ ಶಿಕ್ಷಣ ನೀಡುವ ಮೂಲಕ ಪ್ರೀತಿ ಸಹ ಬಾಳ್ವೆಯಂತಹ ಮಾನವೀಯ ಗುಣಗಳನ್ನು ನೀಡುವ ಕಾರ್ಯವನ್ನು ಕೆಥೋಲಿಕ್ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ : ಪೀಟರ್‌ ಪೌಲ್ ಸಲ್ದಾನಾ

ವೌಲ್ಯಯುತ ಶಿಕ್ಷಣ ನೀಡುವ ಮೂಲಕ ಪ್ರೀತಿ ಸಹ ಬಾಳ್ವೆಯಂತಹ ಮಾನವೀಯ ಗುಣಗಳನ್ನು ನೀಡುವ ಕಾರ್ಯವನ್ನು ಕೆಥೋಲಿಕ್ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ. ಆ ಕಾರಣದಿಂದಲೇ ಪೋಷಕರ ಅಭಿಮಾನಕ್ಕೆ ಪಾತ್ರವಾಗಿ ಇಂತಹ ಶಿಕ್ಷಣ ಸಂಸ್ಥೆಗಳು ಹೆಚ್ಚು ಹೆಚ್ಚು ಬೆಳೆಯುತ್ತಿವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಹಾಗೂ ಮಂಗಳೂರು ಕೆಥೋಲಿಕ್ ಬೋರ್ಡ್ ಅಧ್ಯಕ್ಷ ರೆ.ಫಾ. ಡಾ.ಪೀಟರ್‌ ಪೌಲ್ ಸಲ್ದಾನಾ ಹೇಳಿದರು.ಸುಳ್ಯದ ಸಂತ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ರಜತ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ

ವೌಲ್ಯಯುತ ಶಿಕ್ಷಣ ನೀಡುವ ಮೂಲಕ ಪ್ರೀತಿ ಸಹ ಬಾಳ್ವೆಯಂತಹ ಮಾನವೀಯ ಗುಣಗಳನ್ನು ನೀಡುವ ಕಾರ್ಯವನ್ನು ಕೆಥೋಲಿಕ್ ಶಿಕ್ಷಣ ಸಂಸ್ಥೆಗಳು ಮಾಡುತ್ತಿವೆ : ಪೀಟರ್‌ ಪೌಲ್ ಸಲ್ದಾನಾ Read More »

ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್

ಪುತ್ತೂರು ತಾಲೂಕಿನ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿನಿ ಗಾನವಿ ಎಚ್ ರವರು ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿರುತ್ತಾರೆ.ಪುತ್ತೂರು ಕ್ಯಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯ ಉದ್ಯೋಗಿ, ನಿವೃತ್ತ ಸೈನಿಕ ಗಣೇಶ್ ನರಿಮೊಗರು ಮತ್ತು ಸಂಗೀತ ಶಿಕ್ಷಕಿ ಜಾಸ್ಮಿನ್ ಯು ನರಿಮೊಗರುರವರ ಪುತ್ರಿಯಾಗಿರುವ ಗಾನವಿ ಎಚ್ ರವರು ಕುದ್ಮಾಡಿ ನಯನಾ ವಿ.ರೈ ಮತ್ತು ಸ್ವಸ್ತಿಕ್ ಆರ್ ಶೆಟ್ಟಿ ರವರ ಶಿಷ್ಯೆಸವಣೂರು ನಿವ್ರತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಉಳುವಾರು ಜಯಪ್ಪ ಹಾಗೂ ವಿಮಲ ದಂಪತಿಯ ಮೊಮ್ಮಗಳು.

ಭರತನಾಟ್ಯ ಜ್ಯೂನಿಯ‌ರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್ Read More »

ಸುಳ್ಯ : ಬಿಜೆಪಿ ಸಂಘಟನಾ ಪರ್ವ ಸಭೆ

ಸುಳ್ಯ ಬಿಜೆಪಿ ಸಂಘಟನಾ ಪರ್ವ ಸಭೆ ಸುಳ್ಯದ ಕಛೇರಿಯಲ್ಲಿ ನಡೆಯಿತು. ಸುಳ್ಯ ಮಂಡಲದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾನ್ಯ ಸಂಸದರಾದ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ,ಹಾಗೂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಹಿರಿಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ : ಬಿಜೆಪಿ ಸಂಘಟನಾ ಪರ್ವ ಸಭೆ Read More »

ಗೋಣಿಕೊಪ್ಪದ ಪುಟ್ಟ ಬಾಲೆಗಾಗಿ ಮಿಡಿದ ಸುಳ್ಯ ದ ಹೃದಯಗಳು

ಕೊಡಗು ಜಿಲ್ಲೆಯ ಗೋಣಿಕೊಪ್ಪದಿಂದ ಪುಟ್ಟ ಬಾಲೆಯನ್ನು ಮಂಗಳೂರು ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಅತೀ ಕಡಿಮೆ ಅವಧಿಯಲ್ಲಿ ತಲುಪಿಸುವಲ್ಲಿ ಸುಳ್ಯ ತಾಲೂಕು ಅಂಬುಲನ್ಸ್ ಮಾಲಕರ ಹಾಗೂ ಚಾಲಕರ ಸಂಘ ನೆರವಾಯಿತು, ಸುಳ್ಯ ಗಡಿಪ್ರದೇಶವಾದ ಕೊಯನಾಡುವಿನಿಂದ ಜಾಲ್ಸೂರು ವರೆಗೆ ಸಂಘದ ವಿವಿಧ ವಾಹನಗಳು ಬೆಂಗಾವಲಾಗಿ ಸಂಚರಿಸಿತು, ಸಂಘದ ಈ ಕಾರ್ಯಾಚರಣೆಯಲ್ಲಿ ಸುಳ್ಯದ ಸಮಾನ ಮನಸ್ಕ ಹೃದಯಗಳು ಆ ಬಾಲೆಗಾಗಿ ಮಿಡಿದವು, ಸುಳ್ಯ ದ ಮುಖಾಂತರ ಅಂಬುಲನ್ಸ್ ಚಲಿಸಲಿದೆ ಎಂಬ ಮಾಹಿತಿ ತಿಳಿದ ತಕ್ಷಣ ತಾಲೂಕಿನ ಹಲವು ಜನರು ಆ ಬಾಲೆಯ

ಗೋಣಿಕೊಪ್ಪದ ಪುಟ್ಟ ಬಾಲೆಗಾಗಿ ಮಿಡಿದ ಸುಳ್ಯ ದ ಹೃದಯಗಳು Read More »

ತೊಡಿಕಾನ : ಆಯಿರಕೊಡ ಅಭಿಷೇಕ,ಸಿಯಾಳಾಭಿಷೇಕ,ರಂಗಪೂಜೆ,ಜ.27ಕ್ಕೆ ಚಾಕಟಡಿ ನೇಮೋತ್ಸವ,ಜ.28ಕ್ಕೆ ಪಾಷಾಣಮೂರ್ತಿ ಅಮ್ಮನವರ ಕೋಲ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಕರ ಸಂಕ್ರಾತಿ ಪ್ರಯುಕ್ತ ಶ್ರೀ ದೇವರಿಗೆ ಆಯಿರಕೊಡ ಅಭಿಷೇಕ,ಸಿಯಾಳಭಿಷೇಕ ಮತ್ತು ರಂಗಪೂಜೆ ನಡೆಯಿತು.ದೇವರಗುಂಡಿಯಿಂದ ಬೆಳಿಗ್ಗೆ ತೀರ್ಥ ತರಲಾಯಿತು,ಬಳಿಕ ಗಣಹೋಮ,ಶತರುದ್ರಾಭಿಷೇಕ,ಸಿಯಾಳಾಭಿ಼ಷೇಕ ನಡೆಯಿತು.ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಶ್ರೀ ಭಾರದ್ವಾಜಾಶ್ರಮ ಅರಂಬೂರು ಅವರಿಂದ ವೇದ ಪಾರಾಯಣ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು ಸದಸ್ಯರು, ಸಿಬ್ಬಂದಿ ವರ್ಗದವರು, ಊರಿನ ಹಾಗೂ ಪರ ಊರಿನ ಸಾವಿರಾರು ಭಕ್ತರು ಧನು ಪೂಜೆಯಲ್ಲಿ ಭಾಗವಹಿಸಿ ಶ್ರೀ ದೇವರ ದರ್ಶನ ಪಡೆದರು.ಜ.18ಕ್ಕೆ

ತೊಡಿಕಾನ : ಆಯಿರಕೊಡ ಅಭಿಷೇಕ,ಸಿಯಾಳಾಭಿಷೇಕ,ರಂಗಪೂಜೆ,ಜ.27ಕ್ಕೆ ಚಾಕಟಡಿ ನೇಮೋತ್ಸವ,ಜ.28ಕ್ಕೆ ಪಾಷಾಣಮೂರ್ತಿ ಅಮ್ಮನವರ ಕೋಲ Read More »

error: Content is protected !!
Scroll to Top