ಪ್ರಚಲಿತ

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ

ಕೃಷಿ ಇಲಾಖೆ,ಕೃಷಿ ವಿಜ್ಞಾನ ಕೇಂದ್ರ ಮಂಗಳೂರು,ಕೃಷಿಕ ಸಮಾಜ ಸುಳ್ಯ, ರೈತ ಉತ್ಪಾದಕರ ಕಂಪೆನಿ ಸುಳ್ಯ ನಿಯಮಿತ, ತಾಲೂಕು ಪಂಚಾಯತ್ ಸುಳ್ಯ ,ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಕೆ.ಎಸ್.ಆರ್.ಎಲ್ ಪಿ.ಯಸ್ ,ಜಿಲ್ಲಾ ಪಂಚಾಯತ್ ಮಂಗಳೂರು, ಸಂಜೀವಿನಿ ಒಕ್ಕೂಟ ಸುಳ್ಯ ಇವರುಗಳ ಸಹಯೋಗದಲ್ಲಿ ಎ.ಪಿ.ಎಂ.ಸಿ ಕಟ್ಟಡ ದಲ್ಲಿ ರೈತ ದಿನಾಚರಣೆ ಕಾರ್ಯಕ್ರಮ ಡಿ.23ರಂದು ನಡೆಯಿತು. ರೈತ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಶ್ರೀ ದೇರಣ್ಣ ಗೌಡ ತಾಲೂಕು ಅಧ್ಯಕ್ಷರು ಕೃಷಿಕ ಸಮಾಜ ಸುಳ್ಯ,ಶ್ರೀ ಲೋಲಾಜಾಕ್ಷ ಅಧ್ಯಕ್ಷರು ರೈತ ಸಂಘ […]

ಸುಳ್ಯ : ರೈತ ದಿನಾಚರಣೆ ಕಾರ್ಯಕ್ರಮ ಮತ್ತು ಸವಲತ್ತು ವಿತರಣೆ Read More »

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಸುಳ್ಯ ತಾಲೂಕು ಇದರ ವತಿಯಿಂದ ಪರಿವಾರಕಾನ ಒಕ್ಕೂಟದ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಸರಳಿ ಕುಂಜ ರವರ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ರವರು ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ ಯೋಜನೆಯು ನಡೆದು ಬಂದ ದಾರಿ ಮತ್ತು ಅದರಿಂದ ನಾವು ಪ್ರಯೋಜನಗಳನ್ನು ಪಡೆದು

ಪರಿವಾರಕಾನ : ಒಕ್ಕೂಟದ ಸದಸ್ಯರಿಗೆ ಲಾಭಂಶ ವಿರಣೆ Read More »

ಜ.5ಕ್ಕೆ ಗೂನಡ್ಕದಲ್ಲಿ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ದ ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್ ಪೇರಡ್ಕ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳು ಗೂನಡ್ಕ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸಿ. ಕೆ. ಲೆಜೆಂಡ್ಸ್ ಕಲ್ಲುಗುಂಡಿ, ತಾಲೂಕು ಮುಸ್ಲಿಂ ಫೆಡರೇಷನ್‌ ಹಾಗು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸುಳ್ಯ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ ಜ.5ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯಲಿದೆ ಎಂದುಧಪ್ ಸ್ಪರ್ಧೆಯ ಸಂಘಟನಾ ಸಮಿತಿಯ ಪದಾಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌

ಜ.5ಕ್ಕೆ ಗೂನಡ್ಕದಲ್ಲಿ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ Read More »

ಗೋಕುಲದಾಸ್ ಅವರ ತೆರೆಮರೆಯ ಸಮಾಜ ಸೇವೆ ಸಮಾಜಕ್ಕೆ ಮಾದರಿ : ಸವಣೂರು ಸೀತಾರಾಮ ರೈ

ಯಾವುದೇ ಫಲಾಪೇಕ್ಷೆ ಬಯಸದೆ ಗೋಕುಲದಾಸರ ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಅವರ ಸೇವೆಗೆ ತಕ್ಕ ಪ್ರತಿಫಲ ದೊರೆತ್ತಿರುವುದು ಸಂತೋಷ ನೀಡಿದೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಹೇಳಿದ್ದಾರೆ.ಅವರು ಡಿ.28ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆದ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಸಿ ಕೆ.ಗೋಕುಲ್‌ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಗೋಕುಲದಾಸ್ ಅವರ ತೆರೆಮರೆಯ ಸಮಾಜ ಸೇವೆ ಸಮಾಜಕ್ಕೆ ಮಾದರಿ : ಸವಣೂರು ಸೀತಾರಾಮ ರೈ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ.03,4 ಮತ್ತು 5 ರಂದು ವಸಂತ ಸಂಭ್ರಮ ಕಾರ್ಯಕ್ರಮ

ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ.03,4 ಮತ್ತು 5 ರಂದು ವಸಂತ ಸಂಭ್ರಮ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.ವಸಂತ ಸಂಭ್ರಮ ಸಮಿತಿಯ ಸಂಚಾಲಕ ಎಸ್.ಎನ್ ಮನ್ಮಥ ಮತ್ತು ಅಧ್ಯಕ್ಷೆ ರಾಜೀವಿ ರೈ ಯವರು ಹೇಳಿದರು. ಪ್ರಾಥಮಿಕ ಶಾಲಾ ವಿಭಾಗದ ಶತಮಾನೋತ್ತರ’, ಪ್ರೌಢಶಾಲಾ ವಿಭಾಗದ ‘ಅಮೃತ’ ಪದವಿಪೂರ್ವ ಕಾಲೇಜಿನ ‘ಸ್ವರ್ಣ ಸಂಭ್ರಮ’ ಕಾರ್ಯಕ್ರಮ ಒಟ್ಟಾಗಿ ವಸಂತ ಸಂಭ್ರಮ ಸಂಭ್ರಮಿಸಲಿದೆ. ಮೂರು ದಿನವೂ ಬೆಳಿಗ್ಗೆಯಿಂದ ರಾತ್ರಿವರೆಗೆ ನಿರಂತರ ಕಾರ್ಯಕ್ರಮಗಳ ನಡೆಯಲಿದೆ ಎಂದುಅವರು ಡಿ.28 ರಂದು ಬೆಳ್ಳಾರೆ ಕೆ.ಪಿ.ಎಸ್.ನಲ್ಲಿ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ.03,4 ಮತ್ತು 5 ರಂದು ವಸಂತ ಸಂಭ್ರಮ ಕಾರ್ಯಕ್ರಮ Read More »

ಅರಂತೋಡು-ತೊಡಿಕಾನ ಸೊಸೈಟಿ ಚುನಾವಣೆ:ಸಹಕಾರ ಭಾರತಿಗೆ ಕ್ಲೀನ್ ಸ್ವೀಪ್

ಸುಳ್ಯ : ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆಡಳಿತ ಮಂಡಳಿಯ ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಸಂತೋಷ್ ಕುತ್ತಮೊಟ್ಟೆ, ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ‌ ಕುಕ್ಕುಂಬಳ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಚಂದ್ರಶೇಖರ ಎ.ಎಸ್, ಡಾ.ಲಕ್ಷ್ಮೀಶ ಕಲ್ಲುಮುಟ್ಲು, ದಿನೇಶ್ ಅರಮನೆಗಯ, ಹಾಗೂ ಪ್ರಶಾಂತ ಕಾಪಿಲ ಗೆಲುವು ಸಾಧಿಸಿದ್ದಾರೆ.

ಅರಂತೋಡು-ತೊಡಿಕಾನ ಸೊಸೈಟಿ ಚುನಾವಣೆ:ಸಹಕಾರ ಭಾರತಿಗೆ ಕ್ಲೀನ್ ಸ್ವೀಪ್ Read More »

ಅರಂತೋಡು ಸಹಕಾರಿ ಸಂಘದ ಚುನಾವಣೆಬಿಜೆಪಿ ಬೆಂಬಲಿತ ಅಭ್ಯರ್ಥಿ ಡಾ. ಲಕ್ಷ್ಮೀಶ ಅವರಿಗೆ ಭಾರೀ ಅಂತರದ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜನ ಸ್ನೇಹಿ ವೈದ್ಯ ಡಾ. ಲಕ್ಷ್ಮೀಶ ಅವರು 702 ಮತಗಳನ್ನು ಪಡೆದು ತನ್ನ ಪ್ರತಿ ಸ್ಪರ್ಧಿ ತೀರ್ಥರಾಮ ಪರ್ನೋಜಿ ಅವರ ವಿರುದ್ದ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ.ಪ್ರತಿ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ತೀರ್ಥರಾಮ ಪರ್ನೋಜಿ ಅವರು 164 ಮತ ಪಡೆದು ಪರಾಭವಗೊಂಡಿದ್ದಾರೆ.

ಅರಂತೋಡು ಸಹಕಾರಿ ಸಂಘದ ಚುನಾವಣೆಬಿಜೆಪಿ ಬೆಂಬಲಿತ ಅಭ್ಯರ್ಥಿ ಡಾ. ಲಕ್ಷ್ಮೀಶ ಅವರಿಗೆ ಭಾರೀ ಅಂತರದ ಗೆಲುವು Read More »

ಅರಂತೋಡು ತೊಡಿಕಾನ ಸಹಕಾರಿ ಸಂಘದ ಚುನಾವಣೆಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಶಾಂತ್ ಕಾಪಿಲರಿಗೆ ಭರ್ಜರಿ ಗೆಲುವು

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಶಾಂತ್ ಕಾಪಿಲ ಅವರು 162 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಪ್ರತಿ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿದ್ದ ಹೂವಯ್ಯ ಚೂರ್ನಾಡು ಅವರು ಕೇವಲ ಕೇವಲಬ19 ಮತ ಪಡೆದು ಪರಾಭವಗೊಂಡಿದ್ದಾರೆ.

ಅರಂತೋಡು ತೊಡಿಕಾನ ಸಹಕಾರಿ ಸಂಘದ ಚುನಾವಣೆಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಶಾಂತ್ ಕಾಪಿಲರಿಗೆ ಭರ್ಜರಿ ಗೆಲುವು Read More »

ಡಿ 31ರಂದು ಕೆಎಸ್‌ಆರ್ಟಿಸಿ ಬಂದ್ ?

ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬ‌ರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.

ಡಿ 31ರಂದು ಕೆಎಸ್‌ಆರ್ಟಿಸಿ ಬಂದ್ ? Read More »

ಅಹಿಂದಕ್ಕೆ ಸರ್ಕಾರ ಏನೂ ನೀಡಿಲ್ಲ; ಶಾಸಕ ವೇದವ್ಯಾಸ ಕಾಮತ್

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರವು ಈ ಸಮುದಾಯಗಳಿಗೆ ಹೊಸ ಅನುದಾನ ನೀಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಕೋಟ್ಯಂತರ ರೂಪಾಯಿ ಅನುದಾನಗಳನ್ನು ರದ್ದುಪಡಿಸುವ ಆದೇಶ ಹೊರಡಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಮಂಗಳೂರಲ್ಲಿರೋ ತನ್ನ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಹಿಂದಕ್ಕೆ ಸರ್ಕಾರ ಏನೂ ನೀಡಿಲ್ಲ; ಶಾಸಕ ವೇದವ್ಯಾಸ ಕಾಮತ್ Read More »

error: Content is protected !!
Scroll to Top