ಪ್ರಚಲಿತ

ಅಕ್ರಮ ಮರಳು ಸಾಗಾಟ ಲಾರಿಯನ್ನು ವಶ ಪಡಿಸಿಕೊಂಡ ತಹಶೀಲ್ದಾರ್

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ಮತ್ತು ತಂಡ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಸೋಮವಾರ ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಅಕ್ರಮ ಮರಳು ಸಾಗಾಟ ಲಾರಿಯನ್ನು ವಶ ಪಡಿಸಿಕೊಂಡ ತಹಶೀಲ್ದಾರ್ Read More »

ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ವತಿಯಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ ) ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರ ದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸುಳ್ಯ ಸೀಮೆ ಮಹತ್ತೋಭಾರ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮವು ಧನು ಪೂಜಾ ಪ್ರಯುಕ್ತ ದೇವಳದ ಒಳಾಂಗಣ ಹೊರಾಂಗಣ ದೇವಳದ ಪರಿಸರದ ಸುತ್ತಮುತ್ತ ಹಾಗೂಮತ್ಸ್ಯತೀರ್ಥ ಗುಂಡಿಯವರೆಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು. ಶ್ರೀಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಒಕ್ಕೂಟದ ಸಂಘಗಳ ಸದಸ್ಯರುಗಳು ವಲಯ ಅಧ್ಯಕ್ಷರಾದ ಹೂವಯ್ಯ ಗೌಡ ಒಕ್ಕೂಟದ ಅಧ್ಯಕ್ಷರಾದ ಜನಾರ್ದನ

ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ವತಿಯಿಂದ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರು   ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ  ಆಯ್ಕೆ

ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ ದಾಖಲೆಗಳನ್ನು ನಿರ್ಮಿಸಿರುವ ಡಾ. ಅನುರಾಧಾ ಕುರುಂಜಿಯವರು ಶಿಕ್ಷಣದ ಜೊತೆಗೆ ಓರ್ವ ವ್ಯಕ್ತಿತ್ವ ವಿಕಸನ ತರಬೇತುದಾರಳಾಗಿ 2500

ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರು   ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ  ಆಯ್ಕೆ Read More »

ಡಿ.21 ಮತ್ತು 22 ರಂದು ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ ಸೀಮಗೆ ಒಳಪಟ್ಟ ಕಾರಣೀಕ ದೈವಸ್ಥಾನವಾದ ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಡಿ.21 ಮತ್ತು 22 ರಂದು ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶ್ರೀಕ್ಷೇತ್ರ ಬಜಪ್ಪಿಲದ ಆನುವಂಶಿಕ ಆಡಳಿತ ಮೊಕೇಸರರಾದ ಹೇಮಂತಕುಮಾರ್ ಗೌಡರಮನೆ ಮಾತನಾಡಿ ಸುಮಾರು ಸಾವಿರ ವರ್ಷದ ಇತಿಹಾಸ ಇರುವ ಪೇರಾಲು ಶ್ರೀ ಬಜಪ್ಪಿಲ

ಡಿ.21 ಮತ್ತು 22 ರಂದು ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಮಡಪ್ಪಾಡಿ :- ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಇದರ ವತಿಯಿಂದ ಬಲ್ಕಜೆ ಮತ್ತು ಮಡಪ್ಪಾಡಿ ಒಕ್ಕೂಟಗಳ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ದೀಪ ಪ್ರಜಲ್ವಿಸುವ ಮುಖೇನಾ ಚಾಲನೆಯನ್ನು ನೀಡಿ ಮಾತಾನಾಡುತ್ತ, ಯೋಜನೆಯು ನಡೆದು ಬಂದ ದಾರಿ ಮತ್ತು ಅದರಿಂದ ನಾವು ಪ್ರಯೋಜನಗಳನ್ನು ಪಡೆದು ಅಭಿವೃದ್ಧಿಗೊಂಡಿದ್ದೇವೆ, ಇದನ್ನು ನಾವು ಯಾವತ್ತು ಕೂಡ

ಮಡಪ್ಪಾಡಿ :- ಪ್ರಗತಿ ಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ. Read More »

ನಾಳೆಯಿಂದ(ಡಿ.16) ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನು ಪೂಜೆ ಆರಂಭ

ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿ.16ರಿಂದ ಧನು ಪೂಜೆ ಆರಂಭಗೊಳ್ಳಲಿದೆ.ಜೀರ್ಣೋದ್ಧಾರ ಕಾಮಗಾರಿಗಳು ಯಶಸ್ವಿಯಾಗಿ ಪೂರೈಸಿದ್ದು, ಕಳೆದ 2017ರ ಮಾರ್ಚ್ 1ರಿಂದ 11ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿದೆ. ಶ್ರೀ ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರೀ ದೇವಳದಲ್ಲಿ ಈ ಹಿಂದೆ ನಡೆಯುತ್ತಿದ್ದ ಕೆಲವೊಂದು ಪೂಜಾ ವಿಧಿವಿಧಾನಗಳು ನಿಂತಿರುವ ಬಗ್ಗೆ ತಿಳಿದುಕೊಂಡು ಅವುಗಳ ಪೈಕಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದ್ದ ‘ಧನುಪೂಜೆ”ಯನ್ನು ಕಳೆದ ಹದಿಮೂರು ವರ್ಷಗಳಿಂದ ಯಶಸ್ವಿಯಾಗಿ ನೆರವೇರಿಸಿಕೊಂಡು ಬರಲಾಗುತ್ತಿದೆ.ಶ್ರೀ ಮಲ್ಲಿಕಾರ್ಜುನ ದೇವರ

ನಾಳೆಯಿಂದ(ಡಿ.16) ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನು ಪೂಜೆ ಆರಂಭ Read More »

ಡಿ.25 ಮತ್ತು 26ಕ್ಕೆ ಸುಳ್ಯ ಹಬ್ಬ ಕಾರ್ಯಕ್ರಮ,ಸಾಧಕರಿಗೆ ಸನ್ಮಾನ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ ಕಾರ್ಯಕ್ರಮ25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ.ಜ್ಞಾನೇಶ್ ಹಾಗೂ ಇತರ ಪದಾಧಿಕಾರಿಗಳು ತಿಳಿಸಿದ್ದಾರೆ‌. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ ಎರಡು ದಿನಗಳ ಕಾರ್ಯಕ್ರಮದ ಅಂಗವಾಗಿಡಿ.25ರಂದು ಪೂ.9ರಿಂದ

ಡಿ.25 ಮತ್ತು 26ಕ್ಕೆ ಸುಳ್ಯ ಹಬ್ಬ ಕಾರ್ಯಕ್ರಮ,ಸಾಧಕರಿಗೆ ಸನ್ಮಾನ Read More »

ಕಲ್ಚೆರ್ಪೆ : ಗುಳಿಗ ದೈವ ಹಾಗೂ ಪರಿವಾರ ದೈವಗಳ ಕೋಲ

ಸುಳ್ಯ ತಾಲೂಕಿನ‌ ಆಲೆಟ್ಟಿ ಗ್ರಾಮದ ಕಲ್ಟಿರ್ಪೆ ಪೆರಾಜೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ಕೋಲ ನಡೆಯಿತು.ರಾತ್ರಿ ಸಾನಿಧ್ಯದಲ್ಲಿ ಶ್ರೀ ಗುಳಿಗ ದೈವದ ಕೋಲ ನಡೆದು ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ದೈವದ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು. ನೂರಾರು ಸಂಖ್ಯೆಯಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಆಗಮಿಸಿದ್ದರು. ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು

ಕಲ್ಚೆರ್ಪೆ : ಗುಳಿಗ ದೈವ ಹಾಗೂ ಪರಿವಾರ ದೈವಗಳ ಕೋಲ Read More »

ನೀರಿನಲ್ಲಿ ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಶ್ರದ್ಧಾ ಭಕ್ತಿಯೊಂದಿಗೆ ಸಂಪನ್ನ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊAಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು. ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀ

ನೀರಿನಲ್ಲಿ ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಶ್ರದ್ಧಾ ಭಕ್ತಿಯೊಂದಿಗೆ ಸಂಪನ್ನ Read More »

ನೆಲ್ಲೂರು ಕೇಮ್ರಾಜೆ : ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳ ಗ್ರಾಮಸ್ಥರ ಸಭೆ

ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ. ಇದರ ವತಿಯಿಂದ ಇಂದು ನೆಲ್ಲೂರು ಕೇಮ್ರಾಜೆ ಸೊಸೈಟಿ ಹಾಲ್ ನಲ್ಲಿ ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳ ಗ್ರಾಮಸ್ಥರ ಸಭೆ ನಡೆಯಿತು.ಕಸ್ತೂರಿ ರಂಗನ್ ವರದಿ ಜಾರಿಯನ್ನು ಎಲ್ಲಾ ಗ್ರಾಮಸ್ಥರು ಒಕ್ಕೊರಳಿನಿಂದ ವಿರೋದಿಸುವ ಕುರಿತು ಸಂಚಾಲಕರಾದ ಕಿಶೋರ್ ಶಿರಾಡಿ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಂತರ ಮಾತನಾಡಿದ ಅವರು ನಮ್ಮ ಹೋರಾಟವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಬೂತ್

ನೆಲ್ಲೂರು ಕೇಮ್ರಾಜೆ : ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳ ಗ್ರಾಮಸ್ಥರ ಸಭೆ Read More »

error: Content is protected !!
Scroll to Top