ಪ್ರಚಲಿತ

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಂಪಾಜೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಮೂಲಕ 2 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲಾರಾಗಿ ಕೆಲಸ ಮಾಡುವ […]

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ Read More »

ಅಪರೂಪದ ಶಾಸನಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ

ಅಪರೂಪದ ಶಾಸನಗಳು ಪತ್ತೆ Read More »

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಅರಂತೋಡು ಗ್ರಾಮದ ಅಂಗಡಿಮಜಲು ಮತ್ತು ಕುಲ್ಟಾರು ಎಂಬಲ್ಲಿ ಕಿಂಡಿ ಆಣೆಕಟ್ಟು ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಿವ ಪ್ರಸನ್ನ ಫೆ. 28 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಹಲವಾರು ವರ್ಷಗಳಿಂದ ಬೇಸಿಗೆ ಸಮಯದಲ್ಲಿ ಅರಂತೋಡಿನ ಬಲ್ನಾಡು ಹೊಳೆಯಲ್ಲಿ ನೀರಿನ ಹರಿವು ನಿಂತು ಹೋಗುತಿತ್ತು.ಹೊಳೆಯ ನೀರನ್ನು ಅವಲಂಬಿಸಿ ಕೃಷಿ ಮಾಡುವ ಕೃಷಿಕರು ನೀರಿಲ್ಲದೆ ಬಾರಿ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನಲೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ Read More »

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ

ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಿರುವುದು ನನಗೆ ಕುಶಿಯಾಗಿದೆ.ಇದು ನಮ್ಮ ಸೌಭಾಗ್ಯ. ಸೀತಾರಾಮ ರೈಯವರ ಈ ಯೋಜನೆ ರೈತರಿಗೆ ಶಕ್ತಿತುಂಬುವ ಜೊತೆಗೆ ಒಂದಷ್ಟು ಜನರಿಗೆ ಉದ್ಯೋಗ ಲಭಿಸಿದೆ. ಈ ಭಾಗದಲ್ಲಿ ಎಳೆಚುಕ್ಕಿ ರೋಗ ರೈತರನ್ನು ಕಂಗಾಲಾಗಿಸಿದೆ. ಇದಕ್ಕೆ ಶಾಶ್ವತ ಪರಿಹಾರವಾಗಬೇಕಿದೆ. ಸುಳ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂಬ ಕನಸು ಇದೆ. ಇದರಿಂದ ನಮ್ಮವರಿಗೆ ಅಷ್ಟು ಜನರಿಗೆ ಉದ್ಯೋಗ ದೊರೆಯಬಹುದು .ಇದಕ್ಕೆನಿಮ್ಮೆಲ್ಲರ ಸಹಕಾರ ಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರುಫೆ. 28ರಂದು ಸುಳ್ಯದ ಎಪಿಎಂಸಿ ರೈತ ಸಮುದಾಯ ಭವನದಲ್ಲಿ

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ Read More »

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ

ಕೊಡಗು ಜಿಲ್ಲೆಯಲ್ಲಿ ಕೊಡವ, ಅರೆಭಾಷಿಕರು ಸೇರಿದಂತೆ ಹಲವು ಸಣ್ಣ ಸಣ್ಣ ಭಾಷಿಕ ಸಮಾಜದವರು ಬದುಕಿನ ಬಂಡಿ ಸಾಗಿಸುತ್ತಿದ್ದು, ಎಲ್ಲಾ ಸಣ್ಣ ಸಣ್ಣ ಭಾಷಿಕರೂ ಕೊಡಗಿನ ಇತಿಹಾಸ ತಿಳಿದು, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ Read More »

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸ ಮಾ.8ರಿಂದ ಆರಂಭವಾಗಲಿದೆ.ಈ ದಿನ ಮಧ್ಯಾಹ್ನ 3 ಗಂಟೆಗೆ ಮಂತ್ರವಾದಿ ಗುಳಿಗ ನೇಮ ಮತ್ತು ರಾತ್ರಿ 10 ಗಂಟೆಗೆ ಮೊಗೇರ್ಕಳ ದೈವಗಳ ಹಾಗೂ ತನ್ನಿಮಾನಿಗ ದೈವದ ನೇಮೋತ್ಸವ ನಡೆಯಲಿದೆ.ಮಾ.9ರಂದು ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಸಾರ್ಲಪಟ್ಟ ದೈವ ಕೊರಗಜ್ಜನ ನೇಮೋತ್ಸವ ನಡೆಯಲಿರುವುದು.ಸರ್ವ ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಬೇಕೆಂದು ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ Read More »

ಐದು ಕಾರುಗಳ ನಡುವೆ ಸರಣಿ ಅಪಘಾತ

ಚಲಿಸುತ್ತಿದ್ದ ಬಸ್ ನಿಂದ ಬಿದ್ದ ಮೊಬೈಲ್‌ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ನಡೆದಿದೆ.ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು ಕಾರಿನಲ್ಲಿ ಫರಂಗಿಪೇಟೆ ಕಡೆಯಿಂದ ಕೈಕಂಬಕ್ಕೆ ಆಗಮಿಸುತ್ತಿದ್ದಾಗ ತಲಪಾಡಿಯಲ್ಲಿ ಮುಂದೆ ಸಾಗುತ್ತಿದ್ದ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಅವರ ಕಾರಿನ ಬೋನೆಟ್ ಮೇಲೆ ಬಿದ್ದಿದೆ. ಈ ವೇಳೆ ಅವರು ದಿಢೀ‌ರ್ ಬ್ರೇಕ್ ಹಾಕಿದ್ದು, ಆ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ನಾಲ್ಕು ಕಾರುಗಳು ಪರಸ್ಪರ

ಐದು ಕಾರುಗಳ ನಡುವೆ ಸರಣಿ ಅಪಘಾತ Read More »

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರನಾಂದ ಸರಸ್ವತಿಯವರ ಕ್ರತಿ ವಸುದೈವಂ ಕುಟುಂಬಕಂ ಮತ್ತು ಕಲಿಕೆಯ ಮಹಿಮೆ ಬಿಡುಗಡೆ

ಸುಳ್ಯತಾಲೂಕಿನ ಅಜ್ಜಾವರ ಗ್ರಾಮದ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶಿವೂಜೆ,ಗುರುಪೂಜೆ,ಗಣತಿಪೂಜೆ ಪುಸ್ತಕ ಬಿಡುಗಡೆ,ಭಜನಾ ಸತ್ಸಂಗ ಕಾರ್ಯಕ್ರಮ ಫೆ.26ರಂದು ನಡೆಯಿತು.ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಅವರು ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿ ವಸುದೈವ ಕುಟುಂಬಕಂ ಮತ್ತು ಕಲಿಕೆಯ ಮಹಿಮೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಸ್ವಾಮೀಜಿಯವರು ಪುಸ್ತಕದಲ್ಲಿ ಬರೆದಿರುವಂತೆ ನಾವೇಲ್ಲರೂ ಒಂದೆ.ಒಂದೆ ಕುಟುಂಬದವರಂತೆ ಬದುಕಿ ಬಾಳೋಣ ಎಂದು ಹೇಳಿದರು.ಪ್ರೊಫೆಸರ್ ಅನಿಲ್ ಬಿ.ವಿ ಮಾತನಾಡಿ ಜೀವನದ ಬದುಕಿನ ಜಂಜಾಟದಲ್ಲಿ ಕಷ್ಟ ಸುಖಗಳು ಸಹಜ..ಜೀವನದಲ್ಲಿ ಕಷ್ಟಗಳ‌ನ್ನು ಮೀರಿ

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರನಾಂದ ಸರಸ್ವತಿಯವರ ಕ್ರತಿ ವಸುದೈವಂ ಕುಟುಂಬಕಂ ಮತ್ತು ಕಲಿಕೆಯ ಮಹಿಮೆ ಬಿಡುಗಡೆ Read More »

ಮಂಗಳೂರು ಮೂಲದ ಯುವತಿ ತನುಷ್ಕಾ ಯುದ್ಧ ವಿಮಾನದ ಪೈಲೆಟ್ ಆಗಿ ಆಯ್ಕೆ

ಇದೇ ಮೊದಲ ಬಾರಿಗೆ ಯುವತಿಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್‌ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ಮೂಲದ ಯುವತಿ ತನುಷ್ಕಾ ಯುದ್ಧ ವಿಮಾನದ ಪೈಲೆಟ್ ಆಗಿ ಆಯ್ಕೆ Read More »

ತೊಡಿಕಾನದಲ್ಲಿ ಮಾ.8ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಆಮಂತ್ರ ಪತ್ರಿಕೆ ಬಿಡುಗಡೆ

ಗೌಡ ಯುವ ಸೇವಾ ಸಂಘ ತೊಡಿಕಾನ ವತಿಯಿಂದ ದಿನಾಂಕ 08.03.2025 ರಂದು ನಡೆಯುವ ಹತ್ತು ಕುಟುಂಬ ಹದಿನೆಂಟು ಗೋತ್ರ ಗೌಡ ಬಾಂದವರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಅಕ್ಷಯ ಕಲಾ ಮಂದಿರ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು,ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ತೊಡಿಕಾನದಲ್ಲಿ ಮಾ.8ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಆಮಂತ್ರ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top