ಪ್ರಚಲಿತ

ಮಂಜುನಾಥ ಭಂಡಾರಿ ನಾಳೆ ಸುಳ್ಯ ಭೇಟಿ

ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸುಳ್ಯಕ್ಕೆ ಭೇಟಿ ನೀಡಲಿದ್ದು ಅವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಡಿ.04 ರಂದು ನಡೆಯಲಿದೆ.ಅಂದು ಅಪರಾಹ್ನ 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಪರವಾಗಿ ಬ್ಲಾಕ್ […]

ಮಂಜುನಾಥ ಭಂಡಾರಿ ನಾಳೆ ಸುಳ್ಯ ಭೇಟಿ Read More »

ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ

ರಾಜ್ಯ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ (ರಿ) ಚಿತ್ರದುರ್ಗ ಇವರು ಆಯೋಜಿಸಿದ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡಕೊಂಡಿದ್ದಾರೆ.ವಿಜೇತರಿಗೆ ಡಿಸೆಂಬರ್ 9ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಪ್ರಶಸ್ತಿ ನೀಡಲಾಗುವುದು.

ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ Read More »

ಭಾರೀ ಮಳೆ ಹಿನ್ನಲೆ ನಾಳೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಡಿ.3 ರಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಪೆ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನಲೆ ನಾಳೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಬ್ಯೂಟಿ ಪಾರ್ಲರ್ ಗೆ ತೆರಳಿದ ನವ ವಿವಾಹಿತೆ ಎಲ್ಲಿಗೆ ಹೋದಳು?

ನವವಿವಾಹಿತೆ ದಾವಣೆಗೆರೆ ಮೂಲದ ಚೆನ್ನಗಿರಿಯ ಮಂಗಳ ಯಾನೆ ಕಾವ್ಯಾ (28 ವರ್ಷ) ನವಂಬರ್ 20ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಪತಿ ಪತ್ನಿಯನ್ನು ಹುಡುಕಿಕೊಡುವಂತೆ ದೂರು ನೀಡಿದ್ದಾರೆ. ನ.7ರಂದು ಕಾವ್ಯಾ ವಿಕ್ರಂ ಮದುವೆಯಾಗಿದ್ದರು. ನ.20ರಂದು ಈಕೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋದವರು ಮನೆಗೆ ಬಾರದೆ ತವರು ಮನೆಗೆ ಹೋಗದೆ ನಿಗೂಡವಾಗಿ ನಾಪತ್ತೆಯಾಗಿದ್ದಾರೆ.

ಬ್ಯೂಟಿ ಪಾರ್ಲರ್ ಗೆ ತೆರಳಿದ ನವ ವಿವಾಹಿತೆ ಎಲ್ಲಿಗೆ ಹೋದಳು? Read More »

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ

ಭಾಷೆಯಲ್ಲಿ ಸಂಸ್ಕೃತಿ,ವ್ಯಕ್ತಿತ್ವ ಇದೆ.ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕೆಂದು ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ ಸದಾಶಿವ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಮಾಪನ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ Read More »

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ

ಶತಮಾನೋತ್ಸವದ ಹೊಸ್ತಿಲಲ್ಲಿರುವ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮತ್ತು ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮವು ದೇವಚಳ್ಳ ಶಾಲೆಯಲ್ಲಿ ನಡೆಯಿತು.ಎಸ್‌ ಡಿ ಯಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸಿದ್ದರು.ಹಿರಿಯರಾದ ನಿವೃತ್ತ ಶಿಕ್ಷಕ ಕೇಪಳಕಜೆ ಪುರುಷೋತ್ತಮ ಗೌಡ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶಾಲೆಯ ಯಶಸ್ಸು ವಿದ್ಯಾರ್ಜನೆ ಜ್ಞಾನಾರ್ಜನೆ ಇನ್ನಷ್ಟು ವಿಸ್ತರಿಸಲಿ ಎಂಬುದಾಗಿ ಶುಭಾಶಯ ಕೋರಿದರು. ಶತಮಾನೋತ್ಸವದ ಲೋಗೋ ವನ್ನು ದೇವಚಳ್ಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೀಲಾವತಿ ಸೇವಾಜೆ

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ Read More »

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ

ಅರೆಭಾಷೆ ನಮ್ಮ ಮನೆಭಾಷೆ.ಅರೆಭಾಷೆಯನ್ನು ನಮ್ಮ ಮಕ್ಕಳಿಗೆ ಕಲಿಸುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕೆಂದು ಸುಳ್ಯ ಗೌಡರ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ಜಾ.ಕೆ ಸದಾನಂದ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಹಮ್ಮಿಕೊಂಡ ಅರೆಭಾಷೆ ಗಡಿನಾಡ ಉತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ Read More »

ಮಂಡೆಕೋಲಿನಲ್ಲಿ ಆಕರ್ಷಕ ಮೆರವಣಿಗೆಯೊಂದಿಗೆ ಅರೆಭಾಷೆ ಗಡಿನಾಡ ಉತ್ಸವಕ್ಕೆ ಚಾಲನೆ

ಕರ್ನಾಟ ಅರೆಬಾಷೆ ಸಂಸ್ಕ್ರತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿದೆ. ಅರಂಭದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ‘ಫಾರೆಸ್ಟ್ ಬಂಗಲೆ ಬಳಿಯಿಂದ ಆರಂಭಗೊಂಡಿತು. ಮೆರವಣಿಗೆಯನ್ನು ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ

ಮಂಡೆಕೋಲಿನಲ್ಲಿ ಆಕರ್ಷಕ ಮೆರವಣಿಗೆಯೊಂದಿಗೆ ಅರೆಭಾಷೆ ಗಡಿನಾಡ ಉತ್ಸವಕ್ಕೆ ಚಾಲನೆ Read More »

ಗಾಂಜಾ ಸೇವೆನೆ ಮತ್ತು ಮಾರಾಟ ಪ್ರಕರಣ ನಾಲ್ವರ ಬಂಧನ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಯನಗರದಲ್ಲಿ ನಿಷೇಧಿತ ಅಮಲು ಪದಾರ್ಥ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಒರ್ವನನ್ನು ಗಾಂಜಾ ಸೇವೆನೆ ಮಾಡಿದ ಮೂವರನ್ನು ಕರೆತಂದಿದ್ದು ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಂದು ತಿಳಿದುಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಗಾಂಜಾ ಸೇವೆನೆ ಮತ್ತು ಮಾರಾಟ ಪ್ರಕರಣ ನಾಲ್ವರ ಬಂಧನ Read More »

ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ

ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಡಿ.7ರಂದು ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್‌. ಬಿಲ್ಡಿಂಗ್ ಇದರ 2 ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.ಅಂಗಾರ ಅವರು ನೂತನ ಸಹಕಾರ ಸಂಘ ಆರಂಭದ ಕುರಿತು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ನೀಡಿದರು.ನೂತನ ಸಹಕಾರ ಸಂಘವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೀಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್‌ ಸದಸ್ಯರುಗಳಾದ ಕಿಶೋರ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ನಳಿನ್

ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್‌.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ Read More »

error: Content is protected !!
Scroll to Top