ಪ್ರಚಲಿತ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ Read More »

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ‌ ಉದ್ಘಾಟನೆಗೊಂಡಿದೆ.ರಾಷ್ಟ್ರ ಧ್ವಜಾರೋಹಣ ವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪಿ. ಬಿ. ಸುಧಾಕರ ರೈ ನೆರವೇರಿಸಿದರು.ಕನ್ನಡ ಧ್ವಜಾರೋಹಣ ವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ. ಲಿಂಗಪ್ಪ

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ Read More »

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಎಂಬ ವಿನೂತನ ಸರಣಿ ಕಾರ್ಯಕ್ರಮ ಹಮ್ಮಿಕೊಂಡು ನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡುತ್ತಿರುವುದು‌ ಶ್ಲಾಘನೀಯ ಎಂದು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದ ಹೇಳಿದರು.ಅವರು ನ.2ರಂದು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡಕ್ಕೆ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕಸಾಪ ವತಿಯಿಂದ 7 ದಿನಗಳ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾ ಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು. ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ Read More »

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ

ಸಂಪಾಜೆ ಗ್ರಾಮದ ಪೆರುಂಗೊಡಿ ಹಾಗೂ ದರ್ಕಾಸ್ ಕೊಪ್ಪತಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ 65 ಲಕ್ಷ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಯಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ತಲಾ 20ಲಕ್ಷದಂತೆ 2 ರಸ್ತೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮುಖಾಂತರ 40ಲಕ್ಷ ಮಂಜೂರಾಗಿದ್ದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಅಭಿವೃದ್ಧಿ ಕಾರ್ಯಕ್ಕೆ ರಾಜಕೀಯ ಸಲ್ಲದು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಅನುದಾನ ದೊರಕಿಸಿಕೊಟ್ಟ ಟಿ ಎಂ ಶಾಹಿದ್ ತೆಕ್ಕಿಲ್

ಸಂಪಾಜೆ ಗ್ರಾಮದ ದರ್ಕಾಸ್ ಹಾಗೂ ಪೆರುಂಗೊಡಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಶಿಲಾನ್ಯಾಸ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ ಗಪೂರ್ ಅರಂತೋಡು ಮಸೀದಿಗೆ ಭೇಟಿ,ಜಮಾಅತ್ ವತಿಯಿಂದ ಸನ್ಮಾನ

ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಪೂರ್ ರವರು ಒ. 31 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜಮಾಅತ್ ವತಿಯಿಂದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸನ್ಮಾನಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಪೈಝಿ ದುವಾ ನೆರವೇರಿಸಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮೊಹಮ್ಮದ್,

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ ಗಪೂರ್ ಅರಂತೋಡು ಮಸೀದಿಗೆ ಭೇಟಿ,ಜಮಾಅತ್ ವತಿಯಿಂದ ಸನ್ಮಾನ Read More »

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದಲ್ಲಿ ನ.1ರಿಂದ ಸಾಹಿತ್ಯ ಸಂಭ್ರಮ‌ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ -೨೦೨೫ ಕಾರ್ಯಕ್ರಮವು ದಿನಾಂಕ ೦೧.೧೧.೨೦೨೫ ರಿಂದ ೦೭.೧೧.೨೦೨೫ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ,ವಲಯ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಚಂದ್ರಾವತಿ ಬಡ್ಡಡ್ಕ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದದಿನಾಂಕ ೦೧.೧೧.೨೦೨೫ ಶನಿವಾರ ಅಪರಾಹ್ನ ೨.೦೦ಗಂಟೆಗೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದಲ್ಲಿ ನ.1ರಿಂದ ಸಾಹಿತ್ಯ ಸಂಭ್ರಮ‌ ಕಾರ್ಯಕ್ರಮ Read More »

ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಮರು ಆಯ್ಕೆ

ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರಂತೋಡು ರಬ್ಬರ್ ಉತ್ಪಾದಕರ ಸಂಘವನ್ನು ಕಳೆದೆರಡು ವರ್ಷಗಳಿಂದ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನಡೆಸಿದ ಶಶಿಕುಮಾರ್ ಉಳುವಾರು, ಅಡ್ತಲೆಯವರು ಮುಂದಿನ ಅವಧಿಗೂ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿದ್ದಾರೆ. ಇವರೊಂದಿಗೆ ಆರಂತೋಡು ಗ್ರಾಮದಿಂದ ಯಶೋದರ ಪಿಂಗಾರ ತೋಟ, ಯು. ಎಂ. ಕಿಶೋರ್ ಕುಮಾರ್ ಉಳುವಾರು, ಮೋಹನ್ ಕುಮಾರ್ ಪಾರೆಮಜಲು, ತೊಡಿಕಾನ ಗ್ರಾಮದಿಂದ ಕೇಶವ ಕೊಳಲುಮೂಲೆ, ವೆಂಕಟ್ರಮಣ ಪೆತ್ತಾಜೆ ಮತ್ತು ಕಮಲಾಕ್ಷ ಕಾಟೂರು (ಪಡ್ಪು )ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಮರು ಆಯ್ಕೆ Read More »

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ!

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಟಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಪವರ್ ಕಟ್,ಯಾವ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲಾ ನೋಡಿ! Read More »

error: Content is protected !!
Scroll to Top