ಪ್ರಚಲಿತ

ನಿಜವಾಯಿತ್ತು ಅಂಜನಾ ಪ್ರಶ್ನೆ ಚಿಂತನೆ,15 ದಿವಸಗಳ ಬಳಿಕ ಯುವಕ ಕಾಡಿನಲ್ಲಿ ಪತ್ತೆ!

ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದ ದೇವಸ್ತುರು ನಿಂದ ಕಳೆದ 15 ದಿನಗಳಿಂದ ನಾಪತ್ತೆ ಯಾಗಿ ಮನೆಯವರಿಗೆ ಆತಂಕ ಮೂಡಿಸಿದ್ದ ಸೋಮೇಟ್ಟಿ ಕೀರ್ತನ್ (31) ಮಾಂದಳಲಪಟ್ಟಿ ಅರಣ್ಯದಲ್ಲಿ ಜೀವಂತವಾಗಿ ಪತ್ತೆ ಯಾಗಿದ್ದಾನೆ. 15 ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಕೀರ್ತನ್ ಸ್ಥಳೀಯವಾಗಿ ಹುಡುಕಾಟ ನಡೆಸಲಾಗಿತ್ತು, ಅಂಜನಾ ಪ್ರಶ್ನೆ ಮೂಲಕ ಅರಣ್ಯದ ಒಳಗೆ ತೆರಳಿರುವ ಬಗ್ಗೆ ಸೂಚನೆ ನೀಡಲಾಗಿತ್ತು, ಜೊತೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿತ್ತು. ಇಂದು ಬೆಳಗ್ಗೆ ಅರಣ್ಯ ಪದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ […]

ನಿಜವಾಯಿತ್ತು ಅಂಜನಾ ಪ್ರಶ್ನೆ ಚಿಂತನೆ,15 ದಿವಸಗಳ ಬಳಿಕ ಯುವಕ ಕಾಡಿನಲ್ಲಿ ಪತ್ತೆ! Read More »

ನ.28ಕ್ಕೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು‌ ತಿಳಿದು ಬಂದಿದೆ.ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ನ.28ಕ್ಕೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ Read More »

ತುಳು ಸ‌ಮ್ಮೇಳನದ ಮನವಿ ಪತ್ರ ಬಿಡುಗಡೆಗೊಳಿಸಿದ ಡಾ/ ವಿರೇಂದ್ರ ಹೆಗ್ಗಡೆ

ಡಿಸೆಂಬರ್ ತಿಂಗಳಿನಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳಬ ಕಡಬದಲ್ಲಿ ನಡೆಯಲಿದ್ದು ಸಮ್ಮೇಳನದ ಮನವಿ ಪತ್ರವನ್ನು ಅ.27ರಂದು ಧರ್ಮಸ್ಥಳದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು.ನೇತ್ರಾವತಿ ತುಳುಕೂಟ ರಾಮಕುಂಜ ಇವರ ನೇತೃತ್ವದಲ್ಲಿ ತೆಗ್‌ರ್ ತುಳುಕೂಟ ನೂಜಿಬಾಳ್ತಿಲ ಇದರ ಆಶ್ರಯದಲ್ಲಿ ಕಡಬ ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮಿ ಜನಾರ್ದನ ಆಂಜನೇಯ ದೇವಸ್ಥಾನದಲ್ಲಿ ಈ ಸಮ್ಮೇಳನ ನಡೆಯಲಿದೆ.ಈ ಸಂದರ್ಭದಲ್ಲಿ ನೇತ್ರಾವತಿ ತುಳುಕೂಟದ ಅಧ್ಯಕ್ಷ ಕೆ.ಸೇಸಪ್ಪ ರೈ, ನೂಜಿಬಾಳ್ತಿಲ ತೆಗ್‌ರ್ ತುಳುಕೂಟದ ಸಂಚಾಲಕ ಉಮೇಶ್ ಸಾಯಿರಾಮ್, ಶ್ರೀ

ತುಳು ಸ‌ಮ್ಮೇಳನದ ಮನವಿ ಪತ್ರ ಬಿಡುಗಡೆಗೊಳಿಸಿದ ಡಾ/ ವಿರೇಂದ್ರ ಹೆಗ್ಗಡೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಲೆ, ಶ್ರೀಮತಿ ಲಕ್ಷ್ಮಿ ಬಿ. ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥ ಕುಮಾರಿ ನೆಲ್ಲೂರು ಕೆಮ್ರಾಜೆ ದೀಪ ಬೆಳಗಿಸಿ , ಭಾರತಮಾತೆ ಮತ್ತು ನಿವೇದಿತಾ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿ. ಸಾಮೂಹಿಕ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ )ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ Read More »

ಅರಂತೋಡು: ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎನ್ಎಂಪಿಯುಸಿ ಅರಂತೋಡು ಕಾಲೇಜಿನ 17ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ.

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 17 ನೇ ವಿಶೇಷ ವಾರ್ಷಿಕ ಶಿಬಿರ ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.”ನಶಾ ಮುಕ್ತ ಭಾರತ ಅಭಿಯಾನ” ಘೋಷ ವಾಕ್ಯದಡಿಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಶ್ರೀ ಚಂದ್ರಶೇಖರ್ ಹೊಸೂರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ, ಚೆಂಬು ಸರ್ಕಾರಿ ಪ್ರೌಢಶಾಲೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್,

ಅರಂತೋಡು: ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎನ್ಎಂಪಿಯುಸಿ ಅರಂತೋಡು ಕಾಲೇಜಿನ 17ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ. Read More »

ಹಾರ್ದಿಕ್ ಪಾಂಡ್ಯ ಔಟ್, ರಿಂಕು ಸಿಂಗ್ ಫೈನಲ್‌ ಆಟಕ್ಕೆ ಆಯ್ಕೆ

ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಆರಂಭಿಕ ಹಿನ್ನಡೆಯಾಗಿದೆ. ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದಾಗಿ ಆಡುತ್ತಿಲ್ಲ. ಅವರ ಬದಲಿಗೆ ರಿಂಕು ಸಿಂಗ್ ಅವರಿಗೆ ಸ್ಥಾನ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ತೊಡೆಯನ್ನು ಹಿಡಿದು ಮೈದಾನದಿಂದ ಹೊರನಡೆದಿದ್ದರು. ಅವರು ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ನಿಖಿಲ್ ನಾಜ್ ಅವರ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಯಾವುದೇ ಫೀಲ್ಡಿಂಗ್ ಕಸರತ್ತುಗಳನ್ನು ಮಾಡಿಲ್ಲ ಮತ್ತು ರಿಂಕು ಸಿಂಗ್‌ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ಹಾರ್ದಿಕ್ ಪಾಂಡ್ಯ ಔಟ್, ರಿಂಕು ಸಿಂಗ್ ಫೈನಲ್‌ ಆಟಕ್ಕೆ ಆಯ್ಕೆ Read More »

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಮತ್ತೆ ಪ್ರಾರಂಭವಾಗಲಿದೆ ಯಕ್ಷಗಾನ ಮೇಳ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಮತ್ತೆ ಯಕ್ಷಗಾನ ಮೇಳ ಪ್ರಾರಂಭವಾಗಲಿದ್ದು ಯಕ್ಷಗಾನ ಅಭಿಮಾನಿಗಳಲ್ಲಿ ಹೊಸ ಹುರುಪು ಮೂಡಿಸಿದೆ.ಆದಿಸುಬ್ರಹ್ಮಣ್ಯ ಕೃ‍ಪಾಪೋಷಿತ ಯಕ್ಷಗಾನ ನಾಟಕಸಭಾ ಸುಬ್ರಹ್ಮಣ್ಯ ಎಂಬ ಹೆಸರಿನ ಬಯಲಾಟ ಮೇಳವು 1990ರವರೆಗೆ ತಿರುಗಾಟ ನಡೆಸಿತ್ತು.ಪುತ್ತೂರು ಬನ್ನೂರಿನ ಶೀನಪ್ಪ ಭಂಡಾರಿ ಇದನ್ನು ಮುನ್ನಡೆಸುತ್ತಿದ್ದರು. ಅವರಿಗೆ ವಯಸ್ಸಾದ ನಂತರ ಮೇಳದ ತಿರುಗಾಟ ನಿಂತಿತ್ತು. ಇದೀಗ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಹೆಸರಿನಲ್ಲಿ ತಿರುಗಾಟ ಪ್ರಾರಂಭಿಸಲಿರುವ ಮೇಳವು, ಸ್ಥಳ ಪುರಾಣದ ಕಥಾಹಂದರ ಹೊಂದಿರುವ ‘ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಮಹಾತ್ಮೆ’

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಮತ್ತೆ ಪ್ರಾರಂಭವಾಗಲಿದೆ ಯಕ್ಷಗಾನ ಮೇಳ Read More »

ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ

ಸುಳ್ಯ ಗಾಂಧಿ ಚಿಂತನಾ ವೇದಿಕೆ ವತಿಯಿಂದ ಅ. 2 ರಂದು ಸುಳ್ಯದಲ್ಲಿ ಗಾಂಧಿನಡಿಗೆ ನಡೆಯಲಿದ್ದು ಆ ಸಂದರ್ಭ ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗಾಂಧಿ ಚಿಂತನಾ ವೇದಿಕೆಯ ಪದಾಧಿಕಾರಿಗಳು ಸೆ. 27 ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.ವೇದಿಕೆಯ ಪ್ರಧಾನ ಸಂಚಾಲಕರಾದ ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ್ ರವರು ಮಾತನಾಡಿ ” ವರ್ಷಂಪ್ರತಿ ವೇದಿಕೆ ವತಿಯಿಂದ ಅಕ್ಟೋಬರ್ 2 ರಂದು ಆಚರಿಸಿಕೊಂಡು ಬರುತ್ತಿರುವ ಗಾಂಧಿ

ಸಹಕಾರ ರತ್ನ ಸವಣೂರು ಸೀತಾರಾಮ ರೈ ಯವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ Read More »

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಗೆ ನೇಮಕಗೊಂಡ ಟಿ.ಎಂ ಶಹೀದ್ ರವರಿಗೆ ತೆಕ್ಕಿಲ್ ಕುಟುಂಬಸ್ಥರಿಂದ ಸನ್ಮಾನ

ಸೆ. 27 ರಂದು ಅರಂತೋಡು ಅಬ್ದುಲ್ ಲತೀಫ್ ಮೊಟ್ಟೆಂಗಾರ್ ರವರ ನಿವಾಸದಲ್ಲಿ ನಡೆದ ದಿ| ಮೊಟ್ಟೆಂಗಾರ್ ಮೊಹಮ್ಮದ್ ಹಾಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿತೆಕ್ಕಿಲ್ ಕುಟುಂಬಸ್ಥರಾದ ಅಶ್ರಫ್ ತೆಕ್ಕಿಲ್, ಟಿ.ಎಂ ಅಬ್ದುಲ್ ಲತೀಫ್ ತೆಕ್ಕಿಲ್, ಟಿ.ಎಂ ಅಬ್ದುಲ್ ರಜಾಕ್ ತೆಕ್ಕಿಲ್, ಟಿ.ಎಂ ಖಾಲಿದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಸನ್ಮಾನಿಸಿ ಗೌರವಿಸಿದರು. ಪೇರಡ್ಕ ಮುಹಿದ್ದೀನ್ ಜುಮಾ ಮಸೀದಿ ಖತೀಬರಾದ ಬಹು|

ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಗೆ ನೇಮಕಗೊಂಡ ಟಿ.ಎಂ ಶಹೀದ್ ರವರಿಗೆ ತೆಕ್ಕಿಲ್ ಕುಟುಂಬಸ್ಥರಿಂದ ಸನ್ಮಾನ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು ಯುವಜನತೆಯನ್ನು ಹೊಂದಿದ್ದು, ಯುವಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ Read More »

error: Content is protected !!
Scroll to Top