ಪ್ರಚಲಿತ

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಳ್ಯ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಸಂಘಟಕ ಗೋಕುಲದಾಸ್ ರವರಿಗೆ ಸಾರ್ವಜನಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಗೋಕುಲದಾಸ್ ಅಭಿಮಾನಿಗಳ ಸಭೆ ನ.12 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪಿ.ಸಿ.ಜಯರಾಮ್, ದಿನೇಶ್ ಮಡಪ್ಪಾಡಿ, ರಾಧಾಕೃಷ್ಣ ಬೊಳ್ಳೂರು, ಪಿ.ಎಸ್.ಗಂಗಾಧರ್, ಕೆ.ಎಂ.ಮುಸ್ತಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವಾನಿಶಂಕರ ಕಲ್ಮಡ್ಕ ಪ್ರಸ್ತಾವಿಕವಾಗಿ ಮಾತನಾಡಿದರುಸಭೆಯಲ್ಲಿ ಮಾತನಾಡಿದ ಪ್ರಮುಖರು ಗೋಕುಲದಾಸ್‌ ಅವರಿಗೆ ಅರ್ಹವಾಗಿಯೇ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.ಅವರಿಗೆ ಸಾರ್ವಜನಿಕ ಸನ್ಮಾನ ಮಾಡಬೇಕಾಗಿರುವುದು ನಮ್ಮಲ್ಲರ […]

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ Read More »

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ಯವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು/ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಧನುಶ್ ಕುಕ್ಕೆಟ್ಟಿ ಮತ್ತು ಶೇಖರ್ ಮಣಿಯಾಣಿ ಕಣೆಮರಡ್ಕ, ಮಂಡೆಕೋಲು ಗ್ರಾಮ ಪಂಚಾಯತ್ ಹಾಲಿ ಸದಸ್ಯೆ ಗೀತಾ ಮೈಲೆಟ್ಟಿಪಾರೆ, ಪೂರ್ಣಚಂದ್ರ ಕಣೆಮರಡ್ಕ, ಅಬೂಬಕ್ಕರ್

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ನಾಮಪತ್ರ ಸಲ್ಲಿಕೆ Read More »

ಕಾಂಗ್ರೆಸ್‌ ಹಿರಿಯ ನಾಯಕ ಆದಿತ್ಯ ವಿಕ್ರಮ್ ಜೈಸ್ವಾಲ್‌ ಬಿಜೆಪಿ ಸೆರ್ಪಡೆ

ಜಾರ್ಖಂಡ್‌ನಲ್ಲಿ ಮೊದಲ ಹಂತದ ಮತದಾನಕ್ಕೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್‌ ಹಿರಿಯ ನಾಯಕ ಆದಿತ್ಯ ವಿಕ್ರಮ್ ಜೈಸ್ವಾಲ್ ಸೋಮವಾರ ಬಿಜೆಪಿ ಸೇರಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಅಭಿವೃದ್ಧಿ ಕೆಲಸಗಳಿಂದ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದ ಅವರು ಹೇಳಿದ್ದಾರೆ. ನಮ್ಮ ಕುಟುಂಬ ಕಳೆದ ಐದು ತಲೆಮಾರುಗಳಿಂದ ಕಾಂಗ್ರೆಸ್‌ನಲ್ಲಿದೆ. ಆದರೆ ಈ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಲಾಯಿತು. ಜಾರ್ಖಂಡ್‌ನ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅನಿವಾರ್ಯ ಎಂದರು.

ಕಾಂಗ್ರೆಸ್‌ ಹಿರಿಯ ನಾಯಕ ಆದಿತ್ಯ ವಿಕ್ರಮ್ ಜೈಸ್ವಾಲ್‌ ಬಿಜೆಪಿ ಸೆರ್ಪಡೆ Read More »

ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಆರಂಭ

ಸುಳ್ಯದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿದ್ದ ಆಧಾ‌ರ್ ತಿದ್ದುಪಡಿ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದರೆ ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಪುನರಾಂಭಗೊಂಡಿದೆ. ಸುಳ್ಯದ ಬ್ಯಾಂಕ್ ಬರೋಡಾ ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿತ್ತು. ಮೂರು ತಿಂಗಳ ಹಿಂದೆ ಸುಳ್ಯದ ಅಂಚೆ ಕಚೇರಿಯ ಆಧಾರ್ ತಿದ್ದುಪಡಿ ಕೇಂದ್ರ ತಾಂತ್ರಿಕ ತೊಂದರೆಯಿಂದ ಸ್ಥಗಿತಗೊಂಡಿತ್ತು. ಬ್ಯಾಂಕ್ ಆಫ್ ಬರೋಡಾದಲ್ಲಿದ್ದ ಆಧಾರ್ ಕೇಂದ್ರವನ್ನು ಜನರು ಅವಲಂಬನೆ ಮಾಡಬೇಕಿತ್ತು. ಬ್ಯಾಂಕ್ ಆಫ್ ಬರೋಡದ ಆಧಾ‌ರ್ ಕೇಂದ್ರವು ವಾರದ ಹಿಂದೆ ಸ್ಥಗಿತಗೊಂಡಿದ್ದು ಸುಳ್ಯದಲ್ಲಿ ಆಧಾರ್ ಕಾರ್ಡ್

ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಆರಂಭ Read More »

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್‌ ನ. 9 ರಂದು ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ ತೊಡಿಕಾನ, ಕೊಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್‌

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್, ಕ್ಯಾನ್ವಾಸ್ ಆರ್ಟ್ , ಆರ್ಕಲಿಕ್ ಆರ್ಟ್, ಬಾಟಲ್ ಆರ್ಟ್, ರಂಗೋಲಿ ಆರ್ಟ್ ಹಾಗೂ ವಿವಿಧ ಪ್ರಕಾರದ ಮುಖವಾಡ ತಯಾರಿಕೆಯ ಮೂಲಕ ಪ್ರಸಿದ್ಧ

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ

ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಕೂಡಲೇ ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ Read More »

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ

ಮಡಿಕೇರಿ ನ.07(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ವು ನವೆಂಬರ್ 10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.ನಗರದ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ Read More »

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ – ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್. ಭೀಮರಾವ್ ವಾಷ್ಠರ್ ಮತ್ತು ತಂಡದ ವತಿಯಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ ಜರುಗಿತು. ಗೀತ ಗಾಯನ ಕಾರ್ಯಕ್ರಮದಲ್ಲಿ ಕನ್ನಡ

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ Read More »

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ

ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಜ್ಜಾವರ ಗ್ರಾ.ಪಂ. ಅಧ್ಯಕ್ಷರಾಗಿದ್ದ ಬೇಬಿ ಅವರು ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.7 ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ಸಂದರ್ಭ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಬೇಬಿ ಮತ್ತು ದೇವಕಿ ಆಕಾಂಕ್ಷಿಗಳಾಗಿದ್ದರು. ಬಳಿಕ ಮಾತುಕತೆ ನಡೆದು ಒಂದೂಕಾಲು ವರ್ಷದಂತೆ ಇಬ್ಬರಿಗೂ ಅಧ್ಯಕ್ಷತೆ ಹಂಚಿಕೊಡಲು ಪಕ್ಷ

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ Read More »

error: Content is protected !!
Scroll to Top