ಪ್ರಚಲಿತ

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿಯಾಗಿ ಮಗನನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ.ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು ಬಂಕಾಪುರ ಪಟ್ಟಣದಲ್ಲಿ ಸಭೆ ನಡೆಸಿದರು.ಬಂಕಾಪುರದ ಪ್ರಮುಖ ಮುಸ್ಲಿಂ ಮುಖಂಡರ ಮನೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಬೊಮ್ಮಾಯಿ, “ನಾನು ಯಾವಾಗಲೂ ನಿಮ್ಮೊಂದಿಗೆ ನಿಂತಿದ್ದೇನೆ. ನಿಮ್ಮ ವ್ಯಾಪಾರ, ಉದ್ಯಮವನ್ನು ಬೆಳೆಸುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ನೀವು ಬೆಳೆಯಬೇಕು ಎಂದು ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ.6ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ- ರೆಂಜಾಳದ ಶ್ರೀ. ವಿನಾಯಕ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ನೆರವೇರಿಸಿದರು. ಶಿಬಿರದ ಉದ್ಘಾಟನೆಯನ್ನು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ Read More »

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ?

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು. ಈ ವೇಳೆ ನಗುಮುಖದಿಂದಲೇ ಕಚೇರಿಯಿಂದ ಹೊರ ಬಂದ ಸಿಎಂ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್‌ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ತಿಳಿಸಿದರು.

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ? Read More »

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

ದ.ಕ. ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಸೇರಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಜಿಲ್ಲಾಡ ಳಿತಕ್ಕೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಸೋಮವಾರ ಅವರು ಮಾತನಾಡಿ ದರು.ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್‌ ನಡಿ ನೋಂದಣಿಯಾದ ಆಸ್ಪತ್ರೆ

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವಾರ್ಪಣೆ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು 2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಕೆ. ಗೋಕುಲ್ ದಾಸ್ ರವರಿಗೆ ಇಂದು ತಮ್ಮ ಕಚೇರಿಯಲ್ಲಿ ಶುಭಹಾರೈಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ ಉಪಸ್ಥಿತರಿದ್ದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ ವಿ ಚಿದಾನಂದ ರಿಂದ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್ ರವರಿಗೆ ಗೌರವಾರ್ಪಣೆ Read More »

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

33 ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.5 ಮಂಗಳವಾರ ನಡೆಸುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33 ಕೆ.ವಿ ಕಾವು-ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕಾವು ಹಾಗೂ ಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆತೀರ್ಥರಾಮ ಎಚ್. ಬಿ ಯವರಿಗೆ ಗೌರವ ಸಮರ್ಪಣೆ

ಗುತ್ತಿಗಾರುವಿನ ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆ ಹಾಗೂ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ನಿವೃತ್ತ ಸಿಬ್ಬಂದಿ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ತೀರ್ಥರಾಮ ಎಚ್. ಬಿ ಹೊಸೋಳಿಕೆಯವರು ಸರಳ, ಸಜ್ಜನ, ದಕ್ಷ, ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತಿ ಹೊಂದಿದ್ದರು ಹೊಸೋಳಿಕೆ ಕಟ್ಟೆಮನೆ ಕುಟುಂಬದ ಮುಖ್ಯಸ್ಥರಾಗಿರುವ ಇವರನ್ನು ಕುಟುಂಬಸ್ಥರು ದೀಪಾವಳಿ ಹಬ್ಬದಲ್ಲಿ ಕುಟುಂಬಸ್ಥರ ಸಮಾಗಮದಲ್ಲಿ ಗೌರವಿಸಿದರುಕುಟುಂಬದ ಹಿರಿಯರಾದ ವಿಶ್ವನಾಥ ಹೊಸೋಳಿಕೆ ಯವರು ಅಧ್ಯಕ್ಷತೆ ವಹಿಸಿದರು, ರಾಧಾಕೃಷ್ಣ ಹೊಸೋಳಿಕೆ, ಕುಟುಂಬದ ಅಧ್ಯಕ್ಷರಾದ ಎಚ್.

ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆತೀರ್ಥರಾಮ ಎಚ್. ಬಿ ಯವರಿಗೆ ಗೌರವ ಸಮರ್ಪಣೆ Read More »

ಅಜ್ಜಾವರ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಶಿವಾಜಿ ಶಾಖೆ ಅಜ್ಜಾವರ ಇದರ ನೇತೃತ್ವದಲ್ಲಿ ಶ್ರೀ ಶಾರದ ರಾಮ ಸೇವಾ ಪ್ರತಿಷ್ಠಾನ ಬಯಂಬು ಇಲ್ಲಿ ಬಾಲಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು. ಅಜ್ಜಾವರದ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಧರ್ಮದರ್ಶಿಗಳಾದ ಭಾಸ್ಕರ್ ರಾವ್ ಬಯಂಬು ದೀಪ ಪ್ರಜ್ವಲಿಸುವ ಮೂಲಕ ಬಾಲ ಸಂಸ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಅಟಲ್ ಜೀ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿಯಾದ ಸುಭೋದ್ ಶೆಟ್ಟಿ ಮೇನಾಲ ಇವರು ಬಾಲ ಸಂಸ್ಕಾರದ ಮಹತ್ವದ ಬಗ್ಗೆ ಬೌದ್ಧಿಕ ನಡೆಸಿದರು. ವಿಶ್ವ ಹಿಂದೂ ಪರಿಷತ್ತು

ಅಜ್ಜಾವರ : ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ Read More »

ಮರಬಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಹಿನ್ನಲೆ,ಸಾರ್ವಜನಿಕರಿಂದ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ

ಎಡಮಂಗಲ : ಸ್ಕೂಟಿ ಸವಾರನ ಮೇಲೆ ಪುಳಿಕುಕ್ಕು ಸಮೀಪ ದೂಪದ ಮರ ಬಿದ್ದು ಸವಾರ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಸ್ತೆ ಪಕ್ಕದ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಗ್ರಹಿಸಿ ನ.2ರ ಶನಿವಾರ ಸಾರ್ವಜನಿಕರು ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದ ಸಾರ್ವಜನಿಕರು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಲು ಅವಕಾಶ ನೀಡಲಿಲ್ಲ. ಅದರಿಂದಾಗಿ ಕಡಬ -ಪಂಜ ರಸ್ತೆಯಲ್ಲಿ ಸುಮಾರು

ಮರಬಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಹಿನ್ನಲೆ,ಸಾರ್ವಜನಿಕರಿಂದ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ Read More »

ಸುಳ್ಯದ ಗೋಕುಲದಾಸ್ ಅವರಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ

ಸುಳ್ಯ: ಸುಳ್ಯದ ಕೆ.ಗೋಕುಲ್‌ದಾಸ್ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಕೆ.ಗೋಕುಲ್‌ದಾಸ್ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಂಘಟನಾ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.ಸುಳ್ಯದ ಶಾರದಾಂಬ ಉತ್ಸವ (ಎಸ್.ಸಿಕ್ಸ್ ನಲ್ಲಿ ಕಳೆದ 50 ವರ್ಷಗಳಿಂದ ಗೋಕುಲ್ ದಾಸ್ ಮುಂಚೂಣಿಯಲ್ಲಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್

ಸುಳ್ಯದ ಗೋಕುಲದಾಸ್ ಅವರಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ Read More »

error: Content is protected !!
Scroll to Top