ಪ್ರಚಲಿತ

ಗೌಡರ ಕುರಿತು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆಗೆ ಕ್ರಮ: ಎ.ಎಸ್.ಪೊನ್ನಣ್ಣ

ಮಡಿಕೇರಿ ಅ.31(ಕರ್ನಾಟಕ ವಾರ್ತೆ):-ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಮತ್ತು ಅಮರ ಸುಳ್ಯ ದಂಗೆಯ ಹೋರಾಟಗಾರರ ವಿಷಯವನ್ನು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೋಟೆ ಆವರಣದಲ್ಲಿ ಗುರುವಾರ ಏರ್ಪಡಿಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ […]

ಗೌಡರ ಕುರಿತು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆಗೆ ಕ್ರಮ: ಎ.ಎಸ್.ಪೊನ್ನಣ್ಣ Read More »

ದೀಪಾವಳಿ ಹಬ್ಬದ ಪ್ರಯುಕ್ತ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಅಕರ್ಷಕ ಆಫರ್‌ಗಳು ಲಭ್ಯ

ಸುಳ್ಯ: ಕಳೆದ 25 ವರ್ಷಗಳಿಂದ ಅತೀ ಕಡಿಮೆ ದರದಲ್ಲಿ ಅತ್ಯುತ್ತಮ ಗುಣ ಮಟ್ಟದ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ಮಾರಾಟ ಮಾಡುವ ಮೂಲಕ ಗ್ರಾಹಕರ ಮನ ಗೆದ್ದ ಸುಳ್ಯದ ಪ್ರತಿಷ್ಠಿತ ಇಲೆಕ್ಟ್ರಾನಿಕ್ಸ್‌ನಲ್ಲಿ ಮಳಿಗೆ ಸೋಜಾ ಇಲೆಕ್ಟ್ರಾನಿಕ್ಸ್ ಅತ್ಯುತ್ತಮ ಗುಣಮಟ್ಟದ ಮತ್ತು ಬ್ರಾಂಡೆಡ್ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿ ಜನರ ಇಲೆಕ್ಟ್ರಾನಿಕ್ಸ್‌ ಹಾಗೂ ಫರ್ನೀಚರ್ಸ್‌ ಸೇರಿದ ಗೃಹೋಪಯೋಗಿ ಉಪಕರಣಗಳ ಬೇಡಿಕೆಯನ್ನುಯಶಸ್ವಿಯಾಗಿ ಪೂರೈಸಿದ ಹೆಗ್ಗಳಿಕೆ ಸೋಜಾ ಇಲೆಕ್ಟ್ರಾನಿಕ್ಸ್‌ನದ್ದು.ಸುಳ್ಯ ಮುಖ್ಯ ರಸ್ತೆಯಲ್ಲಿ ಶ್ರೀರಾಮ್ ಪೇಟೆಯಲ್ಲಿ ಕಶ್ಯಪ್ ಕಾಂಪ್ಲೆಕ್ಸ್‌ನಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ ಕಳೆದ 25

ದೀಪಾವಳಿ ಹಬ್ಬದ ಪ್ರಯುಕ್ತ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಅಕರ್ಷಕ ಆಫರ್‌ಗಳು ಲಭ್ಯ Read More »

ಹೊಳೆ ನರಸಿಪುರ, ಅರಕಲಗೂಡು, ಕೆ.ಪಿ.ಸಿ.ಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ

ಹೊಳೆ ನರಸಿಪುರ, ಅರಕಲಗೂಡು ವಿಧಾನ ಸಭಾ ಕ್ಷೇತ್ರದ ನಾಲ್ಕು ಬ್ಲಾಕ್ ಉಸ್ತುವಾರಿಯಾಗಿ, ಹಾಸನ ಜಿಲ್ಲೆ ಮತ್ತು ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ ವೀಕ್ಷರಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿದಂತೆ ಪಕ್ಷ ಬಲವರ್ಧನೆಗೆ ಕಾರ್ಯ ಚಟುವಟಿಕೆ ನಡೆಸಲು ಮತ್ತು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ದುಡಿಯಲು

ಹೊಳೆ ನರಸಿಪುರ, ಅರಕಲಗೂಡು, ಕೆ.ಪಿ.ಸಿ.ಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ Read More »

ಶಿಕ್ಷಕ ವೃತ್ತಿ ಶ್ರೇಷ್ಠವಾದುದು : ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು : ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದಿರ್ಘವಾಗಿ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಸರಸ್ವತಿ ಅವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು. ಅ. 29ರಂದು ಶಾಲಾ ಸಭಾವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಬಳಿಕ ಮಾತನಾಡಿ ಶಿಕ್ಷಕ ವ್ರತ್ತಿ ಒಂದು ಶ್ರೇಷ್ಟ ವ್ರತ್ತಿ.ಇದನ್ನು ಸಮರ್ಕವಾಗಿ ನಿರ್ವಹಿಸಿದ್ದಾಗ ಶಿಕ್ಷಕ ವ್ರತ್ತಿಗೆ ಗೌರವ ಬರುತ್ತದೆ ಎಂದು ಹೇಳಿದರು.ಅರಂತೋಡು ಗ್ರಾಮ ಪಂಚಾಯತ್

ಶಿಕ್ಷಕ ವೃತ್ತಿ ಶ್ರೇಷ್ಠವಾದುದು : ಶಾಸಕಿ ಭಾಗೀರಥಿ ಮುರುಳ್ಯ Read More »

ಅ.31ಕ್ಕೆ ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿ ಅಡ್ತಲೆ ಸೇವಾ ನಿವೃತ್ತಿ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಕ್ರಿಯಾಶೀಲಾ ದೈಹಿಕ ಶಿಕ್ಷಣ ಶಿಕ್ಷಕಿ, ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಸರಸ್ವತಿ ಅಡ್ತಲೆ ಅವರು ತಮ್ಮ ಸುದೀರ್ಘ 39 ವರ್ಷ ನಾಲ್ಕು ತಿಂಗಳ ಶಿಕ್ಷಕ ವೃತ್ತಿ ಜೀವನದಿಂದ ಅ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಜಾಲ್ಲೂರು ಗ್ರಾಮದ ಕುತ್ಯಾಳ ದಿ. ಕೂಸಪ್ಪ ಗೌಡ ಹಾಗೂ ದಿ. ಶಾಂತಮ್ಮ ದಂಪತಿಯ ಪುತ್ರಿಯಾದ ಸರಸ್ವತಿ ಅವರು ತಮ್ಮ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಜಾಲ್ಲೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ

ಅ.31ಕ್ಕೆ ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿ ಅಡ್ತಲೆ ಸೇವಾ ನಿವೃತ್ತಿ Read More »

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ದೀಪಾವಳಿ ಅಮವಾಸ್ಯೆ ಪ್ರಯುಕ್ತ ದೇವರ ಬಲಿ ಹೊರಡುವ ಕಾರ್ಯಕ್ರಮ ಅ.31ರಂದು ನಡೆಯಲಿದೆ. ದೀಪಾವಳಿ ಅಮವಾಸ್ಯೆ ಪ್ರಯುಕ್ತ ರಾತ್ರಿ ಶ್ರೀ ದೇವರ ಬಲಿ ಹೊರಡಲಿದೆ ಎಂದು ದೇವಸ್ಥಾನದ ಕಚೇರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅ.31ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವರ ಬಲಿ ಹೊರಡುವ ಕಾರ್ಯಕ್ರಮ Read More »

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ

ಸುಳ್ಯ: ವಿಧಾನ ಪರಿಷತ್‌ ಉಪಚುನಾವಣೆಯ ನೀತಿಸಂಹಿತೆಯಿಂದ ಕೆಲವು ಸಮಯದಿಂದ ಸಾರ್ವಜನಿಕ ಭೇಟಿಗೆ ಲಭ್ಯರಿಲ್ಲದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ.28ರಿಂದ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುತ್ತಾರೆ. ಶಾಸಕರು ಪ್ರತಿ ಸೋಮವಾರ ಸುಳ್ಯ ತಾಲೂಕು ಪಂಚಾಯತ್ ಕಛೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ bತಾಲ್ಲೂಕು ಕಛೇರಿಯಲ್ಲಿ 10.30ರಿಂದ 2.30ರ ತನಕ ಲಭ್ಯರಿದ್ದಾರೆ ಎಂದು ಶಾಸಕರ ಕಛೇರಿಯ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರ ಭೇಟಿಗೆ ನಾಳೆ ಶಾಸಕರು ಲಭ್ಯ Read More »

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ನಡೆಯುವ ಅರೆಭಾಷೆ ಗಡಿನಾಡ ಉತ್ಸವದ ಮೊದಲ ಕಾರ್ಯಕ್ರಮ ಅ.27 ರಂದು ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆಯಿತು.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ದೀಪ ಬೆಳಗಿಸಿ, ಹಿಂಗಾರ ಅರಳಿಸಿ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲು ಗ್ರಾ.ಪಂ.ಅಧ್ಯಕ್ಷ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಕ್

ಬಂದಡ್ಕದಲ್ಲಿ ಅದ್ದೂರಿಯಾಗಿ ನಡೆದ ಅರೆಭಾಷೆ ಗಡಿನಾಡ ಉತ್ಸವ Read More »

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ.

2024- 25ರ ದಕ್ಷಿಣ ವಲಯ ಮಟ್ಟದ ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಚೆನ್ನೈ ಯಲ್ಲಿ ನಡೆಯಲಿದ್ದು ಅರಂತೋಡಿನ ಪ್ರಪುಲ್ ಯು. ಎಸ್. ಆಯ್ಕೆಯಾಗಿದ್ದಾರೆ.ಈತ ಕುಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿದ್ದ ಅರಂತೋಡಿನ ಉಳುವಾರು ದಿ. ಯು.ಡಿ. ಶೇಖರ್ ಹಾಗೂ ಉಪ್ಪಿನಂಗಡಿ ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ದಂಪತಿಯ ಪುತ್ರ. ಪುತ್ತೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ವಿವೇಕಾನಂದ ಕಾಲೇಜನ್ನು ಪ್ರತಿನಿಧಿಸಲಿದ್ದಾರೆ.

ಅಂತ‌ರ್ ರಾಜ್ಯ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ ಶಿಪ್ ಗೆ ಪ್ರಪುಲ್ ಯು. ಎಸ್. ಆಯ್ಕೆ. Read More »

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು . ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ – 2024 ನಡೆಯಲಿದ್ದು, ಅ.27ರಂದು ಮೊದಲ ಗಡಿನಾಡ ಉತ್ಸವ ಬಂದಡ್ಕದಲ್ಲಿ ನಡೆಯಲಿದೆ. ಇದರ ಆಮಂತ್ರಣ ಬಿಡುಗಡೆ ಸಮಾರಂಭ ಅ.18ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡರು

ಅರೆಭಾಷೆ ಗಡಿನಾಡ ಉತ್ಸವ 2024 ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top